Homeಅಂಕಣಗಳುರಾಮ ಕೃಷ್ಣ ಕಪ್ಪುಗಿದ್ರಲ್ಲವ..

ರಾಮ ಕೃಷ್ಣ ಕಪ್ಪುಗಿದ್ರಲ್ಲವ..

- Advertisement -
- Advertisement -

ಸಿಂಗಾಪುರದ ಮುಖಾಂತರ ಯೂರೋಪ್ ಪ್ರವಾಸ ಮುಗಿಸಿ ಕರ್ನಾಟಕಕ್ಕೆ ಬಂದ ಕುಮಾರಣ್ಣ ವಿಮಾನದಿಂದ ಇಳಿಯುವ ಕೊನೆ ಮೆಟ್ಟಿಲಲ್ಲೇ ಕರ್ನಾಟಕ ಸರ್ಕಾರದ ವರ್ಗಾವಣೆಯಲ್ಲಿ ಒಂದು ಸಾವಿರ ಕೋಟಿ ವ್ಯವಹಾರ ನಡೆದಿದೆ ಎಂದಿದ್ದಾರಲ್ಲಾ. ಸಿಂಗಾಪುರದಲ್ಲಿದ್ದ ಕುಮಾರಣ್ಣನಿಗೆ ಈ ಕಾಂಗ್ರೆಸ್ ಸರಕಾರದ ವರ್ಗಾವರ್ಗಿ ವಿವರ ಹೇಗೆ ಗೊತ್ತಾಯಿತು? ಕುಮಾರಣ್ಣನ ಕಡೆಯ ಅಧಿಕಾರಿಗಳು ಮತ್ತು ಅಭಿಮಾನಿಗಳು ಇನ್ನೆಂತಹ ಜಾಲ ಹೆಣೆದಿರಬಹುದು? ಜೊತೆಗೆ ಪೆನ್‌ಡ್ರೈವ್ ಬೇರೆ ಕೆಲಸ ಮಾಡುತ್ತಿದೆ. ಹೇಗಾದರಾಗಲಿ ಹುಷಾರಾಗಿರಬೇಕು ಎಂದು ಸಿದ್ದು ಸಂಪುಟದ ಸಚಿವರು ಚಿಂತಿಸುತ್ತಿರುವಾಗಲೇ, ಮಂತ್ರಿಗಳಲ್ಲಿ ಕೆಲವು ಚಾಲಾಕಿಗಳು ಕುಮಾರಣ್ಣ ಎರಡು ಬಾರಿ ಮುಖ್ಯಮಂತ್ರಿಯಾಗಿ ವರ್ಗಾವರ್ಗಿಯ ದಂಧೆ ಗ್ರಹಿಸಿದವರು, ಅಲ್ಲದೆ ಅಧಿಕಾರಕ್ಕೆ ಬಂದ ಆರಂಭದಲ್ಲೇ ಜನಾರ್ದನ ರೆಡ್ಡಿಯಿಂದ ವಸೂಲಿ ಮಾಡಿ ಅರಗಿಸಿಕೊಂಡವರು; ಈ ಅಂದಾಜಿನಲ್ಲೇ ಅವರು ಈ ಸರಕಾರದ ವಿರುದ್ಧ ಒಂದು ಸಾವಿರ ಕೋಟಿ ವ್ಯವಹಾರದ ದೂರನ್ನ ಮಾಡಿದ್ದಾರೆ. ಈ ವಿಷಯದಲ್ಲಿ ಅವರನ್ನ ಹಿಟ್ ಅಂಡ್ ರನ್ ಕೇಸಿಗೆ ಸೇರಿಸಿ ಮಾತನಾಡುವುದಕ್ಕಿಂತ ಕುಮಾರಣ್ಣನ ಅಂದಾಜಿಗೆ ಸಿಗದಂತೆ ವ್ಯವಹಾರ ಮಾಡಬೇಕಿದೆ. ಏಕೆಂದರೆ ಕಳೆದ ಚುನಾವಣೆಯಲ್ಲಿ ಮಾಡಿದ ಸಾಲ ಹಾಗೇ ಇದೆ ಎಂದು ಮಾತನಾಡಿಕೊಂಡರಂತಲ್ಲಾ, ಥೂತ್ತೇರಿ.

