Homeಅಂಕಣಗಳುರಾಮ ಕೃಷ್ಣ ಕಪ್ಪುಗಿದ್ರಲ್ಲವ..

ರಾಮ ಕೃಷ್ಣ ಕಪ್ಪುಗಿದ್ರಲ್ಲವ..

- Advertisement -
- Advertisement -

ಸಿಂಗಾಪುರದ ಮುಖಾಂತರ ಯೂರೋಪ್ ಪ್ರವಾಸ ಮುಗಿಸಿ ಕರ್ನಾಟಕಕ್ಕೆ ಬಂದ ಕುಮಾರಣ್ಣ ವಿಮಾನದಿಂದ ಇಳಿಯುವ ಕೊನೆ ಮೆಟ್ಟಿಲಲ್ಲೇ ಕರ್ನಾಟಕ ಸರ್ಕಾರದ ವರ್ಗಾವಣೆಯಲ್ಲಿ ಒಂದು ಸಾವಿರ ಕೋಟಿ ವ್ಯವಹಾರ ನಡೆದಿದೆ ಎಂದಿದ್ದಾರಲ್ಲಾ. ಸಿಂಗಾಪುರದಲ್ಲಿದ್ದ ಕುಮಾರಣ್ಣನಿಗೆ ಈ ಕಾಂಗ್ರೆಸ್ ಸರಕಾರದ ವರ್ಗಾವರ್ಗಿ ವಿವರ ಹೇಗೆ ಗೊತ್ತಾಯಿತು? ಕುಮಾರಣ್ಣನ ಕಡೆಯ ಅಧಿಕಾರಿಗಳು ಮತ್ತು ಅಭಿಮಾನಿಗಳು ಇನ್ನೆಂತಹ ಜಾಲ ಹೆಣೆದಿರಬಹುದು? ಜೊತೆಗೆ ಪೆನ್‌ಡ್ರೈವ್ ಬೇರೆ ಕೆಲಸ ಮಾಡುತ್ತಿದೆ. ಹೇಗಾದರಾಗಲಿ ಹುಷಾರಾಗಿರಬೇಕು ಎಂದು ಸಿದ್ದು ಸಂಪುಟದ ಸಚಿವರು ಚಿಂತಿಸುತ್ತಿರುವಾಗಲೇ, ಮಂತ್ರಿಗಳಲ್ಲಿ ಕೆಲವು ಚಾಲಾಕಿಗಳು ಕುಮಾರಣ್ಣ ಎರಡು ಬಾರಿ ಮುಖ್ಯಮಂತ್ರಿಯಾಗಿ ವರ್ಗಾವರ್ಗಿಯ ದಂಧೆ ಗ್ರಹಿಸಿದವರು, ಅಲ್ಲದೆ ಅಧಿಕಾರಕ್ಕೆ ಬಂದ ಆರಂಭದಲ್ಲೇ ಜನಾರ್ದನ ರೆಡ್ಡಿಯಿಂದ ವಸೂಲಿ ಮಾಡಿ ಅರಗಿಸಿಕೊಂಡವರು; ಈ ಅಂದಾಜಿನಲ್ಲೇ ಅವರು ಈ ಸರಕಾರದ ವಿರುದ್ಧ ಒಂದು ಸಾವಿರ ಕೋಟಿ ವ್ಯವಹಾರದ ದೂರನ್ನ ಮಾಡಿದ್ದಾರೆ. ಈ ವಿಷಯದಲ್ಲಿ ಅವರನ್ನ ಹಿಟ್ ಅಂಡ್ ರನ್ ಕೇಸಿಗೆ ಸೇರಿಸಿ ಮಾತನಾಡುವುದಕ್ಕಿಂತ ಕುಮಾರಣ್ಣನ ಅಂದಾಜಿಗೆ ಸಿಗದಂತೆ ವ್ಯವಹಾರ ಮಾಡಬೇಕಿದೆ. ಏಕೆಂದರೆ ಕಳೆದ ಚುನಾವಣೆಯಲ್ಲಿ ಮಾಡಿದ ಸಾಲ ಹಾಗೇ ಇದೆ ಎಂದು ಮಾತನಾಡಿಕೊಂಡರಂತಲ್ಲಾ, ಥೂತ್ತೇರಿ.

