Homeಅಂತರಾಷ್ಟ್ರೀಯಭಾರಿ ಸೋಲಿನತ್ತ ಡೊನಾಲ್ಡ್‌ ಟ್ರಂಪ್; ನಾವು ಗೆಲ್ಲಲಿದ್ದೇವೆ ಎಂದ ಬೈಡೆನ್!

ಭಾರಿ ಸೋಲಿನತ್ತ ಡೊನಾಲ್ಡ್‌ ಟ್ರಂಪ್; ನಾವು ಗೆಲ್ಲಲಿದ್ದೇವೆ ಎಂದ ಬೈಡೆನ್!

- Advertisement -
- Advertisement -

ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಮತ ಎಣಿಕೆ ಕಳೆದ ಕೆಲವು ದಿನದಿಂದ ನಡೆಯುತ್ತಿದ್ದು, ಆರಂಭದಲ್ಲಿ ಹಾಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುನ್ನಡೆಯಲ್ಲಿದ್ದರೂ, ನಂತರದ ಬೆಳವಣೆಗೆಯಲ್ಲಿ ಅವರ ಪ್ರತಿಸ್ಪರ್ಧಿ ಡೆಮಾಕ್ರೆಟಿಕ್ ಪಕ್ಷದ ಜೋ ಬೈಡೆನ್ ಮುನ್ನಡೆ ಸಾಧಿಸಿದ್ದು, ಈ ಭಾರಿ ಅವರೆ ಅಮೆರಿಕದ ಅಧ್ಯಕ್ಷರಾಗುವುದು ನಿಶ್ಚಿತವಾಗುತ್ತಿದೆ.

ಆದರೆ ಎಣಿಕೆ ಇನ್ನೂ ನಡೆಯುತ್ತೇ ಇರುವುದರಿಂದ ಅಧೀಕೃತ ಪ್ರಕಟಣೆ ಹೊರ ಬಿದ್ದಿಲ್ಲ. ಫಲಿತಾಂಶವು ತನ್ನ ಪರವಾಗಿಲ್ಲ ಎಂದು ತಿಳಿಯುತ್ತಿದ್ದಂತೆ ಡೊನಾಲ್ಡ್ ಟ್ರಂಪ್ ಮತದಾನದಲ್ಲಿ ವಂಚನೆ ನಡೆದಿದೆ ಎಂದು ಆರೋಪಿಸಿದ್ದು, ಎಣಿಕೆಯನ್ನು ನಿಲ್ಲಿಸುವಂತೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: Explainer: ಅಮೆರಿಕಾ ಚುನಾವಣಾ ಪದ್ದತಿ, ಅಧ್ಯಕ್ಷರ ಆಯ್ಕೆ ಮತ್ತು ಸಮಸ್ಯೆಗಳು

ಮತದಾನದಲ್ಲಿ ವಂಚನೆ ನಡೆದಿದೆ ಎಂದು ನಿರಂತರವಾಗಿ ಆರೋಪಿಸುತ್ತಿರುವ ಟ್ರಂಪ್ ಸರಣಿ ಟ್ವೀಟ್‌ಗಳನ್ನು ಮಾಡುತ್ತಿದ್ದಾರೆ.

ಅಧ್ಯಕ್ಷೀಯ ಚುನಾವಣೆಯನ್ನು ಗೆಲ್ಲಲು 270 ಸ್ಥಾನಗಳ ಅಗತ್ಯವಿದ್ದು, ಟ್ರಂಪ್ 214 ಸ್ಥಾನಗಳಲ್ಲಿ ಗೆದ್ದು 15 ಸ್ಥಾನಗಳಲ್ಲಿ ಮುನ್ನಡೆಯಲ್ಲಿದ್ದಾರೆ. ಜೋ ಬೈಡೆನ್ 264 ಸ್ಥಾನಗಳನ್ನು ಗೆದ್ದಿದ್ದು, ಅವರಿಗೆ ಗೆಲ್ಲಲು ಕೇವಲ 6 ಸ್ಥಾನಗಳ ಅಗತ್ಯವಿದೆಯಾದರೂ 42 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

