ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಟಿಎಂಸಿ ತೊರೆದು ಬಿಜೆಪಿ ಸೇರಿದ್ದ ಸದಸ್ಯರು ಮತ್ತೆ ವಾಪಸ್ ಆಗುತ್ತಿರುವುದು ನಡೆಯುತ್ತಲೇ ಇದೆ. ಮಂಗಳವಾರ ಮತ್ತೊಬ್ಬ ಬಿಜೆಪಿ ಶಾಸಕ ಟಿಎಂಸಿಗೆ ಸೇರ್ಪಡೆಯಾಗಿದ್ದಾರೆ.
ಉತ್ತರ 24 ಪರಗಣಗಳ ಬಾಗ್ದಾದ ಬಿಜೆಪಿ ಶಾಸಕ ಬಿಸ್ವಜಿತ್ ದಾಸ್ ಇಂದು ಬಿಜೆಪಿ ತೊರೆದು ಟಿಎಂಸಿ ಸೇರಿದ್ದಾರೆ. ಕೊಲ್ಕಾತ್ತಾದ ಪಕ್ಷದ ಕಚೇರಿಯಲ್ಲಿ ಪಕ್ಷದ ಧ್ವಜ ಹಿಡಿದಿದ್ದಾರೆ. ಇವರೊಂದಿಗೆ ಕೌನ್ಸಿಲರ್ ಮನೋತೋಶ್ ನಾಥ್ ಮತ್ತು ಸುಬ್ರತಾ ಪಾಲ್ ಎಂಬುವವರು ಟಿಎಂಸಿಗೆ ಸೇರಿಕೊಂಡಿದ್ದಾರೆ.
ಬಾಗ್ದಾದ ಶಾಸಕ ಬಿಸ್ವಜಿತ್ ದಾಸ್, ಪಶ್ಚಿಮ ಬಂಗಾಳ ಚುನಾವಣೆಗೆ ಮುನ್ನ ಬಿಜೆಪಿಗೆ ಪಕ್ಷಾಂತರಗೊಂಡಿದ್ದರು. ಈಗ ಮತ್ತೆ ಮಾತೃ ಪಕ್ಷವನ್ನು ಸೇರುವ ಮೂಲಕ ಚುನಾವಣೆಯ ನಂತರ ಟಿಎಂಸಿಗೆ ಮರಳಿದ ಮೂರನೇ ಶಾಸಕರಾಗಿದ್ದಾರೆ.
ಇದನ್ನೂ ಓದಿ: ಪಶ್ಚಿಮ ಬಂಗಾಳ: ಟಿಎಂಸಿ ಸೇರಿದ ಬಿಜೆಪಿ ಶಾಸಕ ತನ್ಮಯ್ ಘೋಷ್
Bengal witnessed a wave of growth & development under the leadership of @MamataOfficial.
Inspired by this phenomenal work, today @BJP4Bengal MLA from Bagda Shri Biswajit Das joined us in the presence of Shri @itspcofficial, Smt. @kakoligdastidar and Smt. Alo Rani Sarkar. (1/2) pic.twitter.com/pKbAVnSbV5
— All India Trinamool Congress (@AITCofficial) August 31, 2021
ಸೋಮವಾರ ವಿಷ್ಣುಪುರದ ಶಾಸಕ ತನ್ಮಯ್ ಘೋಷ್ ತೃಣಮೂಲ ಕಾಂಗ್ರೆಸ್ ಸೇರಿದ್ದಾರೆ. ಟಿಎಂಸಿ ಬಿಟ್ಟು ಬಿಜೆಪಿ ಸೇರಿದ ಆರು ತಿಂಗಳ ಒಳಗಾಗಿ ಮತ್ತೆ ಮಮತಾ ಬ್ಯಾನರ್ಜಿ ಪಕ್ಷಕ್ಕೆ ಮರಳಿದ್ದರು. ಈ ವೇಳೆ ಬಿಜೆಪಿ ಸೇಡು ತೀರಿಸಿಕೊಳ್ಳುವ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದ್ದರು.
“ನಾನು ಪಶ್ಚಿಮ ಬಂಗಾಳದ ಕಲ್ಯಾಣಕ್ಕಾಗಿ TMC ಗೆ ಸೇರಲು ಎಲ್ಲರನ್ನು ಕೋರುತ್ತೇನೆ. ಕೇಂದ್ರದ ಏಜೆನ್ಸಿಗಳನ್ನು ಬಳಸಿ ಪಶ್ಚಿಮ ಬಂಗಾಳದ ಜನರ ಹಕ್ಕುಗಳನ್ನು ಕಸಿದುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿರನ್ನು ಬೆಂಬಲಿಸುವಂತೆ ಕೇಳಿಕೊಳ್ಳುತ್ತೇನೆ” ಎಂದಿದ್ದರು.
ಬಿಜೆಪಿ ಶಾಸಕ ಮುಕುಲ್ ರಾಯ್ ಮೊದಲು ಟಿಎಂಸಿ ಸೇರುವ ಮೂಲಕ ಪಕ್ಷಾಂತರಕ್ಕೆ ನಾಂದಿ ಹಾಡಿದ್ದರು. ಈಗ ಮುಕುಲ್ ರಾಯ್, ತನ್ಮಯ್ ಘೋಷ್ ಮತ್ತು ಬಿಸ್ವಜಿತ್ ದಾಸ್ ಸೇರಿ ಮೂವರು ಹಾಲಿ ಶಾಸಕರು ಬಿಜೆಪಿ ಬಿಟ್ಟು ಟಿಎಂಸಿಗೆ ಸೇರಿದ್ದಾರೆ.
ಇನ್ನು ಅನೇಕ ಬಿಜೆಪಿ ನಾಯಕರು ಟಿಎಂಸಿಯೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ರಾಜ್ಯ ಶಿಕ್ಷಣ ಸಚಿವ ಬ್ರಾತ್ಯ ಬಸು ಹೇಳಿದ್ದಾರೆ.
ಇದನ್ನೂ ಓದಿ: ಕಾಂಗ್ರೆಸ್ಗೆ ಮಾಜಿ ಸಂಸದೆ ಸುಶ್ಮಿತಾ ದೇವ್ ರಾಜೀನಾಮೆ: ಟಿಎಂಸಿ ಸೇರ್ಪಡೆ