Homeಅಂತರಾಷ್ಟ್ರೀಯಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

- Advertisement -
- Advertisement -

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ.

ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್ ನೀಡಿತ್ತು.

ಇರಾನ್‌ನ ಅರೆ-ಸರ್ಕಾರಿ ಸುದ್ಧಿ ಸಂಸ್ಥೆ ‘ಫಾರ್ಸ್’ ಪ್ರಕಾರ, ಇರಾನ್ ಈ ಪ್ರಸ್ತಾವನೆಯನ್ನು ಅಧಿಕೃತವಾಗಿ ತಿರಸ್ಕರಿಸಿದೆ. ಅಮೆರಿಕದ ಬೇಡಿಕೆಗಳು “ಅಂಗೀಕಾರಾರ್ಹವಲ್ಲ” ಮತ್ತು ಸಂಧಾನಕ್ಕಾಗಿ ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಅಮೆರಿಕದ ಅಧಿಕಾರಿಗಳನ್ನು ಭೇಟಿ ಮಾಡಲು ಸಾಧ್ಯವಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ.

ಇತ್ತೀಚೆಗೆ ಕುವೈತ್‌ನ ಬುಬಿಯಾನ್ ದ್ವೀಪದಲ್ಲಿರುವ ಅಮೆರಿಕದ ಮಿಲಿಟರಿ ಡಿಪೋ ಮೇಲೆ ಇರಾನ್ ನಡೆಸಿದ ದಾಳಿ ಮತ್ತು ಅಮೆರಿಕದ ಪಡೆಗಳು ಎದುರಿಸುತ್ತಿರುವ ‘ಗಂಭೀರ ಸಮಸ್ಯೆಗಳ’ ಕಾರಣದಿಂದ ಅಮೆರಿಕ ಕದನ ವಿರಾಮ ಪ್ರಸ್ತಾವನೆ ಮುಂದಿಟ್ಟಿತ್ತು ಎಂದು ಇರಾನ್ ವಿಶ್ಲೇಷಿಸಿದೆ.

ಇತ್ತೀಚೆಗೆ ಇರಾನ್ ಎರಡು ಅಮೆರಿಕನ್ ಯುದ್ಧ ವಿಮಾನಗಳನ್ನು (ಎಫ್‌-15ಇ ಸ್ಟ್ರೈಕ್ ಈಗಲ್ ಮತ್ತು ಎ-10 ವಾರ್ಥೋಗ್) ಹೊಡೆದುರುಳಿಸಿದೆ ಎಂದು ವರದಿಯಾಗಿದೆ.

ಶುಕ್ರವಾರ(ಏ.3) ಹಾರ್ಮುಜ್ ಜಲಸಂಧಿಯ ಬಳಿ ಅಮೆರಿಕದ ಎ-10 ವಾರ್ಥೋಗ್ ಯುದ್ಧ ವಿಮಾನವನ್ನು ಇರಾನ್ ಹೊಡೆದುರುಳಿಸಿದೆ. ಈ ದಾಳಿಯ ಹೊಣೆಯನ್ನು ಇರಾನ್ ಸೇನೆಯೇ ಹೊತ್ತುಕೊಂಡಿದೆ.

ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿರುವ ಇರಾನ್, ಲಿಖಿತವಾಗಿ ಉತ್ತರಿಸುವ ಬದಲು ಯುದ್ಧಭೂಮಿಯಲ್ಲಿ ದಾಳಿಗಳನ್ನು ಮುಂದುವರಿಸುವ ಮೂಲಕ ತನ್ನ ನಿಲುವನ್ನು ವ್ಯಕ್ತಪಡಿಸುತ್ತಿದೆ ಎಂದು ಕೆಲ ವರದಿಗಳು ಹೇಳಿವೆ.

