HomeUncategorizedಕೋಲ್ಕತ್ತಾ ಕಮಲಕ್ಕೆ ಮುಖಭಂಗ; ಟಿಎಂಸಿ ಸೇರಿದ ಬಿಜೆಪಿ ಸಂಸದನ ಪತ್ನಿ!

ಕೋಲ್ಕತ್ತಾ ಕಮಲಕ್ಕೆ ಮುಖಭಂಗ; ಟಿಎಂಸಿ ಸೇರಿದ ಬಿಜೆಪಿ ಸಂಸದನ ಪತ್ನಿ!

ಈ ಭಾರಿ ಬಿಜೆಪಿ ಪಶ್ಚಿಮ ಬಂಗಾಳದಲ್ಲಿ ಎರಡಂಕಿ ಸ್ಥಾನವನ್ನು ಗೆಲ್ಲಲು ಸಾಧ್ಯವಿಲ್ಲ ಎಂದು ಪ್ರಖ್ಯಾತ ರಾಜಕೀಯ ನಿಪುಣ ಪ್ರಶಾಂತ್​ ಕಿಶೋರ್​ ಸವಾಲು ಹಾಕಿದ್ದಾರೆ.

- Advertisement -
- Advertisement -

ಬಿಹಾರದ ಬೆನ್ನಿಗೆ ಮುಂದಿನ ವರ್ಷ ನಡೆಯಲಿರುವ ತಮಿಳುನಾಡು ಹಾಗೂ ಪಶ್ಚಿಮ ಬಂಗಾಳದ ಚುನಾವಣಾ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಲೇ ಇದೆ. ಶನಿವಾರ ಮತ್ತು ಭಾನುವಾರ ಎರಡು ದಿನಗಳ ಕಾಲ ಬಂಗಾಳದ ಪ್ರವಾಸ ಕೈಗೊಂಡಿದ್ದ ಕೇಂದ್ರ ಗೃಹ ಸಚಿವ ಅಮಿತ್​ ಶಾ ಟಿಎಂಸಿ ಪಕ್ಷದ ಪ್ರಬಲ ನಾಯಕ ಸುವೆಂಧು ಅಧಿಕಾರಿ ಸೇರಿದಂತೆ 9 ಜನ ಶಾಸಕರನ್ನು ಬಿಜೆಪಿಗೆ ಬರಮಾಡಿಕೊಳ್ಳುವ ಮೂಲಕ ಬಂಗಾಳದ ಮಣ್ಣಲ್ಲಿ ಪಕ್ಷಾಂತರ ಪರ್ವಕ್ಕೆ ಚಾಲನೆ ನೀಡಿ ಟಿಎಂಸಿಗೆ ಶಾಕ್​ ನೀಡುವ ಕೆಲಸ ಮಾಡಿದ್ದರು. ಆದರೆ, ಇದೀಗ ಬಿಜೆಪಿಗೆ ಆಘಾತ ನೀಡಿರುವ ಬಿಜೆಪಿ ಸಂಸದ ಸೌಮಿತ್ರಾ ಖಾನ್ ಅವರ ಪತ್ನಿ ಸುಜಾತಾ ಮೊಂಡಾಲ್ ಖಾನ್ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಪಕ್ಷಕ್ಕೆ ಸೇರ್ಪಡೆಯಾಗುವ ಮೂಲಕ ಕಮಲ ಪಾಳಯಕ್ಕೆ ತೀವ್ರ ಮುಖಭಂಗಕ್ಕೆ ಈಡುಮಾಡಿದ್ದಾರೆ.

ಭಾನುವಾರ ಬಿಜೆಪಿಗೆ ಪಕ್ಷಾಂತರ ಮಾಡಿದ್ದ 9 ಜನ ಶಾಸಕರ ಪೈಕಿ ಐವರು ಟಿಎಂಸಿ ಪಕ್ಷದವರು. ಇನ್ನೂ ಟಿಎಂಸಿ ಪಕ್ಷದ ಪ್ರಬಲ ನಾಯಕ ಮಾಜಿ ಸಚಿವ ಸುವೆಂಧು ಅಧಿಕಾರಿ ಸಹ ಈ ಪಕ್ಷಾಂತರಿಗಳ ಪಟ್ಟಿಗಳಲ್ಲಿ ಸೇರ್ಪಡೆಯಾಗಿದ್ದು, ಟಿಎಂಸಿ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿತ್ತು. ಆದರೆ, ಈ ಬೆಳವಣಿಗೆಯ ಬೆನ್ನಿಗೆ ಬಂಗಾಳದ ಬಿಜೆಪಿ ನಾಯಕ ಸಂಸದ ಸೌಮಿತ್ರಾ ಖಾನ್ ಪತ್ನಿ ಟಿಎಂಸಿಗೆ ಸೇರ್ಪಡೆಯಾಗಿರುವುದು ಬಂಗಾಳದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಮುಂದಾಗಿರುವ ಬಿಜೆಪಿ ಪಾಳಯಕ್ಕೆ ತೀವ್ರ ಮುಖಬಂಗ ಎಂದು ಬಣ್ಣಿಸಲಾಗುತ್ತಿದೆ.

