Homeಅಂಕಣಗಳುರಾಮ ಕೃಷ್ಣ ಕಪ್ಪುಗಿದ್ರಲ್ಲವ..

ರಾಮ ಕೃಷ್ಣ ಕಪ್ಪುಗಿದ್ರಲ್ಲವ..

- Advertisement -
- Advertisement -

ಸಿಂಗಾಪುರದ ಮುಖಾಂತರ ಯೂರೋಪ್ ಪ್ರವಾಸ ಮುಗಿಸಿ ಕರ್ನಾಟಕಕ್ಕೆ ಬಂದ ಕುಮಾರಣ್ಣ ವಿಮಾನದಿಂದ ಇಳಿಯುವ ಕೊನೆ ಮೆಟ್ಟಿಲಲ್ಲೇ ಕರ್ನಾಟಕ ಸರ್ಕಾರದ ವರ್ಗಾವಣೆಯಲ್ಲಿ ಒಂದು ಸಾವಿರ ಕೋಟಿ ವ್ಯವಹಾರ ನಡೆದಿದೆ ಎಂದಿದ್ದಾರಲ್ಲಾ. ಸಿಂಗಾಪುರದಲ್ಲಿದ್ದ ಕುಮಾರಣ್ಣನಿಗೆ ಈ ಕಾಂಗ್ರೆಸ್ ಸರಕಾರದ ವರ್ಗಾವರ್ಗಿ ವಿವರ ಹೇಗೆ ಗೊತ್ತಾಯಿತು? ಕುಮಾರಣ್ಣನ ಕಡೆಯ ಅಧಿಕಾರಿಗಳು ಮತ್ತು ಅಭಿಮಾನಿಗಳು ಇನ್ನೆಂತಹ ಜಾಲ ಹೆಣೆದಿರಬಹುದು? ಜೊತೆಗೆ ಪೆನ್‌ಡ್ರೈವ್ ಬೇರೆ ಕೆಲಸ ಮಾಡುತ್ತಿದೆ. ಹೇಗಾದರಾಗಲಿ ಹುಷಾರಾಗಿರಬೇಕು ಎಂದು ಸಿದ್ದು ಸಂಪುಟದ ಸಚಿವರು ಚಿಂತಿಸುತ್ತಿರುವಾಗಲೇ, ಮಂತ್ರಿಗಳಲ್ಲಿ ಕೆಲವು ಚಾಲಾಕಿಗಳು ಕುಮಾರಣ್ಣ ಎರಡು ಬಾರಿ ಮುಖ್ಯಮಂತ್ರಿಯಾಗಿ ವರ್ಗಾವರ್ಗಿಯ ದಂಧೆ ಗ್ರಹಿಸಿದವರು, ಅಲ್ಲದೆ ಅಧಿಕಾರಕ್ಕೆ ಬಂದ ಆರಂಭದಲ್ಲೇ ಜನಾರ್ದನ ರೆಡ್ಡಿಯಿಂದ ವಸೂಲಿ ಮಾಡಿ ಅರಗಿಸಿಕೊಂಡವರು; ಈ ಅಂದಾಜಿನಲ್ಲೇ ಅವರು ಈ ಸರಕಾರದ ವಿರುದ್ಧ ಒಂದು ಸಾವಿರ ಕೋಟಿ ವ್ಯವಹಾರದ ದೂರನ್ನ ಮಾಡಿದ್ದಾರೆ. ಈ ವಿಷಯದಲ್ಲಿ ಅವರನ್ನ ಹಿಟ್ ಅಂಡ್ ರನ್ ಕೇಸಿಗೆ ಸೇರಿಸಿ ಮಾತನಾಡುವುದಕ್ಕಿಂತ ಕುಮಾರಣ್ಣನ ಅಂದಾಜಿಗೆ ಸಿಗದಂತೆ ವ್ಯವಹಾರ ಮಾಡಬೇಕಿದೆ. ಏಕೆಂದರೆ ಕಳೆದ ಚುನಾವಣೆಯಲ್ಲಿ ಮಾಡಿದ ಸಾಲ ಹಾಗೇ ಇದೆ ಎಂದು ಮಾತನಾಡಿಕೊಂಡರಂತಲ್ಲಾ, ಥೂತ್ತೇರಿ.

