Homeಅಂಕಣಗಳುರಾಮ ಕೃಷ್ಣ ಕಪ್ಪುಗಿದ್ರಲ್ಲವ..

ರಾಮ ಕೃಷ್ಣ ಕಪ್ಪುಗಿದ್ರಲ್ಲವ..

- Advertisement -
- Advertisement -

ಸಿಂಗಾಪುರದ ಮುಖಾಂತರ ಯೂರೋಪ್ ಪ್ರವಾಸ ಮುಗಿಸಿ ಕರ್ನಾಟಕಕ್ಕೆ ಬಂದ ಕುಮಾರಣ್ಣ ವಿಮಾನದಿಂದ ಇಳಿಯುವ ಕೊನೆ ಮೆಟ್ಟಿಲಲ್ಲೇ ಕರ್ನಾಟಕ ಸರ್ಕಾರದ ವರ್ಗಾವಣೆಯಲ್ಲಿ ಒಂದು ಸಾವಿರ ಕೋಟಿ ವ್ಯವಹಾರ ನಡೆದಿದೆ ಎಂದಿದ್ದಾರಲ್ಲಾ. ಸಿಂಗಾಪುರದಲ್ಲಿದ್ದ ಕುಮಾರಣ್ಣನಿಗೆ ಈ ಕಾಂಗ್ರೆಸ್ ಸರಕಾರದ ವರ್ಗಾವರ್ಗಿ ವಿವರ ಹೇಗೆ ಗೊತ್ತಾಯಿತು? ಕುಮಾರಣ್ಣನ ಕಡೆಯ ಅಧಿಕಾರಿಗಳು ಮತ್ತು ಅಭಿಮಾನಿಗಳು ಇನ್ನೆಂತಹ ಜಾಲ ಹೆಣೆದಿರಬಹುದು? ಜೊತೆಗೆ ಪೆನ್‌ಡ್ರೈವ್ ಬೇರೆ ಕೆಲಸ ಮಾಡುತ್ತಿದೆ. ಹೇಗಾದರಾಗಲಿ ಹುಷಾರಾಗಿರಬೇಕು ಎಂದು ಸಿದ್ದು ಸಂಪುಟದ ಸಚಿವರು ಚಿಂತಿಸುತ್ತಿರುವಾಗಲೇ, ಮಂತ್ರಿಗಳಲ್ಲಿ ಕೆಲವು ಚಾಲಾಕಿಗಳು ಕುಮಾರಣ್ಣ ಎರಡು ಬಾರಿ ಮುಖ್ಯಮಂತ್ರಿಯಾಗಿ ವರ್ಗಾವರ್ಗಿಯ ದಂಧೆ ಗ್ರಹಿಸಿದವರು, ಅಲ್ಲದೆ ಅಧಿಕಾರಕ್ಕೆ ಬಂದ ಆರಂಭದಲ್ಲೇ ಜನಾರ್ದನ ರೆಡ್ಡಿಯಿಂದ ವಸೂಲಿ ಮಾಡಿ ಅರಗಿಸಿಕೊಂಡವರು; ಈ ಅಂದಾಜಿನಲ್ಲೇ ಅವರು ಈ ಸರಕಾರದ ವಿರುದ್ಧ ಒಂದು ಸಾವಿರ ಕೋಟಿ ವ್ಯವಹಾರದ ದೂರನ್ನ ಮಾಡಿದ್ದಾರೆ. ಈ ವಿಷಯದಲ್ಲಿ ಅವರನ್ನ ಹಿಟ್ ಅಂಡ್ ರನ್ ಕೇಸಿಗೆ ಸೇರಿಸಿ ಮಾತನಾಡುವುದಕ್ಕಿಂತ ಕುಮಾರಣ್ಣನ ಅಂದಾಜಿಗೆ ಸಿಗದಂತೆ ವ್ಯವಹಾರ ಮಾಡಬೇಕಿದೆ. ಏಕೆಂದರೆ ಕಳೆದ ಚುನಾವಣೆಯಲ್ಲಿ ಮಾಡಿದ ಸಾಲ ಹಾಗೇ ಇದೆ ಎಂದು ಮಾತನಾಡಿಕೊಂಡರಂತಲ್ಲಾ, ಥೂತ್ತೇರಿ.

