HomeUncategorizedಕೋಲ್ಕತ್ತಾ ಕಮಲಕ್ಕೆ ಮುಖಭಂಗ; ಟಿಎಂಸಿ ಸೇರಿದ ಬಿಜೆಪಿ ಸಂಸದನ ಪತ್ನಿ!

ಕೋಲ್ಕತ್ತಾ ಕಮಲಕ್ಕೆ ಮುಖಭಂಗ; ಟಿಎಂಸಿ ಸೇರಿದ ಬಿಜೆಪಿ ಸಂಸದನ ಪತ್ನಿ!

ಈ ಭಾರಿ ಬಿಜೆಪಿ ಪಶ್ಚಿಮ ಬಂಗಾಳದಲ್ಲಿ ಎರಡಂಕಿ ಸ್ಥಾನವನ್ನು ಗೆಲ್ಲಲು ಸಾಧ್ಯವಿಲ್ಲ ಎಂದು ಪ್ರಖ್ಯಾತ ರಾಜಕೀಯ ನಿಪುಣ ಪ್ರಶಾಂತ್​ ಕಿಶೋರ್​ ಸವಾಲು ಹಾಕಿದ್ದಾರೆ.

- Advertisement -
- Advertisement -

ಬಿಹಾರದ ಬೆನ್ನಿಗೆ ಮುಂದಿನ ವರ್ಷ ನಡೆಯಲಿರುವ ತಮಿಳುನಾಡು ಹಾಗೂ ಪಶ್ಚಿಮ ಬಂಗಾಳದ ಚುನಾವಣಾ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಲೇ ಇದೆ. ಶನಿವಾರ ಮತ್ತು ಭಾನುವಾರ ಎರಡು ದಿನಗಳ ಕಾಲ ಬಂಗಾಳದ ಪ್ರವಾಸ ಕೈಗೊಂಡಿದ್ದ ಕೇಂದ್ರ ಗೃಹ ಸಚಿವ ಅಮಿತ್​ ಶಾ ಟಿಎಂಸಿ ಪಕ್ಷದ ಪ್ರಬಲ ನಾಯಕ ಸುವೆಂಧು ಅಧಿಕಾರಿ ಸೇರಿದಂತೆ 9 ಜನ ಶಾಸಕರನ್ನು ಬಿಜೆಪಿಗೆ ಬರಮಾಡಿಕೊಳ್ಳುವ ಮೂಲಕ ಬಂಗಾಳದ ಮಣ್ಣಲ್ಲಿ ಪಕ್ಷಾಂತರ ಪರ್ವಕ್ಕೆ ಚಾಲನೆ ನೀಡಿ ಟಿಎಂಸಿಗೆ ಶಾಕ್​ ನೀಡುವ ಕೆಲಸ ಮಾಡಿದ್ದರು. ಆದರೆ, ಇದೀಗ ಬಿಜೆಪಿಗೆ ಆಘಾತ ನೀಡಿರುವ ಬಿಜೆಪಿ ಸಂಸದ ಸೌಮಿತ್ರಾ ಖಾನ್ ಅವರ ಪತ್ನಿ ಸುಜಾತಾ ಮೊಂಡಾಲ್ ಖಾನ್ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಪಕ್ಷಕ್ಕೆ ಸೇರ್ಪಡೆಯಾಗುವ ಮೂಲಕ ಕಮಲ ಪಾಳಯಕ್ಕೆ ತೀವ್ರ ಮುಖಭಂಗಕ್ಕೆ ಈಡುಮಾಡಿದ್ದಾರೆ.

ಭಾನುವಾರ ಬಿಜೆಪಿಗೆ ಪಕ್ಷಾಂತರ ಮಾಡಿದ್ದ 9 ಜನ ಶಾಸಕರ ಪೈಕಿ ಐವರು ಟಿಎಂಸಿ ಪಕ್ಷದವರು. ಇನ್ನೂ ಟಿಎಂಸಿ ಪಕ್ಷದ ಪ್ರಬಲ ನಾಯಕ ಮಾಜಿ ಸಚಿವ ಸುವೆಂಧು ಅಧಿಕಾರಿ ಸಹ ಈ ಪಕ್ಷಾಂತರಿಗಳ ಪಟ್ಟಿಗಳಲ್ಲಿ ಸೇರ್ಪಡೆಯಾಗಿದ್ದು, ಟಿಎಂಸಿ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿತ್ತು. ಆದರೆ, ಈ ಬೆಳವಣಿಗೆಯ ಬೆನ್ನಿಗೆ ಬಂಗಾಳದ ಬಿಜೆಪಿ ನಾಯಕ ಸಂಸದ ಸೌಮಿತ್ರಾ ಖಾನ್ ಪತ್ನಿ ಟಿಎಂಸಿಗೆ ಸೇರ್ಪಡೆಯಾಗಿರುವುದು ಬಂಗಾಳದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಮುಂದಾಗಿರುವ ಬಿಜೆಪಿ ಪಾಳಯಕ್ಕೆ ತೀವ್ರ ಮುಖಬಂಗ ಎಂದು ಬಣ್ಣಿಸಲಾಗುತ್ತಿದೆ.

