Homeಅಂತರಾಷ್ಟ್ರೀಯ'ನಾವು ಪಾಕಿಸ್ತಾನದ ಭಾಗವಲ್ಲ': ಸ್ವತಂತ್ರ ರಾಷ್ಟ್ರವೆಂದು ಘೋಷಿಸಿಕೊಂಡ ಬಲೂಚಿಸ್ತಾನ ನಾಯಕರು

‘ನಾವು ಪಾಕಿಸ್ತಾನದ ಭಾಗವಲ್ಲ’: ಸ್ವತಂತ್ರ ರಾಷ್ಟ್ರವೆಂದು ಘೋಷಿಸಿಕೊಂಡ ಬಲೂಚಿಸ್ತಾನ ನಾಯಕರು

- Advertisement -
- Advertisement -

ಪಾಕಿಸ್ತಾನದಿಂದ ಬಲೂಚಿಸ್ತಾನ ಪ್ರತ್ಯೇಕಗೊಂಡು ಸ್ವತಂತ್ರ ರಾಷ್ಟ್ರವಾಗಬೇಕೆಂದು ಬಂಡೆದ್ದಿರುವ ‘ಬಲೂಚಿಸ್ತಾನ್ ಲಿಬರೇಷನ್ ಆರ್ಮಿ’, ಬಲೂಚಿಸ್ತಾನ ಸ್ವತಂತ್ರ ರಾಷ್ಟ್ರವೆಂದು ಘೋಷಿಸಿಕೊಂಡಿದೆ. “ನಾವು ಪಾಕಿಸ್ತಾನದ ಭಾಗವಲ್ಲ , ನಮ್ಮದು ಸ್ವತಂತ್ರ ರಾಷ್ಟ್ರ ಎಂದು ಸಂಘಟನೆಯ ನಾಯಕ ಮೀರ್ ಯಾರ್ ಬಲೂಚ್ ಹೇಳಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮೇ 14ರಂದು ಸರಣಿ ಪೋಸ್ಟ್‌ಗಳನ್ನು ಹಾಕಿರುವ ಮೀರ್ ಯಾರ್” ಪಾಕಿಸ್ತಾನ ಸೈನ್ಯ ಬಲೂಚ್ ನೆಲವನ್ನು ತೊರೆದಾಗ ಬಲೂಚಿಸ್ತಾನದ ಸ್ವಾತಂತ್ರ್ಯದ ದಿನಾಂಕವನ್ನು ಘೋಷಿಸಲಾಗುತ್ತದೆಯೇ? ಎಂದು ಒಬ್ಬರು ಖ್ಯಾತ ಪತ್ರಕರ್ತರು ಕೇಳಿದರು. ಅದಕ್ಕೆ ನಾನು “ಬ್ರಿಟಿಷರು ಬಲೂಚಿಸ್ತಾನ್ ಮತ್ತು ಉಪಖಂಡವನ್ನು ತೊರೆದಾಗಲೇ, ಅಂದರೆ ಆಗಸ್ಟ್ 11, 1947 ರಂದು ನಾವು ಸ್ವಾತಂತ್ರ್ಯ ಘೋಷಿಸಿಕೊಂಡಿದ್ದೇವೆ ಎಂಬುವುದಾಗಿ ಉತ್ತರಿಸಿದ್ದೇನೆ” ಎಂದು ಹೇಳಿದ್ದಾರೆ.

“ಆತ್ಮೀಯ ಭಾರತೀಯರೇ, ದೇಶಭಕ್ತ ಮಾಧ್ಯಮಗಳೇ, ಯೂಟ್ಯೂಬ್ ಒಡನಾಡಿಗಳೇ, ಭಾರತವನ್ನು ರಕ್ಷಿಸಲು ಹೋರಾಡುವ ಬುದ್ಧಿಜೀವಿಗಳೇ, ಬಲೂಚ್‌ಗಳನ್ನು ‘ಪಾಕಿಸ್ತಾನದ ಸ್ವಂತ ಜನರು’ ಎಂದು ಕರೆಯಬೇಡಿ. ನಾವು ಪಾಕಿಸ್ತಾನಿಗಳಲ್ಲ, ನಾವು ಬಲೂಚಿಸ್ತಾನಿಗಳು. ಪಾಕಿಸ್ತಾನದ ಸ್ವಂತ ಜನರು ಪಂಜಾಬಿಗಳು, ಅವರು ಎಂದಿಗೂ ವಾಯು ಬಾಂಬ್ ದಾಳಿ, ಬಲವಂತದ ಸ್ಥಳಾಂತರ ಮತ್ತು ನರಮೇಧವನ್ನು ಎದುರಿಸಿಲ್ಲ” ಎಂದಿದ್ದಾರೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಳಿಕ ಭಾರತ-ಪಾಕಿಸ್ತಾನ ನಡುವೆ ಸಂಘರ್ಷ ಉಂಟಾದಾಗ ಬಲೂಚಿಸ್ತಾನ ಭಾರತಕ್ಕೆ ಬೆಂಬಲ ವ್ಯಕ್ತಪಡಿಸಿತ್ತು.