ವರದಿಗಳ ಪ್ರಕಾರ, ಸಂಘರ್ಷ ಉಲ್ಬಣಗೊಳ್ಳುತ್ತಿರುವುದರಿಂದ ಪಾಕಿಸ್ತಾನ ಸೇರಿದಂತೆ ಹಲವು ದೇಶಗಳು ನಡೆಸುತ್ತಿರುವ ಸಂಧಾನದ ಪ್ರಯತ್ನಗಳು ಯಾವುದೇ ಪ್ರಗತಿ ಕಾಣುತ್ತಿಲ್ಲ. ಮುಂಬರುವ ದಿನಗಳಲ್ಲಿ ಇಸ್ಲಾಮಾಬಾದ್‌ನಲ್ಲಿ ಅಮೆರಿಕದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುವ ಉದ್ದೇಶ ನಮಗಿಲ್ಲ ಮತ್ತು ಅಮೆರಿಕದ ಬೇಡಿಕೆಗಳು ಒಪ್ಪುವಂತಹದ್ದಲ್ಲ ಎಂದು ಇರಾನ್ ಮಧ್ಯಸ್ಥಗಾರರಿಗೆ ತಿಳಿಸಿದೆ. ಇದೇ ವೇಳೆ, ಮಾತುಕತೆಗಾಗಿ ಟರ್ಕಿ ಮತ್ತು ಈಜಿಪ್ಟ್ ದೇಶಗಳು ಕತಾರ್ ಮತ್ತು ಇಸ್ತಾಂಬುಲ್‌ನಂತಹ ಪರ್ಯಾಯ ಸ್ಥಳಗಳ ಬಗ್ಗೆಯೂ ಪರಿಶೀಲನೆ ನಡೆಸುತ್ತಿವೆ.

ಪ್ರಸ್ತುತ ಉದ್ವಿಗ್ನತೆಗೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಇತ್ತೀಚಿನ ಹೇಳಿಕೆಗಳು ಮತ್ತಷ್ಟು ಕಿಚ್ಚು ಹಚ್ಚಿವೆ. ಇರಾನ್‌ನ ‘ಹೊಸ ಆಡಳಿತದ ಅಧ್ಯಕ್ಷ’ ಕದನ ವಿರಾಮಕ್ಕಾಗಿ ಮನವಿ ಮಾಡಿದ್ದಾರೆ ಎಂಬ ಟ್ರಂಪ್ ಅವರ ಹೇಳಿಕೆಯನ್ನು ಇರಾನ್‌ ತಳ್ಳಿಹಾಕಿದೆ. “ಇರಾನ್‌ನ ಹೊಸ ಆಡಳಿತದ ಅಧ್ಯಕ್ಷ ಈಗಷ್ಟೇ ಅಮೆರಿಕದ ಬಳಿ ಕದನ ವಿರಾಮಕ್ಕಾಗಿ ಮನವಿ ಮಾಡಿದ್ದಾರೆ” ಎಂಬ ಟ್ರಂಪ್ ಅವರ ಸೋಶಿಯಲ್ ಮೀಡಿಯಾ ಪೋಸ್ಟ್ ಅನ್ನು ಇರಾನ್ ಖಂಡಿಸಿದೆ.

ಮುಂಬೈನಲ್ಲಿರುವ ಇರಾನ್‌ನ ಕಾನ್ಸುಲೇಟ್ ಜನರಲ್ ಕಚೇರಿಯು ಸಾಮಾಜಿಕ ಜಾಲತಾಣದ ಎಕ್ಸ್‌ನಲ್ಲಿ ಪೋಸ್ಟ್ ಹಾಕುವ ಮೂಲಕ ಟ್ರಂಪ್ ಅನ್ನು ಟೀಕಿಸಿದೆ. “ಏಪ್ರಿಲ್ ಫೂಲ್ ದಿನದಂದು (ಏಪ್ರಿಲ್ 1) ಡೊನಾಲ್ಡ್ ಟ್ರಂಪ್ ಅವರು ಜೋಕ್‌ಗಳಿಗಿಂತಲೂ ಒಂದು ಹೆಜ್ಜೆ ಮುಂದೆ ಹೋಗಿರುವುದು ಒಂದು ಕಾಕತಾಳೀಯವೇ ಸರಿ; ಡಾ. ಪೆಜೆಶ್ಕಿಯಾನ್ ಅವರು ಈಗಾಗಲೇ ಅಧಿಕಾರದಲ್ಲಿದ್ದರೂ ಸಹ, ಇರಾನ್‌ನ ‘ಹೊಸ’ ಅಧ್ಯಕ್ಷರ ಬಗ್ಗೆ ಅವರು ಮಾತನಾಡುತ್ತಿದ್ದಾರೆ” ಎಂದು ಕಾನ್ಸುಲೇಟ್ ಲೇವಡಿ ಮಾಡಿದೆ.