*****

ಕರ್ನಾಟಕ ಈವರೆಗೆ ಕಂಡ ಅತ್ಯಂತ ದುರ್ಬಲ ಗೃಹ ಸಚಿವರಾಗಿದ್ದ ಅರಗ ಜ್ಞಾನೇಂದ್ರ ಆಡಿರುವ ಮಾತೊಂದು ಇಡೀ ಕರ್ನಾಟಕದಲ್ಲೇ ಅಲ್ಲೊಲಕಲ್ಲೋಲವುಂಟುಮಾಡಿದೆಯಲ್ಲಾ. ಆರೆಸ್ಸ್ಸೆನ ಕಟ್ಟಾಳು ಮತ್ತು ಎಬಿವಿಪಿಯ ’ಧೀಮಂತ’ ವಿದ್ಯಾರ್ಥಿ, ಬಿಜೆಪಿಯ ’ಧೀಮಂತ’ ನಾಯಕನಾಗಿ ಬೆಳೆದು ಕಡಿದಾಳು ಮಂಜಪ್ಪ, ಶಾಂತವೇರಿ ಗೋಪಾಲಗೌಡರು ಮತ್ತು ಕಿಮ್ಮನೆ ರತ್ನಾಕರ್ ಪ್ರತಿನಿಧಿಸಿದ ತೀರ್ಥಹಳ್ಳಿಯಿಂದ ಗೆದ್ದುಬಂದು ಗೃಹ ಸಚಿವರೂ ಆಗಿದ್ದ ಜ್ಞಾನೇಂದ್ರ ಅರೆಗ್ನಾನಿಯಾಗಿ ಬದಲಾದದ್ದು ಯಾವಾಗ ಎಂದು ಯೋಚಿಸಿ ಪೋನ್ ಮಾಡಲಾಗಿ ರಿಂಗಾಯ್ತು

ರಿಂಗ್ ಟೋನ್, “ನಮಸ್ತೆ ಸಧಾವತ್ಸಲೇ ಮಾತೃಭೂಮಿ…”

“ಹಲೋ ಯಾರು?”

“ನಾನು ಸಾರ್ ನಿಮ್ಮ ಅಭಿಮಾನಿ.”

“ಅಭಿಮಾನಿ ಯಾರ್ರಿ?”

“ಅದು ಈ ಕ್ಷಣದ ಅಭಿಮಾನಿ ಸಾ. ಖರ್ಗೆಗೆ ಸರಿಯಾಗೇಳಿದ್ದಿರಿ ಬುಡಿ ಸಾ.”

“ನಾನೇನು ಹೇಳಿಲ್ಲ ಕಂಡ್ರಿ. ನನಿಗಾಗದವರು ಸುಳ್ಳು ಹೇಳ್ತ ಅವುರೆ. ಮಾಧ್ಯಮದವರು ಅದನ್ನೆ ನಂಬಿದಾರೆ.”

“ಅದೇನಾರ ಆಗ್ಲಿ, ಖರ್ಗೆ ಬಣ್ಣದ ಬಗ್ಗೆ ಹೇಳಿ, ನೋಡಿ ಸೀದು ಕರುಕಲಾಗ್ಯವುರೆ ಅಂದಿರದು ಸರಿ ಸಾ.”

“ರೀ ನಾನು ಅಂಗಂದೇಯಿಲ್ಲ ಕಂಡ್ರಿ.”

“ಅಂಗನ್ನಬಾರ್ದು ಸಾರ್. ಜಮೀರಹಮದ್ ತರ ಸಮರ್ಥಿಸಿಕೋಬೇಕು.”

“ಅವುರು ಏನನ್ನು ಸಮರ್ಥಿಸಿಕೊಂಡ್ರು ರೀ?”

“ಕುಮಾರಸ್ವಾಮಿ ಬಣ್ಣದ ಬಗ್ಗೆ ಆಡಿಕೊಳ್ಳುವಾಗ, ನಾನು ಕುಳ್ಳ ಎಂದು ಹೇಳ್ಕಂಡವರೆ.”

