Homeಮುಖಪುಟಪ.ಬಂಗಾಳ: ಬಾಬುಲ್ ಸುಪ್ರಿಯೋ ರಾಜೀನಾಮೆ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಕಳೆದುಕೊಂಡ ದಿಲೀಪ್ ಘೋಷ್

ಪ.ಬಂಗಾಳ: ಬಾಬುಲ್ ಸುಪ್ರಿಯೋ ರಾಜೀನಾಮೆ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಕಳೆದುಕೊಂಡ ದಿಲೀಪ್ ಘೋಷ್

- Advertisement -
- Advertisement -

ಬಿಜೆಪಿ ಸಂಸದ ಬಾಬುಲ್ ಸುಪ್ರಿಯೋ ಬಿಜೆಪಿಗೆ ರಾಜೀನಾಮೆ ನೀಡಿ ತೃಣಮೂಲ ಕಾಂಗ್ರೆಸ್‌ಗೆ ಸೇರ್ಪಡೆಯಾದ ಎರಡು ದಿನಗಳ ನಂತರ, ಬಿಜೆಪಿಯ ಬಂಗಾಳ ಘಟಕದ ಮುಖ್ಯಸ್ಥ ದಿಲೀಪ್ ಘೋಷ್ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲಾಗಿದೆ.

ಉತ್ತರ ಬಂಗಾಳದ ಬಾಲುರ್‌ಘಾಟ್‌ನ ಬಿಜೆಪಿಯ ಸಂಸದ, 41 ವರ್ಷದ ಸುಕಾಂತ ಮಜೂಂದಾರ್ ಅವರಿಗೆ ಬಂಗಾಳ ಘಟಕದ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳುವಂತೆ ಸೂಚಿಸಲಾಗಿದೆ. ಆಗಾಗ್ಗೆ ವಿವಾದಾತ್ಮಕ ಹೇಳಿಕೆಗಳಿಂದ ಹೆಸರುವಾಸಿಯಾಗಿದ್ದ ದಿಲೀಪ್ ಘೋಷ್ ಅವರಿಗೆ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ಸ್ಥಾನವನ್ನು ನೀಡಲಾಗಿದೆ.

ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯಿಂದ ತೃಣಮೂಲ ಕಾಂಗ್ರೆಸ್‌ಗೆ ಸೇರ್ಪಡೆಯಾಗುವವರ ಸಂಖ್ಯೆ ಹೆಚ್ಚಾಗುತ್ತಿದೆ. ಈಗಾಗಲೇ ನಾಲ್ಕು ಮಂದಿ ಹಾಲಿ ಶಾಸಕರು ಟಿಎಂಸಿಗೆ ವಾಪಸ್ ಆಗಿದ್ದಾರೆ. 2 ದಿನಗಳ ಹಿಂದೆ ಬಿಜೆಪಿ ಸಂಸದ ಬಾಬೂಲ್ ಸುಪ್ರಿಯೋ ಟಿಎಂಸಿಗೆ ಸೇರ್ಪಡೆಯಾಗಿದ್ದಾರೆ. ಈ ವರ್ಷದ ಆರಂಭದಲ್ಲಿ ನಡೆದ ಬಂಗಾಳ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ 200 ಸ್ಥಾನಗಳನ್ನು ಗುರಿಯಾಗಿಸಿಕೊಂಡಿತ್ತು. ಆದರೆ ಕೇವಲ 77 ಸ್ಥಾನಗಳನ್ನು ಪಡೆದಿತ್ತು. ತೃಣಮೂಲ ಕಾಂಗ್ರೆಸ್ ಭರ್ಜರಿ ಗೆಲುವು ಪಡೆದಿತ್ತು.