*****

ಕರ್ನಾಟಕ ಈವರೆಗೆ ಕಂಡ ಅತ್ಯಂತ ದುರ್ಬಲ ಗೃಹ ಸಚಿವರಾಗಿದ್ದ ಅರಗ ಜ್ಞಾನೇಂದ್ರ ಆಡಿರುವ ಮಾತೊಂದು ಇಡೀ ಕರ್ನಾಟಕದಲ್ಲೇ ಅಲ್ಲೊಲಕಲ್ಲೋಲವುಂಟುಮಾಡಿದೆಯಲ್ಲಾ. ಆರೆಸ್ಸ್ಸೆನ ಕಟ್ಟಾಳು ಮತ್ತು ಎಬಿವಿಪಿಯ ’ಧೀಮಂತ’ ವಿದ್ಯಾರ್ಥಿ, ಬಿಜೆಪಿಯ ’ಧೀಮಂತ’ ನಾಯಕನಾಗಿ ಬೆಳೆದು ಕಡಿದಾಳು ಮಂಜಪ್ಪ, ಶಾಂತವೇರಿ ಗೋಪಾಲಗೌಡರು ಮತ್ತು ಕಿಮ್ಮನೆ ರತ್ನಾಕರ್ ಪ್ರತಿನಿಧಿಸಿದ ತೀರ್ಥಹಳ್ಳಿಯಿಂದ ಗೆದ್ದುಬಂದು ಗೃಹ ಸಚಿವರೂ ಆಗಿದ್ದ ಜ್ಞಾನೇಂದ್ರ ಅರೆಗ್ನಾನಿಯಾಗಿ ಬದಲಾದದ್ದು ಯಾವಾಗ ಎಂದು ಯೋಚಿಸಿ ಪೋನ್ ಮಾಡಲಾಗಿ ರಿಂಗಾಯ್ತು

ರಿಂಗ್ ಟೋನ್, “ನಮಸ್ತೆ ಸಧಾವತ್ಸಲೇ ಮಾತೃಭೂಮಿ…”

“ಹಲೋ ಯಾರು?”

“ನಾನು ಸಾರ್ ನಿಮ್ಮ ಅಭಿಮಾನಿ.”

“ಅಭಿಮಾನಿ ಯಾರ್ರಿ?”

“ಅದು ಈ ಕ್ಷಣದ ಅಭಿಮಾನಿ ಸಾ. ಖರ್ಗೆಗೆ ಸರಿಯಾಗೇಳಿದ್ದಿರಿ ಬುಡಿ ಸಾ.”

“ನಾನೇನು ಹೇಳಿಲ್ಲ ಕಂಡ್ರಿ. ನನಿಗಾಗದವರು ಸುಳ್ಳು ಹೇಳ್ತ ಅವುರೆ. ಮಾಧ್ಯಮದವರು ಅದನ್ನೆ ನಂಬಿದಾರೆ.”

“ಅದೇನಾರ ಆಗ್ಲಿ, ಖರ್ಗೆ ಬಣ್ಣದ ಬಗ್ಗೆ ಹೇಳಿ, ನೋಡಿ ಸೀದು ಕರುಕಲಾಗ್ಯವುರೆ ಅಂದಿರದು ಸರಿ ಸಾ.”

“ರೀ ನಾನು ಅಂಗಂದೇಯಿಲ್ಲ ಕಂಡ್ರಿ.”

“ಅಂಗನ್ನಬಾರ್ದು ಸಾರ್. ಜಮೀರಹಮದ್ ತರ ಸಮರ್ಥಿಸಿಕೋಬೇಕು.”

“ಅವುರು ಏನನ್ನು ಸಮರ್ಥಿಸಿಕೊಂಡ್ರು ರೀ?”

“ಕುಮಾರಸ್ವಾಮಿ ಬಣ್ಣದ ಬಗ್ಗೆ ಆಡಿಕೊಳ್ಳುವಾಗ, ನಾನು ಕುಳ್ಳ ಎಂದು ಹೇಳ್ಕಂಡವರೆ.”

“ಅವುರ್‍ಯಾಕಂಗಂದರು?”

“ಕೆಲವರನ್ನ ಆಡಿಕೊಬೇಕಾದ್ರೆ ಕೆಲವು ಸಾರಿ ನಮ್ಮನ್ನ ಅಣಕಿಸಿಕೊಬೇಕಾಗತ್ತೆ, ಅದ್ಕೆ ಜಮೀರು ನಾನು ಕುಳ್ಳ ಸತ್ಯ ಅಲ್ಲವ ಅಂದು ಕುಮಾರಸ್ವಾಮಿ ಬಗ್ಗೆ ಹೇಳಿದ್ದು ನಿಜ ಅಲ್ಲವಾ” ಅಂದವರೆ ಸಾರ್.

“ಅವುರನಾರ ಅನ್ಲಿ, ನಾನು ಅನ್ನದೇಯಿರೊ ಮಾತನ್ನ ತಗೊಂಡು ರಾಜಕೀಯ ಮಾಡಿದಾರಲ್ರೀ.”