“ರಿಯಾಲಿಟಿ ಚೆಕ್ : ಟ್ವೀಟ್‌ಗಳ ಮೂಲಕ ಅಧ್ಯಕ್ಷರನ್ನು ಬದಲಾಯಿಸಲು ಸಾಧ್ಯವಿಲ್ಲ… ಅದಕ್ಕಾಗಿಯೇ ಚುನಾವಣೆಗಳು ಇರುವುದು” ಎಂದು ಇರಾನ್ ಕಾನ್ಸುಲೇಟ್ ಹೇಳಿದೆ.

ಇರಾನ್ ವಿದೇಶಾಂಗ ಸಚಿವಾಲಯ ಕೂಡ ಕದನ ವಿರಾಮಕ್ಕಾಗಿ ಇರಾನ್ ಮನವಿ ಮಾಡಿದೆ ಎಂಬ ಟ್ರಂಪ್ ಹೇಳಿಕೆಯನ್ನು ತಳ್ಳಿಹಾಕಿದೆ. “ಕದನ ವಿರಾಮಕ್ಕಾಗಿ ಇರಾನ್ ಮನವಿ ಮಾಡಿದೆ ಎಂಬ ಟ್ರಂಪ್ ಅವರ ಹೇಳಿಕೆಗಳು ಸುಳ್ಳು ಮತ್ತು ಆಧಾರರಹಿತವಾಗಿವೆ” ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಇಸ್ಮಾಯಿಲ್ ಬಘೈ ತಿಳಿಸಿರುವುದನ್ನು ಅಲ್ಲಿನ ಸರ್ಕಾರಿ ದೂರದರ್ಶನ ಉಲ್ಲೇಖಿಸಿದೆ.

ರಾಯಿಟರ್ಸ್ ವರದಿ ಪ್ರಕಾರ, ಇರಾನ್ ಯುದ್ಧವನ್ನು ಶಾಶ್ವತವಾಗಿ ಕೊನೆಗೊಳಿಸುವ ಖಾತರಿಯ ಕದನ ವಿರಾಮಕ್ಕಾಗಿ ಒತ್ತಾಯಿಸುತ್ತಿದೆ. ರಾಜತಾಂತ್ರಿಕ ಮಾತುಕತೆಗಳನ್ನು ಮುಂದುವರಿಸಲು ಮಂಗಳವಾರ ಮಧ್ಯಸ್ಥಗಾರರು ಸಂಪರ್ಕಿಸಿದ್ದರೂ ಸಹ, ತಾತ್ಕಾಲಿಕ ಕದನ ವಿರಾಮದ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ.

ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷದಿಂದ ಭಾರತದಂತ ರಾಷ್ಟ್ರಗಳ ಮೇಲೆ ದೊಡ್ಡ ಪರಿಣಾಮ ಬೀರಿದೆ. ಇರಾನ್‌ನ ಹಿಡಿತದಲ್ಲಿರುವ ಹಾರ್ಮುಝ್ ಜಲಸಂಧಿಯಲ್ಲಿ ತೈಲ ಮತ್ತು ಎಲ್‌ಪಿಜಿ ಹೊತ್ತ ಹಡಗುಗಳ ಸಂಚಾರಕ್ಕೆ ಉಂಟಾದ ಅಡಚಣೆಯಿಂದ ಭಾರತದಲ್ಲಿ ಎಲ್‌ಪಿಜಿ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಇದು ಜನಸಾಮಾನ್ಯರು ಸಂಕಷ್ಟಕ್ಕೀಡು ಮಾಡಿದೆ.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR : ತಂದೆಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....