ಇದನ್ನೂ ಓದಿ: ಪಶ್ಚಿಮ ಬಂಗಾಳ: ಟಿಎಂಸಿ ಸೇರಿದ ಬಿಜೆಪಿ ಶಾಸಕ ತನ್ಮಯ್ ಘೋಷ್

ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್) ಪ್ರಮುಖರಾಗಿರುವ, ಸಸ್ಯಶಾಸ್ತ್ರದ ಪ್ರಾಧ್ಯಾಪಕರಾದ ಡಾ. ಸುಕಾಂತ ಮಜೂಂದಾರ್, “ದಿಲೀಪ್ ಘೋಷ್ ಅವರು ಬಂಗಾಳದಲ್ಲಿ ಬಿಜೆಪಿಯನ್ನು ಪ್ರಬಲ ವಿರೋಧ ಪಕ್ಷವಾಗಿ ಉನ್ನತ ಸ್ಥಾನಕ್ಕೆ ಕೊಂಡೊಯ್ದಿದ್ದಾರೆ. ಅದರ ಬೆಳವಣಿಗೆಗೆ ಅವರು ಗಮನಾರ್ಹ ಕೊಡುಗೆ ನೀಡಿದ್ದಾರೆ. ಆ ಹಂತದಿಂದ ಪಕ್ಷವನ್ನು ಮುನ್ನಡೆಸಲು ನಾನು ಆಶಿಸುತ್ತೇನೆ” ಎಂದಿದ್ದಾರೆ.

ಬಂಗಾಳದ ನೂತನ ಅಧ್ಯಕ್ಷ ಡಾ. ಮಜೂಂದಾರ್ ಅವರನ್ನು ಅಭಿನಂದಿಸಿರುವ ದಿಲೀಪ್ ಘೋಷ್, “ಜೆಪಿ ನಡ್ಡಾ ಅವರು ಕರೆ ಮಾಡಿ ನನ್ನನ್ನು ರಾಷ್ಟ್ರ ರಾಜಕಾರಣಕ್ಕೆ ಕರೆದಿದ್ದಾರೆ. ಇದು ನನ್ನ ಕೆಲಸ ಮತ್ತು ನಾನು ಪಕ್ಷಕ್ಕೆ ನೀಡಿರುವ ಕೊಡುಗೆಯನ್ನು ಗುರುತಿಸುತ್ತದೆ ಎಂದು ಭಾವಿಸುತ್ತೇನೆ. ಸಮಾಜ ಮತ್ತು ಪಕ್ಷದ ಹೊಸ ಬೇಡಿಕೆಗಳನ್ನು ಪೂರೈಸಲು ಬಂಗಾಳದಲ್ಲಿ ಬಿಜೆಪಿ ನಾಯಕತ್ವಕ್ಕೆ ಪರಿವರ್ತನೆಯ ಅಗತ್ಯವಿದೆ ಎಂದು ನಾನು ಹೇಳಿದ್ದೆ” ಎಂದಿದ್ದಾರೆ.

ಆದರೆ, ಬಂಗಾಳ ಬಿಜೆಪಿಯಲ್ಲಿನ ಆಂತರಿಕ ಸಂಘರ್ಷದಿಂದ ಅಧ್ಯಕ್ಷ ಸ್ಥಾನವನ್ನು ಬದಲಿಸಲಾಗಿದೆ ಎಂದು ಹೇಳಲಾಗುತ್ತಿದೆ. ಶನಿವಾರ ಟಿಎಂಸಿ ಸೇರಿದ ಬಾಬುಲ್ ಸುಪ್ರಿಯೋ ಬಹಿಂಗವಾಗಿಯೇ ದಿಲೀಪ್ ಘೋಷ್ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಬಿಜೆಪಿ ಚುನಾವಣೆಯಲ್ಲಿ ಸೋಲಲು ದಿಲೀಪ್ ಘೋಷ್ ಕಾರಣ ಎಂದಿದ್ದರು.