“ಹಂಗಿದ್ರೆ ನೀವು ಹಿಂಗೆ ಮಾಡಬಹುದು, ಅದು ನನ್ನ ಮಾತಲ್ಲ. ಮಿಮಿಕ್ರಿ ದಯಾನಂದರನ್ನ ಹಿಡಿದು ನನ್ನಂಗೆ ಮಾತಾಡ್ಸಿದಾರೆ. ನಾನು ಖರ್ಗೆ ಅಭಿಮಾನಿ ಅವರ ಕಾಲಿನ ಧೂಳಿಗೂ ಸಮ ಅಲ್ಲ. ಅಂತ ಪ್ರೆಸ್ ಸ್ಟೇಟುಮಂಟು ಕೊಡಿ ಸಾರ್.”

“ಈಗಾಗ್ಲೆ ಕೊಟ್ಟಿದ್ದಿನಿ ಕಂಡ್ರಿ.”

“ಅದರಲ್ಲೇ ಸಿಗಾಯ್ಕಂಡಿದ್ದಿರಲ್ಲ ಸಾರ್?”

“ಎಲ್ಲಿ ಸಿಗಾಯ್ಕಂಡಿದ್ದಿನ್ರಿ?”

“ಖರ್ಗೆಯವರನ್ನ ಟೀಕೀಸಿದ್ರೆ ನಾನು ಯಾವ ಶಿಕ್ಷೆ ಬೇಕಾದ್ರು ಅನುಭವುಸ್ತಿನಿ ಅಂದಿದ್ದಿರಿ.”

“ಸರಿ ಅಂದಿಲವಲ್ಲಾ…”

“ಅಂದಿರದ ಸಾಬೀತು ಮಾಡಿಕಂಡಿದ್ದಿರಿ.”

“ಹೇಗೆ ಅಂತ?”

“ನೀವು ಯಾವ ಮಾತನ್ನ ಆಡದೆ ಖರ್ಗೆ ಹೆಸರು ಹೆಂಗೆ ಬಂತು. ಇದ್ದಕ್ಕಿದ್ದಂಗೆ ಅವರನ್ನ ಹೊಗಳೊ ಕಾರಣ ಏನು? ವೈಯಕ್ತಕವಾಗಿ ನಿಂದಿಸಿ ಕೀಳುಮಟ್ಟದ ರಾಜಕಾರಣ ಮಾಡಲ್ಲ ಅಂದು ಅದ್ನೇ ಮಾಡಿದ್ದಿರಲ್ಲಾ ಸಾರ್. ಮನುಷ್ಯನ ಬಣ್ಣ ಆಕಾರ ಆಡಿಕಳದು ಅಪರಾಧ, ಅವನ್ನ ನೀವು ಮಾಡಬಾರದಿತ್ತು.”

“ಖಂಡಿತ ಮಾಡಿಲ್ಲ ಕಂಡ್ರಿ ನನ್ನ ಬಾಯಲ್ಲಿ ಆ ಮಾತೇ ಬರಲಿಲ್ಲಾ.”

“ಸರಿ, ಮಾಧ್ಯಮದ ಎದುರಿನ ಮೈಕಿನಲ್ಲಿ ಈ ಶಬ್ದ ಬಂತು, ನಿಮ್ಮ ತುಟಿ ಕೂಡ ಚಲಿಸಿವೆ ಸಾರ್.”

“ಅದೇ ಹೇಳಿದೆನಲ್ಲಾ, ನೀವೆ ಹೇಳಿದಂಗೆ ಮಿಮಿಕ್ರಿ ಕಲಾವಿದರ ಬಳಸಿ ಏನು ಬೇಕಾದ್ರು ಮಾಡಬಹುದು.”

“ಅದನ್ನ ಕೋರ್ಟಲ್ಲಿ ಸಾಬೀತು ಮಾಡ್ಸಿ. ಸಾರ್ ಹ್ಯಾಗಿದ್ರು ಬಿಜೆಪಿಗಳಿಗೆ ಕೋರ್ಟ್ ಅಂದ್ರೆ ತುಂಬಾ ಇಷ್ಟ. ನೀವು ಕೋರ್ಟಲ್ಲಿ ನಿಮ್ಮನ್ನ ಸಮರ್ಥಿಸಿಕೊಳ್ಳಬಹುದು; ರಾಹುಲಗಾಂಧಿ ನೋಡಿ, ತಪ್ಪು ಮಾಡಿಲ್ಲ, ತಪ್ಪು ಅಂತ ಒಪ್ಪಿಗಳಲ್ಲ ಅಂದ್ರು. ಅವರ ಪ್ರಾಮಾಣಿಕ ಮಾತಿಗೆ ಕೋರ್ಟ್ ಮನ್ನಣೆ ಕೊಟ್ಟು ಅವರ ಶಿಕ್ಷೆಗೆ ಸ್ಟೇ ತಂತು ಅಲ್ಲವ?”

