Homeಮುಖಪುಟಪಶ್ಚಿಮ ಬಂಗಾಳವನ್ನು 'ಬಾಂಗ್ಲಾ' ಎಂದು ಮರುನಾಮಕರಣ ಮಾಡಲು ಒತ್ತಾಯಿಸಿದ ಟಿಎಂಸಿ

ಪಶ್ಚಿಮ ಬಂಗಾಳವನ್ನು ‘ಬಾಂಗ್ಲಾ’ ಎಂದು ಮರುನಾಮಕರಣ ಮಾಡಲು ಒತ್ತಾಯಿಸಿದ ಟಿಎಂಸಿ

- Advertisement -
- Advertisement -

ರಾಜ್ಯದ ಆಡಳಿತರೂಢ ಪಕ್ಷವಾದ ತೃಣಮೂಲ ಕಾಂಗ್ರೆಸ್ ಪಶ್ಚಿಮ ಬಂಗಾಳವನ್ನು ‘ಬಾಂಗ್ಲಾ’ ಎಂದು ಮರುನಾಮಕರಣ ಮಾಡಬೇಕೆಂದು ಮಂಗಳವಾರ ಒತ್ತಾಯಿಸಿದೆ. ಈ ಹೆಸರು ರಾಜ್ಯದ ಇತಿಹಾಸ ಮತ್ತು ಸಂಸ್ಕೃತಿಯ ಪ್ರತಿಬಿಂಬಿಸುತ್ತದೆ ಎಂದು ಪಕ್ಷವೂ ಪ್ರತಿಪಾದಿಸಿದೆ.

ರಾಜ್ಯಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ಪಕ್ಷದ ಸಂಸದೆ ರಿತಬ್ರತ ಬ್ಯಾನರ್ಜಿ, ಪಶ್ಚಿಮ ಬಂಗಾಳ ವಿಧಾನಸಭೆಯು ಜುಲೈ 2018 ರಲ್ಲಿ ರಾಜ್ಯವನ್ನು ಮರುನಾಮಕರಣ ಮಾಡುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿತು ಆದರೆ ಕೇಂದ್ರವು ಇನ್ನೂ ಅದಕ್ಕೆ ಒಪ್ಪಿಗೆ ನೀಡಿಲ್ಲ ಎಂದು ಹೇಳಿದ್ದಾರೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು “ಮರುನಾಮಕರಣವು ನಮ್ಮ ರಾಜ್ಯದ ಇತಿಹಾಸ, ಸಂಸ್ಕೃತಿ ಮತ್ತು ಅಸ್ಮಿತೆಗೆ ಅನುಗುಣವಾಗಿರುತ್ತದೆ ಮತ್ತು ನಮ್ಮ ಜನರ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

1947 ರ ವಿಭಜನೆಯು ಬಂಗಾಳವನ್ನು ವಿಭಜಿಸಲಾಗಿತ್ತು. ಈ ವೇಳೆ ಭಾರತದ ಭಾಗವನ್ನು ಪಶ್ಚಿಮ ಬಂಗಾಳ ಎಂದು ಕರೆಯಲಾಯಿತು ಮತ್ತು ಇನ್ನೊಂದು ಭಾಗವನ್ನು ಪೂರ್ವ ಪಾಕಿಸ್ತಾನ ಎಂದು ಹೆಸರಿಸಲಾಯಿತು. 1971 ರಲ್ಲಿ, ಪೂರ್ವ ಪಾಕಿಸ್ತಾನ ಸ್ವಾತಂತ್ರ್ಯ ಘೋಷಿಸಿತು ಮತ್ತು ಬಾಂಗ್ಲಾದೇಶ ಎಂಬ ಹೊಸ ರಾಷ್ಟ್ರ ರಚನೆಯಾಯಿತು.

“ಇಂದು, ಪೂರ್ವ ಪಾಕಿಸ್ತಾನವಿಲ್ಲ, ನಮ್ಮ ರಾಜ್ಯದ ಹೆಸರನ್ನು ಬದಲಾಯಿಸಬೇಕಾಗಿದೆ. ಪಶ್ಚಿಮ ಬಂಗಾಳದ ಜನರ ಆದೇಶವನ್ನು ಗೌರವಿಸಬೇಕಾಗಿದೆ.” ಎಂದು ಅವರು ಹೇಳಿದ್ದಾರೆ. ದೇಶದ ರಾಜ್ಯವೊಂದರ ಹೆಸರನ್ನು ಕೊನೆಯದಾಗಿ 2011 ರಲ್ಲಿ ಬದಲಾಯಿಸಲಾಯಿತು, ಆಗ ಒರಿಸ್ಸಾವನ್ನು ಒಡಿಶಾ ಎಂದು ಮರುನಾಮಕರಣ ಮಾಡಲಾಗಿತ್ತು.

ಕಳೆದ ಹಲವು ವರ್ಷಗಳಲ್ಲಿ ಅನೇಕ ನಗರಗಳು ಹೆಸರು ಬದಲಾವಣೆಗಳನ್ನು ಕಂಡಿವೆ. ಇವುಗಳಲ್ಲಿ 1995 ರಲ್ಲಿ ಬಾಂಬೆ, 1996 ರಲ್ಲಿ ಮದ್ರಾಸ್ ಅನ್ನು ಚೆನ್ನೈ, 2001 ರಲ್ಲಿ ಕಲ್ಕತ್ತಾವನ್ನು ಕೋಲ್ಕತ್ತಾ ಮತ್ತು 2014 ರಲ್ಲಿ ಬೆಂಗಳೂರು ನಗರದ ಹೆಸರನ್ನು ಬದಲಾಯಿಸಲಾಗಿತ್ತು.

