HomeUncategorizedಕೋಲ್ಕತ್ತಾ ಕಮಲಕ್ಕೆ ಮುಖಭಂಗ; ಟಿಎಂಸಿ ಸೇರಿದ ಬಿಜೆಪಿ ಸಂಸದನ ಪತ್ನಿ!

ಕೋಲ್ಕತ್ತಾ ಕಮಲಕ್ಕೆ ಮುಖಭಂಗ; ಟಿಎಂಸಿ ಸೇರಿದ ಬಿಜೆಪಿ ಸಂಸದನ ಪತ್ನಿ!

ಈ ಭಾರಿ ಬಿಜೆಪಿ ಪಶ್ಚಿಮ ಬಂಗಾಳದಲ್ಲಿ ಎರಡಂಕಿ ಸ್ಥಾನವನ್ನು ಗೆಲ್ಲಲು ಸಾಧ್ಯವಿಲ್ಲ ಎಂದು ಪ್ರಖ್ಯಾತ ರಾಜಕೀಯ ನಿಪುಣ ಪ್ರಶಾಂತ್​ ಕಿಶೋರ್​ ಸವಾಲು ಹಾಕಿದ್ದಾರೆ.

- Advertisement -
- Advertisement -

ಬಿಹಾರದ ಬೆನ್ನಿಗೆ ಮುಂದಿನ ವರ್ಷ ನಡೆಯಲಿರುವ ತಮಿಳುನಾಡು ಹಾಗೂ ಪಶ್ಚಿಮ ಬಂಗಾಳದ ಚುನಾವಣಾ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಲೇ ಇದೆ. ಶನಿವಾರ ಮತ್ತು ಭಾನುವಾರ ಎರಡು ದಿನಗಳ ಕಾಲ ಬಂಗಾಳದ ಪ್ರವಾಸ ಕೈಗೊಂಡಿದ್ದ ಕೇಂದ್ರ ಗೃಹ ಸಚಿವ ಅಮಿತ್​ ಶಾ ಟಿಎಂಸಿ ಪಕ್ಷದ ಪ್ರಬಲ ನಾಯಕ ಸುವೆಂಧು ಅಧಿಕಾರಿ ಸೇರಿದಂತೆ 9 ಜನ ಶಾಸಕರನ್ನು ಬಿಜೆಪಿಗೆ ಬರಮಾಡಿಕೊಳ್ಳುವ ಮೂಲಕ ಬಂಗಾಳದ ಮಣ್ಣಲ್ಲಿ ಪಕ್ಷಾಂತರ ಪರ್ವಕ್ಕೆ ಚಾಲನೆ ನೀಡಿ ಟಿಎಂಸಿಗೆ ಶಾಕ್​ ನೀಡುವ ಕೆಲಸ ಮಾಡಿದ್ದರು. ಆದರೆ, ಇದೀಗ ಬಿಜೆಪಿಗೆ ಆಘಾತ ನೀಡಿರುವ ಬಿಜೆಪಿ ಸಂಸದ ಸೌಮಿತ್ರಾ ಖಾನ್ ಅವರ ಪತ್ನಿ ಸುಜಾತಾ ಮೊಂಡಾಲ್ ಖಾನ್ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಪಕ್ಷಕ್ಕೆ ಸೇರ್ಪಡೆಯಾಗುವ ಮೂಲಕ ಕಮಲ ಪಾಳಯಕ್ಕೆ ತೀವ್ರ ಮುಖಭಂಗಕ್ಕೆ ಈಡುಮಾಡಿದ್ದಾರೆ.

ಭಾನುವಾರ ಬಿಜೆಪಿಗೆ ಪಕ್ಷಾಂತರ ಮಾಡಿದ್ದ 9 ಜನ ಶಾಸಕರ ಪೈಕಿ ಐವರು ಟಿಎಂಸಿ ಪಕ್ಷದವರು. ಇನ್ನೂ ಟಿಎಂಸಿ ಪಕ್ಷದ ಪ್ರಬಲ ನಾಯಕ ಮಾಜಿ ಸಚಿವ ಸುವೆಂಧು ಅಧಿಕಾರಿ ಸಹ ಈ ಪಕ್ಷಾಂತರಿಗಳ ಪಟ್ಟಿಗಳಲ್ಲಿ ಸೇರ್ಪಡೆಯಾಗಿದ್ದು, ಟಿಎಂಸಿ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿತ್ತು. ಆದರೆ, ಈ ಬೆಳವಣಿಗೆಯ ಬೆನ್ನಿಗೆ ಬಂಗಾಳದ ಬಿಜೆಪಿ ನಾಯಕ ಸಂಸದ ಸೌಮಿತ್ರಾ ಖಾನ್ ಪತ್ನಿ ಟಿಎಂಸಿಗೆ ಸೇರ್ಪಡೆಯಾಗಿರುವುದು ಬಂಗಾಳದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಮುಂದಾಗಿರುವ ಬಿಜೆಪಿ ಪಾಳಯಕ್ಕೆ ತೀವ್ರ ಮುಖಬಂಗ ಎಂದು ಬಣ್ಣಿಸಲಾಗುತ್ತಿದೆ.

