Homeಮುಖಪುಟಪಶ್ಚಿಮ ಬಂಗಾಳ: ಬಿಜೆಪಿಗೆ ಸೇರಿದ ನಟನನ್ನು ನಾಟಕದಿಂದ ಹೊರ ಹಾಕಿದ ತಂಡ!

ಪಶ್ಚಿಮ ಬಂಗಾಳ: ಬಿಜೆಪಿಗೆ ಸೇರಿದ ನಟನನ್ನು ನಾಟಕದಿಂದ ಹೊರ ಹಾಕಿದ ತಂಡ!

"ನಾಟಕವು ಮೂಲಭೂತವಾಗಿ ಬಿಜೆಪಿಯ ಸಿದ್ಧಾಂತಕ್ಕೆ ವಿರುದ್ಧವಾಗಿದೆ ಮತ್ತು ಆ ಪಕ್ಷದೊಂದಿಗೆ ಸಂಬಂಧ ಹೊಂದಿರುವ ಯಾರಾದರೂ ಘುಮ್ ನೀಯ ಭಾಗವಾಗಲು ಸಾಧ್ಯವಿಲ್ಲ"

- Advertisement -
- Advertisement -

ಬಿಜೆಪಿಗೆ ಸೇರಿದ ಕಾರಣಕ್ಕೆ ನಾಟಕ ತಂಡದಿಂದ ಕಲಾವಿದರೊಬ್ಬರನ್ನು ಹೊರ ಹಾಕಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಸಾಮಾಜಿಕ-ಆರ್ಥಿಕ ವಿಷಯಗಳನಿಟ್ಟುಕೊಂಡು ನಾಟಕಗಳನ್ನು ನಿರ್ಮಾಣ ಮಾಡುವ ಪಶ್ಚಿಮ ಬಂಗಾಳದ ಒಂದು ನಾಟಕ ತಂಡ, ತಮ್ಮ ತಂಡದ ನಟ ಬಿಜೆಪಿಗೆ ಸೇರಿದ ಕಾರಣ ಅವರನ್ನು ನಾಟಕದಿಂದ ಕೈಬಿಟ್ಟಿದೆ.

ತಂಡದ ಮುಖ್ಯಸ್ಥ ಸೌರವ್ ಪಲೋಧಿ ಅವರು ತಮ್ಮ ಅಧಿಕೃತ ಫೇಸ್‌ಬುಕ್ ಖಾತೆಯಲ್ಲಿ, ಕಲಾವಿದ ಕೌಶಿಕ್ ಕಾರ್ ಅವರನ್ನು ನಾಟಕದಿಂದ ತೆಗೆದುಹಾಕಲಾಗಿದೆ ಎಂದು ಪೋಸ್ಟ್ ಮಾಡಿದ್ದರು. ಎಡ ಸಿದ್ಧಾಂತದ ಮೂಲಕ ದೇಶದ ಪ್ರಸ್ತುತ ರಾಜಕೀಯ ಪರಿಸ್ಥಿತಿಯ ಕುರಿತು ಉತ್ಪಾಲ್ ದತ್ ಅವರ ನಾಟಕದ ರೂಪಾಂತರ “ಘುಮ್ ನೀ” ನಾಟಕದಿಂದ ನಟನನ್ನು ತೆಗೆದು ಹಾಕಲಾಗಿದೆ.

ಗೋಮಾಂಸ ಇಟ್ಟುಕೊಂಡಿದ್ದ ಅನುಮಾನದ ಮೇಲೆ 2015 ರಲ್ಲಿ ಹಲ್ಲೆಗೊಳಗಾದ ವ್ಯಕ್ತಿಯ ಪಾತ್ರವನ್ನು ನಿರ್ವಹಿಸಲು, ಕಲಾವಿದ ಕೌಶಿಕ್ ಕಾರ್ ಅವರನ್ನು 2019 ರಲ್ಲಿ ಸೌರವ್ ಪಲೋಧಿಯವರ ನಾಟಕ ತಂಡ ಇಚೆಮೊಟೊ ಆಹ್ವಾನಿಸಿತ್ತು.

ಇದನ್ನೂ ಓದಿ: ಬಿಜೆಪಿಗೆ ಮತ ನೀಡದಂತೆ ಮದುವೆ ಮನೆಗಳಲ್ಲಿಯೂ ಅಭಿಯಾನ: #NoVoteToBJP ಟ್ವಿಟರ್ ಟ್ರೆಂಡ್

ಪಾಲೋಧಿ ಅವರು ಮೂರು ದಿನಗಳ ಹಿಂದೆ ಬಂಗಾಳಿಯಲ್ಲಿ ತಮ್ಮ ಫೇಸ್‌ಬುಕ್‌ನಲ್ಲಿ ಈ ಕುರಿತು ಪೋಸ್ಟ್ ಮಾಡಿದ್ದಾರೆ. “ನಾವು ಕೌಶಿಕ್ ಕಾರ್ ಅವರನ್ನು ‘ಘುಮ್ ನೇ’ಯಿಂದ ತಕ್ಷಣವೇ ತೆದುಹಾಕಿದ್ದೇವೆ. ಏಕೆಂದರೆ ಅವರು ಬಿಜೆಪಿಗೆ ಸೇರಿದ್ದಾರೆ. ಪ್ರಸ್ತುತ ಪರಿಸ್ಥಿತಿಯಲ್ಲಿ ಅವರನ್ನು ತೆಗೆದುಹಾಕಲು ಇದಕ್ಕಿಂತ ಮುಖ್ಯ ಕಾರಣ ಬೇಕಾಗಿಲ್ಲ. ಕಾರ್ಮಿಕ ವರ್ಗದ ನಾಟಕದಲ್ಲಿ ಕೋಮು ಅಂಶಗಳಿಗಾಗಿ ಯಾವುದೇ ಸ್ಥಳವಿಲ್ಲ” ಎಂದಿದ್ದಾರೆ.