ಈ ನಡುವೆ, ಬಿಜೆಡಿಯ ದೇಬಾಶಿಶ್ ಸಮಂತರಾಯ್ ಬಾಲಿ ಜಾತ್ರೆಯನ್ನು ರಾಷ್ಟ್ರೀಯ ಹಬ್ಬದ ಸ್ಥಾನಮಾನ ನೀಡಬೇಕು ಎಂದು ಕೋರಿದ್ದಾರೆ. ವ್ಯಾಪಾರ ಮತ್ತು ಸಂಸ್ಕೃತಿಯ ವಿಸ್ತರಣೆಗಾಗಿ ಪ್ರಾಚೀನ ಕಾಲದಲ್ಲಿ ರಾಜ್ಯದ ನಾವಿಕರು ಇಂಡೋನೇಷ್ಯಾದ ಬಾಲಿ, ಸುಮಾತ್ರಾ ಮತ್ತು ಜಾವಾ, ಬೋರ್ನಿಯೊ ಮತ್ತು ಶ್ರೀಲಂಕಾಕ್ಕೆ ಪ್ರಯಾಣ ಬೆಳೆಸಿದ ವರ್ಷದ ಸಮಯವನ್ನು ಗುರುತಿಸಲು ಪ್ರತಿ ವರ್ಷ ಮಹಾನದಿ ನದಿಯ ದಡದಲ್ಲಿ ಈ ಉತ್ಸವವನ್ನು ನಡೆಸಲಾಗುತ್ತದೆ.

ಟಿಎಂಸಿಯ ಸಾಕೇತ್ ಗೋಖಲೆ ರಾಜ್ಯಸಭೆಯಲ್ಲಿ ಮಾತನಾಡಿ, ಪೆಟ್ರೋಲ್‌ನ ಅಗ್ಗದ ಎಥೆನಾಲ್‌ನ ಪ್ರಯೋಜನವನ್ನು ಗ್ರಾಹಕರಿಗೆ ರವಾನಿಸಬೇಕೆಂದು ಒತ್ತಾಯಿಸಿದ್ದಾರೆ. ಪಕ್ಷದ ಮತ್ತೊಬ್ಬ ಸಂಸದೆ ಸುಷ್ಮಿತಾ ದೇವ್ ಅವರು ಅಸ್ಸಾಂನ ಬರಾಕ್ ನದಿಯನ್ನು ಹೂಳೆತ್ತಬೇಕು ಮತ್ತು ಸರಕುಗಳ ಸಾಗಣೆಗೆ ಜಲಮಾರ್ಗವನ್ನು ಬಳಸಬೇಕೆಂದು ಹೇಳಿದ್ದಾರೆ.

ರೈಲ್ವೆ ಮಾರ್ಗದ ಅಂಡರ್‌ಪಾಸ್‌ಗಳ ಪ್ರವಾಹದ ಸಮಸ್ಯೆಯನ್ನು ಪರಿಹರಿಸಲು ಅಂತರ್ಜಲ ಮರುಪೂರಣದಂತಹ ಜಲ ಸಂರಕ್ಷಣಾ ವಿಧಾನಗಳನ್ನು ಬಳಸಬೇಕೆಂದು ಬಿಜೆಪಿಯ ಕವಿತಾ ಪತಿದಾರ್ ಒತ್ತಾಯಿಸಿದ್ದಾರೆ. ನಾಮನಿರ್ದೇಶಿತ ಸಂಸದೆ ಪಿ.ಟಿ. ಉಷಾ ಕೇರಳದ ಕೋಯಿಕ್ಕೋಡ್ ಜಿಲ್ಲೆಯ ಕಿನಲೂರಿನಲ್ಲಿ ಏಮ್ಸ್ ಸ್ಥಾಪಿಸಲು ಒತ್ತಾಯಿಸಿದ್ದಾರೆ.

ಹವಾಮಾನ ಬದಲಾವಣೆಯು ಕೃಷಿಯ ಮೇಲೆ ಬೀರುವ ಪರಿಣಾಮದ ವಿಷಯವನ್ನು ಎತ್ತಿದೆ ಬಿಜೆಪಿಯ ಎಸ್. ಸೆಲ್ವಗಣಬತಿ ಅನಿಯಮಿತ ಹವಾಮಾನ ಮಾದರಿಗಳು ಬೆಳೆ ಇಳುವರಿಯ ಮೇಲೆ ಪರಿಣಾಮ ಬೀರಿವೆ, ಇದು ರೈತರಿಗೆ ಹೆಚ್ಚಿನ ನಷ್ಟವನ್ನುಂಟುಮಾಡಿವೆ ಎಂದು ಹೇಳಿದ್ದಾರೆ. ಹವಾಮಾನ ವೈಪರೀತ್ಯಗಳನ್ನು ತಡೆದುಕೊಳ್ಳುವ ಹೊಸ ವಿಧದ ಬೀಜಗಳನ್ನು ಪರೀಕ್ಷಿಸಬೇಕೆಂದು ಅವರು ಹೇಳಿದ್ದಾರೆ.

ಇದನ್ನೂಓದಿ:  ತೆರಿಗೆದಾರರ ಸೇವೆ ಗೌರವಿಸಿ ಆದಾಯ ತೆರಿಗೆ ವಿನಾಯಿತಿ ನೀಡಲಾಗಿದೆ – ನಿರ್ಮಲಾ ಸೀತಾರಾಮನ್

ತೆರಿಗೆದಾರರ ಸೇವೆ ಗೌರವಿಸಿ ಆದಾಯ ತೆರಿಗೆ ವಿನಾಯಿತಿ ನೀಡಲಾಗಿದೆ – ನಿರ್ಮಲಾ ಸೀತಾರಾಮನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...