“ಅವುರ್‍ಯಾಕಂಗಂದರು?”

“ಕೆಲವರನ್ನ ಆಡಿಕೊಬೇಕಾದ್ರೆ ಕೆಲವು ಸಾರಿ ನಮ್ಮನ್ನ ಅಣಕಿಸಿಕೊಬೇಕಾಗತ್ತೆ, ಅದ್ಕೆ ಜಮೀರು ನಾನು ಕುಳ್ಳ ಸತ್ಯ ಅಲ್ಲವ ಅಂದು ಕುಮಾರಸ್ವಾಮಿ ಬಗ್ಗೆ ಹೇಳಿದ್ದು ನಿಜ ಅಲ್ಲವಾ” ಅಂದವರೆ ಸಾರ್.

“ಅವುರನಾರ ಅನ್ಲಿ, ನಾನು ಅನ್ನದೇಯಿರೊ ಮಾತನ್ನ ತಗೊಂಡು ರಾಜಕೀಯ ಮಾಡಿದಾರಲ್ರೀ.”

“ಹಂಗಿದ್ರೆ ನೀವು ಹಿಂಗೆ ಮಾಡಬಹುದು, ಅದು ನನ್ನ ಮಾತಲ್ಲ. ಮಿಮಿಕ್ರಿ ದಯಾನಂದರನ್ನ ಹಿಡಿದು ನನ್ನಂಗೆ ಮಾತಾಡ್ಸಿದಾರೆ. ನಾನು ಖರ್ಗೆ ಅಭಿಮಾನಿ ಅವರ ಕಾಲಿನ ಧೂಳಿಗೂ ಸಮ ಅಲ್ಲ. ಅಂತ ಪ್ರೆಸ್ ಸ್ಟೇಟುಮಂಟು ಕೊಡಿ ಸಾರ್.”

“ಈಗಾಗ್ಲೆ ಕೊಟ್ಟಿದ್ದಿನಿ ಕಂಡ್ರಿ.”

“ಅದರಲ್ಲೇ ಸಿಗಾಯ್ಕಂಡಿದ್ದಿರಲ್ಲ ಸಾರ್?”

“ಎಲ್ಲಿ ಸಿಗಾಯ್ಕಂಡಿದ್ದಿನ್ರಿ?”

“ಖರ್ಗೆಯವರನ್ನ ಟೀಕೀಸಿದ್ರೆ ನಾನು ಯಾವ ಶಿಕ್ಷೆ ಬೇಕಾದ್ರು ಅನುಭವುಸ್ತಿನಿ ಅಂದಿದ್ದಿರಿ.”

“ಸರಿ ಅಂದಿಲವಲ್ಲಾ…”

“ಅಂದಿರದ ಸಾಬೀತು ಮಾಡಿಕಂಡಿದ್ದಿರಿ.”

“ಹೇಗೆ ಅಂತ?”

“ನೀವು ಯಾವ ಮಾತನ್ನ ಆಡದೆ ಖರ್ಗೆ ಹೆಸರು ಹೆಂಗೆ ಬಂತು. ಇದ್ದಕ್ಕಿದ್ದಂಗೆ ಅವರನ್ನ ಹೊಗಳೊ ಕಾರಣ ಏನು? ವೈಯಕ್ತಕವಾಗಿ ನಿಂದಿಸಿ ಕೀಳುಮಟ್ಟದ ರಾಜಕಾರಣ ಮಾಡಲ್ಲ ಅಂದು ಅದ್ನೇ ಮಾಡಿದ್ದಿರಲ್ಲಾ ಸಾರ್. ಮನುಷ್ಯನ ಬಣ್ಣ ಆಕಾರ ಆಡಿಕಳದು ಅಪರಾಧ, ಅವನ್ನ ನೀವು ಮಾಡಬಾರದಿತ್ತು.”

“ಖಂಡಿತ ಮಾಡಿಲ್ಲ ಕಂಡ್ರಿ ನನ್ನ ಬಾಯಲ್ಲಿ ಆ ಮಾತೇ ಬರಲಿಲ್ಲಾ.”

