Homeಅಂತರಾಷ್ಟ್ರೀಯಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

- Advertisement -
- Advertisement -

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ ದುಬೈ ಮಾಧ್ಯಮ ಕಚೇರಿ, ಈ ದಾಳಿಯಲ್ಲಿ ಇಬ್ಬರು ಘಾನಾ ಪ್ರಜೆಗಳು, ಓರ್ವ ಬಾಂಗ್ಲಾದೇಶಿ ಪ್ರಜೆ ಮತ್ತು ಒಬ್ಬ ಭಾರತೀಯ ಪ್ರಜೆ ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದು, ವಿಮಾನ ಹಾರಾಟ ಮುಂದುವರೆದಿದೆ ಎಂದು ಸ್ಪಷಷ್ಟಡಿಸಿದೆ.

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ವಿಶ್ವದ ಅತ್ಯಂತ ಜನನಿಬಿಡ ಏರ್​ಪೋರ್ಟ್​ ಆಗಿದೆ. ದೀರ್ಘ ಪ್ರಯಾಣದ ವಿಮಾನಯಾನ ಸಂಸ್ಥೆಗಳಿಗೆ ಈ ನಿಲ್ದಾಣ ಎಮಿರೇಟ್ಸ್​​ನ ಪ್ರಮುಖ ನೆಲೆಯಾಗಿದೆ. ಇರಾನ್​ ಗಲ್ಫ್​ ರಾಷ್ಟ್ರಗಳ ವಿಮಾನ ನಿಲ್ದಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ಮುಂದುವರೆಸಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ವಿಮಾನಗಳ ವೇಳಾಪಟ್ಟಿಗಳನ್ನು ಮತ್ತೆ ಮರು ಹೊಂದಾಣಿಕೆ ಮಾಡಲು ಹರಸಾಹಸ ಪಡುವಂತಾಗಿದೆ.

ಇರಾನ್​ ಮೇಲೆ ಅಮೆರಿಕ ಮತ್ತು ಇಸ್ರೇಲ್​ ವೈಮಾನಿಕ ದಾಳಿ ಬಳಿಕ ಉಲ್ಬಣಗೊಂಡ ಯುದ್ದವು ಜಾಗತಿಕ ಇಂಧನದ ಕೊರತೆಯ ಆತಂಕ ಹೆಚ್ಚಿಸಿದೆ. ಈ ನಡುವೆ ಇರಾನ್ ಪರ್ಷಿಯನ್ ಕೊಲ್ಲಿಯಾದ್ಯಂತ ವಾಣಿಜ್ಯ ಹಡಗುಗಳ ಮೇಲೆ ದಾಳಿ ಮುಂದುವರಿಸಿದೆ. ಮಧ್ಯಪ್ರಾಚ್ಯದಲ್ಲಿರುವ ಬ್ಯಾಂಕುಗಳು ಮತ್ತು ಹಣಕಾಸು ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ದಾಳಿ ಮಾಡುವುದಾಗಿ ಇರಾನ್‌ನ ಜಂಟಿ ಮಿಲಿಟರಿ ಕಮಾಂಡ್ ಘೋಷಿಸಿದೆ. ಇದು ದುಬೈಗೆ ಆಘಾತವನ್ನುಂಟು ಮಾಡಿದೆ. 

ದಾಳಿ ಮುಂದುವರೆದಿರುವ ಕಾರಣ ಇಲ್ಲಿ ಅನೇಕ ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆಗಳು ಆತಂಕದಲ್ಲಿವೆ. ಇದರ ಜೊತೆಗೆ ಸೌದಿ ಅರೇಬಿಯಾ ಮತ್ತು ದ್ವೀಪ ಸಾಮ್ರಾಜ್ಯವಾದ ಬಹ್ರೇನ್ ತೀವ್ರ ಸಂಕಷ್ಟಕ್ಕೆ ಸಿಲುಕಿಕೊಂಡಿವೆ.

ಇದಕ್ಕೂ ಮೊದಲು ಓಮನ್ ಕರಾವಳಿ ಹಾರ್ಮುಜ್ ಜಲಸಂಧಿಯಲ್ಲಿ ಒಂದು ಕಂಟೇನರ್ ಹಡಗನ್ನು ಹೊಡೆದುರುಳಿಸಲಾಗಿದೆ ಎಂದು ಬ್ರಿಟಿಷ್ ಮಿಲಿಟರಿ ತಿಳಿಸಿದೆ. ಇರಾನಿನ ಎಂಟು ಡ್ರೋನ್‌ಗಳನ್ನು ಹೊಡೆದುರುಳಿಸಿದಾಗಿ ಕುವೈತ್ ಮಾಹಿತಿ ನೀಡಿದೆ. ಸೌದಿ ಅರೇಬಿಯಾ ರಾಜ್ಯದ ಶೈಬಾ ತೈಲ ನಿಕ್ಷೇಪದ ಕಡೆಗೆ ಹೋಗುತ್ತಿದ್ದ ಐದು ಡ್ರೋನ್‌ಗಳನ್ನು ತಡೆದಿದ್ದೇವೆ ಎಂದು ಅದು ಇದೇ ವೇಳೆ ಮಾಹಿತಿ ಒದಗಿಸಿರುವುದಾಗಿ ವರದಿಯಾಗಿದೆ. 

ಪರ್ಷಿಯನ್ ಕೊಲ್ಲಿಯಿಂದ ಹಿಂದೂ ಮಹಾಸಾಗರದ ಕಡೆಗೆ ಸಾಗಿಸುವ ಸರಕು ಸಾಗಣೆ ಹಡಗುಗಳು ಹಾರ್ಮುಜ್​ ಜಲಸಂಧಿಯಲ್ಲೇ ಬರಬೇಕಿದೆ. ಈ ಜಲಸಂಧಿಯ ಮೇಲೆ ಇರಾನ್​ ಬಿಗಿ ಹಿಡಿತ ಸಾಧಿಸಿದೆ. ಇನ್ನು ಗಲ್ಫ್ ಅರಬ್ ರಾಷ್ಟ್ರಗಳಲ್ಲಿನ ತೈಲ ಮತ್ತು ಸಂಸ್ಕರಣಾಗಾರಗಳನ್ನು ಗುರಿಯಾಗಿಸಿಕೊಂಡು ಇರಾನ್​ ದಾಳಿ ಮುಂದುವರೆಸಿದೆ. 

ಯುನೈಟೆಡ್ ಸ್ಟೇಟ್ಸ್ ಮತ್ತು ಇಸ್ರೇಲ್ ತಮ್ಮ ಸಂಘರ್ಷವನ್ನು ಕೊನೆಗೊಳಿಸಲು ಒತ್ತಡ ಹೇರಲು ಮುಂದಾಗಿದೆ. ಇದು ಸಾಕಷ್ಟು ಜಾಗತಿಕ ಆರ್ಥಿಕ ತೊಂದರೆಯನ್ನು ಉಂಟುಮಾಡುವ ಸಾಧ್ಯತೆಗಳು ಈಗಾಗಲೇ ಗೋಚರಿಸಲು ಆರಂಭವಾಗಿದೆ. ಈ ನಡುವೆ ಇರಾನ್ ತನ್ನ ನೆರೆಯ ಮೇಲೆ ದಾಳಿ ಮಾಡುವುದನ್ನು ನಿಲ್ಲಿಸುವಂತೆ ಒತ್ತಾಯಿಸಿ ಗಲ್ಫ್ ಸಹಕಾರ ಮಂಡಳಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಮತ ಚಲಾಯಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...