ತೃಣಮೂಲ ಕಾಂಗ್ರೆಸ್‌ ಮತ್ತು ಮಮತಾ ಬ್ಯಾನರ್ಜಿಯವರ ಕಟು ಟೀಕಾಕಾರರಲ್ಲಿ ಬಾಬುಲ್ ಸುಪ್ರಿಯೋ ಒಬ್ಬರಾಗಿದ್ದರು. ಸಚಿವ ಸ್ಥಾನ ಕಳೆದುಕೊಂಡ ಬಳಿಕ ರಾಜಕೀಯ ತ್ಯಜಿಸುವುದಾಗಿ ಹೇಳಿದ್ದ ಅವರು, ಯಾವುದೇ ರಾಜಕೀಯ ಪಕ್ಷಕ್ಕೆ ಸೇರುವುದಿಲ್ಲ ಎಂದಿದ್ದರು. ಈಗ ಟಿಎಂಸಿಗೆ ಸೇರ್ಪಡೆಯಾಗಿದ್ದಾರೆ.


ಇದನ್ನೂ ಓದಿ: ರಾಜಕೀಯವನ್ನೇ ತೊರೆಯುವುದಾಗಿ ಹೇಳಿದ್ದ ಬಿಜೆಪಿ ಸಂಸದ ಬಾಬುಲ್ ಟಿಎಂಸಿ ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ, ಇಸ್ರೇಲ್, ಇರಾನ್ ದಾಳಿ-ಪ್ರತಿ ದಾಳಿ : ಈವರೆಗೆ ಕನಿಷ್ಠ 8 ಸಾವು

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ದಾಳಿ ಹಾಗೂ ಅದಕ್ಕೆ ಪ್ರತಿಯಾಗಿ ಇರಾನ್ ನಡೆಸಿದ ಪ್ರತಿ-ದಾಳಿಗಳಲ್ಲಿ ಹಲವು ಸಾವು-ನೋವುಗಳು ಸಂಭವಿಸಿದ ಬಗ್ಗೆ ವರದಿಯಾಗಿದೆ. ದಕ್ಷಿಣ ಇರಾನ್‌ನ ಮಿನಾಬ್‌ನಲ್ಲಿರುವ ಹೆಣ್ಣು...

ಮಧ್ಯಪ್ರಾಚ್ಯ ಉದ್ವಿಗ್ನ : ಯುಎಇ, ಬಹ್ರೇನ್‌, ಕತಾರ್, ಕುವೈತ್‌ನ ಅಮೆರಿಕ ಸೇನಾ ನೆಲೆಗಳ ಮೇಲೆ ಇರಾನ್ ಪ್ರತಿ ದಾಳಿ!

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ನಡೆಸಿದ ಜಂಟಿ ದಾಳಿಗೆ ಪ್ರತಿಯಾಗಿ, ಇರಾನ್ ಅಮೆರಿಕದ ಮಿಲಿಟರಿ ನೆಲೆಗಳಿರುವ ಹಲವು ಅರಬ್ ರಾಷ್ಟ್ರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಇರಾನ್ ಉಡಾಯಿಸಿದ ಬ್ಯಾಲಿಸ್ಟಿಕ್...

ರಾಜ್ಯಸಭೆಗೆ ಮೇನಕಾ ಗುರುಸ್ವಾಮಿ : ದೇಶದ ಮೊದಲ LGBTQ+ ಸಂಸದೆಯಾಗಲು ಅಣಿಯಾದ ಹಿರಿಯ ವಕೀಲೆ

ರಾಜ್ಯಸಭಾ ಚುನಾವಣೆಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶುಕ್ರವಾರ (ಫೆ.27) ವಕೀಲೆ ಮೇನಕಾ ಗುರುಸ್ವಾಮಿ, ಪಶ್ಚಿಮ ಬಂಗಾಳದ ಮಾಜಿ ಪೊಲೀಸ್ ಮುಖ್ಯಸ್ಥ ರಾಜೀವ್ ಕುಮಾರ್, ರಾಜ್ಯ ಸಂಪುಟ ಸಚಿವ ಬಾಬುಲ್ ಸುಪ್ರಿಯೋ ಮತ್ತು ನಟಿ...