 

ಮುನ್ನಡೆ ಕಾಯ್ದುಕೊಂಡಿರುವ ಎಲ್ಲಾ ಸ್ಥಾನಗಲ್ಲಿ ಬೈಡನ್ ಗೆದ್ದರೆ 270 ಕ್ಕಿಂತ ಹಚ್ಚಿನ ಸ್ಥಾನ ಪಡೆಯಲಿದ್ದು, ಟ್ರಂಪ್ ಹೀನಾಯ ಸೋಲು ಅನುಭವಿಸಲಿದ್ದಾರೆ. ಈಗಾಗಲೇ ಜೋ ಬೈಡನ್ ಅಮೆರಿಕಾದ ಇತಿಹಾಸದಲ್ಲೇ ಅತೀ ಹೆಚ್ಚು ಅಧ್ಯಕ್ಷೀಯ ಮತ ಪಡೆದ ಅಭ್ಯರ್ಥಿಯಾಗಿ ದಾಖಲಾಗಿದ್ದಾರೆ. ಈ ಹಿಂದೆ ಈ ದಾಖಲೆ ಬರಾಕ್ ಒಬಾಮ ಅವರ ಪಾಲಿಗಿತ್ತು.

ಇದನ್ನೂ ಓದಿ: ’ಉಸಿರು ಬಿಗಿ ಹಿಡಿದ ಅಮೆರಿಕಾ’ – ವಿಶ್ವದ ಪ್ರಮುಖ ಪತ್ರಿಕೆಗಳ ಕಣ್ಣಲ್ಲಿ ಅಮೆರಿಕಾ ಚುನಾವಣಾ ಫಲಿತಾಂಶ!

ಮತ ಎಣಿಕೆಯ ಪ್ರಾರಂಭದಲ್ಲಿ ಜೋ ಬೈಡೆನ್ ಹಿನ್ನಡೆ ಅನುಭವಿಸಿದ್ದರು, ಆದರೆ ಅವರು ಭಾವೋಧ್ವೇಗಕ್ಕೆ ಒಳಗಾಗದೆ “ನಾವು ಗಲ್ಲಲಿದ್ದೇವೆ, ವಿಶ್ವಾಸ ಇಡಿ” ಎಂದು ತಮ್ಮ ಅಭಿಮಾನಿಗಳಿಗೆ ಧೈರ್ಯ ತುಂಬಿದ್ದರು.

ಸ್ವಿಂಗ್ ರಾಜ್ಯಗಳಾದ ನೆವಾಡ, ಜಾರ್ಜಿಯ, ನಾರ್ಥ್ ಕೆರೊಲಿನಾ ಮತ್ತು ಪೆನ್ಸಿಲ್ವೇನಿ ರಾಜ್ಯಗಳಲ್ಲಿ ಇನ್ನು ಎಣಿಕೆ ನಡೆಯುತ್ತಿದ್ದು, ನಾರ್ಥ್ ಕೆರೊಲಿನಾದಲ್ಲಷ್ಟೇ ಟ್ರಂಪ್ ಮುನ್ನಡೆಯಲ್ಲಿದ್ದಾರೆ. ಉಳಿದ ಕಡೆ ಜೋ ಬೈಡೆನ್ ಮುನ್ನಡೆಯಲ್ಲಿದ್ದು “ನಾವು ಚುನಾವಣೆಯಲ್ಲಿ ಗೆಲ್ಲಲಿದ್ದೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಅಮೆರಿಕಾ ಚುನಾವಣೆ: ಹೊಸ ಭರವಸೆಯಿತ್ತ ನಾಲ್ವರು ಪ್ರಗತಿಪರ ಮಹಿಳೆಯರ ಗೆಲುವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...