Homeಮುಖಪುಟಪಶ್ಚಿಮ ಬಂಗಾಳ: ಬಿಜೆಪಿಗೆ ಸೇರಿದ ನಟನನ್ನು ನಾಟಕದಿಂದ ಹೊರ ಹಾಕಿದ ತಂಡ!

ಪಶ್ಚಿಮ ಬಂಗಾಳ: ಬಿಜೆಪಿಗೆ ಸೇರಿದ ನಟನನ್ನು ನಾಟಕದಿಂದ ಹೊರ ಹಾಕಿದ ತಂಡ!

"ನಾಟಕವು ಮೂಲಭೂತವಾಗಿ ಬಿಜೆಪಿಯ ಸಿದ್ಧಾಂತಕ್ಕೆ ವಿರುದ್ಧವಾಗಿದೆ ಮತ್ತು ಆ ಪಕ್ಷದೊಂದಿಗೆ ಸಂಬಂಧ ಹೊಂದಿರುವ ಯಾರಾದರೂ ಘುಮ್ ನೀಯ ಭಾಗವಾಗಲು ಸಾಧ್ಯವಿಲ್ಲ"

- Advertisement -
- Advertisement -

ಬಿಜೆಪಿಗೆ ಸೇರಿದ ಕಾರಣಕ್ಕೆ ನಾಟಕ ತಂಡದಿಂದ ಕಲಾವಿದರೊಬ್ಬರನ್ನು ಹೊರ ಹಾಕಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಸಾಮಾಜಿಕ-ಆರ್ಥಿಕ ವಿಷಯಗಳನಿಟ್ಟುಕೊಂಡು ನಾಟಕಗಳನ್ನು ನಿರ್ಮಾಣ ಮಾಡುವ ಪಶ್ಚಿಮ ಬಂಗಾಳದ ಒಂದು ನಾಟಕ ತಂಡ, ತಮ್ಮ ತಂಡದ ನಟ ಬಿಜೆಪಿಗೆ ಸೇರಿದ ಕಾರಣ ಅವರನ್ನು ನಾಟಕದಿಂದ ಕೈಬಿಟ್ಟಿದೆ.

ತಂಡದ ಮುಖ್ಯಸ್ಥ ಸೌರವ್ ಪಲೋಧಿ ಅವರು ತಮ್ಮ ಅಧಿಕೃತ ಫೇಸ್‌ಬುಕ್ ಖಾತೆಯಲ್ಲಿ, ಕಲಾವಿದ ಕೌಶಿಕ್ ಕಾರ್ ಅವರನ್ನು ನಾಟಕದಿಂದ ತೆಗೆದುಹಾಕಲಾಗಿದೆ ಎಂದು ಪೋಸ್ಟ್ ಮಾಡಿದ್ದರು. ಎಡ ಸಿದ್ಧಾಂತದ ಮೂಲಕ ದೇಶದ ಪ್ರಸ್ತುತ ರಾಜಕೀಯ ಪರಿಸ್ಥಿತಿಯ ಕುರಿತು ಉತ್ಪಾಲ್ ದತ್ ಅವರ ನಾಟಕದ ರೂಪಾಂತರ “ಘುಮ್ ನೀ” ನಾಟಕದಿಂದ ನಟನನ್ನು ತೆಗೆದು ಹಾಕಲಾಗಿದೆ.

ಗೋಮಾಂಸ ಇಟ್ಟುಕೊಂಡಿದ್ದ ಅನುಮಾನದ ಮೇಲೆ 2015 ರಲ್ಲಿ ಹಲ್ಲೆಗೊಳಗಾದ ವ್ಯಕ್ತಿಯ ಪಾತ್ರವನ್ನು ನಿರ್ವಹಿಸಲು, ಕಲಾವಿದ ಕೌಶಿಕ್ ಕಾರ್ ಅವರನ್ನು 2019 ರಲ್ಲಿ ಸೌರವ್ ಪಲೋಧಿಯವರ ನಾಟಕ ತಂಡ ಇಚೆಮೊಟೊ ಆಹ್ವಾನಿಸಿತ್ತು.

ಇದನ್ನೂ ಓದಿ: ಬಿಜೆಪಿಗೆ ಮತ ನೀಡದಂತೆ ಮದುವೆ ಮನೆಗಳಲ್ಲಿಯೂ ಅಭಿಯಾನ: #NoVoteToBJP ಟ್ವಿಟರ್ ಟ್ರೆಂಡ್

ಪಾಲೋಧಿ ಅವರು ಮೂರು ದಿನಗಳ ಹಿಂದೆ ಬಂಗಾಳಿಯಲ್ಲಿ ತಮ್ಮ ಫೇಸ್‌ಬುಕ್‌ನಲ್ಲಿ ಈ ಕುರಿತು ಪೋಸ್ಟ್ ಮಾಡಿದ್ದಾರೆ. “ನಾವು ಕೌಶಿಕ್ ಕಾರ್ ಅವರನ್ನು ‘ಘುಮ್ ನೇ’ಯಿಂದ ತಕ್ಷಣವೇ ತೆದುಹಾಕಿದ್ದೇವೆ. ಏಕೆಂದರೆ ಅವರು ಬಿಜೆಪಿಗೆ ಸೇರಿದ್ದಾರೆ. ಪ್ರಸ್ತುತ ಪರಿಸ್ಥಿತಿಯಲ್ಲಿ ಅವರನ್ನು ತೆಗೆದುಹಾಕಲು ಇದಕ್ಕಿಂತ ಮುಖ್ಯ ಕಾರಣ ಬೇಕಾಗಿಲ್ಲ. ಕಾರ್ಮಿಕ ವರ್ಗದ ನಾಟಕದಲ್ಲಿ ಕೋಮು ಅಂಶಗಳಿಗಾಗಿ ಯಾವುದೇ ಸ್ಥಳವಿಲ್ಲ” ಎಂದಿದ್ದಾರೆ.