“ಸರಿ, ಮಾಧ್ಯಮದ ಎದುರಿನ ಮೈಕಿನಲ್ಲಿ ಈ ಶಬ್ದ ಬಂತು, ನಿಮ್ಮ ತುಟಿ ಕೂಡ ಚಲಿಸಿವೆ ಸಾರ್.”

“ಅದೇ ಹೇಳಿದೆನಲ್ಲಾ, ನೀವೆ ಹೇಳಿದಂಗೆ ಮಿಮಿಕ್ರಿ ಕಲಾವಿದರ ಬಳಸಿ ಏನು ಬೇಕಾದ್ರು ಮಾಡಬಹುದು.”

“ಅದನ್ನ ಕೋರ್ಟಲ್ಲಿ ಸಾಬೀತು ಮಾಡ್ಸಿ. ಸಾರ್ ಹ್ಯಾಗಿದ್ರು ಬಿಜೆಪಿಗಳಿಗೆ ಕೋರ್ಟ್ ಅಂದ್ರೆ ತುಂಬಾ ಇಷ್ಟ. ನೀವು ಕೋರ್ಟಲ್ಲಿ ನಿಮ್ಮನ್ನ ಸಮರ್ಥಿಸಿಕೊಳ್ಳಬಹುದು; ರಾಹುಲಗಾಂಧಿ ನೋಡಿ, ತಪ್ಪು ಮಾಡಿಲ್ಲ, ತಪ್ಪು ಅಂತ ಒಪ್ಪಿಗಳಲ್ಲ ಅಂದ್ರು. ಅವರ ಪ್ರಾಮಾಣಿಕ ಮಾತಿಗೆ ಕೋರ್ಟ್ ಮನ್ನಣೆ ಕೊಟ್ಟು ಅವರ ಶಿಕ್ಷೆಗೆ ಸ್ಟೇ ತಂತು ಅಲ್ಲವ?”

“ಈಗ ನಾನೇನು ಮಾಡ್ಲಿ?”

“ಏನಿಲ್ಲ ಖರ್ಗೆಯವರ ಬಣ್ಣದ ಬಗ್ಗೆ ಮಾತಾಡಿದ್ದೀನಿ. ಯಾಕಂದ್ರೆ, ನಮ್ಮ ಶ್ರೀರಾಮಚಂದ್ರ ಕಪ್ಪಗಿದ್ದ, ಹನ್ನೆರಡು ವರ್ಷ ಅರಣ್ಯದಲ್ಲಿ ಅಲದೂ ಕಾಯಿ ಕುಸುರು ತಿಂದು ಕರಕಲಾಗಿದ್ದ. ನಮ್ಮ ಖರ್ಗೆ ಸಾಹೇಬರಿಗೆ ಕಚ್ಛೆ ಹಾಕಿ ಕೈಗೆ ಬಿಲ್ಲು ಬಾಣ ಕೊಟ್ರೆ ಥೇಟ್ ಶ್ರೀರಾಮಚಂದ್ರನಂಗೇ ಕಾಣ್ತಾರೆ. ಆ ವೇಶದಲ್ಲಿ ಅವರ ಕಾಲಿಗೆ ಬೀಳಂಗಾಗತ್ತೆ; ಇನ್ನ ನಮ್ಮ ಕೃಷ್ಣನೂ ಕಪ್ಪಗಿದ್ದ. ಇವರಿಬ್ಬರು ನಮ್ಮ ಬಿಜೆಪಿ ಪಾರ್ಟಿಗೆ ಎರಡು ಚಕ್ರ ಇದ್ದಂಗೆ; ಅದರಲ್ಲೂ ಕೃಷ್ಣ ದನ ಕಾಯ್ತಾ ಕಾಯ್ತ ಕಪ್ಪಗೆ ಕರಕಲಾಗಿದ್ದ. ನಮ್ಮ ಪುರೋಹಿತಶಾಹಿಗಳು ಕಪ್ಪು ಬಣ್ಣನ ಒಪ್ಪದೇಯಿರದ್ರಿಂದ ಅವುರಿಬ್ಬರಿಗೂ ನಾಟಕದಲ್ಲಿ ಮತ್ತು ಸಿನಿಮಾದಲ್ಲಿ ನೀಲಿಬಣ್ಣ ಬಳಿತರೆ. ಈ ಭೂಮಿ ಮೇಲೆ ಯಾರಾದ್ರು ನೀಲಿ ಬಣ್ಣಕ್ಕಿದ್ದಾರ? ಆದ್ರಿಂದ ನಮ್ಮ ಪುರೋಹಿತಶಾಹಿಗಳು ಕಪ್ಪುಬಣ್ಣ ಒಪ್ಪದೆ ನೀಲಿ ಬಣ್ಣ ಬಳದು ನಾವೆಲ್ಲಾ ಕಪ್ಪುಬಣ್ಣ ದ್ವೇಷ ಮಾಡಂಗೆ ಮಾಡಿದಾರೆ. ಆ ಕಾರಣಕ್ಕೆ ನನ್ನ ಬಾಯಿ ತಪ್ಪಿ ಖಂಡ್ರೆ ಖರ್ಗೆ ಕುರಿತು ಮಾತನಾಡುವಾಗ, ಆ ಬಯಲುಸೀಮೆ, ಗುಲಬರ್ಗಾ, ರಾಯಚೂರು, ಬಳ್ಳಾರಿ ಕಡೆಯೆಲ್ಲ ಬಿಸಲಲ್ಲಿ ಬೆಂದು ಹ್ಯಂಗೆ ಕರಲಾಗ್ಯವುರೆ ನೋಡಿ ಅಂದೆ ಸಾ, ಅಂತ ಹೇಳಿ.”

