Homeಮುಖಪುಟಪಶ್ಚಿಮ ಬಂಗಾಳ: ವಿಧಾನ ಪರಿಷತ್ ರಚಿಸುವ ನಿರ್ಣಯ ಅಂಗೀಕಾರ, ಬಿಜೆಪಿ ತಂತ್ರಕ್ಕೆ ಟಿಎಂಸಿ ಪ್ರತಿತಂತ್ರವೇ?

ಪಶ್ಚಿಮ ಬಂಗಾಳ: ವಿಧಾನ ಪರಿಷತ್ ರಚಿಸುವ ನಿರ್ಣಯ ಅಂಗೀಕಾರ, ಬಿಜೆಪಿ ತಂತ್ರಕ್ಕೆ ಟಿಎಂಸಿ ಪ್ರತಿತಂತ್ರವೇ?

- Advertisement -
- Advertisement -

ಪಶ್ಚಿಮ ಬಂಗಾಳ ವಿಧಾನಸಭೆಯು ಮಂಗಳವಾರ (ಜುಲೈ 6) ಭಾರತ ಸಂವಿಧಾನದ 169 ನೇ ವಿಧಿ ಅನ್ವಯ ರಾಜ್ಯದಲ್ಲಿ ವಿಧಾನ ಪರಿಷತ್ ರಚಿಸುವ ನಿರ್ಣಯವನ್ನು ಅಂಗೀಕರಿಸಿದೆ.

ವಿಧಾನಸಭೆಯಲ್ಲಿ ಹಾಜರಿದ್ದ ಒಟ್ಟು 265 ಸದಸ್ಯರಲ್ಲಿ 196 ಶಾಸಕರು ನಿರ್ಣಯದ ಪರವಾಗಿ ಮತ ಚಲಾಯಿಸಿದರೆ, 69 ಮಂದಿ ಇದರ ವಿರುದ್ಧ ಮತ ಚಲಾಯಿಸಿದ್ದಾರೆ.

ಶಾಸಕಾಂಗ ಮಂಡಳಿಯ ರಚನೆಯು ವಿಧಾನಸಭಾ ಚುನಾವಣೆಯಲ್ಲಿ ಪ್ರಣಾಳಿಕೆಯಲ್ಲಿ ಕಾಣಿಸಿಕೊಂಡ  ಭರವಸೆಗಳಲ್ಲಿ ಒಂದಾಗಿದೆ. ವಿಧಾನಸಭೆ ಚುನಾವಣೆಯ ನಂತರ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಈ ಪ್ರಸ್ತಾಪಕ್ಕೆ ಅನುಮೋದನೆ ನೀಡಿದ್ದರು. ಈ ನಿರ್ಣಯವನ್ನು ಅಂಗೀಕರಿಸಲು ಮತದಾನ ನಡೆದ ಸಂದರ್ಭದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸದನದಲ್ಲಿ ಹಾಜರಿರಲಿಲ್ಲ ಎಂಬುದು ವಿಶೇಷ.

ಇದನ್ನೂ ಓದಿ: ಬಂಗಾಳ ರಾಜ್ಯಪಾಲರನ್ನು ಕಿತ್ತು ಹಾಕಲು ಒಕ್ಕೂಟ ಸರ್ಕಾರಕ್ಕೆ ಪತ್ರ ಬರೆದ ಮಮತಾ ಬ್ಯಾನರ್ಜಿ

ವಿರೋಧ ಪಕ್ಷ ನಾಯಕ, ಬಿಜೆಪಿಯ ಸುವೇಂಧು ಅಧಿಕಾರಿಯು ಈ ನಿರ್ಣಯವು ರಾಜ್ಯದಲ್ಲಿ ಆರ್ಥಿಕವಾಗಿ ಸೂಕ್ತವಲ್ಲ ಎಂದು ವಿರೋಧಿಸಿದ್ದಾರೆ. ಜೊತೆಗೆ ಈ ವಿಧಾನ ಪರಿಷತ್ ರಚಿಸುವ ನಿರ್ಣಯದಿಂದ ವಿಧಾನಸಭಾ ಚುನಾವಣೆಯಲ್ಲಿ ಸೋತ ಟಿಎಂಸಿ ಅಭ್ಯರ್ಥಿಗಳಿಗೆ, ಮುಖಂಡರಿಗೆ ಅವಕಾಶ ಕಲ್ಪಿಸುವ ಟಿಯಂಸಿಯ ತಂತ್ರವಾಗಿದೆ ಎಂದು ಆರೋಪಿಸಿದ್ದಾರೆ.

“ದೇಶದ 23 ರಾಜ್ಯಗಳಲ್ಲಿ ವಿಧಾನ ಪರಿಷತ್ ಇಲ್ಲ. ರಾಜ್ಯಗಳ ಆಡಳಿತಕ್ಕೆ ಇದು ಒಳ್ಳೆಯದಲ್ಲ. ಟಿಎಂಸಿಯು ಚುನಾವಣೆಯಲ್ಲಿ ಮುಖ್ಯಮಂತ್ರಿ ಸೇರಿದಂತೆ 7 ರಿಂದ 8 ಮಂತ್ರಿಗಳನ್ನು ಕಳೆದುಕೊಂಡಿದೆ. ಅವರನ್ನು ವಿಧಾನ ಪರಿಷತ್ ಮೂಲಕ ರಾಜಕೀಯಕ್ಕೆ ಹಿಂಬಾಗಿಲಿನ ಪ್ರವೇಶ ನೀಡಲು ಟಿಎಂಸಿ ಪ್ರಯತ್ನಿಸುತ್ತಿದೆ” ಎಂದು ಸುವೇಂಧು ಅಧಿಕಾರಿ ಆರೋಪಿಸಿದ್ದಾರೆ. “ಸಂಸತ್ತಿನಲ್ಲಿ ಬಿಜೆಪಿಗೆ ಬಹುಮತವಿದೆ. ಈ ನಿರ್ಣಯವನ್ನು ವಿರೋಧಿಸುವುದು ನಮ್ಮ ನಿರ್ಧಾರ” ಎಂದು ಹೇಳಿದ್ದಾರೆ.