ದಾಳಿ ಮುಂದುವರಿಸುವ ಸೂಚನೆ ನೀಡಿದ ಟ್ರಂಪ್ : ಇರಾನ್‌ನಿಂದ ತೀವ್ರ ಪ್ರತಿದಾಳಿಯ ಎಚ್ಚರಿಕೆ

ಅಮೆರಿಕದ ಸಹಯೋಗದೊಂದಿಗೆ ಇಸ್ರೇಲ್ ಶನಿವಾರ (ಫೆ.28) ಇರಾನ್‌ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದರಿಂದ ಮಧ್ಯಪ್ರಾಚ್ಯದಲ್ಲಿ ಯುದ್ಧ ಪ್ರಾರಂಭವಾಗುವಾಗ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಇಸ್ರೇಲ್‌ ಇರಾನ್‌ನ ರಾಜಧಾನಿ ಟೆಹ್ರಾನ್‌ ಸೇರಿದಂತೆ ದೇಶದ ಹಲವು ಸ್ಥಳಗಳ...

ಅಮೆರಿಕ ಅಣತಿಯಂತೆ ಇರಾನ್ ಮೇಲೆ ಇಸ್ರೇಲ್ ದಾಳಿ : ಟೆಹ್ರಾನ್‌ನ ಹಲವೆಡೆ ಭಾರೀ ಸ್ಪೋಟ

ಇರಾನ್ ಮೇಲೆ ಇಸ್ರೇಲ್ ಶನಿವಾರ (ಫೆ.28) ವೈಮಾನಿಕ ದಾಳಿ ನಡೆಸಿರುವುದಾಗಿ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಈ ದಾಳಿಯನ್ನು ಇಸ್ರೇಲ್ 'ಪೂರ್ವಭಾವಿ ದಾಳಿ' ಎಂದು ಕರೆದಿದೆ. ಇಂದು ಬೆಳಿಗ್ಗಿನ ಹೇಳಿಕೆಯೊಂದರಲ್ಲಿ, ಇಸ್ರೇಲ್ ರಕ್ಷಣಾ ಸಚಿವ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ನಟ ದಿಲೀಪ್, ಇತರರ ಖುಲಾಸೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಕೇರಳ ಸರ್ಕಾರ

ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ (2017ರ ಪ್ರಕರಣ) ಮಲಯಾಳಂನ ಪ್ರಮುಖ ನಟ ದಿಲೀಪ್ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕೇರಳ ಸರ್ಕಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಪ್ರಕರಣದ...

‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ವಿಧಿಸಿದ್ದ ತಡೆಯಾಜ್ಞೆ ತೆರವು

'ದಿ ಕೇರಳ ಸ್ಟೋರಿ-2 : ಗೋಸ್ ಬಿಯಾಂಡ್' ಚಿತ್ರದ ಬಿಡುಗಡೆಗೆ ವಿಧಿಸಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕೇರಳ ಹೈಕೋರ್ಟ್ ವಿಭಾಗೀಯ ಪೀಠ ಶುಕ್ರವಾರ (ಫೆ.27) ತೆರವುಗೊಳಿಸಿದೆ. 'ಕೋಮು ಸಾಮರಸ್ಯ ಕದಡುವ ಸಾಧ್ಯತೆ'ಯನ್ನು ಉಲ್ಲೇಖಿಸಿ ನ್ಯಾಯಮೂರ್ತಿ ಬೆಚು...

‘ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ; ಬಿಜೆಪಿ 10ಕ್ಕಿಂತ ಹೆಚ್ಚು ಸ್ಥಾನ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ’: ಕೇಜ್ರಿವಾಲ್ ಸವಾಲು

"ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ, ಬಿಜೆಪಿ ಹತ್ತಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ" ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ....

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...