Homeಮುಖಪುಟಪ.ಬಂಗಾಳ: ಬಿಜೆಪಿ ಮೈತ್ರಿ ತೊರೆದು TMC ಸೇರುವುದಾಗಿ ಘೋಷಿಸಿದ ಬಿಮಲ್ ಗುರುಂಗ್!

ಪ.ಬಂಗಾಳ: ಬಿಜೆಪಿ ಮೈತ್ರಿ ತೊರೆದು TMC ಸೇರುವುದಾಗಿ ಘೋಷಿಸಿದ ಬಿಮಲ್ ಗುರುಂಗ್!

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಆಘಾತ ಉಂಟಾಗಿದ್ದು, ಗೂರ್ಖಾ ಜನಮುಕ್ತಿ ಮೋರ್ಚಾ (GJM) ನಾಯಕ ಬಿಮಲ್ ಗುರುಂಗ್ ಬುಧವಾರ ಎನ್‌ಡಿಎ ಮೈತ್ರಿಯನ್ನು ತೊರೆದು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಜೊತೆ ಮೈತ್ರಿ ಮಾಡಿಕೊಳ್ಳಲು ನಿರ್ಧರಿಸಿರುವುದಾಗಿ ಘೋಷಿಸಿದ್ದಾರೆ.

ಗೂರ್ಖಾಲ್ಯಾಂಡ್ ವಿಷಯದಲ್ಲಿ ಬಿಜೆಪಿ ತನ್ನ ಬದ್ಧತೆಯನ್ನು ಉಳಿಸಿಕೊಂಡಿಲ್ಲ ಎಂದು ಆರೋಪಿಸಿದ ಗುರುಂಗ್, 2021 ರ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವು TMC ಯನ್ನು ಪೂರ್ಣ ಪ್ರಮಾಣದಲ್ಲಿ ಬೆಂಬಲಿಸುತ್ತದೆ ಎಂದು ಹೇಳಿದ್ದಾರೆ.

ಆದಾಗ್ಯೂ, 2024 ರಲ್ಲಿ ನಡೆಯಲಿರುವ ಮುಂದಿನ ಲೋಕಸಭಾ ಚುನಾವಣೆಗೆ GJM ನ ನಿಲುವನ್ನು ಗುರುಂಗ್ ಸ್ಪಷ್ಟಪಡಿಸಲಿಲ್ಲ. “ನಮ್ಮ ಗೂರ್ಖಾಲ್ಯಾಂಡ್ ಬೇಡಿಕೆಯ ಪರವಾಗಿ ಮಾತನಾಡುವವರನ್ನು ನಾವು ಬೆಂಬಲಿಸುತ್ತೇವೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ವಾಯುಮಾಲಿನ್ಯ: ಕಳೆದ ವರ್ಷ ಭಾರತದಲ್ಲಿ 1.16 ಲಕ್ಷ ನವಜಾತ ಶಿಶುಗಳು ಮರಣ!

ಕಳೆದ 3 ವರ್ಷಗಳಿಂದ ಕಣ್ಮರೆಯಾಗಿದ್ದ ಗುರುಂಗ್ ಬುಧವಾರ ಕೋಲ್ಕತ್ತಾದಲ್ಲಿ ಕಾಣಿಸಿಕೊಂಡರು. ಒಂಬತ್ತು ವಿಧಾನಸಭಾ ಸ್ಥಾನಗಳಲ್ಲಿ GJM ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. 16 ವಿಧಾನಸಭಾ  ಕ್ಷೇತ್ರದಲ್ಲಿ ನಿರ್ಣಾಯಕ ಮತದಾರರಾಗಿದ್ದಾರೆ. GJM ನ ಗುರುಂಗ್ ಬಣದ ಬೆಂಬಲದೊಂದಿಗೆ, 2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಡಾರ್ಜಿಲಿಂಗ್ ಕ್ಷೇತ್ರವನ್ನು ಗೆದ್ದುಕೊಂಡಿತ್ತು.

ತಮ್ಮ ಪಕ್ಷ ಮತ್ತು ಬೆಂಬಲಿಗರು ರಾಜ್ಯದ ವಿಷಯದಲ್ಲಿ ಹಿಂದೆ ಸರಿಯುವುದಿಲ್ಲ ಎಂದು ಗುರುಂಗ್ ಸ್ಪಷ್ಟಪಡಿಸಿದ್ದು, “ಪ್ರಧಾನ ಮಂತ್ರಿಯಾಗಲಿ, ಗೃಹ ಸಚಿವರಾಗಲಿ ಅವರ ಬದ್ಧತೆಯನ್ನು ಉಳಿಸಿಕೊಂಡಿಲ್ಲ. ಆದರೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾತುಗಳನ್ನು ಉಳಿಸಿಕೊಂಡಿದ್ದೇವೆ. ಇದಕ್ಕಾಗಿಯೇ ನಾನು ಎನ್‌ಡಿಎಯನ್ನು ತೊರೆದು TMC ಯನ್ನು ಬೆಂಬಲಿಸಲು ನಿರ್ಧರಿಸಿದ್ದೇನೆ” ಎಂದು ಅವರು ಹೇಳಿದರು.

ಗುರುಂಗ್ ಅವರ ವಿರುದ್ಧ ದೇಶದ್ರೋಹ ಆರೋಪ ಸೇರಿದಂತೆ ಹಲವು ಪ್ರಕರಣಗಳಿವೆ ಎಂದು ಬಿಜೆಪಿಯ ರಾಜ್ಯ ಅಧ್ಯಕ್ಷ ದಿಲೀಪ್ ಘೋಷ್ ಹೇಳಿದ್ದಾರೆ. “ಬಿಜೆಪಿ ಶಾಂತಿಯನ್ನು ಬಯಸಿದೆ. ಗುರುಂಗ್ ಅವರ ಈ ನಡೆಯು ಈ ಪ್ರದೇಶದಲ್ಲಿ ಅಶಾಂತಿಯನ್ನು ಉಂಟುಮಾಡುವ ಮತ್ತೊಂದು ಪ್ರಯತ್ನವೆಂದು ತೋರುತ್ತದೆ” ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: ಮಧ್ಯಪ್ರದೇಶ: ‘ಐಟಂ’ ಹೇಳಿಕೆಗೆ ಕಮಲನಾಥ್ ವಿವರಣೆ ನೀಡಬೇಕು ಎಂದ ಚುನಾವಣಾ ಆಯೋಗ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...