Homeಮುಖಪುಟಪಶ್ಚಿಮ ಬಂಗಾಳ: ವಿಧಾನ ಪರಿಷತ್ ರಚಿಸುವ ನಿರ್ಣಯ ಅಂಗೀಕಾರ, ಬಿಜೆಪಿ ತಂತ್ರಕ್ಕೆ ಟಿಎಂಸಿ ಪ್ರತಿತಂತ್ರವೇ?

ಪಶ್ಚಿಮ ಬಂಗಾಳ: ವಿಧಾನ ಪರಿಷತ್ ರಚಿಸುವ ನಿರ್ಣಯ ಅಂಗೀಕಾರ, ಬಿಜೆಪಿ ತಂತ್ರಕ್ಕೆ ಟಿಎಂಸಿ ಪ್ರತಿತಂತ್ರವೇ?

- Advertisement -
- Advertisement -

ಪಶ್ಚಿಮ ಬಂಗಾಳ ವಿಧಾನಸಭೆಯು ಮಂಗಳವಾರ (ಜುಲೈ 6) ಭಾರತ ಸಂವಿಧಾನದ 169 ನೇ ವಿಧಿ ಅನ್ವಯ ರಾಜ್ಯದಲ್ಲಿ ವಿಧಾನ ಪರಿಷತ್ ರಚಿಸುವ ನಿರ್ಣಯವನ್ನು ಅಂಗೀಕರಿಸಿದೆ.

ವಿಧಾನಸಭೆಯಲ್ಲಿ ಹಾಜರಿದ್ದ ಒಟ್ಟು 265 ಸದಸ್ಯರಲ್ಲಿ 196 ಶಾಸಕರು ನಿರ್ಣಯದ ಪರವಾಗಿ ಮತ ಚಲಾಯಿಸಿದರೆ, 69 ಮಂದಿ ಇದರ ವಿರುದ್ಧ ಮತ ಚಲಾಯಿಸಿದ್ದಾರೆ.

ಶಾಸಕಾಂಗ ಮಂಡಳಿಯ ರಚನೆಯು ವಿಧಾನಸಭಾ ಚುನಾವಣೆಯಲ್ಲಿ ಪ್ರಣಾಳಿಕೆಯಲ್ಲಿ ಕಾಣಿಸಿಕೊಂಡ  ಭರವಸೆಗಳಲ್ಲಿ ಒಂದಾಗಿದೆ. ವಿಧಾನಸಭೆ ಚುನಾವಣೆಯ ನಂತರ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಈ ಪ್ರಸ್ತಾಪಕ್ಕೆ ಅನುಮೋದನೆ ನೀಡಿದ್ದರು. ಈ ನಿರ್ಣಯವನ್ನು ಅಂಗೀಕರಿಸಲು ಮತದಾನ ನಡೆದ ಸಂದರ್ಭದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸದನದಲ್ಲಿ ಹಾಜರಿರಲಿಲ್ಲ ಎಂಬುದು ವಿಶೇಷ.

ಇದನ್ನೂ ಓದಿ: ಬಂಗಾಳ ರಾಜ್ಯಪಾಲರನ್ನು ಕಿತ್ತು ಹಾಕಲು ಒಕ್ಕೂಟ ಸರ್ಕಾರಕ್ಕೆ ಪತ್ರ ಬರೆದ ಮಮತಾ ಬ್ಯಾನರ್ಜಿ

ವಿರೋಧ ಪಕ್ಷ ನಾಯಕ, ಬಿಜೆಪಿಯ ಸುವೇಂಧು ಅಧಿಕಾರಿಯು ಈ ನಿರ್ಣಯವು ರಾಜ್ಯದಲ್ಲಿ ಆರ್ಥಿಕವಾಗಿ ಸೂಕ್ತವಲ್ಲ ಎಂದು ವಿರೋಧಿಸಿದ್ದಾರೆ. ಜೊತೆಗೆ ಈ ವಿಧಾನ ಪರಿಷತ್ ರಚಿಸುವ ನಿರ್ಣಯದಿಂದ ವಿಧಾನಸಭಾ ಚುನಾವಣೆಯಲ್ಲಿ ಸೋತ ಟಿಎಂಸಿ ಅಭ್ಯರ್ಥಿಗಳಿಗೆ, ಮುಖಂಡರಿಗೆ ಅವಕಾಶ ಕಲ್ಪಿಸುವ ಟಿಯಂಸಿಯ ತಂತ್ರವಾಗಿದೆ ಎಂದು ಆರೋಪಿಸಿದ್ದಾರೆ.

“ದೇಶದ 23 ರಾಜ್ಯಗಳಲ್ಲಿ ವಿಧಾನ ಪರಿಷತ್ ಇಲ್ಲ. ರಾಜ್ಯಗಳ ಆಡಳಿತಕ್ಕೆ ಇದು ಒಳ್ಳೆಯದಲ್ಲ. ಟಿಎಂಸಿಯು ಚುನಾವಣೆಯಲ್ಲಿ ಮುಖ್ಯಮಂತ್ರಿ ಸೇರಿದಂತೆ 7 ರಿಂದ 8 ಮಂತ್ರಿಗಳನ್ನು ಕಳೆದುಕೊಂಡಿದೆ. ಅವರನ್ನು ವಿಧಾನ ಪರಿಷತ್ ಮೂಲಕ ರಾಜಕೀಯಕ್ಕೆ ಹಿಂಬಾಗಿಲಿನ ಪ್ರವೇಶ ನೀಡಲು ಟಿಎಂಸಿ ಪ್ರಯತ್ನಿಸುತ್ತಿದೆ” ಎಂದು ಸುವೇಂಧು ಅಧಿಕಾರಿ ಆರೋಪಿಸಿದ್ದಾರೆ. “ಸಂಸತ್ತಿನಲ್ಲಿ ಬಿಜೆಪಿಗೆ ಬಹುಮತವಿದೆ. ಈ ನಿರ್ಣಯವನ್ನು ವಿರೋಧಿಸುವುದು ನಮ್ಮ ನಿರ್ಧಾರ” ಎಂದು ಹೇಳಿದ್ದಾರೆ.

