HomeUncategorizedಕೋಲ್ಕತ್ತಾ ಕಮಲಕ್ಕೆ ಮುಖಭಂಗ; ಟಿಎಂಸಿ ಸೇರಿದ ಬಿಜೆಪಿ ಸಂಸದನ ಪತ್ನಿ!

ಕೋಲ್ಕತ್ತಾ ಕಮಲಕ್ಕೆ ಮುಖಭಂಗ; ಟಿಎಂಸಿ ಸೇರಿದ ಬಿಜೆಪಿ ಸಂಸದನ ಪತ್ನಿ!

ಈ ಭಾರಿ ಬಿಜೆಪಿ ಪಶ್ಚಿಮ ಬಂಗಾಳದಲ್ಲಿ ಎರಡಂಕಿ ಸ್ಥಾನವನ್ನು ಗೆಲ್ಲಲು ಸಾಧ್ಯವಿಲ್ಲ ಎಂದು ಪ್ರಖ್ಯಾತ ರಾಜಕೀಯ ನಿಪುಣ ಪ್ರಶಾಂತ್​ ಕಿಶೋರ್​ ಸವಾಲು ಹಾಕಿದ್ದಾರೆ.

- Advertisement -
- Advertisement -

ಬಿಹಾರದ ಬೆನ್ನಿಗೆ ಮುಂದಿನ ವರ್ಷ ನಡೆಯಲಿರುವ ತಮಿಳುನಾಡು ಹಾಗೂ ಪಶ್ಚಿಮ ಬಂಗಾಳದ ಚುನಾವಣಾ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಲೇ ಇದೆ. ಶನಿವಾರ ಮತ್ತು ಭಾನುವಾರ ಎರಡು ದಿನಗಳ ಕಾಲ ಬಂಗಾಳದ ಪ್ರವಾಸ ಕೈಗೊಂಡಿದ್ದ ಕೇಂದ್ರ ಗೃಹ ಸಚಿವ ಅಮಿತ್​ ಶಾ ಟಿಎಂಸಿ ಪಕ್ಷದ ಪ್ರಬಲ ನಾಯಕ ಸುವೆಂಧು ಅಧಿಕಾರಿ ಸೇರಿದಂತೆ 9 ಜನ ಶಾಸಕರನ್ನು ಬಿಜೆಪಿಗೆ ಬರಮಾಡಿಕೊಳ್ಳುವ ಮೂಲಕ ಬಂಗಾಳದ ಮಣ್ಣಲ್ಲಿ ಪಕ್ಷಾಂತರ ಪರ್ವಕ್ಕೆ ಚಾಲನೆ ನೀಡಿ ಟಿಎಂಸಿಗೆ ಶಾಕ್​ ನೀಡುವ ಕೆಲಸ ಮಾಡಿದ್ದರು. ಆದರೆ, ಇದೀಗ ಬಿಜೆಪಿಗೆ ಆಘಾತ ನೀಡಿರುವ ಬಿಜೆಪಿ ಸಂಸದ ಸೌಮಿತ್ರಾ ಖಾನ್ ಅವರ ಪತ್ನಿ ಸುಜಾತಾ ಮೊಂಡಾಲ್ ಖಾನ್ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಪಕ್ಷಕ್ಕೆ ಸೇರ್ಪಡೆಯಾಗುವ ಮೂಲಕ ಕಮಲ ಪಾಳಯಕ್ಕೆ ತೀವ್ರ ಮುಖಭಂಗಕ್ಕೆ ಈಡುಮಾಡಿದ್ದಾರೆ.

ಭಾನುವಾರ ಬಿಜೆಪಿಗೆ ಪಕ್ಷಾಂತರ ಮಾಡಿದ್ದ 9 ಜನ ಶಾಸಕರ ಪೈಕಿ ಐವರು ಟಿಎಂಸಿ ಪಕ್ಷದವರು. ಇನ್ನೂ ಟಿಎಂಸಿ ಪಕ್ಷದ ಪ್ರಬಲ ನಾಯಕ ಮಾಜಿ ಸಚಿವ ಸುವೆಂಧು ಅಧಿಕಾರಿ ಸಹ ಈ ಪಕ್ಷಾಂತರಿಗಳ ಪಟ್ಟಿಗಳಲ್ಲಿ ಸೇರ್ಪಡೆಯಾಗಿದ್ದು, ಟಿಎಂಸಿ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿತ್ತು. ಆದರೆ, ಈ ಬೆಳವಣಿಗೆಯ ಬೆನ್ನಿಗೆ ಬಂಗಾಳದ ಬಿಜೆಪಿ ನಾಯಕ ಸಂಸದ ಸೌಮಿತ್ರಾ ಖಾನ್ ಪತ್ನಿ ಟಿಎಂಸಿಗೆ ಸೇರ್ಪಡೆಯಾಗಿರುವುದು ಬಂಗಾಳದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಮುಂದಾಗಿರುವ ಬಿಜೆಪಿ ಪಾಳಯಕ್ಕೆ ತೀವ್ರ ಮುಖಬಂಗ ಎಂದು ಬಣ್ಣಿಸಲಾಗುತ್ತಿದೆ.

