Homeಮುಖಪುಟಪಶ್ಚಿಮ ಬಂಗಾಳ: ವಿಧಾನ ಪರಿಷತ್ ರಚಿಸುವ ನಿರ್ಣಯ ಅಂಗೀಕಾರ, ಬಿಜೆಪಿ ತಂತ್ರಕ್ಕೆ ಟಿಎಂಸಿ ಪ್ರತಿತಂತ್ರವೇ?

ಪಶ್ಚಿಮ ಬಂಗಾಳ: ವಿಧಾನ ಪರಿಷತ್ ರಚಿಸುವ ನಿರ್ಣಯ ಅಂಗೀಕಾರ, ಬಿಜೆಪಿ ತಂತ್ರಕ್ಕೆ ಟಿಎಂಸಿ ಪ್ರತಿತಂತ್ರವೇ?

- Advertisement -
- Advertisement -

ಪಶ್ಚಿಮ ಬಂಗಾಳ ವಿಧಾನಸಭೆಯು ಮಂಗಳವಾರ (ಜುಲೈ 6) ಭಾರತ ಸಂವಿಧಾನದ 169 ನೇ ವಿಧಿ ಅನ್ವಯ ರಾಜ್ಯದಲ್ಲಿ ವಿಧಾನ ಪರಿಷತ್ ರಚಿಸುವ ನಿರ್ಣಯವನ್ನು ಅಂಗೀಕರಿಸಿದೆ.

ವಿಧಾನಸಭೆಯಲ್ಲಿ ಹಾಜರಿದ್ದ ಒಟ್ಟು 265 ಸದಸ್ಯರಲ್ಲಿ 196 ಶಾಸಕರು ನಿರ್ಣಯದ ಪರವಾಗಿ ಮತ ಚಲಾಯಿಸಿದರೆ, 69 ಮಂದಿ ಇದರ ವಿರುದ್ಧ ಮತ ಚಲಾಯಿಸಿದ್ದಾರೆ.

ಶಾಸಕಾಂಗ ಮಂಡಳಿಯ ರಚನೆಯು ವಿಧಾನಸಭಾ ಚುನಾವಣೆಯಲ್ಲಿ ಪ್ರಣಾಳಿಕೆಯಲ್ಲಿ ಕಾಣಿಸಿಕೊಂಡ  ಭರವಸೆಗಳಲ್ಲಿ ಒಂದಾಗಿದೆ. ವಿಧಾನಸಭೆ ಚುನಾವಣೆಯ ನಂತರ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಈ ಪ್ರಸ್ತಾಪಕ್ಕೆ ಅನುಮೋದನೆ ನೀಡಿದ್ದರು. ಈ ನಿರ್ಣಯವನ್ನು ಅಂಗೀಕರಿಸಲು ಮತದಾನ ನಡೆದ ಸಂದರ್ಭದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸದನದಲ್ಲಿ ಹಾಜರಿರಲಿಲ್ಲ ಎಂಬುದು ವಿಶೇಷ.

ಇದನ್ನೂ ಓದಿ: ಬಂಗಾಳ ರಾಜ್ಯಪಾಲರನ್ನು ಕಿತ್ತು ಹಾಕಲು ಒಕ್ಕೂಟ ಸರ್ಕಾರಕ್ಕೆ ಪತ್ರ ಬರೆದ ಮಮತಾ ಬ್ಯಾನರ್ಜಿ

ವಿರೋಧ ಪಕ್ಷ ನಾಯಕ, ಬಿಜೆಪಿಯ ಸುವೇಂಧು ಅಧಿಕಾರಿಯು ಈ ನಿರ್ಣಯವು ರಾಜ್ಯದಲ್ಲಿ ಆರ್ಥಿಕವಾಗಿ ಸೂಕ್ತವಲ್ಲ ಎಂದು ವಿರೋಧಿಸಿದ್ದಾರೆ. ಜೊತೆಗೆ ಈ ವಿಧಾನ ಪರಿಷತ್ ರಚಿಸುವ ನಿರ್ಣಯದಿಂದ ವಿಧಾನಸಭಾ ಚುನಾವಣೆಯಲ್ಲಿ ಸೋತ ಟಿಎಂಸಿ ಅಭ್ಯರ್ಥಿಗಳಿಗೆ, ಮುಖಂಡರಿಗೆ ಅವಕಾಶ ಕಲ್ಪಿಸುವ ಟಿಯಂಸಿಯ ತಂತ್ರವಾಗಿದೆ ಎಂದು ಆರೋಪಿಸಿದ್ದಾರೆ.

“ದೇಶದ 23 ರಾಜ್ಯಗಳಲ್ಲಿ ವಿಧಾನ ಪರಿಷತ್ ಇಲ್ಲ. ರಾಜ್ಯಗಳ ಆಡಳಿತಕ್ಕೆ ಇದು ಒಳ್ಳೆಯದಲ್ಲ. ಟಿಎಂಸಿಯು ಚುನಾವಣೆಯಲ್ಲಿ ಮುಖ್ಯಮಂತ್ರಿ ಸೇರಿದಂತೆ 7 ರಿಂದ 8 ಮಂತ್ರಿಗಳನ್ನು ಕಳೆದುಕೊಂಡಿದೆ. ಅವರನ್ನು ವಿಧಾನ ಪರಿಷತ್ ಮೂಲಕ ರಾಜಕೀಯಕ್ಕೆ ಹಿಂಬಾಗಿಲಿನ ಪ್ರವೇಶ ನೀಡಲು ಟಿಎಂಸಿ ಪ್ರಯತ್ನಿಸುತ್ತಿದೆ” ಎಂದು ಸುವೇಂಧು ಅಧಿಕಾರಿ ಆರೋಪಿಸಿದ್ದಾರೆ. “ಸಂಸತ್ತಿನಲ್ಲಿ ಬಿಜೆಪಿಗೆ ಬಹುಮತವಿದೆ. ಈ ನಿರ್ಣಯವನ್ನು ವಿರೋಧಿಸುವುದು ನಮ್ಮ ನಿರ್ಧಾರ” ಎಂದು ಹೇಳಿದ್ದಾರೆ.

