Homeಮುಖಪುಟಬಾಂಗ್ಲಾದೇಶಿಯರೆಂದು ಪಶ್ಚಿಮ ಬಂಗಾಳದ 100 ವಲಸೆ ಕಾರ್ಮಿಕರನ್ನು ಬಂಧಿಸಿದ ಒಡಿಶಾ ಸರ್ಕಾರ: ಆರೋಪ

ಬಾಂಗ್ಲಾದೇಶಿಯರೆಂದು ಪಶ್ಚಿಮ ಬಂಗಾಳದ 100 ವಲಸೆ ಕಾರ್ಮಿಕರನ್ನು ಬಂಧಿಸಿದ ಒಡಿಶಾ ಸರ್ಕಾರ: ಆರೋಪ

- Advertisement -
- Advertisement -

ಒಡಿಶಾದಲ್ಲಿ ತಮ್ಮ ರಾಜ್ಯದ ಸುಮಾರು 100 ವಲಸೆ ಕಾರ್ಮಿಕರನ್ನು ಬಾಂಗ್ಲಾದೇಶೀಯರು ಎಂದು ಬಂಧಿಸಿ, ಬಂಧನ ಕೇಂದ್ರಗಳಿಗೆ ಕಳುಹಿಸಲಾಗಿದೆ ಎಂದು ಪಶ್ಚಿಮ ಬಂಗಾಳ ಸರ್ಕಾರ ಆರೋಪಿಸಿರುವುದಾಗಿ indianexpress.com ಸೋಮವಾರ (ಜೂ.30) ವರದಿ ಮಾಡಿದೆ.

ಮೇ ತಿಂಗಳಲ್ಲಿ ಒಡಿಶಾದ ಬಿಜೆಪಿ ಸರ್ಕಾರವು ರಾಜ್ಯದಲ್ಲಿ ವಾಸಿಸುತ್ತಿರುವ ದಾಖಲೆರಹಿತ ಬಾಂಗ್ಲಾದೇಶಿ ವಲಸಿಗರನ್ನು ಗುರುತಿಸಿ ಗಡಿಪಾರು ಮಾಡುವ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಈ ನಡುವೆ ಅನೇಕ ಭಾರತೀಯ ನಾಗರಿಕರನ್ನು ಅಕ್ರಮ ವಲಸಿಗರು ಎಂದು ಬಾಂಗ್ಲಾ ಗಡಿಯಾಚೆಗೆ ಬಲವಂತವಾಗಿ ತಳ್ಳಿದ ಆರೋಪಗಳು ಕೇಳಿ ಬಂದಿವೆ.

ವಲಸೆ ಕಾರ್ಮಿಕರ ಅಕ್ರಮ ಬಂಧನಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಅಧಿಕಾರಿಗಳು ಮತ್ತು ಪೊಲೀಸರು, ಒಡಿಶಾದ ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸಂಸದ ಮತ್ತು ಪಶ್ಚಿಮ ಬಂಗಾಳದ ವಲಸಿಗ ಕಲ್ಯಾಣ ಮಂಡಳಿಯ ಅಧ್ಯಕ್ಷ ಸಮೀರುಲ್ ಇಸ್ಲಾಂ ಹೇಳಿರುವುದಾಗಿ indianexpress.com ತಿಳಿಸಿದೆ.

“ಆದರೆ, ಒಡಿಶಾದ ಅಧಿಕಾರಿಗಳು ಬಡ ವಲಸೆ ಕಾರ್ಮಿಕರನ್ನು ಬಿಡುಗಡೆ ಮಾಡುತ್ತಿಲ್ಲ. ಇದು ಸಂವಿಧಾನ ಬಾಹಿರ ನಡೆ” ಎಂದು ಇಸ್ಲಾಂ ಹೇಳಿದ್ದಾರೆ.