*****

ಕರ್ನಾಟಕ ಈವರೆಗೆ ಕಂಡ ಅತ್ಯಂತ ದುರ್ಬಲ ಗೃಹ ಸಚಿವರಾಗಿದ್ದ ಅರಗ ಜ್ಞಾನೇಂದ್ರ ಆಡಿರುವ ಮಾತೊಂದು ಇಡೀ ಕರ್ನಾಟಕದಲ್ಲೇ ಅಲ್ಲೊಲಕಲ್ಲೋಲವುಂಟುಮಾಡಿದೆಯಲ್ಲಾ. ಆರೆಸ್ಸ್ಸೆನ ಕಟ್ಟಾಳು ಮತ್ತು ಎಬಿವಿಪಿಯ ’ಧೀಮಂತ’ ವಿದ್ಯಾರ್ಥಿ, ಬಿಜೆಪಿಯ ’ಧೀಮಂತ’ ನಾಯಕನಾಗಿ ಬೆಳೆದು ಕಡಿದಾಳು ಮಂಜಪ್ಪ, ಶಾಂತವೇರಿ ಗೋಪಾಲಗೌಡರು ಮತ್ತು ಕಿಮ್ಮನೆ ರತ್ನಾಕರ್ ಪ್ರತಿನಿಧಿಸಿದ ತೀರ್ಥಹಳ್ಳಿಯಿಂದ ಗೆದ್ದುಬಂದು ಗೃಹ ಸಚಿವರೂ ಆಗಿದ್ದ ಜ್ಞಾನೇಂದ್ರ ಅರೆಗ್ನಾನಿಯಾಗಿ ಬದಲಾದದ್ದು ಯಾವಾಗ ಎಂದು ಯೋಚಿಸಿ ಪೋನ್ ಮಾಡಲಾಗಿ ರಿಂಗಾಯ್ತು

ರಿಂಗ್ ಟೋನ್, “ನಮಸ್ತೆ ಸಧಾವತ್ಸಲೇ ಮಾತೃಭೂಮಿ…”

“ಹಲೋ ಯಾರು?”

“ನಾನು ಸಾರ್ ನಿಮ್ಮ ಅಭಿಮಾನಿ.”

“ಅಭಿಮಾನಿ ಯಾರ್ರಿ?”

“ಅದು ಈ ಕ್ಷಣದ ಅಭಿಮಾನಿ ಸಾ. ಖರ್ಗೆಗೆ ಸರಿಯಾಗೇಳಿದ್ದಿರಿ ಬುಡಿ ಸಾ.”

“ನಾನೇನು ಹೇಳಿಲ್ಲ ಕಂಡ್ರಿ. ನನಿಗಾಗದವರು ಸುಳ್ಳು ಹೇಳ್ತ ಅವುರೆ. ಮಾಧ್ಯಮದವರು ಅದನ್ನೆ ನಂಬಿದಾರೆ.”

“ಅದೇನಾರ ಆಗ್ಲಿ, ಖರ್ಗೆ ಬಣ್ಣದ ಬಗ್ಗೆ ಹೇಳಿ, ನೋಡಿ ಸೀದು ಕರುಕಲಾಗ್ಯವುರೆ ಅಂದಿರದು ಸರಿ ಸಾ.”

“ರೀ ನಾನು ಅಂಗಂದೇಯಿಲ್ಲ ಕಂಡ್ರಿ.”

“ಅಂಗನ್ನಬಾರ್ದು ಸಾರ್. ಜಮೀರಹಮದ್ ತರ ಸಮರ್ಥಿಸಿಕೋಬೇಕು.”

“ಅವುರು ಏನನ್ನು ಸಮರ್ಥಿಸಿಕೊಂಡ್ರು ರೀ?”

“ಕುಮಾರಸ್ವಾಮಿ ಬಣ್ಣದ ಬಗ್ಗೆ ಆಡಿಕೊಳ್ಳುವಾಗ, ನಾನು ಕುಳ್ಳ ಎಂದು ಹೇಳ್ಕಂಡವರೆ.”

“ಅವುರ್‍ಯಾಕಂಗಂದರು?”

“ಕೆಲವರನ್ನ ಆಡಿಕೊಬೇಕಾದ್ರೆ ಕೆಲವು ಸಾರಿ ನಮ್ಮನ್ನ ಅಣಕಿಸಿಕೊಬೇಕಾಗತ್ತೆ, ಅದ್ಕೆ ಜಮೀರು ನಾನು ಕುಳ್ಳ ಸತ್ಯ ಅಲ್ಲವ ಅಂದು ಕುಮಾರಸ್ವಾಮಿ ಬಗ್ಗೆ ಹೇಳಿದ್ದು ನಿಜ ಅಲ್ಲವಾ” ಅಂದವರೆ ಸಾರ್.

“ಅವುರನಾರ ಅನ್ಲಿ, ನಾನು ಅನ್ನದೇಯಿರೊ ಮಾತನ್ನ ತಗೊಂಡು ರಾಜಕೀಯ ಮಾಡಿದಾರಲ್ರೀ.”