ತೃಣಮೂಲ ಸಂಸದ ಸೌಗತಾ ರಾಯ್ ಮತ್ತು ವಕ್ತಾರ ಕುನಾಲ್ ಘೋಷ್ ಅವರ ಸಮ್ಮುಖದಲ್ಲಿ ಸುಜಾತಾ ಮಂಡಲ್ ಖಾನ್ ಟಿಎಂಸಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಟಿಎಂಸಿಗೆ ಸೇರಿದ ನಂತರ ಮಾಧ್ಯಮಗಳ ಎದುರು ಮಾತನಾಡಿರುವ ಸುಜಾತಾ ಮೊಂಡಾಲ್, “ನಾನು ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಬೆಳೆಸಲು ಸಾಕಷ್ಟು ಶ್ರಮವಹಿಸಿ ಕೆಲಸ ಮಾಡಿದ್ದೇನೆ. ಆದರೆ, ಸದ್ಯಕ್ಕೆ ಮೂಲ ಬಿಜೆಪಿಗರಿಗೇ ಪಕ್ಷದಲ್ಲಿ ಬೆಲೆ ಗೌರವ ಇಲ್ಲದಂತಾಗಿದೆ. ಇದೇ ಕಾರಣಕ್ಕಾಗಿ ನಾನು ಪಕ್ಷವನ್ನು ತ್ಯಜಿಸುತ್ತಿದ್ದೇನೆ. ಅಲ್ಲದೆ, ಓರ್ವ ಮಹಿಳೆಯಾಗಿ ನನಗೆ ಆ ಪಕ್ಷದಲ್ಲಿರುವುದು ಕಷ್ಟವಾಗುತ್ತಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಪ.ಬಂಗಾಳದಲ್ಲಿ BJP ಎರಡಂಕಿ ದಾಟುವುದಿಲ್ಲ: ಒಂದು ವೇಳೆ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ- ಪ್ರಶಾಂತ್ ಕಿಶೋರ್

ಅಲ್ಲದೆ, “ಬಿಜೆಪಿ ಪಕ್ಷ ತೃಣಮೂಲ ಕಾಂಗ್ರೆಸ್​ನಲ್ಲಿರುವ ಎಲ್ಲಾ ರಾಜಕಾರಣಿಗಳನ್ನು ಪಕ್ಷಾಂತರದ ಹೆಸರಿನಲ್ಲಿ ಭ್ರಷ್ಟಗೊಳಿಸುತ್ತಿದೆ. ದೇಶದಲ್ಲಿ ಬಿಜೆಪಿಗೆ 6 ಮುಖ್ಯಮಂತ್ರಿ ಮತ್ತು 13 ಉಪ ಮುಖ್ಯಮಂತ್ರಿ ಮುಖಗಳಿಗೆ. ಆದರೆ, ಬಂಗಾಳದಲ್ಲಿ ಬಿಜೆಪಿ ಪಕ್ಷಕ್ಕೆ ಮುಖ್ಯಮಂತ್ರಿ ಮುಖ ಇಲ್ಲ. ಇಲ್ಲಿ ಮಮತಾ ಬ್ಯಾನರ್ಜಿ ಅವರ ವರ್ಚಸ್ಸನ್ನು ಬಿಜೆಪಿ ಏನೇ ಮಾಡಿದರು ಕುಗ್ಗಿಸಲು ಸಾಧ್ಯವಿಲ್ಲ. ಹೀಗಾಗಿ ಓರ್ವ ಮಹಿಳೆಯಾಗಿ ಮಮತಾ ಬ್ಯಾನರ್ಜಿ ಜೊತೆಗೆ ಕೆಲಸ ಮಾಡುವುದು ನನಗೆ ಗೌರವಾನ್ವಿತವಾದ ವಿಚಾರ ಎಂದು ನಾನು ಭಾವಿಸುತ್ತೇನೆ” ಎಂದು ಸುಜಾತಾ ಮಂಡಲ್ ಖಾನ್ ತಿಳಿಸಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ 42 ಸ್ಥಾನಗಳ ಪೈಕಿ ಬಿಜೆಪಿ 18 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಹೀಗಾಗಿ ವಿಧಾನಸಭಾ ಚುನಾವಣೆಯಲ್ಲೂ ಉತ್ತಮ ಫಲಿತಾಂಶದ ನಿರೀಕ್ಷೆಯಲ್ಲಿದೆ. ಆದರೆ, ಈ ಭಾರಿ ಬಿಜೆಪಿ ಪಶ್ಚಿಮ ಬಂಗಾಳದಲ್ಲಿ ಎರಡಂಕಿ ಸ್ಥಾನವನ್ನು ಗೆಲ್ಲಲು ಸಾಧ್ಯವಿಲ್ಲ ಎಂದು ಪ್ರಖ್ಯಾತ ರಾಜಕೀಯ ನಿಪುಣ ಪ್ರಶಾಂತ್​ ಕಿಶೋರ್​ ಸವಾಲು ಹಾಕಿರುವುದು ಸಹ ಬಂಗಾಳ ಚುನಾವಣೆ ಮೇಲೆ ಪ್ರಭಾವ ಬೀರಲಿದೆ ಎಂದು ಹೇಳಲಾಗುತ್ತಿದೆ. ಪ್ರಶಾಂತ್​ ಕಿಶೋರ್​ ಈ ಭಾರಿ ಬಂಗಾಳ ಚುನಾವಣೆಯಲ್ಲಿ ಟಿಎಂಸಿ ಪರ ಕೆಲಸ ಮಾಡುತ್ತಿದ್ದಾರೆ.


ಇದನ್ನೂ ಓದಿ:’ಮುಸ್ಲಿಮರು ಗೋಮಾಂಸ ತಿನ್ನಬೇಡಿ’ ಹೇಳಿಕೆಗೆ ಮಲಯಾಳಂನಲ್ಲಿ ಸ್ಪಷ್ಟನೆ ನೀಡಿದ ಸಿ.ಎಂ. ಇಬ್ರಾಹಿಂ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...