Homeಮುಖಪುಟಪಶ್ಚಿಮ ಬಂಗಾಳ: ವಿಧಾನ ಪರಿಷತ್ ರಚಿಸುವ ನಿರ್ಣಯ ಅಂಗೀಕಾರ, ಬಿಜೆಪಿ ತಂತ್ರಕ್ಕೆ ಟಿಎಂಸಿ ಪ್ರತಿತಂತ್ರವೇ?

ಪಶ್ಚಿಮ ಬಂಗಾಳ: ವಿಧಾನ ಪರಿಷತ್ ರಚಿಸುವ ನಿರ್ಣಯ ಅಂಗೀಕಾರ, ಬಿಜೆಪಿ ತಂತ್ರಕ್ಕೆ ಟಿಎಂಸಿ ಪ್ರತಿತಂತ್ರವೇ?

- Advertisement -
- Advertisement -

ಪಶ್ಚಿಮ ಬಂಗಾಳ ವಿಧಾನಸಭೆಯು ಮಂಗಳವಾರ (ಜುಲೈ 6) ಭಾರತ ಸಂವಿಧಾನದ 169 ನೇ ವಿಧಿ ಅನ್ವಯ ರಾಜ್ಯದಲ್ಲಿ ವಿಧಾನ ಪರಿಷತ್ ರಚಿಸುವ ನಿರ್ಣಯವನ್ನು ಅಂಗೀಕರಿಸಿದೆ.

ವಿಧಾನಸಭೆಯಲ್ಲಿ ಹಾಜರಿದ್ದ ಒಟ್ಟು 265 ಸದಸ್ಯರಲ್ಲಿ 196 ಶಾಸಕರು ನಿರ್ಣಯದ ಪರವಾಗಿ ಮತ ಚಲಾಯಿಸಿದರೆ, 69 ಮಂದಿ ಇದರ ವಿರುದ್ಧ ಮತ ಚಲಾಯಿಸಿದ್ದಾರೆ.

ಶಾಸಕಾಂಗ ಮಂಡಳಿಯ ರಚನೆಯು ವಿಧಾನಸಭಾ ಚುನಾವಣೆಯಲ್ಲಿ ಪ್ರಣಾಳಿಕೆಯಲ್ಲಿ ಕಾಣಿಸಿಕೊಂಡ  ಭರವಸೆಗಳಲ್ಲಿ ಒಂದಾಗಿದೆ. ವಿಧಾನಸಭೆ ಚುನಾವಣೆಯ ನಂತರ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಈ ಪ್ರಸ್ತಾಪಕ್ಕೆ ಅನುಮೋದನೆ ನೀಡಿದ್ದರು. ಈ ನಿರ್ಣಯವನ್ನು ಅಂಗೀಕರಿಸಲು ಮತದಾನ ನಡೆದ ಸಂದರ್ಭದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸದನದಲ್ಲಿ ಹಾಜರಿರಲಿಲ್ಲ ಎಂಬುದು ವಿಶೇಷ.

ಇದನ್ನೂ ಓದಿ: ಬಂಗಾಳ ರಾಜ್ಯಪಾಲರನ್ನು ಕಿತ್ತು ಹಾಕಲು ಒಕ್ಕೂಟ ಸರ್ಕಾರಕ್ಕೆ ಪತ್ರ ಬರೆದ ಮಮತಾ ಬ್ಯಾನರ್ಜಿ

ವಿರೋಧ ಪಕ್ಷ ನಾಯಕ, ಬಿಜೆಪಿಯ ಸುವೇಂಧು ಅಧಿಕಾರಿಯು ಈ ನಿರ್ಣಯವು ರಾಜ್ಯದಲ್ಲಿ ಆರ್ಥಿಕವಾಗಿ ಸೂಕ್ತವಲ್ಲ ಎಂದು ವಿರೋಧಿಸಿದ್ದಾರೆ. ಜೊತೆಗೆ ಈ ವಿಧಾನ ಪರಿಷತ್ ರಚಿಸುವ ನಿರ್ಣಯದಿಂದ ವಿಧಾನಸಭಾ ಚುನಾವಣೆಯಲ್ಲಿ ಸೋತ ಟಿಎಂಸಿ ಅಭ್ಯರ್ಥಿಗಳಿಗೆ, ಮುಖಂಡರಿಗೆ ಅವಕಾಶ ಕಲ್ಪಿಸುವ ಟಿಯಂಸಿಯ ತಂತ್ರವಾಗಿದೆ ಎಂದು ಆರೋಪಿಸಿದ್ದಾರೆ.

“ದೇಶದ 23 ರಾಜ್ಯಗಳಲ್ಲಿ ವಿಧಾನ ಪರಿಷತ್ ಇಲ್ಲ. ರಾಜ್ಯಗಳ ಆಡಳಿತಕ್ಕೆ ಇದು ಒಳ್ಳೆಯದಲ್ಲ. ಟಿಎಂಸಿಯು ಚುನಾವಣೆಯಲ್ಲಿ ಮುಖ್ಯಮಂತ್ರಿ ಸೇರಿದಂತೆ 7 ರಿಂದ 8 ಮಂತ್ರಿಗಳನ್ನು ಕಳೆದುಕೊಂಡಿದೆ. ಅವರನ್ನು ವಿಧಾನ ಪರಿಷತ್ ಮೂಲಕ ರಾಜಕೀಯಕ್ಕೆ ಹಿಂಬಾಗಿಲಿನ ಪ್ರವೇಶ ನೀಡಲು ಟಿಎಂಸಿ ಪ್ರಯತ್ನಿಸುತ್ತಿದೆ” ಎಂದು ಸುವೇಂಧು ಅಧಿಕಾರಿ ಆರೋಪಿಸಿದ್ದಾರೆ. “ಸಂಸತ್ತಿನಲ್ಲಿ ಬಿಜೆಪಿಗೆ ಬಹುಮತವಿದೆ. ಈ ನಿರ್ಣಯವನ್ನು ವಿರೋಧಿಸುವುದು ನಮ್ಮ ನಿರ್ಧಾರ” ಎಂದು ಹೇಳಿದ್ದಾರೆ.