“ನಿಮ್ಮ ಮಾತ ಕೇಳಿದ್ರೆ ಜೈಲಿಗೋಗಬೇಕಾಯ್ತದೆ.”

“ಮತ್ತೇನು ಮಾಡ್ತಿರಿ ಸಾರ್?”

“ನಾನು ಅಂದೇಯಿಲ್ಲ ಅಂತಿನಿ, ಮಾತು ನಂದಲ್ಲ ವಾಯ್ಸು ನಂದಲ್ಲ ಅಂತಿನಿ.”

“ಥೂತ್ತೇರಿ.”


ಇದನ್ನೂ ಓದಿ: ಕುಮಾರಣ್ಣ ಪೇಶ್ವೆಗಳೊಂದಿಗೆ ಹೋಗಲಿದ್ದಾರಂತಲ್ಲಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...

ಚೆನ್ನೈನಲ್ಲಿ ಮಾಸಿಕ ಸಹಾಯಧನ ಹೆಚ್ಚಿಸುವಂತೆ ಹೋರಾಟ ನಡೆಸುತ್ತಿದ್ದ ಅಂಗವಿಕಲರ ಮೇಲೆ ಪೊಲೀಸ್ ದೌರ್ಜನ್ಯದ ಆರೋಪ

ಚೆನ್ನೈ: ರಾಜ್ಯ ಸರ್ಕಾರದಿಂದ ನೀಡುತ್ತಿರುವ ಮಾಸಿಕ ಸಹಾಯಧನ ಹೆಚ್ಚಿಸುವಂತೆ ಒತ್ತಾಯಿಸಿ ಚೆನ್ನೈನಲ್ಲಿ ಅಂಗವಿಕಲರು ನಡೆಸುತ್ತಿರುವ ಪ್ರತಿಭಟನೆ ಆರನೇ ದಿನಕ್ಕೆ ಕಾಲಿಟ್ಟಿದೆ.  ಅಂಗವಿಕಲರು ನಡೆಸುತ್ತಿದ್ದ ಈ ಪ್ರತಿಭಟನೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಹಲವಾರು ಪ್ರತಿಭಟನಾಕಾರರನ್ನು...

