Homeಮುಖಪುಟಪಶ್ಚಿಮ ಬಂಗಾಳ: ಬಿಜೆಪಿಗೆ ಸೇರಿದ ನಟನನ್ನು ನಾಟಕದಿಂದ ಹೊರ ಹಾಕಿದ ತಂಡ!

ಪಶ್ಚಿಮ ಬಂಗಾಳ: ಬಿಜೆಪಿಗೆ ಸೇರಿದ ನಟನನ್ನು ನಾಟಕದಿಂದ ಹೊರ ಹಾಕಿದ ತಂಡ!

"ನಾಟಕವು ಮೂಲಭೂತವಾಗಿ ಬಿಜೆಪಿಯ ಸಿದ್ಧಾಂತಕ್ಕೆ ವಿರುದ್ಧವಾಗಿದೆ ಮತ್ತು ಆ ಪಕ್ಷದೊಂದಿಗೆ ಸಂಬಂಧ ಹೊಂದಿರುವ ಯಾರಾದರೂ ಘುಮ್ ನೀಯ ಭಾಗವಾಗಲು ಸಾಧ್ಯವಿಲ್ಲ"

- Advertisement -
- Advertisement -

ಬಿಜೆಪಿಗೆ ಸೇರಿದ ಕಾರಣಕ್ಕೆ ನಾಟಕ ತಂಡದಿಂದ ಕಲಾವಿದರೊಬ್ಬರನ್ನು ಹೊರ ಹಾಕಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಸಾಮಾಜಿಕ-ಆರ್ಥಿಕ ವಿಷಯಗಳನಿಟ್ಟುಕೊಂಡು ನಾಟಕಗಳನ್ನು ನಿರ್ಮಾಣ ಮಾಡುವ ಪಶ್ಚಿಮ ಬಂಗಾಳದ ಒಂದು ನಾಟಕ ತಂಡ, ತಮ್ಮ ತಂಡದ ನಟ ಬಿಜೆಪಿಗೆ ಸೇರಿದ ಕಾರಣ ಅವರನ್ನು ನಾಟಕದಿಂದ ಕೈಬಿಟ್ಟಿದೆ.

ತಂಡದ ಮುಖ್ಯಸ್ಥ ಸೌರವ್ ಪಲೋಧಿ ಅವರು ತಮ್ಮ ಅಧಿಕೃತ ಫೇಸ್‌ಬುಕ್ ಖಾತೆಯಲ್ಲಿ, ಕಲಾವಿದ ಕೌಶಿಕ್ ಕಾರ್ ಅವರನ್ನು ನಾಟಕದಿಂದ ತೆಗೆದುಹಾಕಲಾಗಿದೆ ಎಂದು ಪೋಸ್ಟ್ ಮಾಡಿದ್ದರು. ಎಡ ಸಿದ್ಧಾಂತದ ಮೂಲಕ ದೇಶದ ಪ್ರಸ್ತುತ ರಾಜಕೀಯ ಪರಿಸ್ಥಿತಿಯ ಕುರಿತು ಉತ್ಪಾಲ್ ದತ್ ಅವರ ನಾಟಕದ ರೂಪಾಂತರ “ಘುಮ್ ನೀ” ನಾಟಕದಿಂದ ನಟನನ್ನು ತೆಗೆದು ಹಾಕಲಾಗಿದೆ.

ಗೋಮಾಂಸ ಇಟ್ಟುಕೊಂಡಿದ್ದ ಅನುಮಾನದ ಮೇಲೆ 2015 ರಲ್ಲಿ ಹಲ್ಲೆಗೊಳಗಾದ ವ್ಯಕ್ತಿಯ ಪಾತ್ರವನ್ನು ನಿರ್ವಹಿಸಲು, ಕಲಾವಿದ ಕೌಶಿಕ್ ಕಾರ್ ಅವರನ್ನು 2019 ರಲ್ಲಿ ಸೌರವ್ ಪಲೋಧಿಯವರ ನಾಟಕ ತಂಡ ಇಚೆಮೊಟೊ ಆಹ್ವಾನಿಸಿತ್ತು.

ಇದನ್ನೂ ಓದಿ: ಬಿಜೆಪಿಗೆ ಮತ ನೀಡದಂತೆ ಮದುವೆ ಮನೆಗಳಲ್ಲಿಯೂ ಅಭಿಯಾನ: #NoVoteToBJP ಟ್ವಿಟರ್ ಟ್ರೆಂಡ್

ಪಾಲೋಧಿ ಅವರು ಮೂರು ದಿನಗಳ ಹಿಂದೆ ಬಂಗಾಳಿಯಲ್ಲಿ ತಮ್ಮ ಫೇಸ್‌ಬುಕ್‌ನಲ್ಲಿ ಈ ಕುರಿತು ಪೋಸ್ಟ್ ಮಾಡಿದ್ದಾರೆ. “ನಾವು ಕೌಶಿಕ್ ಕಾರ್ ಅವರನ್ನು ‘ಘುಮ್ ನೇ’ಯಿಂದ ತಕ್ಷಣವೇ ತೆದುಹಾಕಿದ್ದೇವೆ. ಏಕೆಂದರೆ ಅವರು ಬಿಜೆಪಿಗೆ ಸೇರಿದ್ದಾರೆ. ಪ್ರಸ್ತುತ ಪರಿಸ್ಥಿತಿಯಲ್ಲಿ ಅವರನ್ನು ತೆಗೆದುಹಾಕಲು ಇದಕ್ಕಿಂತ ಮುಖ್ಯ ಕಾರಣ ಬೇಕಾಗಿಲ್ಲ. ಕಾರ್ಮಿಕ ವರ್ಗದ ನಾಟಕದಲ್ಲಿ ಕೋಮು ಅಂಶಗಳಿಗಾಗಿ ಯಾವುದೇ ಸ್ಥಳವಿಲ್ಲ” ಎಂದಿದ್ದಾರೆ.