“ಅವರು (ವಲಸೆ ಕಾರ್ಮಿಕರು) ಭಾರತೀಯ ನಾಗರಿಕರು ಮತ್ತು ಬಂಗಾಳದ ನಿವಾಸಿಗಳು. ಅವರು ಕೆಲಸಕ್ಕಾಗಿ ಒಡಿಶಾಗೆ ಹೋಗಿದ್ದಾರೆ. ಆದರೆ, ಅವರನ್ನು ಬಂಧಿಸಿ ಬಾಂಗ್ಲಾದೇಶೀಯರು ಎಂದು ಹಣೆಪಟ್ಟಿ ಕಟ್ಟಲಾಗಿದೆ. ಬಂಧನ ಕೇಂದ್ರಕ್ಕೆ ಕಳುಹಿಸಲಾಗಿದೆ. ನಾವು ಅವರನ್ನು ಮನೆಗೆ ಕರೆತರುತ್ತೇವೆ. ಈ ಪ್ರವೃತ್ತಿ ಬಿಜೆಪಿ ಆಡಳಿತದಲ್ಲಿ ಒಂದರ ನಂತರ ಒಂದರಂತೆ ರಾಜ್ಯಗಳಲ್ಲಿ ನಡೆಯುತ್ತಿದೆ” ಎಂದು ಸಮೀರುಲ್ ಇಸ್ಲಾಂ ತಿಳಿಸಿದ್ದಾರೆ.

ಆದಾಗ್ಯೂ, “ಯಾವುದೇ ಪೊಲೀಸ್ ಠಾಣೆಯಲ್ಲಿ ಯಾರನ್ನೂ ಬಂಧಿಸಲಾಗಿಲ್ಲ” ಎಂದು ಒಡಿಶಾದ ಸರ್ಕಾರಿ ಅಧಿಕಾರಿಯೊಬ್ಬರು ಹೇಳಿದ್ದಾಗಿ indianexpress.com ವರದಿ ಮಾಡಿದೆ.

ನೆರೆಹೊರೆಯಲ್ಲಿನ ಇತ್ತೀಚಿನ ಬೆಳವಣಿಗೆಗಳನ್ನು ಗಮನದಲ್ಲಿಟ್ಟುಕೊಂಡು ಸರ್ಕಾರವು ರಾಷ್ಟ್ರವ್ಯಾಪಿ ಕಾರ್ಯದ ಭಾಗವಾಗಿ ಪರಿಶೀಲನೆಗಳನ್ನು ನಡೆಸುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

“ನಾವು ಅವರ ಗುರುತುಗಳನ್ನು ಪರಿಶೀಲಿಸುತ್ತಿದ್ದೇವೆ. ಪಶ್ಚಿಮ ಬಂಗಾಳ ಸರ್ಕಾರದೊಂದಿಗೆ ಸಂಪರ್ಕದಲ್ಲಿದ್ದೇವೆ” ಎಂದು ಅಧಿಕಾರಿ ಹೇಳಿದ್ದಾಗಿ indianexpress.com ವಿವರಿಸಿದೆ.

ಜೂನ್ 15ರಂದು ಮಹಾರಾಷ್ಟ್ರ ಪೊಲೀಸರು ಬಂಧಿಸಿ ಬಾಂಗ್ಲಾದೇಶಕ್ಕೆ ತಳ್ಳಿದ್ದ ಪಶ್ಚಿಮ ಬಂಗಾಳದ ನಾಲ್ವರು ಪುರುಷರನ್ನು ವಾಪಸ್ ಕರೆತಂದ ಸುಮಾರು ಎರಡು ವಾರಗಳ ನಂತರ ಈ ಬೆಳವಣಿಗೆ ನಡೆದಿದೆ. ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಪೊಲೀಸರು ಈ ನಾಲ್ವರು ಭಾರತೀಯ ನಾಗರಿಕರು ಎಂಬುದಕ್ಕೆ ಪುರಾವೆಗಳನ್ನು ಪ್ರಸ್ತುತಪಡಿಸಿದ್ದರು.

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ: ರಾಜಕೀಯವಾಗಿ, ಕಾನೂನಾತ್ಮಕವಾಗಿ ವಿರೋಧಿಸುತ್ತೇವೆ ಎಂದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...