ಇನ್ನು, ಪಶ್ಚಿಮ ಬಂಗಾಳ ವಿಧಾನಸಭೆ ನಿರ್ಣಯವನ್ನು ಅಂಗೀಕರಿಸಿದರೂ, ಪರಿಷತ್ ಸ್ಥಾಪಿಸುವ ಸಲುವಾಗಿ, ಸಂಸತ್ತಿನಲ್ಲಿ ಮಸೂದೆಯನ್ನು ಅಂಗೀಕರಿಸಬೇಕಾಗುತ್ತದೆ. ಈ ವಿಷಯದಲ್ಲಿ ಬಿಜೆಪಿ ನೇತೃತ್ವದ ಒಕ್ಕೂಟ ಸರ್ಕಾರದ ಪಾತ್ರ ನಿರ್ಣಾಯಕವಾಗಲಿದೆ.

ಇದನ್ನೂ ಓದಿ: ನಿಯಂತ್ರಿಸಲು ಸಾಧ್ಯವಾಗದ ಎಲ್ಲವನ್ನೂ ಮೋದಿ ಸರ್ಕಾರ ಧ್ವಂಸ ಮಾಡುತ್ತಿದೆ: ಮಮತಾ ಬ್ಯಾನರ್ಜಿ

ಗಮನಾರ್ಹವಾಗಿ, ಈ ಮೊದಲು ಪಶ್ಚಿಮ ಬಂಗಾಳದಲ್ಲಿ 1952 ರಲ್ಲಿ ಮೇಲ್ಮನೆ ಅಸ್ತಿತ್ವಕ್ಕೆ ಬಂದಿತ್ತು. ಆದರೆ, ರಾಜ್ಯ ವಿಧಾನಸಭೆಯಲ್ಲಿ ವಿಧಾನ ಪರಿಷತ್ ರದ್ದುಗೊಳಿಸುವ ನಿರ್ಣಯವನ್ನು ಮಾರ್ಚ್ 21, 1969 ರಂದು ಅಂಗೀಕರಿಸಲಾಗಿತ್ತು.

ಪ್ರಸ್ತುತ  ಆಂಧ್ರ ಪ್ರದೇಶ, ಬಿಹಾರ, ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ ಮತ್ತು ಉತ್ತರ ಪ್ರದೇಶ  ಸೇರಿ ದೇಶದ ಒಟ್ಟು ಆರು ರಾಜ್ಯಗಳಲ್ಲಿ ಮಾತ್ರ ವಿಧಾನ ಪರಿಷತ್ ಇದೆ. ಉಳಿದ ಕಡೆ ಜನರಿಂದ ನೇರವಾಗಿ ಆಯ್ಕೆಯಾದರೆ ಮಾತ್ರ ಶಾಸಕಾಂಗದಲ್ಲಿ ಸ್ಥಾನ ಪಡೆಯಬಹುದಾಗಿದೆ.

ಚುನಾವಣಾ ಆಯೋಗ ಕೊರೊನಾ ಹೆಸರಲ್ಲಿ ಯಾವುದೆ ಉಪಚುನಾವಣೆ ನಡೆಸಲು ಮುಂದೆ ಬರುತ್ತಿಲ್ಲ. ಹಾಗಾಗಿ ಮಮತಾ ಬ್ಯಾನರ್ಜಿ ಆರು ತಿಂಗಳೊಳಗೆ ಶಾಸಕಿಯಾಗದಿದ್ದಲ್ಲಿ ಉತ್ತರಾಖಂಡದ ಮಾದರಿಯಲ್ಲಿ ರಾಜೀನಾಮೆ ನೀಡಬೇಕು ಎಂಬುದು ಬಿಜೆಪಿ ಒತ್ತಾಯ. ಆ ಮೂಲಕ ಅವರಿಗೆ ಮುಖಭಂಗ ಮಾಡಲು ಬಿಜೆಪಿ ಉತ್ತರಾಖಂಡದಲ್ಲಿ ತಿರತ್ ಸಿಂಗ್‌ ರಾವತ್‌ರನ್ನು ಕೆಳಗಿಳಿಸಿದೆ ಎಂಬ ವದಂತಿಗಳು ಹರಿದಾಡುತ್ತಿವೆ. ಆದರೆ ಬಿಜೆಪಿಗೆ ತಿರುಗೇಟು ನೀಡಲು ಮುಂದಾಗಿರುವ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸರ್ಕಾರ ವಿಧಾನ ಪರಿಷತ್ ರಚನೆಗೆ ಮುಂದಾಗಿದೆ.


ಇದನ್ನೂ ಓದಿ: Explainer: ಬಿಜೆಪಿಯು ಉತ್ತರಾಖಂಡ ಸಿಎಂ ಬದಲಿಸಿದ್ದು ಮಮತಾ ಬ್ಯಾನರ್ಜಿಯನ್ನು ಕೆಳಗಿಳಿಸಲೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...