ತೃಣಮೂಲ ಸಂಸದ ಸೌಗತಾ ರಾಯ್ ಮತ್ತು ವಕ್ತಾರ ಕುನಾಲ್ ಘೋಷ್ ಅವರ ಸಮ್ಮುಖದಲ್ಲಿ ಸುಜಾತಾ ಮಂಡಲ್ ಖಾನ್ ಟಿಎಂಸಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಟಿಎಂಸಿಗೆ ಸೇರಿದ ನಂತರ ಮಾಧ್ಯಮಗಳ ಎದುರು ಮಾತನಾಡಿರುವ ಸುಜಾತಾ ಮೊಂಡಾಲ್, “ನಾನು ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಬೆಳೆಸಲು ಸಾಕಷ್ಟು ಶ್ರಮವಹಿಸಿ ಕೆಲಸ ಮಾಡಿದ್ದೇನೆ. ಆದರೆ, ಸದ್ಯಕ್ಕೆ ಮೂಲ ಬಿಜೆಪಿಗರಿಗೇ ಪಕ್ಷದಲ್ಲಿ ಬೆಲೆ ಗೌರವ ಇಲ್ಲದಂತಾಗಿದೆ. ಇದೇ ಕಾರಣಕ್ಕಾಗಿ ನಾನು ಪಕ್ಷವನ್ನು ತ್ಯಜಿಸುತ್ತಿದ್ದೇನೆ. ಅಲ್ಲದೆ, ಓರ್ವ ಮಹಿಳೆಯಾಗಿ ನನಗೆ ಆ ಪಕ್ಷದಲ್ಲಿರುವುದು ಕಷ್ಟವಾಗುತ್ತಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಪ.ಬಂಗಾಳದಲ್ಲಿ BJP ಎರಡಂಕಿ ದಾಟುವುದಿಲ್ಲ: ಒಂದು ವೇಳೆ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ- ಪ್ರಶಾಂತ್ ಕಿಶೋರ್

ಅಲ್ಲದೆ, “ಬಿಜೆಪಿ ಪಕ್ಷ ತೃಣಮೂಲ ಕಾಂಗ್ರೆಸ್​ನಲ್ಲಿರುವ ಎಲ್ಲಾ ರಾಜಕಾರಣಿಗಳನ್ನು ಪಕ್ಷಾಂತರದ ಹೆಸರಿನಲ್ಲಿ ಭ್ರಷ್ಟಗೊಳಿಸುತ್ತಿದೆ. ದೇಶದಲ್ಲಿ ಬಿಜೆಪಿಗೆ 6 ಮುಖ್ಯಮಂತ್ರಿ ಮತ್ತು 13 ಉಪ ಮುಖ್ಯಮಂತ್ರಿ ಮುಖಗಳಿಗೆ. ಆದರೆ, ಬಂಗಾಳದಲ್ಲಿ ಬಿಜೆಪಿ ಪಕ್ಷಕ್ಕೆ ಮುಖ್ಯಮಂತ್ರಿ ಮುಖ ಇಲ್ಲ. ಇಲ್ಲಿ ಮಮತಾ ಬ್ಯಾನರ್ಜಿ ಅವರ ವರ್ಚಸ್ಸನ್ನು ಬಿಜೆಪಿ ಏನೇ ಮಾಡಿದರು ಕುಗ್ಗಿಸಲು ಸಾಧ್ಯವಿಲ್ಲ. ಹೀಗಾಗಿ ಓರ್ವ ಮಹಿಳೆಯಾಗಿ ಮಮತಾ ಬ್ಯಾನರ್ಜಿ ಜೊತೆಗೆ ಕೆಲಸ ಮಾಡುವುದು ನನಗೆ ಗೌರವಾನ್ವಿತವಾದ ವಿಚಾರ ಎಂದು ನಾನು ಭಾವಿಸುತ್ತೇನೆ” ಎಂದು ಸುಜಾತಾ ಮಂಡಲ್ ಖಾನ್ ತಿಳಿಸಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ 42 ಸ್ಥಾನಗಳ ಪೈಕಿ ಬಿಜೆಪಿ 18 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಹೀಗಾಗಿ ವಿಧಾನಸಭಾ ಚುನಾವಣೆಯಲ್ಲೂ ಉತ್ತಮ ಫಲಿತಾಂಶದ ನಿರೀಕ್ಷೆಯಲ್ಲಿದೆ. ಆದರೆ, ಈ ಭಾರಿ ಬಿಜೆಪಿ ಪಶ್ಚಿಮ ಬಂಗಾಳದಲ್ಲಿ ಎರಡಂಕಿ ಸ್ಥಾನವನ್ನು ಗೆಲ್ಲಲು ಸಾಧ್ಯವಿಲ್ಲ ಎಂದು ಪ್ರಖ್ಯಾತ ರಾಜಕೀಯ ನಿಪುಣ ಪ್ರಶಾಂತ್​ ಕಿಶೋರ್​ ಸವಾಲು ಹಾಕಿರುವುದು ಸಹ ಬಂಗಾಳ ಚುನಾವಣೆ ಮೇಲೆ ಪ್ರಭಾವ ಬೀರಲಿದೆ ಎಂದು ಹೇಳಲಾಗುತ್ತಿದೆ. ಪ್ರಶಾಂತ್​ ಕಿಶೋರ್​ ಈ ಭಾರಿ ಬಂಗಾಳ ಚುನಾವಣೆಯಲ್ಲಿ ಟಿಎಂಸಿ ಪರ ಕೆಲಸ ಮಾಡುತ್ತಿದ್ದಾರೆ.


ಇದನ್ನೂ ಓದಿ:’ಮುಸ್ಲಿಮರು ಗೋಮಾಂಸ ತಿನ್ನಬೇಡಿ’ ಹೇಳಿಕೆಗೆ ಮಲಯಾಳಂನಲ್ಲಿ ಸ್ಪಷ್ಟನೆ ನೀಡಿದ ಸಿ.ಎಂ. ಇಬ್ರಾಹಿಂ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...