“ಬಲೂಚಿಸ್ತಾನ ಪ್ರಜಾಸತ್ತಾತ್ಮಕ ಗಣರಾಜ್ಯದ ಜನರು ಭಾರತದ ಜನರಿಗೆ ತಮ್ಮ ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ” ಎಂದು ಆ ವೇಳೆ ಮೀರ್ ಯಾರ್ ಪೋಸ್ಟ್ ಹಾಕಿದ್ದರು.

“ಚೀನಾ ಪಾಕಿಸ್ತಾನಕ್ಕೆ ಸಹಾಯ ಮಾಡುತ್ತಿದೆ. ಆದರೆ, ಬಲೂಚಿಸ್ತಾನ ಮತ್ತು ಅದರ ಜನರು ಭಾರತ ಸರ್ಕಾರಕವನ್ನು ಬೆಂಬಲಿಸುತ್ತಿದ್ದಾರೆ. ಪ್ರೀತಿಯ ನರೇಂದ್ರ ಮೋದಿಯವರೇ ನೀವು ಒಬ್ಬಂಟಿಯಲ್ಲ, ನಿಮಗೆ 60 ಮಿಲಿಯನ್ ಬಲೂಚ್ ದೇಶಭಕ್ತರ ಬೆಂಬಲವಿದೆ” ಎಂದು ಬರೆದುಕೊಂಡಿದ್ದರು. ಪ್ರಧಾನಿ ನರೇಂದ್ರ ಮೋದಿಗೆ ಪೋಸ್ಟ್ ಟ್ಯಾಗ್ ಮಾಡಿದ್ದರು.

ಬಲೂಚಿಸ್ತಾನದ ಜನರು ಸುದೀರ್ಘ ಸಮಯದಿಂದ ಸ್ವತಂತ್ರ ರಾಷ್ಟ್ರದ ಸ್ಥಾನಮಾನಕ್ಕಾಗಿ ಆಗ್ರಹಿಸುತ್ತಿದ್ದಾರೆ. ಇದಕ್ಕಾಗಿ ಬಂಡಾಯದ ಪಡೆಯನ್ನೂ ಕಟ್ಟಿದ್ದಾರೆ. ಪಾಕಿಸ್ತಾನದ ವಿರುದ್ದ ಅವರು ಭಾರತವನ್ನು ಬೆಂಬಲಿಸುತ್ತಿದ್ದಾರೆ.

ಈ ಎಲ್ಲದರ ನಡುವೆ ಅಲ್ಲಿ ಮಾನವ ಹಕ್ಕುಗಳ ತೀವ್ರ ಉಲ್ಲಂಘನೆಯ ಸುದ್ದಿಗಳು ಆಗಾಗ ವರದಿಯಾಗುತ್ತಿರುತ್ತವೆ. ಜನರನ್ನು ಬಲವಂತದಿಂದ ಸ್ಥಳಾಂತರಿಸುವುದು, ಹತ್ಯೆಗಳು ಮತ್ತು ಭಿನ್ನಾಭಿಪ್ರಾಯದ ಧ್ವನಿಗಳನ್ನು ನಿಗ್ರಹಿಸುವುದು ಇವುಗಳಲ್ಲಿ ಸೇರಿವೆ. ಪಾಕಿಸ್ತಾನಿ ಭದ್ರತಾ ಪಡೆಗಳು ಮತ್ತು ಉಗ್ರಗಾಮಿ ಗುಂಪುಗಳು ಇದರಲ್ಲಿ ಭಾಗಿಯಾಗಿರುವ ಆರೋಪಗಳನ್ನು ಎದುರಿಸುತ್ತಿವೆ.

ನಾಗರಿಕರು ದೀರ್ಘಕಾಲದ ಸಂಘರ್ಷದ ಹೊರೆಯನ್ನು ಇನ್ನೂ ಹೊರುತ್ತಿದ್ದಾರೆ. ಸೀಮಿತ ಮಾಧ್ಯಮ ಪ್ರಸಾರ ಮತ್ತು ಕಾನೂನು ಸಹಾಯದ ಕೊರತೆಯನ್ನು ಅಲ್ಲಿನ ಜನರು ಎದುರಿಸುತ್ತಿದ್ದಾರೆ.

‘ಭಾರತ-ಪಾಕಿಸ್ತಾನ ಕದನ ವಿರಾಮಕ್ಕೆ ವ್ಯಾಪಾರ ಅಸ್ತ್ರ ಬಳಸಿದೆ’: ಪುನರುಚ್ಚರಿಸಿದ ಟ್ರಂಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...