*****

ಕರ್ನಾಟಕ ಈವರೆಗೆ ಕಂಡ ಅತ್ಯಂತ ದುರ್ಬಲ ಗೃಹ ಸಚಿವರಾಗಿದ್ದ ಅರಗ ಜ್ಞಾನೇಂದ್ರ ಆಡಿರುವ ಮಾತೊಂದು ಇಡೀ ಕರ್ನಾಟಕದಲ್ಲೇ ಅಲ್ಲೊಲಕಲ್ಲೋಲವುಂಟುಮಾಡಿದೆಯಲ್ಲಾ. ಆರೆಸ್ಸ್ಸೆನ ಕಟ್ಟಾಳು ಮತ್ತು ಎಬಿವಿಪಿಯ ’ಧೀಮಂತ’ ವಿದ್ಯಾರ್ಥಿ, ಬಿಜೆಪಿಯ ’ಧೀಮಂತ’ ನಾಯಕನಾಗಿ ಬೆಳೆದು ಕಡಿದಾಳು ಮಂಜಪ್ಪ, ಶಾಂತವೇರಿ ಗೋಪಾಲಗೌಡರು ಮತ್ತು ಕಿಮ್ಮನೆ ರತ್ನಾಕರ್ ಪ್ರತಿನಿಧಿಸಿದ ತೀರ್ಥಹಳ್ಳಿಯಿಂದ ಗೆದ್ದುಬಂದು ಗೃಹ ಸಚಿವರೂ ಆಗಿದ್ದ ಜ್ಞಾನೇಂದ್ರ ಅರೆಗ್ನಾನಿಯಾಗಿ ಬದಲಾದದ್ದು ಯಾವಾಗ ಎಂದು ಯೋಚಿಸಿ ಪೋನ್ ಮಾಡಲಾಗಿ ರಿಂಗಾಯ್ತು

ರಿಂಗ್ ಟೋನ್, “ನಮಸ್ತೆ ಸಧಾವತ್ಸಲೇ ಮಾತೃಭೂಮಿ…”

“ಹಲೋ ಯಾರು?”

“ನಾನು ಸಾರ್ ನಿಮ್ಮ ಅಭಿಮಾನಿ.”

“ಅಭಿಮಾನಿ ಯಾರ್ರಿ?”

“ಅದು ಈ ಕ್ಷಣದ ಅಭಿಮಾನಿ ಸಾ. ಖರ್ಗೆಗೆ ಸರಿಯಾಗೇಳಿದ್ದಿರಿ ಬುಡಿ ಸಾ.”

“ನಾನೇನು ಹೇಳಿಲ್ಲ ಕಂಡ್ರಿ. ನನಿಗಾಗದವರು ಸುಳ್ಳು ಹೇಳ್ತ ಅವುರೆ. ಮಾಧ್ಯಮದವರು ಅದನ್ನೆ ನಂಬಿದಾರೆ.”

“ಅದೇನಾರ ಆಗ್ಲಿ, ಖರ್ಗೆ ಬಣ್ಣದ ಬಗ್ಗೆ ಹೇಳಿ, ನೋಡಿ ಸೀದು ಕರುಕಲಾಗ್ಯವುರೆ ಅಂದಿರದು ಸರಿ ಸಾ.”

“ರೀ ನಾನು ಅಂಗಂದೇಯಿಲ್ಲ ಕಂಡ್ರಿ.”

“ಅಂಗನ್ನಬಾರ್ದು ಸಾರ್. ಜಮೀರಹಮದ್ ತರ ಸಮರ್ಥಿಸಿಕೋಬೇಕು.”

“ಅವುರು ಏನನ್ನು ಸಮರ್ಥಿಸಿಕೊಂಡ್ರು ರೀ?”

“ಕುಮಾರಸ್ವಾಮಿ ಬಣ್ಣದ ಬಗ್ಗೆ ಆಡಿಕೊಳ್ಳುವಾಗ, ನಾನು ಕುಳ್ಳ ಎಂದು ಹೇಳ್ಕಂಡವರೆ.”

“ಅವುರ್‍ಯಾಕಂಗಂದರು?”

“ಕೆಲವರನ್ನ ಆಡಿಕೊಬೇಕಾದ್ರೆ ಕೆಲವು ಸಾರಿ ನಮ್ಮನ್ನ ಅಣಕಿಸಿಕೊಬೇಕಾಗತ್ತೆ, ಅದ್ಕೆ ಜಮೀರು ನಾನು ಕುಳ್ಳ ಸತ್ಯ ಅಲ್ಲವ ಅಂದು ಕುಮಾರಸ್ವಾಮಿ ಬಗ್ಗೆ ಹೇಳಿದ್ದು ನಿಜ ಅಲ್ಲವಾ” ಅಂದವರೆ ಸಾರ್.

“ಅವುರನಾರ ಅನ್ಲಿ, ನಾನು ಅನ್ನದೇಯಿರೊ ಮಾತನ್ನ ತಗೊಂಡು ರಾಜಕೀಯ ಮಾಡಿದಾರಲ್ರೀ.”

