Homeಮುಖಪುಟಬಂಗಾಳ ಚುನಾವಣೆ: ನಂದಿಗ್ರಾಮದಲ್ಲಿ ಸುವೇಂದು ಅಧಿಕಾರಿ ರ್‍ಯಾಲಿ, ಹೋಮ

ಬಂಗಾಳ ಚುನಾವಣೆ: ನಂದಿಗ್ರಾಮದಲ್ಲಿ ಸುವೇಂದು ಅಧಿಕಾರಿ ರ್‍ಯಾಲಿ, ಹೋಮ

ಮಮತಾ ಬ್ಯಾನರ್ಜಿಯವರ ಆಪ್ತರಾಗಿದ್ದ ಸುವೇಂದು ಅಧಿಕಾರಿ ಈಗ ಬಿಜೆಪಿ ಅಭ್ಯರ್ಥಿಯಾಗಿ ನಂದಿಗ್ರಾಮ ಕ್ಷೇತ್ರದಿಂದ ಕಣಕ್ಕಿಳಿಯುತ್ತಿದ್ದಾರೆ.

- Advertisement -
- Advertisement -

ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ನಂದಿಗ್ರಾಮ ಕ್ಷೇತ್ರ ಈ ಬಾರಿ ಎಲ್ಲರ ಕೇಂದ್ರಬಿಂದುವಾಗಿದೆ. ತೃಣಮೂಲ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಸುವೇಂದು ಅಧಿಕಾರಿಯ ಪ್ರಾಬಲ್ಯದ ಕ್ಷೇತ್ರ ಅದು. ಹಾಗಾಗಿ ಸ್ವಕ್ಷೇತ್ರ ಭವಾನಿಪೋರ್ ಬಿಟ್ಟು ಸಿಎಂ ಮಮತಾ ಬ್ಯಾನರ್ಜಿಗೆ ನಂದಿಗ್ರಾಮದಿಂದಲೇ ಸ್ಪರ್ಧಿಸುತ್ತಿದ್ದಾರೆ. ಅಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಶುಕ್ರವಾರ (ಮಾರ್ಚ್ 12)  ಸುವೇಂದು ಅಧಿಕಾರಿ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಎದುರಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಈ ಕಾರಣಕ್ಕಾಗಿ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿಈ ಕ್ಷೇತ್ರ ಎಲ್ಲರ ಚಿತ್ತವನ್ನು ತನ್ನೆಡೆಗೆ ಸೆಳೆದುಕೊಂಡಿದೆ.

ಕಳೆದ ಶನಿವಾರ ಬಿಜೆಪಿ ಪಶ್ಚಿಮ ಬಂಗಾಳ ಚುನಾವಣೆಗೆ 57 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ನಂದಿಗ್ರಾಮದಿಂದ ಸುವೇಂದು ಅವರನ್ನು ಕಣಕ್ಕಿಳಿಸಿದೆ. ಸಿಪಿಐ(ಎಂ) ಪಕ್ಷದಿಂದ ಡೆಮಾಕ್ರಟಿಕ್ ಯೂತ್ ಫೆಡರೇಶನ್ ಆಫ್ ಇಂಡಿಯಾ (ಡಿವೈಎಫ್‌ಐ)ದ ರಾಜ್ಯ ಅಧ್ಯಕ್ಷೆ ಮಿನಾಕ್ಷಿ ಮುಖರ್ಜಿ ನಂದಿಗ್ರಾಮದಲ್ಲಿ ಸ್ಪರ್ಧಿಸಲಿದ್ದಾರೆ.

ಇದನ್ನೂ ಓದಿ: ಭ್ರಷ್ಟ ನಾಯಕರನ್ನು ಖರೀದಿಸಬಹುದು; ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನಲ್ಲ – ಮಮತ ಬ್ಯಾನರ್ಜಿ

ಎರಡು ದಿನಗಳ ಹಿಂದಷ್ಟೇ ನಂದಿಗ್ರಾಮದಲ್ಲಿ ಪಾದಯಾತ್ರೆ, ರ್‍ಯಾಲಿ ಮಾಡಿ ನಾಮಪತ್ರ ಸಲ್ಲಿಕೆ ಮಾಡಿ ವಾಪಾಸ್ ಆಗುತ್ತಿದ್ದ ಮಮತಾ ಬ್ಯಾನರ್ಜಿಯವರ ಮೇಲೆ ಹಲ್ಲೆ ನಡೆದಿದೆ ಎಂದು ಆರೋಪಿಸಿದ್ದಾರೆ. ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಜೆಪಿ ಇದನ್ನು ರಾಜಕೀಯಕ್ಕಾಗಿ ನಡೆಸುತ್ತಿರುವ ನಾಟಕ ಎಂದಿದೆ. ಆದರೆ ದೇಶಾದ್ಯಂತ ಪಕ್ಷಾತೀತವಾಗಿ ಹಲವು ಮುಖಂಡರು ಮಮತಾ ಬ್ಯಾನರ್ಜಿ ಮೇಲಿನ ಹಲ್ಲೆಯನ್ನು ಖಂಡಿಸಿ, ಬೇಗ ಗುಣಮುಖರಾಗಲಿ ಎಂದು ಹರಸಿದ್ದಾರೆ.

ಶುಕ್ರವಾರ ಬೆಳಗ್ಗೆಯಿಂದಲೇ ಬಿಜೆಪಿ ಅಭ್ಯರ್ಥಿಯಾಗಿರುವ ಸುವೇಂದು ಅಧಿಕಾರಿ, ನಂದಿಗ್ರಾಮದಲ್ಲಿ ಹಲವು ದೇವಾಲಯಗಳಲ್ಲಿ ಪೂಜೆ, ಹವನ ಮಾಡಿಸುತ್ತಿದ್ದಾರೆ. ದೊಡ್ಡ ರ್‍ಯಾಲಿಯನ್ನು ನಡೆಸಲಾಗುತ್ತಿದೆ. ನಂತರ ಬಿಜೆಪಿ ನಾಯಕರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಕೆ ಮಾಡಲಾಗುತ್ತದೆ ಎನ್ನಲಾಗಿದೆ.

Image
PC:Twitter@SuvenduWB

’ನಂದಿಗ್ರಾಮದ ಜನರಿಗೂ ನನಗೂ ತುಂಬಾ ಹಳೆಯ ಸಂಬಂಧವಿದೆ. ಮಮತಾ ಬ್ಯಾನರ್ಜಿ 5 ವರ್ಷಕ್ಕೆ ಒಮ್ಮೆ ಚುನಾವಣೆ ಬಂದಾಗ ಅವರನ್ನು ನೆನಪಿಸಿಕೊಳ್ಳುತ್ತಾರೆ. ಈ ಬಾರಿ ಜನ ಅವರನ್ನು ಸೋಲಿಸುತ್ತಾರೆ. ನಾನು ನಂದಿಗ್ರಾಮದ ಮತದಾರ. ಇಂದು ನಾನು ನಾಮಪತ್ರ ಸಲ್ಲಿಸುತ್ತೇನೆ’ ಎಂದು ಸುವೇಂದು ಅಧಿಕಾರಿ ನಂದಿಗ್ರಾಮದಲ್ಲಿ ಹೇಳಿದ್ದಾರೆ.


ಇದನ್ನೂ ಓದಿ: ಬೆಂಬಲಿಗರಿಗೆ ಆಸ್ಪತ್ರೆಯಿಂದಲೇ ವಿಡಿಯೊ ಸಂದೇಶ: ಮಮತಾ ಬ್ಯಾನರ್ಜಿ ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...