“ಹಂಗಿದ್ರೆ ನೀವು ಹಿಂಗೆ ಮಾಡಬಹುದು, ಅದು ನನ್ನ ಮಾತಲ್ಲ. ಮಿಮಿಕ್ರಿ ದಯಾನಂದರನ್ನ ಹಿಡಿದು ನನ್ನಂಗೆ ಮಾತಾಡ್ಸಿದಾರೆ. ನಾನು ಖರ್ಗೆ ಅಭಿಮಾನಿ ಅವರ ಕಾಲಿನ ಧೂಳಿಗೂ ಸಮ ಅಲ್ಲ. ಅಂತ ಪ್ರೆಸ್ ಸ್ಟೇಟುಮಂಟು ಕೊಡಿ ಸಾರ್.”

“ಈಗಾಗ್ಲೆ ಕೊಟ್ಟಿದ್ದಿನಿ ಕಂಡ್ರಿ.”

“ಅದರಲ್ಲೇ ಸಿಗಾಯ್ಕಂಡಿದ್ದಿರಲ್ಲ ಸಾರ್?”

“ಎಲ್ಲಿ ಸಿಗಾಯ್ಕಂಡಿದ್ದಿನ್ರಿ?”

“ಖರ್ಗೆಯವರನ್ನ ಟೀಕೀಸಿದ್ರೆ ನಾನು ಯಾವ ಶಿಕ್ಷೆ ಬೇಕಾದ್ರು ಅನುಭವುಸ್ತಿನಿ ಅಂದಿದ್ದಿರಿ.”

“ಸರಿ ಅಂದಿಲವಲ್ಲಾ…”

“ಅಂದಿರದ ಸಾಬೀತು ಮಾಡಿಕಂಡಿದ್ದಿರಿ.”

“ಹೇಗೆ ಅಂತ?”

“ನೀವು ಯಾವ ಮಾತನ್ನ ಆಡದೆ ಖರ್ಗೆ ಹೆಸರು ಹೆಂಗೆ ಬಂತು. ಇದ್ದಕ್ಕಿದ್ದಂಗೆ ಅವರನ್ನ ಹೊಗಳೊ ಕಾರಣ ಏನು? ವೈಯಕ್ತಕವಾಗಿ ನಿಂದಿಸಿ ಕೀಳುಮಟ್ಟದ ರಾಜಕಾರಣ ಮಾಡಲ್ಲ ಅಂದು ಅದ್ನೇ ಮಾಡಿದ್ದಿರಲ್ಲಾ ಸಾರ್. ಮನುಷ್ಯನ ಬಣ್ಣ ಆಕಾರ ಆಡಿಕಳದು ಅಪರಾಧ, ಅವನ್ನ ನೀವು ಮಾಡಬಾರದಿತ್ತು.”

“ಖಂಡಿತ ಮಾಡಿಲ್ಲ ಕಂಡ್ರಿ ನನ್ನ ಬಾಯಲ್ಲಿ ಆ ಮಾತೇ ಬರಲಿಲ್ಲಾ.”

“ಸರಿ, ಮಾಧ್ಯಮದ ಎದುರಿನ ಮೈಕಿನಲ್ಲಿ ಈ ಶಬ್ದ ಬಂತು, ನಿಮ್ಮ ತುಟಿ ಕೂಡ ಚಲಿಸಿವೆ ಸಾರ್.”

“ಅದೇ ಹೇಳಿದೆನಲ್ಲಾ, ನೀವೆ ಹೇಳಿದಂಗೆ ಮಿಮಿಕ್ರಿ ಕಲಾವಿದರ ಬಳಸಿ ಏನು ಬೇಕಾದ್ರು ಮಾಡಬಹುದು.”

“ಅದನ್ನ ಕೋರ್ಟಲ್ಲಿ ಸಾಬೀತು ಮಾಡ್ಸಿ. ಸಾರ್ ಹ್ಯಾಗಿದ್ರು ಬಿಜೆಪಿಗಳಿಗೆ ಕೋರ್ಟ್ ಅಂದ್ರೆ ತುಂಬಾ ಇಷ್ಟ. ನೀವು ಕೋರ್ಟಲ್ಲಿ ನಿಮ್ಮನ್ನ ಸಮರ್ಥಿಸಿಕೊಳ್ಳಬಹುದು; ರಾಹುಲಗಾಂಧಿ ನೋಡಿ, ತಪ್ಪು ಮಾಡಿಲ್ಲ, ತಪ್ಪು ಅಂತ ಒಪ್ಪಿಗಳಲ್ಲ ಅಂದ್ರು. ಅವರ ಪ್ರಾಮಾಣಿಕ ಮಾತಿಗೆ ಕೋರ್ಟ್ ಮನ್ನಣೆ ಕೊಟ್ಟು ಅವರ ಶಿಕ್ಷೆಗೆ ಸ್ಟೇ ತಂತು ಅಲ್ಲವ?”