“ಹಂಗಿದ್ರೆ ನೀವು ಹಿಂಗೆ ಮಾಡಬಹುದು, ಅದು ನನ್ನ ಮಾತಲ್ಲ. ಮಿಮಿಕ್ರಿ ದಯಾನಂದರನ್ನ ಹಿಡಿದು ನನ್ನಂಗೆ ಮಾತಾಡ್ಸಿದಾರೆ. ನಾನು ಖರ್ಗೆ ಅಭಿಮಾನಿ ಅವರ ಕಾಲಿನ ಧೂಳಿಗೂ ಸಮ ಅಲ್ಲ. ಅಂತ ಪ್ರೆಸ್ ಸ್ಟೇಟುಮಂಟು ಕೊಡಿ ಸಾರ್.”

“ಈಗಾಗ್ಲೆ ಕೊಟ್ಟಿದ್ದಿನಿ ಕಂಡ್ರಿ.”

“ಅದರಲ್ಲೇ ಸಿಗಾಯ್ಕಂಡಿದ್ದಿರಲ್ಲ ಸಾರ್?”

“ಎಲ್ಲಿ ಸಿಗಾಯ್ಕಂಡಿದ್ದಿನ್ರಿ?”

“ಖರ್ಗೆಯವರನ್ನ ಟೀಕೀಸಿದ್ರೆ ನಾನು ಯಾವ ಶಿಕ್ಷೆ ಬೇಕಾದ್ರು ಅನುಭವುಸ್ತಿನಿ ಅಂದಿದ್ದಿರಿ.”

“ಸರಿ ಅಂದಿಲವಲ್ಲಾ…”

“ಅಂದಿರದ ಸಾಬೀತು ಮಾಡಿಕಂಡಿದ್ದಿರಿ.”

“ಹೇಗೆ ಅಂತ?”

“ನೀವು ಯಾವ ಮಾತನ್ನ ಆಡದೆ ಖರ್ಗೆ ಹೆಸರು ಹೆಂಗೆ ಬಂತು. ಇದ್ದಕ್ಕಿದ್ದಂಗೆ ಅವರನ್ನ ಹೊಗಳೊ ಕಾರಣ ಏನು? ವೈಯಕ್ತಕವಾಗಿ ನಿಂದಿಸಿ ಕೀಳುಮಟ್ಟದ ರಾಜಕಾರಣ ಮಾಡಲ್ಲ ಅಂದು ಅದ್ನೇ ಮಾಡಿದ್ದಿರಲ್ಲಾ ಸಾರ್. ಮನುಷ್ಯನ ಬಣ್ಣ ಆಕಾರ ಆಡಿಕಳದು ಅಪರಾಧ, ಅವನ್ನ ನೀವು ಮಾಡಬಾರದಿತ್ತು.”

“ಖಂಡಿತ ಮಾಡಿಲ್ಲ ಕಂಡ್ರಿ ನನ್ನ ಬಾಯಲ್ಲಿ ಆ ಮಾತೇ ಬರಲಿಲ್ಲಾ.”

“ಸರಿ, ಮಾಧ್ಯಮದ ಎದುರಿನ ಮೈಕಿನಲ್ಲಿ ಈ ಶಬ್ದ ಬಂತು, ನಿಮ್ಮ ತುಟಿ ಕೂಡ ಚಲಿಸಿವೆ ಸಾರ್.”

“ಅದೇ ಹೇಳಿದೆನಲ್ಲಾ, ನೀವೆ ಹೇಳಿದಂಗೆ ಮಿಮಿಕ್ರಿ ಕಲಾವಿದರ ಬಳಸಿ ಏನು ಬೇಕಾದ್ರು ಮಾಡಬಹುದು.”

“ಅದನ್ನ ಕೋರ್ಟಲ್ಲಿ ಸಾಬೀತು ಮಾಡ್ಸಿ. ಸಾರ್ ಹ್ಯಾಗಿದ್ರು ಬಿಜೆಪಿಗಳಿಗೆ ಕೋರ್ಟ್ ಅಂದ್ರೆ ತುಂಬಾ ಇಷ್ಟ. ನೀವು ಕೋರ್ಟಲ್ಲಿ ನಿಮ್ಮನ್ನ ಸಮರ್ಥಿಸಿಕೊಳ್ಳಬಹುದು; ರಾಹುಲಗಾಂಧಿ ನೋಡಿ, ತಪ್ಪು ಮಾಡಿಲ್ಲ, ತಪ್ಪು ಅಂತ ಒಪ್ಪಿಗಳಲ್ಲ ಅಂದ್ರು. ಅವರ ಪ್ರಾಮಾಣಿಕ ಮಾತಿಗೆ ಕೋರ್ಟ್ ಮನ್ನಣೆ ಕೊಟ್ಟು ಅವರ ಶಿಕ್ಷೆಗೆ ಸ್ಟೇ ತಂತು ಅಲ್ಲವ?”