ರಾಜ್ಯಸಭೆ 37 ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ; ವೇಳಾಪಟ್ಟಿ ಪ್ರಕಟಿಸಿದ ಚುನಾವಣಾ ಆಯೋಗ

10 ರಾಜ್ಯಗಳಿಂದ ಖಾಲಿ ಇರುವ 37 ಸ್ಥಾನಗಳನ್ನು ಭರ್ತಿ ಮಾಡಲು ರಾಜ್ಯಸಭೆಯ ದ್ವೈವಾರ್ಷಿಕ ಚುನಾವಣೆಗೆ ಭಾರತೀಯ ಚುನಾವಣಾ ಆಯೋಗ (ಇಸಿಐ) ಬುಧವಾರ ವೇಳಾಪಟ್ಟಿ ಪ್ರಕಟಿಸಿದೆ. ಆಯೋಗದ ಪ್ರಕಾರ, ಮಾರ್ಚ್ 16 ರಂದು ಬೆಳಿಗ್ಗೆ 9:00...

ಹಿಂದೂ ಕುಟುಂಬಗಳು ಕನಿಷ್ಠ ಮೂರು ಮಕ್ಕಳನ್ನು ಹೊಂದಬೇಕು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಹಿಂದೂ ಕುಟುಂಬಗಳು ಕನಿಷ್ಠ ಮೂರು ಮಕ್ಕಳನ್ನು ಹೊಂದಬೇಕು ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕರೆ ನೀಡಿದ್ದಾರೆ. ಮಂಗಳವಾರ ಲಕ್ನೋದ ಸರಸ್ವತಿ ಶಿಶು ಮಂದಿರದಲ್ಲಿ ನಡೆದ ಸಾಮಾಜಿಕ ಸಾಮರಸ್ಯ ಕಾರ್ಯಕ್ರಮದಲ್ಲಿ ಮಾತನಾಡಿದ ಭಾಗವತ್, ಹಿಂದೂ...

5% ಮುಸ್ಲಿಂ ಮೀಸಲಾತಿ ಪ್ರಕ್ರಿಯೆ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರ

ರಾಜ್ಯದಲ್ಲಿ ಮುಸ್ಲಿಂ ಮೀಸಲಾತಿಗಾಗಿ ಜಾತಿ ಪರಿಶೀಲನೆ ಮತ್ತು ಪ್ರಮಾಣೀಕರಣ ಪತ್ರಗಳನ್ನು ನೀಡುವ ಪ್ರಕ್ರಿಯೆಯನ್ನು ಮಹಾರಾಷ್ಟ್ರ ಸರ್ಕಾರ ಮಂಗಳವಾರ (ಫೆ.17) ರದ್ದುಗೊಳಿಸಿ ಆದೇಶ ಹೊರಡಿಸಿದೆ. ಇದು ಪ್ರಸ್ತುತ ಪರಿಸ್ಥಿತಿಯಲ್ಲಿ ಯಾವುದೇ ತಕ್ಷಣದ ಬದಲಾವಣೆಯನ್ನು ತರದಿದ್ದರೂ,...

‘ಆರ್‌ಎಸ್‌ಎಸ್ ನೋಂದಣಿಗೆ ಕಾಂಗ್ರೆಸ್ ಕಾನೂನು ತರಲಿದೆ’: ತಮ್ಮ ಹೇಳಿಕೆಗಳನ್ನು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮಂಗಳವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಕುರಿತ ತಮ್ಮ ಹೇಳಿಕೆಗಳನ್ನು ಮತ್ತು ಕರಾವಳಿ ಕರ್ನಾಟಕದ ಹೂಡಿಕೆಗಳ ಮೇಲೆ ಕೋಮು ಉದ್ವಿಗ್ನತೆ ಪರಿಣಾಮ...

ವಿನೋದ್ ಅದಾನಿ ಸಹಚರರ ವಿರುದ್ಧ ತನಿಖೆ ನಡೆಸಿದ ಇಟಾಲಿಯನ್ ಬ್ಯಾಂಕ್; ಅನುಮಾನಾಸ್ಪದ ‘ಹೆಡ್ಜ್ ಫಂಡ್’ ಹೂಡಿಕೆ ಪತ್ತೆ

ಜನವರಿ 2023 ರಲ್ಲಿ ಹಿಂಡೆನ್‌ಬರ್ಗ್‌ ರಿಸರ್ಚ್ ವರದಿಯ ಬೆನ್ನಲ್ಲೇ, ಇಟಲಿಯ ಅತಿದೊಡ್ಡ ಬ್ಯಾಂಕ್ 'ಇಂಟೆಸಾ ಸ್ಯಾನ್ಪೋಲೊ' ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಅವರ ಸಹೋದರ ವಿನೋದ್ ಅದಾನಿ ಅವರ ಇಬ್ಬರು ಸಹಚರರನ್ನು...

