Homeಮುಖಪುಟಬಂಗಾಳದಲ್ಲಿ ಮುಂದುವರೆದ ವಲಸೆ: ಟಿಎಂಸಿಗೆ ಮತ್ತೊಬ್ಬ ಬಿಜೆಪಿ ಶಾಸಕ ಸೇರ್ಪಡೆ

ಬಂಗಾಳದಲ್ಲಿ ಮುಂದುವರೆದ ವಲಸೆ: ಟಿಎಂಸಿಗೆ ಮತ್ತೊಬ್ಬ ಬಿಜೆಪಿ ಶಾಸಕ ಸೇರ್ಪಡೆ

- Advertisement -
- Advertisement -

ಪಶ್ಚಿಮ ಬಂಗಾಳದ ರಾಯ್‌ಗಂಜ್‌ನ ಬಿಜೆಪಿ ಶಾಸಕ ಕೃಷ್ಣ ಕಲ್ಯಾಣಿ ಬುಧವಾರ ತೃಣಮೂಲ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ. ಬಿಜೆಪಿ ಬಿಟ್ಟು ಟಿಎಂಸಿ ಸೇರಿದ ಪಶ್ಚಿಮ ಬಂಗಾಳದ ಐದನೇ ಬಿಜೆಪಿ ಶಾಸಕರಾಗಿದ್ದಾರೆ ಕೃಷ್ಣ ಕಲ್ಯಾಣಿ.

ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಟಿಎಂಸಿ ಭರ್ಜರಿ ಜನ ಗಳಿಸಿದ ನಂತರ ಇದುವರೆಗೆ ಟಿಎಂಸಿಗೆ ಐವರು ಬಿಜೆಪಿ ಶಾಸಕರು ಸೇರ್ಪಡೆಗೊಂಡಿದ್ದಾರೆ. ಇದು ವಿರೋಧ ಪಕ್ಷಕ್ಕೆ ದೊಡ್ಡ ಹಿನ್ನಡೆಯಾಗಿದೆ.

ಕೃಷ್ಣ ಕಲ್ಯಾಣಿ ಅಕ್ಟೋಬರ್ 1 ರಂದು ಅವರು ಬಿಜೆಪಿ ತೊರೆದಿದ್ದರು. ಇಂದು ಪಕ್ಷದ ಪ್ರಧಾನ ಕಚೇರಿಯಲ್ಲಿ ಟಿಎಂಸಿ ಪ್ರಧಾನ ಕಾರ್ಯದರ್ಶಿ ಪಾರ್ಥ ಚಟರ್ಜಿ ಸಮ್ಮುಖದಲ್ಲಿ ತೃಣಮೂಲ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ.

ಈ ಹಿಂದೆ ಟಿಎಂಸಿಯಲ್ಲಿದ್ದ ಕೃಷ್ಣ ಕಲ್ಯಾಣಿ ಉತ್ತರ ದಿನಾಜ್‌ಪುರ ಜಿಲ್ಲಾ ಅಧ್ಯಕ್ಷರಾಗಿದ್ದರು. ವಿಧಾನಸಭೆ ಚುನಾವಣೆಗೆ ಮುಂಚಿತವಾಗಿ ಬಿಜೆಪಿಗೆ ಸೇರ್ಪಡೆಗೊಂಡು ರಾಯಗಂಜ್‌ನಿಂದ ಕಣಕ್ಕಿಳಿದಿದ್ದರು.

ಇದನ್ನೂ ಓದಿ: ರಾಜಕೀಯವನ್ನೇ ತೊರೆಯುವುದಾಗಿ ಹೇಳಿದ್ದ ಬಿಜೆಪಿ ಸಂಸದ ಬಾಬುಲ್ ಟಿಎಂಸಿ ಸೇರ್ಪಡೆ

 

“ಅವರು ಬಿಜೆಪಿ ಟಿಕೆಟ್‌ನಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಗೆದ್ದಿದ್ದಾರೆ. ಆದರೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಾಯಕತ್ವದಲ್ಲಿ ಸಂಪೂರ್ಣ ನಂಬಿಕೆ ಹೊಂದಿದ್ದಾರೆ. ಆದ್ದರಿಂದ, ಅವರು ಟಿಎಂಸಿಯ ಭಾಗವಾಗಲು ನಿರ್ಧರಿಸಿದ್ದಾರೆ. ಇಂದು ನಾವು ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದ್ದೇವೆ” ಎಂದು ಪಾರ್ಥ ಚಟರ್ಜಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಟಿಎಂಸಿಗೆ ಸೇರ್ಪಡೆಯಾದ ನಂತರ ಮಾತನಾಡಿರುವ ಕೃಷ್ಣ ಕಲ್ಯಾಣಿ, “ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ನನ್ನನ್ನು ಸೋಲಿಸಲು ಬಿಜೆಪಿಯಲ್ಲಿ ಷಡ್ಯಂತ್ರ ನಡೆದಿತ್ತು. ಜನಪರ ಕೆಲಸ ಮಾಡಿದರೂ ಪಕ್ಷದಿಂದ ನನ್ನನ್ನು ಗುರುತಿಸಲಿಲ್ಲ. ನಾನು ಬಿಜೆಪಿ ಪಕ್ಷವನ್ನು ತೊರೆಯಲು ನಿರ್ಧರಿಸಿದ ನಂತರ ನನಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ಇಂದು ನನ್ನ ತಪ್ಪನ್ನು ತಿದ್ದಿಕೊಂಡಿದ್ದೇನೆ’ ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ರಾಜ್ಯ ಬಿಜೆಪಿ ಅಧ್ಯಕ್ಷ ಸುಕಾಂತ ಮಜೂಂದಾರ್,” ಇದು ಅವರ ವೈಯಕ್ತಿಕ ನಿರ್ಧಾರ. ಅವರು ಬಹಳ ದಿನಗಳಿಂದ ಪಕ್ಷದ ಸಂಪರ್ಕದಲ್ಲಿ ಇರಲಿಲ್ಲ. ಪಕ್ಷದ ಕಾರ್ಯಕ್ರಮಗಳಿಗೂ ಹಾಜರಾಗುತ್ತಿರಲಿಲ್ಲ. ಅವರ ಕೆಲಸಕ್ಕೆ ಭವಿಷ್ಯದಲ್ಲಿ ರಾಯಗಂಜ್‌ನ ಜನರಿಂದ ತಕ್ಕ ಉತ್ತರವನ್ನು ಪಡೆಯುತ್ತಾರೆ” ಎಂದು ಕಿಡಿಕಾರಿದ್ದಾರೆ.

ಬಂಗಾಳ ವಿಧಾನಸಭಾ ಚುನಾವಣೆಯ ನಂತರ ಒಟ್ಟು ಐವರು ಬಿಜೆಪಿ ಶಾಸಕರು ಟಿಎಂಸಿಗೆ ಸೇರ್ಪಡೆಗೊಂಡಿದ್ದಾರೆ. ಕೃಷ್ಣ ಕಲ್ಯಾಣಿ ಇನ್ನೂ ಬಿಜೆಪಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡದಿದ್ದರೂ, ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಬಿಜೆಪಿ ಪಕ್ಷದ ಬಲ 70 ಕ್ಕೆ ಇಳಿದಿದೆ.


ಇದನ್ನೂ ಓದಿ: ಜೇಮ್ಸ್‌ ಬಾಂಡ್‌‌ನ ‘007’ ಬಳಸಿ ಮೋದಿಯನ್ನು ಟ್ರೋಲ್‌ ಮಾಡಿದ ಟಿಎಂಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...