ಥಿಯೇಟರ್ ಗುಂಪು ಶೀಘ್ರದಲ್ಲೇ ಮುಂದಿನ ಘುಮ್ ನೀ ನಾಟಕ ನಡೆಯುವ ದಿನಾಂಕವನ್ನು ಪ್ರಕಟಿಸಲಿದೆ.

“ಇದು ಕಲಾವಿದರ ಸ್ವಾತಂತ್ರ್ಯದ ಉದಾಹರಣೆಯೆ..? ಪ್ರಜಾಪ್ರಭುತ್ವ ಹಕ್ಕು ಎಲ್ಲಿದೆ? ಒಬ್ಬ ಕಲಾವಿದನನ್ನು ಅವನ ಎಡಪಂಥೀಯ ಅಥವಾ ಬಲಪಂಥೀಯ ಒಲವುಗಳಿಂದ ನಿರ್ಣಯಿಸಬಹುದೇ? ಯಾವ ರಾಜಕೀಯ ಪಕ್ಷಕ್ಕೆ ಅವನು ಅಥವಾ ಅವಳು ಸೇರಬೇಕು ಎಂಬುದು ಅವರ ಇಚ್ಛೆ. ಯಾರಿಗೂ ಹಸ್ತಕ್ಷೇಪ ಮಾಡುವ ಹಕ್ಕಿಲ್ಲ” ಎಂದು ಅರ್ಕಾ ರಾಯ್ ಅವರಂತಹ ಬಳಕೆದಾರರು ಸಾಮಾಜಿಕ ಮಾಧ್ಯಮದಲ್ಲಿ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಭಾರತ ಈಗ ಪ್ರಜಾಪ್ರಭುತ್ವ ರಾಷ್ಟ್ರವಲ್ಲ: ಸ್ವೀಡನ್ ವರದಿ ಉಲ್ಲೇಖಿಸಿದ ರಾಹುಲ್ ಗಾಂಧಿ

ಸಾಮಾಜಿಕ ಜಾಲತಾಣಗಳ ಪೋಸ್ಟ್‌ಗಳಿಗೆ ಪ್ರತಿಕ್ರಿಯೆ ನೀಡಿರುವ ಪಲೋಧಿ, “ನಾಟಕವು ಮೂಲಭೂತವಾಗಿ ಬಿಜೆಪಿಯ ಸಿದ್ಧಾಂತಕ್ಕೆ ವಿರುದ್ಧವಾಗಿದೆ ಮತ್ತು ಆ ಪಕ್ಷದೊಂದಿಗೆ ಸಂಬಂಧ ಹೊಂದಿರುವ ಯಾರಾದರೂ ಘುಮ್ ನೀಯ ಭಾಗವಾಗಲು ಸಾಧ್ಯವಿಲ್ಲ” ಎಂದು ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.

“ಕೌಶಿಕ್ ಕಾರ್ ಅವರ ಪ್ರಸ್ತುತ ರಾಜಕೀಯ ಗುರುತನ್ನು ತಿಳಿದಿದ್ದರೂ ಸಹ, ನಾಟಕ ನಿರ್ಮಾಣದೊಂದಿಗೆ ಒಳಗೊಳ್ಳುವುದು ನಾಟಕದ ಉತ್ಸಾಹ ಮತ್ತು ಕಾರ್ಮಿಕ ವರ್ಗಕ್ಕೆ ತೀವ್ರ ಅನ್ಯಾಯವಾಗಲಿದೆ” ಎಂದಿದ್ದಾರೆ.

ಘಟನೆ ಬಗ್ಗೆ ಮಾತನಾಡಿರುವ ಕಲಾವಿದ ಕೌಶಿಕ್ ಕಾರ್‌, “ಇದು ಎಡಪಂಥೀಯ ಫ್ಯಾಸಿಸಂ” ನ ಅಭಿವ್ಯಕ್ತಿ ಎಂದಿದ್ದಾರೆ. “ಆರಾಮ ಕುರ್ಚಿಯ ಗಣ್ಯರು ಮಾತ್ರ, ಕಮ್ಯುನಿಸಂ ಕುರಿತು ಉಪನ್ಯಾಸಗಳನ್ನು ನೀಡುತ್ತಾರೆ. ಜನಸಾಮಾನ್ಯರೊಂದಿಗೆ ಅವರಿಗೆ ಯಾವುದೇ ಸಂಬಂಧವಿಲ್ಲ ಮತ್ತು ಪ್ರಗತಿಪರ ಸಾಂಸ್ಕೃತಿಕ ಚಳವಳಿಯ ಇತಿಹಾಸದ ಬಗ್ಗೆ ಅಜ್ಞಾನಿಗಳು ಅಂತಹ ನಿರ್ಧಾರ ತೆಗೆದುಕೊಳ್ಳಬಹುದು. ಏಕಪಕ್ಷೀಯ ನಿರ್ಧಾರದಿಂದ ನಾನು ಆಘಾತಕ್ಕೊಳಗಾಗಿದ್ದೇನೆ” ಎಂದಿದ್ದಾರೆ.


ಇದನ್ನೂ ಓದಿ: ಸರ್ಕಾರದ ಭೂಮಿ ಉಳಿಸಿಕೊಳ್ಳಲಾಗದವರು ಅಧಿಕಾರದಲ್ಲಿದ್ದೇನು ಪ್ರಯೋಜನ?-ಎಚ್‌.ಡಿ.ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...