ಇನ್ನು, ಪಶ್ಚಿಮ ಬಂಗಾಳ ವಿಧಾನಸಭೆ ನಿರ್ಣಯವನ್ನು ಅಂಗೀಕರಿಸಿದರೂ, ಪರಿಷತ್ ಸ್ಥಾಪಿಸುವ ಸಲುವಾಗಿ, ಸಂಸತ್ತಿನಲ್ಲಿ ಮಸೂದೆಯನ್ನು ಅಂಗೀಕರಿಸಬೇಕಾಗುತ್ತದೆ. ಈ ವಿಷಯದಲ್ಲಿ ಬಿಜೆಪಿ ನೇತೃತ್ವದ ಒಕ್ಕೂಟ ಸರ್ಕಾರದ ಪಾತ್ರ ನಿರ್ಣಾಯಕವಾಗಲಿದೆ.

ಇದನ್ನೂ ಓದಿ: ನಿಯಂತ್ರಿಸಲು ಸಾಧ್ಯವಾಗದ ಎಲ್ಲವನ್ನೂ ಮೋದಿ ಸರ್ಕಾರ ಧ್ವಂಸ ಮಾಡುತ್ತಿದೆ: ಮಮತಾ ಬ್ಯಾನರ್ಜಿ

ಗಮನಾರ್ಹವಾಗಿ, ಈ ಮೊದಲು ಪಶ್ಚಿಮ ಬಂಗಾಳದಲ್ಲಿ 1952 ರಲ್ಲಿ ಮೇಲ್ಮನೆ ಅಸ್ತಿತ್ವಕ್ಕೆ ಬಂದಿತ್ತು. ಆದರೆ, ರಾಜ್ಯ ವಿಧಾನಸಭೆಯಲ್ಲಿ ವಿಧಾನ ಪರಿಷತ್ ರದ್ದುಗೊಳಿಸುವ ನಿರ್ಣಯವನ್ನು ಮಾರ್ಚ್ 21, 1969 ರಂದು ಅಂಗೀಕರಿಸಲಾಗಿತ್ತು.

ಪ್ರಸ್ತುತ  ಆಂಧ್ರ ಪ್ರದೇಶ, ಬಿಹಾರ, ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ ಮತ್ತು ಉತ್ತರ ಪ್ರದೇಶ  ಸೇರಿ ದೇಶದ ಒಟ್ಟು ಆರು ರಾಜ್ಯಗಳಲ್ಲಿ ಮಾತ್ರ ವಿಧಾನ ಪರಿಷತ್ ಇದೆ. ಉಳಿದ ಕಡೆ ಜನರಿಂದ ನೇರವಾಗಿ ಆಯ್ಕೆಯಾದರೆ ಮಾತ್ರ ಶಾಸಕಾಂಗದಲ್ಲಿ ಸ್ಥಾನ ಪಡೆಯಬಹುದಾಗಿದೆ.

ಚುನಾವಣಾ ಆಯೋಗ ಕೊರೊನಾ ಹೆಸರಲ್ಲಿ ಯಾವುದೆ ಉಪಚುನಾವಣೆ ನಡೆಸಲು ಮುಂದೆ ಬರುತ್ತಿಲ್ಲ. ಹಾಗಾಗಿ ಮಮತಾ ಬ್ಯಾನರ್ಜಿ ಆರು ತಿಂಗಳೊಳಗೆ ಶಾಸಕಿಯಾಗದಿದ್ದಲ್ಲಿ ಉತ್ತರಾಖಂಡದ ಮಾದರಿಯಲ್ಲಿ ರಾಜೀನಾಮೆ ನೀಡಬೇಕು ಎಂಬುದು ಬಿಜೆಪಿ ಒತ್ತಾಯ. ಆ ಮೂಲಕ ಅವರಿಗೆ ಮುಖಭಂಗ ಮಾಡಲು ಬಿಜೆಪಿ ಉತ್ತರಾಖಂಡದಲ್ಲಿ ತಿರತ್ ಸಿಂಗ್‌ ರಾವತ್‌ರನ್ನು ಕೆಳಗಿಳಿಸಿದೆ ಎಂಬ ವದಂತಿಗಳು ಹರಿದಾಡುತ್ತಿವೆ. ಆದರೆ ಬಿಜೆಪಿಗೆ ತಿರುಗೇಟು ನೀಡಲು ಮುಂದಾಗಿರುವ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸರ್ಕಾರ ವಿಧಾನ ಪರಿಷತ್ ರಚನೆಗೆ ಮುಂದಾಗಿದೆ.


ಇದನ್ನೂ ಓದಿ: Explainer: ಬಿಜೆಪಿಯು ಉತ್ತರಾಖಂಡ ಸಿಎಂ ಬದಲಿಸಿದ್ದು ಮಮತಾ ಬ್ಯಾನರ್ಜಿಯನ್ನು ಕೆಳಗಿಳಿಸಲೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...