‘ಸ್ತನ ಹಿಡಿಯುವುದು, ಪೈಜಾಮದ ಲಾಡಿ ಬಿಚ್ಚುವುದು ಅತ್ಯಾಚಾರ ಯತ್ನವಲ್ಲ’ ಎಂಬ ಅಲಹಾಬಾದ್ ಹೈಕೋರ್ಟ್ ತೀರ್ಪು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

"ಹೆಣ್ಣು ಮಕ್ಕಳ ಸ್ತನ ಹಿಡಿಯುವುದು, ಪೈಜಾಮದ ಲಾಡಿ ಬಿಚ್ಚುವುದು, ಅವರನ್ನು ಚರಂಡಿ ಕಡೆಗೆ ಅಥವಾ ಮೋರಿಯ ಅಡಿಗೆ ಎಳೆಯುವುದು 'ಅತ್ಯಾಚಾರ ಅಥವಾ ಅತ್ಯಾಚಾರ ಯತ್ನವಲ್ಲ" ಎಂಬ ಅಲಹಾಬಾದ್‌ ಹೈಕೋರ್ಟ್‌ನ ವಿವಾದಾತ್ಮಕ ತೀರ್ಪಿನ್ನು ಸುಪ್ರೀಂ...

‘ದೇವರಿಗೆ ಧನ್ಯವಾದಗಳು, ದಕ್ಷಿಣ ಇನ್ನೂ ಸ್ವತಂತ್ರವಾಗಿದೆ, ನಾವು ನಿಮ್ಮಿಂದ ಶಕ್ತಿ ಪಡೆಯುತ್ತೇವೆ’: ಕೇರಳ ಸಮ್ಮೇಳನದಲ್ಲಿ ಫಾರೂಕ್ ಅಬ್ದುಲ್ಲಾ ಭಾವುಕ ಮಾತು

"ದೇವರಿಗೆ ಧನ್ಯವಾದಗಳು, ದಕ್ಷಿಣ ಇನ್ನೂ ಸ್ವತಂತ್ರವಾಗಿದೆ, ಮತ್ತು ಅದು ಸ್ವತಂತ್ರವಾಗಿಯೇ ಉಳಿದಿದೆ ಮತ್ತು ಅಭಿವೃದ್ಧಿ ಹೊಂದುತ್ತದೆ ಮತ್ತು ಬಲಗೊಳ್ಳುತ್ತದೆ ಎಂದು ನಾನು ಭಾವಿಸುತ್ತೇನೆ. ನಾವು ನಿಮ್ಮಿಂದ ಶಕ್ತಿಯನ್ನು ಪಡೆಯುತ್ತೇವೆ. ನಾವು ನಿಮ್ಮನ್ನು ನೋಡುತ್ತೇವೆ...

ದತ್ತಾಂಶ ಸಂರಕ್ಷಣಾ ಕಾನೂನಿನಡಿಯಲ್ಲಿ ಆರ್‌ಟಿಐ ತಿದ್ದುಪಡಿಗೆ ತಡೆ ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್

ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ಕಾಯ್ದೆಯ ಮೂಲಕ ಪರಿಚಯಿಸಲಾದ ಮಾಹಿತಿ ಹಕ್ಕು ಕಾಯ್ದೆಗೆ ತಿದ್ದುಪಡಿಯನ್ನು ತಡೆಹಿಡಿಯಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ ಎಂದು 'ಬಾರ್ ಮತ್ತು ಬೆಂಚ್' ವರದಿ ಮಾಡಿದೆ. ಸಾರ್ವಜನಿಕ ಹಿತಾಸಕ್ತಿಯ ಆಧಾರದ...