“ಈಗ ನಾನೇನು ಮಾಡ್ಲಿ?”

“ಏನಿಲ್ಲ ಖರ್ಗೆಯವರ ಬಣ್ಣದ ಬಗ್ಗೆ ಮಾತಾಡಿದ್ದೀನಿ. ಯಾಕಂದ್ರೆ, ನಮ್ಮ ಶ್ರೀರಾಮಚಂದ್ರ ಕಪ್ಪಗಿದ್ದ, ಹನ್ನೆರಡು ವರ್ಷ ಅರಣ್ಯದಲ್ಲಿ ಅಲದೂ ಕಾಯಿ ಕುಸುರು ತಿಂದು ಕರಕಲಾಗಿದ್ದ. ನಮ್ಮ ಖರ್ಗೆ ಸಾಹೇಬರಿಗೆ ಕಚ್ಛೆ ಹಾಕಿ ಕೈಗೆ ಬಿಲ್ಲು ಬಾಣ ಕೊಟ್ರೆ ಥೇಟ್ ಶ್ರೀರಾಮಚಂದ್ರನಂಗೇ ಕಾಣ್ತಾರೆ. ಆ ವೇಶದಲ್ಲಿ ಅವರ ಕಾಲಿಗೆ ಬೀಳಂಗಾಗತ್ತೆ; ಇನ್ನ ನಮ್ಮ ಕೃಷ್ಣನೂ ಕಪ್ಪಗಿದ್ದ. ಇವರಿಬ್ಬರು ನಮ್ಮ ಬಿಜೆಪಿ ಪಾರ್ಟಿಗೆ ಎರಡು ಚಕ್ರ ಇದ್ದಂಗೆ; ಅದರಲ್ಲೂ ಕೃಷ್ಣ ದನ ಕಾಯ್ತಾ ಕಾಯ್ತ ಕಪ್ಪಗೆ ಕರಕಲಾಗಿದ್ದ. ನಮ್ಮ ಪುರೋಹಿತಶಾಹಿಗಳು ಕಪ್ಪು ಬಣ್ಣನ ಒಪ್ಪದೇಯಿರದ್ರಿಂದ ಅವುರಿಬ್ಬರಿಗೂ ನಾಟಕದಲ್ಲಿ ಮತ್ತು ಸಿನಿಮಾದಲ್ಲಿ ನೀಲಿಬಣ್ಣ ಬಳಿತರೆ. ಈ ಭೂಮಿ ಮೇಲೆ ಯಾರಾದ್ರು ನೀಲಿ ಬಣ್ಣಕ್ಕಿದ್ದಾರ? ಆದ್ರಿಂದ ನಮ್ಮ ಪುರೋಹಿತಶಾಹಿಗಳು ಕಪ್ಪುಬಣ್ಣ ಒಪ್ಪದೆ ನೀಲಿ ಬಣ್ಣ ಬಳದು ನಾವೆಲ್ಲಾ ಕಪ್ಪುಬಣ್ಣ ದ್ವೇಷ ಮಾಡಂಗೆ ಮಾಡಿದಾರೆ. ಆ ಕಾರಣಕ್ಕೆ ನನ್ನ ಬಾಯಿ ತಪ್ಪಿ ಖಂಡ್ರೆ ಖರ್ಗೆ ಕುರಿತು ಮಾತನಾಡುವಾಗ, ಆ ಬಯಲುಸೀಮೆ, ಗುಲಬರ್ಗಾ, ರಾಯಚೂರು, ಬಳ್ಳಾರಿ ಕಡೆಯೆಲ್ಲ ಬಿಸಲಲ್ಲಿ ಬೆಂದು ಹ್ಯಂಗೆ ಕರಲಾಗ್ಯವುರೆ ನೋಡಿ ಅಂದೆ ಸಾ, ಅಂತ ಹೇಳಿ.”

“ನಿಮ್ಮ ಮಾತ ಕೇಳಿದ್ರೆ ಜೈಲಿಗೋಗಬೇಕಾಯ್ತದೆ.”

“ಮತ್ತೇನು ಮಾಡ್ತಿರಿ ಸಾರ್?”

“ನಾನು ಅಂದೇಯಿಲ್ಲ ಅಂತಿನಿ, ಮಾತು ನಂದಲ್ಲ ವಾಯ್ಸು ನಂದಲ್ಲ ಅಂತಿನಿ.”

“ಥೂತ್ತೇರಿ.”


ಇದನ್ನೂ ಓದಿ: ಕುಮಾರಣ್ಣ ಪೇಶ್ವೆಗಳೊಂದಿಗೆ ಹೋಗಲಿದ್ದಾರಂತಲ್ಲಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...