ತೃಣಮೂಲ ಸಂಸದ ಸೌಗತಾ ರಾಯ್ ಮತ್ತು ವಕ್ತಾರ ಕುನಾಲ್ ಘೋಷ್ ಅವರ ಸಮ್ಮುಖದಲ್ಲಿ ಸುಜಾತಾ ಮಂಡಲ್ ಖಾನ್ ಟಿಎಂಸಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಟಿಎಂಸಿಗೆ ಸೇರಿದ ನಂತರ ಮಾಧ್ಯಮಗಳ ಎದುರು ಮಾತನಾಡಿರುವ ಸುಜಾತಾ ಮೊಂಡಾಲ್, “ನಾನು ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಬೆಳೆಸಲು ಸಾಕಷ್ಟು ಶ್ರಮವಹಿಸಿ ಕೆಲಸ ಮಾಡಿದ್ದೇನೆ. ಆದರೆ, ಸದ್ಯಕ್ಕೆ ಮೂಲ ಬಿಜೆಪಿಗರಿಗೇ ಪಕ್ಷದಲ್ಲಿ ಬೆಲೆ ಗೌರವ ಇಲ್ಲದಂತಾಗಿದೆ. ಇದೇ ಕಾರಣಕ್ಕಾಗಿ ನಾನು ಪಕ್ಷವನ್ನು ತ್ಯಜಿಸುತ್ತಿದ್ದೇನೆ. ಅಲ್ಲದೆ, ಓರ್ವ ಮಹಿಳೆಯಾಗಿ ನನಗೆ ಆ ಪಕ್ಷದಲ್ಲಿರುವುದು ಕಷ್ಟವಾಗುತ್ತಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಪ.ಬಂಗಾಳದಲ್ಲಿ BJP ಎರಡಂಕಿ ದಾಟುವುದಿಲ್ಲ: ಒಂದು ವೇಳೆ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ- ಪ್ರಶಾಂತ್ ಕಿಶೋರ್

ಅಲ್ಲದೆ, “ಬಿಜೆಪಿ ಪಕ್ಷ ತೃಣಮೂಲ ಕಾಂಗ್ರೆಸ್​ನಲ್ಲಿರುವ ಎಲ್ಲಾ ರಾಜಕಾರಣಿಗಳನ್ನು ಪಕ್ಷಾಂತರದ ಹೆಸರಿನಲ್ಲಿ ಭ್ರಷ್ಟಗೊಳಿಸುತ್ತಿದೆ. ದೇಶದಲ್ಲಿ ಬಿಜೆಪಿಗೆ 6 ಮುಖ್ಯಮಂತ್ರಿ ಮತ್ತು 13 ಉಪ ಮುಖ್ಯಮಂತ್ರಿ ಮುಖಗಳಿಗೆ. ಆದರೆ, ಬಂಗಾಳದಲ್ಲಿ ಬಿಜೆಪಿ ಪಕ್ಷಕ್ಕೆ ಮುಖ್ಯಮಂತ್ರಿ ಮುಖ ಇಲ್ಲ. ಇಲ್ಲಿ ಮಮತಾ ಬ್ಯಾನರ್ಜಿ ಅವರ ವರ್ಚಸ್ಸನ್ನು ಬಿಜೆಪಿ ಏನೇ ಮಾಡಿದರು ಕುಗ್ಗಿಸಲು ಸಾಧ್ಯವಿಲ್ಲ. ಹೀಗಾಗಿ ಓರ್ವ ಮಹಿಳೆಯಾಗಿ ಮಮತಾ ಬ್ಯಾನರ್ಜಿ ಜೊತೆಗೆ ಕೆಲಸ ಮಾಡುವುದು ನನಗೆ ಗೌರವಾನ್ವಿತವಾದ ವಿಚಾರ ಎಂದು ನಾನು ಭಾವಿಸುತ್ತೇನೆ” ಎಂದು ಸುಜಾತಾ ಮಂಡಲ್ ಖಾನ್ ತಿಳಿಸಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ 42 ಸ್ಥಾನಗಳ ಪೈಕಿ ಬಿಜೆಪಿ 18 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಹೀಗಾಗಿ ವಿಧಾನಸಭಾ ಚುನಾವಣೆಯಲ್ಲೂ ಉತ್ತಮ ಫಲಿತಾಂಶದ ನಿರೀಕ್ಷೆಯಲ್ಲಿದೆ. ಆದರೆ, ಈ ಭಾರಿ ಬಿಜೆಪಿ ಪಶ್ಚಿಮ ಬಂಗಾಳದಲ್ಲಿ ಎರಡಂಕಿ ಸ್ಥಾನವನ್ನು ಗೆಲ್ಲಲು ಸಾಧ್ಯವಿಲ್ಲ ಎಂದು ಪ್ರಖ್ಯಾತ ರಾಜಕೀಯ ನಿಪುಣ ಪ್ರಶಾಂತ್​ ಕಿಶೋರ್​ ಸವಾಲು ಹಾಕಿರುವುದು ಸಹ ಬಂಗಾಳ ಚುನಾವಣೆ ಮೇಲೆ ಪ್ರಭಾವ ಬೀರಲಿದೆ ಎಂದು ಹೇಳಲಾಗುತ್ತಿದೆ. ಪ್ರಶಾಂತ್​ ಕಿಶೋರ್​ ಈ ಭಾರಿ ಬಂಗಾಳ ಚುನಾವಣೆಯಲ್ಲಿ ಟಿಎಂಸಿ ಪರ ಕೆಲಸ ಮಾಡುತ್ತಿದ್ದಾರೆ.


ಇದನ್ನೂ ಓದಿ:’ಮುಸ್ಲಿಮರು ಗೋಮಾಂಸ ತಿನ್ನಬೇಡಿ’ ಹೇಳಿಕೆಗೆ ಮಲಯಾಳಂನಲ್ಲಿ ಸ್ಪಷ್ಟನೆ ನೀಡಿದ ಸಿ.ಎಂ. ಇಬ್ರಾಹಿಂ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...