ಇನ್ನು, ಪಶ್ಚಿಮ ಬಂಗಾಳ ವಿಧಾನಸಭೆ ನಿರ್ಣಯವನ್ನು ಅಂಗೀಕರಿಸಿದರೂ, ಪರಿಷತ್ ಸ್ಥಾಪಿಸುವ ಸಲುವಾಗಿ, ಸಂಸತ್ತಿನಲ್ಲಿ ಮಸೂದೆಯನ್ನು ಅಂಗೀಕರಿಸಬೇಕಾಗುತ್ತದೆ. ಈ ವಿಷಯದಲ್ಲಿ ಬಿಜೆಪಿ ನೇತೃತ್ವದ ಒಕ್ಕೂಟ ಸರ್ಕಾರದ ಪಾತ್ರ ನಿರ್ಣಾಯಕವಾಗಲಿದೆ.

ಇದನ್ನೂ ಓದಿ: ನಿಯಂತ್ರಿಸಲು ಸಾಧ್ಯವಾಗದ ಎಲ್ಲವನ್ನೂ ಮೋದಿ ಸರ್ಕಾರ ಧ್ವಂಸ ಮಾಡುತ್ತಿದೆ: ಮಮತಾ ಬ್ಯಾನರ್ಜಿ

ಗಮನಾರ್ಹವಾಗಿ, ಈ ಮೊದಲು ಪಶ್ಚಿಮ ಬಂಗಾಳದಲ್ಲಿ 1952 ರಲ್ಲಿ ಮೇಲ್ಮನೆ ಅಸ್ತಿತ್ವಕ್ಕೆ ಬಂದಿತ್ತು. ಆದರೆ, ರಾಜ್ಯ ವಿಧಾನಸಭೆಯಲ್ಲಿ ವಿಧಾನ ಪರಿಷತ್ ರದ್ದುಗೊಳಿಸುವ ನಿರ್ಣಯವನ್ನು ಮಾರ್ಚ್ 21, 1969 ರಂದು ಅಂಗೀಕರಿಸಲಾಗಿತ್ತು.

ಪ್ರಸ್ತುತ  ಆಂಧ್ರ ಪ್ರದೇಶ, ಬಿಹಾರ, ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ ಮತ್ತು ಉತ್ತರ ಪ್ರದೇಶ  ಸೇರಿ ದೇಶದ ಒಟ್ಟು ಆರು ರಾಜ್ಯಗಳಲ್ಲಿ ಮಾತ್ರ ವಿಧಾನ ಪರಿಷತ್ ಇದೆ. ಉಳಿದ ಕಡೆ ಜನರಿಂದ ನೇರವಾಗಿ ಆಯ್ಕೆಯಾದರೆ ಮಾತ್ರ ಶಾಸಕಾಂಗದಲ್ಲಿ ಸ್ಥಾನ ಪಡೆಯಬಹುದಾಗಿದೆ.

ಚುನಾವಣಾ ಆಯೋಗ ಕೊರೊನಾ ಹೆಸರಲ್ಲಿ ಯಾವುದೆ ಉಪಚುನಾವಣೆ ನಡೆಸಲು ಮುಂದೆ ಬರುತ್ತಿಲ್ಲ. ಹಾಗಾಗಿ ಮಮತಾ ಬ್ಯಾನರ್ಜಿ ಆರು ತಿಂಗಳೊಳಗೆ ಶಾಸಕಿಯಾಗದಿದ್ದಲ್ಲಿ ಉತ್ತರಾಖಂಡದ ಮಾದರಿಯಲ್ಲಿ ರಾಜೀನಾಮೆ ನೀಡಬೇಕು ಎಂಬುದು ಬಿಜೆಪಿ ಒತ್ತಾಯ. ಆ ಮೂಲಕ ಅವರಿಗೆ ಮುಖಭಂಗ ಮಾಡಲು ಬಿಜೆಪಿ ಉತ್ತರಾಖಂಡದಲ್ಲಿ ತಿರತ್ ಸಿಂಗ್‌ ರಾವತ್‌ರನ್ನು ಕೆಳಗಿಳಿಸಿದೆ ಎಂಬ ವದಂತಿಗಳು ಹರಿದಾಡುತ್ತಿವೆ. ಆದರೆ ಬಿಜೆಪಿಗೆ ತಿರುಗೇಟು ನೀಡಲು ಮುಂದಾಗಿರುವ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸರ್ಕಾರ ವಿಧಾನ ಪರಿಷತ್ ರಚನೆಗೆ ಮುಂದಾಗಿದೆ.


ಇದನ್ನೂ ಓದಿ: Explainer: ಬಿಜೆಪಿಯು ಉತ್ತರಾಖಂಡ ಸಿಎಂ ಬದಲಿಸಿದ್ದು ಮಮತಾ ಬ್ಯಾನರ್ಜಿಯನ್ನು ಕೆಳಗಿಳಿಸಲೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...