“ಈಗ ನಾನೇನು ಮಾಡ್ಲಿ?”

“ಏನಿಲ್ಲ ಖರ್ಗೆಯವರ ಬಣ್ಣದ ಬಗ್ಗೆ ಮಾತಾಡಿದ್ದೀನಿ. ಯಾಕಂದ್ರೆ, ನಮ್ಮ ಶ್ರೀರಾಮಚಂದ್ರ ಕಪ್ಪಗಿದ್ದ, ಹನ್ನೆರಡು ವರ್ಷ ಅರಣ್ಯದಲ್ಲಿ ಅಲದೂ ಕಾಯಿ ಕುಸುರು ತಿಂದು ಕರಕಲಾಗಿದ್ದ. ನಮ್ಮ ಖರ್ಗೆ ಸಾಹೇಬರಿಗೆ ಕಚ್ಛೆ ಹಾಕಿ ಕೈಗೆ ಬಿಲ್ಲು ಬಾಣ ಕೊಟ್ರೆ ಥೇಟ್ ಶ್ರೀರಾಮಚಂದ್ರನಂಗೇ ಕಾಣ್ತಾರೆ. ಆ ವೇಶದಲ್ಲಿ ಅವರ ಕಾಲಿಗೆ ಬೀಳಂಗಾಗತ್ತೆ; ಇನ್ನ ನಮ್ಮ ಕೃಷ್ಣನೂ ಕಪ್ಪಗಿದ್ದ. ಇವರಿಬ್ಬರು ನಮ್ಮ ಬಿಜೆಪಿ ಪಾರ್ಟಿಗೆ ಎರಡು ಚಕ್ರ ಇದ್ದಂಗೆ; ಅದರಲ್ಲೂ ಕೃಷ್ಣ ದನ ಕಾಯ್ತಾ ಕಾಯ್ತ ಕಪ್ಪಗೆ ಕರಕಲಾಗಿದ್ದ. ನಮ್ಮ ಪುರೋಹಿತಶಾಹಿಗಳು ಕಪ್ಪು ಬಣ್ಣನ ಒಪ್ಪದೇಯಿರದ್ರಿಂದ ಅವುರಿಬ್ಬರಿಗೂ ನಾಟಕದಲ್ಲಿ ಮತ್ತು ಸಿನಿಮಾದಲ್ಲಿ ನೀಲಿಬಣ್ಣ ಬಳಿತರೆ. ಈ ಭೂಮಿ ಮೇಲೆ ಯಾರಾದ್ರು ನೀಲಿ ಬಣ್ಣಕ್ಕಿದ್ದಾರ? ಆದ್ರಿಂದ ನಮ್ಮ ಪುರೋಹಿತಶಾಹಿಗಳು ಕಪ್ಪುಬಣ್ಣ ಒಪ್ಪದೆ ನೀಲಿ ಬಣ್ಣ ಬಳದು ನಾವೆಲ್ಲಾ ಕಪ್ಪುಬಣ್ಣ ದ್ವೇಷ ಮಾಡಂಗೆ ಮಾಡಿದಾರೆ. ಆ ಕಾರಣಕ್ಕೆ ನನ್ನ ಬಾಯಿ ತಪ್ಪಿ ಖಂಡ್ರೆ ಖರ್ಗೆ ಕುರಿತು ಮಾತನಾಡುವಾಗ, ಆ ಬಯಲುಸೀಮೆ, ಗುಲಬರ್ಗಾ, ರಾಯಚೂರು, ಬಳ್ಳಾರಿ ಕಡೆಯೆಲ್ಲ ಬಿಸಲಲ್ಲಿ ಬೆಂದು ಹ್ಯಂಗೆ ಕರಲಾಗ್ಯವುರೆ ನೋಡಿ ಅಂದೆ ಸಾ, ಅಂತ ಹೇಳಿ.”

“ನಿಮ್ಮ ಮಾತ ಕೇಳಿದ್ರೆ ಜೈಲಿಗೋಗಬೇಕಾಯ್ತದೆ.”

“ಮತ್ತೇನು ಮಾಡ್ತಿರಿ ಸಾರ್?”

“ನಾನು ಅಂದೇಯಿಲ್ಲ ಅಂತಿನಿ, ಮಾತು ನಂದಲ್ಲ ವಾಯ್ಸು ನಂದಲ್ಲ ಅಂತಿನಿ.”

“ಥೂತ್ತೇರಿ.”


ಇದನ್ನೂ ಓದಿ: ಕುಮಾರಣ್ಣ ಪೇಶ್ವೆಗಳೊಂದಿಗೆ ಹೋಗಲಿದ್ದಾರಂತಲ್ಲಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...