ಇನ್ನು, ಪಶ್ಚಿಮ ಬಂಗಾಳ ವಿಧಾನಸಭೆ ನಿರ್ಣಯವನ್ನು ಅಂಗೀಕರಿಸಿದರೂ, ಪರಿಷತ್ ಸ್ಥಾಪಿಸುವ ಸಲುವಾಗಿ, ಸಂಸತ್ತಿನಲ್ಲಿ ಮಸೂದೆಯನ್ನು ಅಂಗೀಕರಿಸಬೇಕಾಗುತ್ತದೆ. ಈ ವಿಷಯದಲ್ಲಿ ಬಿಜೆಪಿ ನೇತೃತ್ವದ ಒಕ್ಕೂಟ ಸರ್ಕಾರದ ಪಾತ್ರ ನಿರ್ಣಾಯಕವಾಗಲಿದೆ.

ಇದನ್ನೂ ಓದಿ: ನಿಯಂತ್ರಿಸಲು ಸಾಧ್ಯವಾಗದ ಎಲ್ಲವನ್ನೂ ಮೋದಿ ಸರ್ಕಾರ ಧ್ವಂಸ ಮಾಡುತ್ತಿದೆ: ಮಮತಾ ಬ್ಯಾನರ್ಜಿ

ಗಮನಾರ್ಹವಾಗಿ, ಈ ಮೊದಲು ಪಶ್ಚಿಮ ಬಂಗಾಳದಲ್ಲಿ 1952 ರಲ್ಲಿ ಮೇಲ್ಮನೆ ಅಸ್ತಿತ್ವಕ್ಕೆ ಬಂದಿತ್ತು. ಆದರೆ, ರಾಜ್ಯ ವಿಧಾನಸಭೆಯಲ್ಲಿ ವಿಧಾನ ಪರಿಷತ್ ರದ್ದುಗೊಳಿಸುವ ನಿರ್ಣಯವನ್ನು ಮಾರ್ಚ್ 21, 1969 ರಂದು ಅಂಗೀಕರಿಸಲಾಗಿತ್ತು.

ಪ್ರಸ್ತುತ  ಆಂಧ್ರ ಪ್ರದೇಶ, ಬಿಹಾರ, ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ ಮತ್ತು ಉತ್ತರ ಪ್ರದೇಶ  ಸೇರಿ ದೇಶದ ಒಟ್ಟು ಆರು ರಾಜ್ಯಗಳಲ್ಲಿ ಮಾತ್ರ ವಿಧಾನ ಪರಿಷತ್ ಇದೆ. ಉಳಿದ ಕಡೆ ಜನರಿಂದ ನೇರವಾಗಿ ಆಯ್ಕೆಯಾದರೆ ಮಾತ್ರ ಶಾಸಕಾಂಗದಲ್ಲಿ ಸ್ಥಾನ ಪಡೆಯಬಹುದಾಗಿದೆ.

ಚುನಾವಣಾ ಆಯೋಗ ಕೊರೊನಾ ಹೆಸರಲ್ಲಿ ಯಾವುದೆ ಉಪಚುನಾವಣೆ ನಡೆಸಲು ಮುಂದೆ ಬರುತ್ತಿಲ್ಲ. ಹಾಗಾಗಿ ಮಮತಾ ಬ್ಯಾನರ್ಜಿ ಆರು ತಿಂಗಳೊಳಗೆ ಶಾಸಕಿಯಾಗದಿದ್ದಲ್ಲಿ ಉತ್ತರಾಖಂಡದ ಮಾದರಿಯಲ್ಲಿ ರಾಜೀನಾಮೆ ನೀಡಬೇಕು ಎಂಬುದು ಬಿಜೆಪಿ ಒತ್ತಾಯ. ಆ ಮೂಲಕ ಅವರಿಗೆ ಮುಖಭಂಗ ಮಾಡಲು ಬಿಜೆಪಿ ಉತ್ತರಾಖಂಡದಲ್ಲಿ ತಿರತ್ ಸಿಂಗ್‌ ರಾವತ್‌ರನ್ನು ಕೆಳಗಿಳಿಸಿದೆ ಎಂಬ ವದಂತಿಗಳು ಹರಿದಾಡುತ್ತಿವೆ. ಆದರೆ ಬಿಜೆಪಿಗೆ ತಿರುಗೇಟು ನೀಡಲು ಮುಂದಾಗಿರುವ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸರ್ಕಾರ ವಿಧಾನ ಪರಿಷತ್ ರಚನೆಗೆ ಮುಂದಾಗಿದೆ.


ಇದನ್ನೂ ಓದಿ: Explainer: ಬಿಜೆಪಿಯು ಉತ್ತರಾಖಂಡ ಸಿಎಂ ಬದಲಿಸಿದ್ದು ಮಮತಾ ಬ್ಯಾನರ್ಜಿಯನ್ನು ಕೆಳಗಿಳಿಸಲೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...