ಥಿಯೇಟರ್ ಗುಂಪು ಶೀಘ್ರದಲ್ಲೇ ಮುಂದಿನ ಘುಮ್ ನೀ ನಾಟಕ ನಡೆಯುವ ದಿನಾಂಕವನ್ನು ಪ್ರಕಟಿಸಲಿದೆ.

“ಇದು ಕಲಾವಿದರ ಸ್ವಾತಂತ್ರ್ಯದ ಉದಾಹರಣೆಯೆ..? ಪ್ರಜಾಪ್ರಭುತ್ವ ಹಕ್ಕು ಎಲ್ಲಿದೆ? ಒಬ್ಬ ಕಲಾವಿದನನ್ನು ಅವನ ಎಡಪಂಥೀಯ ಅಥವಾ ಬಲಪಂಥೀಯ ಒಲವುಗಳಿಂದ ನಿರ್ಣಯಿಸಬಹುದೇ? ಯಾವ ರಾಜಕೀಯ ಪಕ್ಷಕ್ಕೆ ಅವನು ಅಥವಾ ಅವಳು ಸೇರಬೇಕು ಎಂಬುದು ಅವರ ಇಚ್ಛೆ. ಯಾರಿಗೂ ಹಸ್ತಕ್ಷೇಪ ಮಾಡುವ ಹಕ್ಕಿಲ್ಲ” ಎಂದು ಅರ್ಕಾ ರಾಯ್ ಅವರಂತಹ ಬಳಕೆದಾರರು ಸಾಮಾಜಿಕ ಮಾಧ್ಯಮದಲ್ಲಿ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಭಾರತ ಈಗ ಪ್ರಜಾಪ್ರಭುತ್ವ ರಾಷ್ಟ್ರವಲ್ಲ: ಸ್ವೀಡನ್ ವರದಿ ಉಲ್ಲೇಖಿಸಿದ ರಾಹುಲ್ ಗಾಂಧಿ

ಸಾಮಾಜಿಕ ಜಾಲತಾಣಗಳ ಪೋಸ್ಟ್‌ಗಳಿಗೆ ಪ್ರತಿಕ್ರಿಯೆ ನೀಡಿರುವ ಪಲೋಧಿ, “ನಾಟಕವು ಮೂಲಭೂತವಾಗಿ ಬಿಜೆಪಿಯ ಸಿದ್ಧಾಂತಕ್ಕೆ ವಿರುದ್ಧವಾಗಿದೆ ಮತ್ತು ಆ ಪಕ್ಷದೊಂದಿಗೆ ಸಂಬಂಧ ಹೊಂದಿರುವ ಯಾರಾದರೂ ಘುಮ್ ನೀಯ ಭಾಗವಾಗಲು ಸಾಧ್ಯವಿಲ್ಲ” ಎಂದು ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.

“ಕೌಶಿಕ್ ಕಾರ್ ಅವರ ಪ್ರಸ್ತುತ ರಾಜಕೀಯ ಗುರುತನ್ನು ತಿಳಿದಿದ್ದರೂ ಸಹ, ನಾಟಕ ನಿರ್ಮಾಣದೊಂದಿಗೆ ಒಳಗೊಳ್ಳುವುದು ನಾಟಕದ ಉತ್ಸಾಹ ಮತ್ತು ಕಾರ್ಮಿಕ ವರ್ಗಕ್ಕೆ ತೀವ್ರ ಅನ್ಯಾಯವಾಗಲಿದೆ” ಎಂದಿದ್ದಾರೆ.

ಘಟನೆ ಬಗ್ಗೆ ಮಾತನಾಡಿರುವ ಕಲಾವಿದ ಕೌಶಿಕ್ ಕಾರ್‌, “ಇದು ಎಡಪಂಥೀಯ ಫ್ಯಾಸಿಸಂ” ನ ಅಭಿವ್ಯಕ್ತಿ ಎಂದಿದ್ದಾರೆ. “ಆರಾಮ ಕುರ್ಚಿಯ ಗಣ್ಯರು ಮಾತ್ರ, ಕಮ್ಯುನಿಸಂ ಕುರಿತು ಉಪನ್ಯಾಸಗಳನ್ನು ನೀಡುತ್ತಾರೆ. ಜನಸಾಮಾನ್ಯರೊಂದಿಗೆ ಅವರಿಗೆ ಯಾವುದೇ ಸಂಬಂಧವಿಲ್ಲ ಮತ್ತು ಪ್ರಗತಿಪರ ಸಾಂಸ್ಕೃತಿಕ ಚಳವಳಿಯ ಇತಿಹಾಸದ ಬಗ್ಗೆ ಅಜ್ಞಾನಿಗಳು ಅಂತಹ ನಿರ್ಧಾರ ತೆಗೆದುಕೊಳ್ಳಬಹುದು. ಏಕಪಕ್ಷೀಯ ನಿರ್ಧಾರದಿಂದ ನಾನು ಆಘಾತಕ್ಕೊಳಗಾಗಿದ್ದೇನೆ” ಎಂದಿದ್ದಾರೆ.


ಇದನ್ನೂ ಓದಿ: ಸರ್ಕಾರದ ಭೂಮಿ ಉಳಿಸಿಕೊಳ್ಳಲಾಗದವರು ಅಧಿಕಾರದಲ್ಲಿದ್ದೇನು ಪ್ರಯೋಜನ?-ಎಚ್‌.ಡಿ.ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...