ಥಿಯೇಟರ್ ಗುಂಪು ಶೀಘ್ರದಲ್ಲೇ ಮುಂದಿನ ಘುಮ್ ನೀ ನಾಟಕ ನಡೆಯುವ ದಿನಾಂಕವನ್ನು ಪ್ರಕಟಿಸಲಿದೆ.

“ಇದು ಕಲಾವಿದರ ಸ್ವಾತಂತ್ರ್ಯದ ಉದಾಹರಣೆಯೆ..? ಪ್ರಜಾಪ್ರಭುತ್ವ ಹಕ್ಕು ಎಲ್ಲಿದೆ? ಒಬ್ಬ ಕಲಾವಿದನನ್ನು ಅವನ ಎಡಪಂಥೀಯ ಅಥವಾ ಬಲಪಂಥೀಯ ಒಲವುಗಳಿಂದ ನಿರ್ಣಯಿಸಬಹುದೇ? ಯಾವ ರಾಜಕೀಯ ಪಕ್ಷಕ್ಕೆ ಅವನು ಅಥವಾ ಅವಳು ಸೇರಬೇಕು ಎಂಬುದು ಅವರ ಇಚ್ಛೆ. ಯಾರಿಗೂ ಹಸ್ತಕ್ಷೇಪ ಮಾಡುವ ಹಕ್ಕಿಲ್ಲ” ಎಂದು ಅರ್ಕಾ ರಾಯ್ ಅವರಂತಹ ಬಳಕೆದಾರರು ಸಾಮಾಜಿಕ ಮಾಧ್ಯಮದಲ್ಲಿ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಭಾರತ ಈಗ ಪ್ರಜಾಪ್ರಭುತ್ವ ರಾಷ್ಟ್ರವಲ್ಲ: ಸ್ವೀಡನ್ ವರದಿ ಉಲ್ಲೇಖಿಸಿದ ರಾಹುಲ್ ಗಾಂಧಿ

ಸಾಮಾಜಿಕ ಜಾಲತಾಣಗಳ ಪೋಸ್ಟ್‌ಗಳಿಗೆ ಪ್ರತಿಕ್ರಿಯೆ ನೀಡಿರುವ ಪಲೋಧಿ, “ನಾಟಕವು ಮೂಲಭೂತವಾಗಿ ಬಿಜೆಪಿಯ ಸಿದ್ಧಾಂತಕ್ಕೆ ವಿರುದ್ಧವಾಗಿದೆ ಮತ್ತು ಆ ಪಕ್ಷದೊಂದಿಗೆ ಸಂಬಂಧ ಹೊಂದಿರುವ ಯಾರಾದರೂ ಘುಮ್ ನೀಯ ಭಾಗವಾಗಲು ಸಾಧ್ಯವಿಲ್ಲ” ಎಂದು ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.

“ಕೌಶಿಕ್ ಕಾರ್ ಅವರ ಪ್ರಸ್ತುತ ರಾಜಕೀಯ ಗುರುತನ್ನು ತಿಳಿದಿದ್ದರೂ ಸಹ, ನಾಟಕ ನಿರ್ಮಾಣದೊಂದಿಗೆ ಒಳಗೊಳ್ಳುವುದು ನಾಟಕದ ಉತ್ಸಾಹ ಮತ್ತು ಕಾರ್ಮಿಕ ವರ್ಗಕ್ಕೆ ತೀವ್ರ ಅನ್ಯಾಯವಾಗಲಿದೆ” ಎಂದಿದ್ದಾರೆ.

ಘಟನೆ ಬಗ್ಗೆ ಮಾತನಾಡಿರುವ ಕಲಾವಿದ ಕೌಶಿಕ್ ಕಾರ್‌, “ಇದು ಎಡಪಂಥೀಯ ಫ್ಯಾಸಿಸಂ” ನ ಅಭಿವ್ಯಕ್ತಿ ಎಂದಿದ್ದಾರೆ. “ಆರಾಮ ಕುರ್ಚಿಯ ಗಣ್ಯರು ಮಾತ್ರ, ಕಮ್ಯುನಿಸಂ ಕುರಿತು ಉಪನ್ಯಾಸಗಳನ್ನು ನೀಡುತ್ತಾರೆ. ಜನಸಾಮಾನ್ಯರೊಂದಿಗೆ ಅವರಿಗೆ ಯಾವುದೇ ಸಂಬಂಧವಿಲ್ಲ ಮತ್ತು ಪ್ರಗತಿಪರ ಸಾಂಸ್ಕೃತಿಕ ಚಳವಳಿಯ ಇತಿಹಾಸದ ಬಗ್ಗೆ ಅಜ್ಞಾನಿಗಳು ಅಂತಹ ನಿರ್ಧಾರ ತೆಗೆದುಕೊಳ್ಳಬಹುದು. ಏಕಪಕ್ಷೀಯ ನಿರ್ಧಾರದಿಂದ ನಾನು ಆಘಾತಕ್ಕೊಳಗಾಗಿದ್ದೇನೆ” ಎಂದಿದ್ದಾರೆ.


ಇದನ್ನೂ ಓದಿ: ಸರ್ಕಾರದ ಭೂಮಿ ಉಳಿಸಿಕೊಳ್ಳಲಾಗದವರು ಅಧಿಕಾರದಲ್ಲಿದ್ದೇನು ಪ್ರಯೋಜನ?-ಎಚ್‌.ಡಿ.ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...