“ಈಗ ನಾನೇನು ಮಾಡ್ಲಿ?”

“ಏನಿಲ್ಲ ಖರ್ಗೆಯವರ ಬಣ್ಣದ ಬಗ್ಗೆ ಮಾತಾಡಿದ್ದೀನಿ. ಯಾಕಂದ್ರೆ, ನಮ್ಮ ಶ್ರೀರಾಮಚಂದ್ರ ಕಪ್ಪಗಿದ್ದ, ಹನ್ನೆರಡು ವರ್ಷ ಅರಣ್ಯದಲ್ಲಿ ಅಲದೂ ಕಾಯಿ ಕುಸುರು ತಿಂದು ಕರಕಲಾಗಿದ್ದ. ನಮ್ಮ ಖರ್ಗೆ ಸಾಹೇಬರಿಗೆ ಕಚ್ಛೆ ಹಾಕಿ ಕೈಗೆ ಬಿಲ್ಲು ಬಾಣ ಕೊಟ್ರೆ ಥೇಟ್ ಶ್ರೀರಾಮಚಂದ್ರನಂಗೇ ಕಾಣ್ತಾರೆ. ಆ ವೇಶದಲ್ಲಿ ಅವರ ಕಾಲಿಗೆ ಬೀಳಂಗಾಗತ್ತೆ; ಇನ್ನ ನಮ್ಮ ಕೃಷ್ಣನೂ ಕಪ್ಪಗಿದ್ದ. ಇವರಿಬ್ಬರು ನಮ್ಮ ಬಿಜೆಪಿ ಪಾರ್ಟಿಗೆ ಎರಡು ಚಕ್ರ ಇದ್ದಂಗೆ; ಅದರಲ್ಲೂ ಕೃಷ್ಣ ದನ ಕಾಯ್ತಾ ಕಾಯ್ತ ಕಪ್ಪಗೆ ಕರಕಲಾಗಿದ್ದ. ನಮ್ಮ ಪುರೋಹಿತಶಾಹಿಗಳು ಕಪ್ಪು ಬಣ್ಣನ ಒಪ್ಪದೇಯಿರದ್ರಿಂದ ಅವುರಿಬ್ಬರಿಗೂ ನಾಟಕದಲ್ಲಿ ಮತ್ತು ಸಿನಿಮಾದಲ್ಲಿ ನೀಲಿಬಣ್ಣ ಬಳಿತರೆ. ಈ ಭೂಮಿ ಮೇಲೆ ಯಾರಾದ್ರು ನೀಲಿ ಬಣ್ಣಕ್ಕಿದ್ದಾರ? ಆದ್ರಿಂದ ನಮ್ಮ ಪುರೋಹಿತಶಾಹಿಗಳು ಕಪ್ಪುಬಣ್ಣ ಒಪ್ಪದೆ ನೀಲಿ ಬಣ್ಣ ಬಳದು ನಾವೆಲ್ಲಾ ಕಪ್ಪುಬಣ್ಣ ದ್ವೇಷ ಮಾಡಂಗೆ ಮಾಡಿದಾರೆ. ಆ ಕಾರಣಕ್ಕೆ ನನ್ನ ಬಾಯಿ ತಪ್ಪಿ ಖಂಡ್ರೆ ಖರ್ಗೆ ಕುರಿತು ಮಾತನಾಡುವಾಗ, ಆ ಬಯಲುಸೀಮೆ, ಗುಲಬರ್ಗಾ, ರಾಯಚೂರು, ಬಳ್ಳಾರಿ ಕಡೆಯೆಲ್ಲ ಬಿಸಲಲ್ಲಿ ಬೆಂದು ಹ್ಯಂಗೆ ಕರಲಾಗ್ಯವುರೆ ನೋಡಿ ಅಂದೆ ಸಾ, ಅಂತ ಹೇಳಿ.”

“ನಿಮ್ಮ ಮಾತ ಕೇಳಿದ್ರೆ ಜೈಲಿಗೋಗಬೇಕಾಯ್ತದೆ.”

“ಮತ್ತೇನು ಮಾಡ್ತಿರಿ ಸಾರ್?”

“ನಾನು ಅಂದೇಯಿಲ್ಲ ಅಂತಿನಿ, ಮಾತು ನಂದಲ್ಲ ವಾಯ್ಸು ನಂದಲ್ಲ ಅಂತಿನಿ.”

“ಥೂತ್ತೇರಿ.”


ಇದನ್ನೂ ಓದಿ: ಕುಮಾರಣ್ಣ ಪೇಶ್ವೆಗಳೊಂದಿಗೆ ಹೋಗಲಿದ್ದಾರಂತಲ್ಲಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...