Homeಮುಖಪುಟಪ.ಬಂಗಾಳ: ಬಿಜೆಪಿ ಮೈತ್ರಿ ತೊರೆದು TMC ಸೇರುವುದಾಗಿ ಘೋಷಿಸಿದ ಬಿಮಲ್ ಗುರುಂಗ್!

ಪ.ಬಂಗಾಳ: ಬಿಜೆಪಿ ಮೈತ್ರಿ ತೊರೆದು TMC ಸೇರುವುದಾಗಿ ಘೋಷಿಸಿದ ಬಿಮಲ್ ಗುರುಂಗ್!

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಆಘಾತ ಉಂಟಾಗಿದ್ದು, ಗೂರ್ಖಾ ಜನಮುಕ್ತಿ ಮೋರ್ಚಾ (GJM) ನಾಯಕ ಬಿಮಲ್ ಗುರುಂಗ್ ಬುಧವಾರ ಎನ್‌ಡಿಎ ಮೈತ್ರಿಯನ್ನು ತೊರೆದು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಜೊತೆ ಮೈತ್ರಿ ಮಾಡಿಕೊಳ್ಳಲು ನಿರ್ಧರಿಸಿರುವುದಾಗಿ ಘೋಷಿಸಿದ್ದಾರೆ.

ಗೂರ್ಖಾಲ್ಯಾಂಡ್ ವಿಷಯದಲ್ಲಿ ಬಿಜೆಪಿ ತನ್ನ ಬದ್ಧತೆಯನ್ನು ಉಳಿಸಿಕೊಂಡಿಲ್ಲ ಎಂದು ಆರೋಪಿಸಿದ ಗುರುಂಗ್, 2021 ರ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವು TMC ಯನ್ನು ಪೂರ್ಣ ಪ್ರಮಾಣದಲ್ಲಿ ಬೆಂಬಲಿಸುತ್ತದೆ ಎಂದು ಹೇಳಿದ್ದಾರೆ.

ಆದಾಗ್ಯೂ, 2024 ರಲ್ಲಿ ನಡೆಯಲಿರುವ ಮುಂದಿನ ಲೋಕಸಭಾ ಚುನಾವಣೆಗೆ GJM ನ ನಿಲುವನ್ನು ಗುರುಂಗ್ ಸ್ಪಷ್ಟಪಡಿಸಲಿಲ್ಲ. “ನಮ್ಮ ಗೂರ್ಖಾಲ್ಯಾಂಡ್ ಬೇಡಿಕೆಯ ಪರವಾಗಿ ಮಾತನಾಡುವವರನ್ನು ನಾವು ಬೆಂಬಲಿಸುತ್ತೇವೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ವಾಯುಮಾಲಿನ್ಯ: ಕಳೆದ ವರ್ಷ ಭಾರತದಲ್ಲಿ 1.16 ಲಕ್ಷ ನವಜಾತ ಶಿಶುಗಳು ಮರಣ!

ಕಳೆದ 3 ವರ್ಷಗಳಿಂದ ಕಣ್ಮರೆಯಾಗಿದ್ದ ಗುರುಂಗ್ ಬುಧವಾರ ಕೋಲ್ಕತ್ತಾದಲ್ಲಿ ಕಾಣಿಸಿಕೊಂಡರು. ಒಂಬತ್ತು ವಿಧಾನಸಭಾ ಸ್ಥಾನಗಳಲ್ಲಿ GJM ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. 16 ವಿಧಾನಸಭಾ  ಕ್ಷೇತ್ರದಲ್ಲಿ ನಿರ್ಣಾಯಕ ಮತದಾರರಾಗಿದ್ದಾರೆ. GJM ನ ಗುರುಂಗ್ ಬಣದ ಬೆಂಬಲದೊಂದಿಗೆ, 2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಡಾರ್ಜಿಲಿಂಗ್ ಕ್ಷೇತ್ರವನ್ನು ಗೆದ್ದುಕೊಂಡಿತ್ತು.

ತಮ್ಮ ಪಕ್ಷ ಮತ್ತು ಬೆಂಬಲಿಗರು ರಾಜ್ಯದ ವಿಷಯದಲ್ಲಿ ಹಿಂದೆ ಸರಿಯುವುದಿಲ್ಲ ಎಂದು ಗುರುಂಗ್ ಸ್ಪಷ್ಟಪಡಿಸಿದ್ದು, “ಪ್ರಧಾನ ಮಂತ್ರಿಯಾಗಲಿ, ಗೃಹ ಸಚಿವರಾಗಲಿ ಅವರ ಬದ್ಧತೆಯನ್ನು ಉಳಿಸಿಕೊಂಡಿಲ್ಲ. ಆದರೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾತುಗಳನ್ನು ಉಳಿಸಿಕೊಂಡಿದ್ದೇವೆ. ಇದಕ್ಕಾಗಿಯೇ ನಾನು ಎನ್‌ಡಿಎಯನ್ನು ತೊರೆದು TMC ಯನ್ನು ಬೆಂಬಲಿಸಲು ನಿರ್ಧರಿಸಿದ್ದೇನೆ” ಎಂದು ಅವರು ಹೇಳಿದರು.

ಗುರುಂಗ್ ಅವರ ವಿರುದ್ಧ ದೇಶದ್ರೋಹ ಆರೋಪ ಸೇರಿದಂತೆ ಹಲವು ಪ್ರಕರಣಗಳಿವೆ ಎಂದು ಬಿಜೆಪಿಯ ರಾಜ್ಯ ಅಧ್ಯಕ್ಷ ದಿಲೀಪ್ ಘೋಷ್ ಹೇಳಿದ್ದಾರೆ. “ಬಿಜೆಪಿ ಶಾಂತಿಯನ್ನು ಬಯಸಿದೆ. ಗುರುಂಗ್ ಅವರ ಈ ನಡೆಯು ಈ ಪ್ರದೇಶದಲ್ಲಿ ಅಶಾಂತಿಯನ್ನು ಉಂಟುಮಾಡುವ ಮತ್ತೊಂದು ಪ್ರಯತ್ನವೆಂದು ತೋರುತ್ತದೆ” ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: ಮಧ್ಯಪ್ರದೇಶ: ‘ಐಟಂ’ ಹೇಳಿಕೆಗೆ ಕಮಲನಾಥ್ ವಿವರಣೆ ನೀಡಬೇಕು ಎಂದ ಚುನಾವಣಾ ಆಯೋಗ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...