ತೃಣಮೂಲ ಸಂಸದ ಸೌಗತಾ ರಾಯ್ ಮತ್ತು ವಕ್ತಾರ ಕುನಾಲ್ ಘೋಷ್ ಅವರ ಸಮ್ಮುಖದಲ್ಲಿ ಸುಜಾತಾ ಮಂಡಲ್ ಖಾನ್ ಟಿಎಂಸಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಟಿಎಂಸಿಗೆ ಸೇರಿದ ನಂತರ ಮಾಧ್ಯಮಗಳ ಎದುರು ಮಾತನಾಡಿರುವ ಸುಜಾತಾ ಮೊಂಡಾಲ್, “ನಾನು ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಬೆಳೆಸಲು ಸಾಕಷ್ಟು ಶ್ರಮವಹಿಸಿ ಕೆಲಸ ಮಾಡಿದ್ದೇನೆ. ಆದರೆ, ಸದ್ಯಕ್ಕೆ ಮೂಲ ಬಿಜೆಪಿಗರಿಗೇ ಪಕ್ಷದಲ್ಲಿ ಬೆಲೆ ಗೌರವ ಇಲ್ಲದಂತಾಗಿದೆ. ಇದೇ ಕಾರಣಕ್ಕಾಗಿ ನಾನು ಪಕ್ಷವನ್ನು ತ್ಯಜಿಸುತ್ತಿದ್ದೇನೆ. ಅಲ್ಲದೆ, ಓರ್ವ ಮಹಿಳೆಯಾಗಿ ನನಗೆ ಆ ಪಕ್ಷದಲ್ಲಿರುವುದು ಕಷ್ಟವಾಗುತ್ತಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಪ.ಬಂಗಾಳದಲ್ಲಿ BJP ಎರಡಂಕಿ ದಾಟುವುದಿಲ್ಲ: ಒಂದು ವೇಳೆ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ- ಪ್ರಶಾಂತ್ ಕಿಶೋರ್

ಅಲ್ಲದೆ, “ಬಿಜೆಪಿ ಪಕ್ಷ ತೃಣಮೂಲ ಕಾಂಗ್ರೆಸ್​ನಲ್ಲಿರುವ ಎಲ್ಲಾ ರಾಜಕಾರಣಿಗಳನ್ನು ಪಕ್ಷಾಂತರದ ಹೆಸರಿನಲ್ಲಿ ಭ್ರಷ್ಟಗೊಳಿಸುತ್ತಿದೆ. ದೇಶದಲ್ಲಿ ಬಿಜೆಪಿಗೆ 6 ಮುಖ್ಯಮಂತ್ರಿ ಮತ್ತು 13 ಉಪ ಮುಖ್ಯಮಂತ್ರಿ ಮುಖಗಳಿಗೆ. ಆದರೆ, ಬಂಗಾಳದಲ್ಲಿ ಬಿಜೆಪಿ ಪಕ್ಷಕ್ಕೆ ಮುಖ್ಯಮಂತ್ರಿ ಮುಖ ಇಲ್ಲ. ಇಲ್ಲಿ ಮಮತಾ ಬ್ಯಾನರ್ಜಿ ಅವರ ವರ್ಚಸ್ಸನ್ನು ಬಿಜೆಪಿ ಏನೇ ಮಾಡಿದರು ಕುಗ್ಗಿಸಲು ಸಾಧ್ಯವಿಲ್ಲ. ಹೀಗಾಗಿ ಓರ್ವ ಮಹಿಳೆಯಾಗಿ ಮಮತಾ ಬ್ಯಾನರ್ಜಿ ಜೊತೆಗೆ ಕೆಲಸ ಮಾಡುವುದು ನನಗೆ ಗೌರವಾನ್ವಿತವಾದ ವಿಚಾರ ಎಂದು ನಾನು ಭಾವಿಸುತ್ತೇನೆ” ಎಂದು ಸುಜಾತಾ ಮಂಡಲ್ ಖಾನ್ ತಿಳಿಸಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ 42 ಸ್ಥಾನಗಳ ಪೈಕಿ ಬಿಜೆಪಿ 18 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಹೀಗಾಗಿ ವಿಧಾನಸಭಾ ಚುನಾವಣೆಯಲ್ಲೂ ಉತ್ತಮ ಫಲಿತಾಂಶದ ನಿರೀಕ್ಷೆಯಲ್ಲಿದೆ. ಆದರೆ, ಈ ಭಾರಿ ಬಿಜೆಪಿ ಪಶ್ಚಿಮ ಬಂಗಾಳದಲ್ಲಿ ಎರಡಂಕಿ ಸ್ಥಾನವನ್ನು ಗೆಲ್ಲಲು ಸಾಧ್ಯವಿಲ್ಲ ಎಂದು ಪ್ರಖ್ಯಾತ ರಾಜಕೀಯ ನಿಪುಣ ಪ್ರಶಾಂತ್​ ಕಿಶೋರ್​ ಸವಾಲು ಹಾಕಿರುವುದು ಸಹ ಬಂಗಾಳ ಚುನಾವಣೆ ಮೇಲೆ ಪ್ರಭಾವ ಬೀರಲಿದೆ ಎಂದು ಹೇಳಲಾಗುತ್ತಿದೆ. ಪ್ರಶಾಂತ್​ ಕಿಶೋರ್​ ಈ ಭಾರಿ ಬಂಗಾಳ ಚುನಾವಣೆಯಲ್ಲಿ ಟಿಎಂಸಿ ಪರ ಕೆಲಸ ಮಾಡುತ್ತಿದ್ದಾರೆ.


ಇದನ್ನೂ ಓದಿ:’ಮುಸ್ಲಿಮರು ಗೋಮಾಂಸ ತಿನ್ನಬೇಡಿ’ ಹೇಳಿಕೆಗೆ ಮಲಯಾಳಂನಲ್ಲಿ ಸ್ಪಷ್ಟನೆ ನೀಡಿದ ಸಿ.ಎಂ. ಇಬ್ರಾಹಿಂ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...