Homeಮುಖಪುಟಪ.ಬಂಗಾಳ: ಬಾಬುಲ್ ಸುಪ್ರಿಯೋ ರಾಜೀನಾಮೆ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಕಳೆದುಕೊಂಡ ದಿಲೀಪ್ ಘೋಷ್

ಪ.ಬಂಗಾಳ: ಬಾಬುಲ್ ಸುಪ್ರಿಯೋ ರಾಜೀನಾಮೆ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಕಳೆದುಕೊಂಡ ದಿಲೀಪ್ ಘೋಷ್

- Advertisement -
- Advertisement -

ಬಿಜೆಪಿ ಸಂಸದ ಬಾಬುಲ್ ಸುಪ್ರಿಯೋ ಬಿಜೆಪಿಗೆ ರಾಜೀನಾಮೆ ನೀಡಿ ತೃಣಮೂಲ ಕಾಂಗ್ರೆಸ್‌ಗೆ ಸೇರ್ಪಡೆಯಾದ ಎರಡು ದಿನಗಳ ನಂತರ, ಬಿಜೆಪಿಯ ಬಂಗಾಳ ಘಟಕದ ಮುಖ್ಯಸ್ಥ ದಿಲೀಪ್ ಘೋಷ್ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲಾಗಿದೆ.

ಉತ್ತರ ಬಂಗಾಳದ ಬಾಲುರ್‌ಘಾಟ್‌ನ ಬಿಜೆಪಿಯ ಸಂಸದ, 41 ವರ್ಷದ ಸುಕಾಂತ ಮಜೂಂದಾರ್ ಅವರಿಗೆ ಬಂಗಾಳ ಘಟಕದ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳುವಂತೆ ಸೂಚಿಸಲಾಗಿದೆ. ಆಗಾಗ್ಗೆ ವಿವಾದಾತ್ಮಕ ಹೇಳಿಕೆಗಳಿಂದ ಹೆಸರುವಾಸಿಯಾಗಿದ್ದ ದಿಲೀಪ್ ಘೋಷ್ ಅವರಿಗೆ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ಸ್ಥಾನವನ್ನು ನೀಡಲಾಗಿದೆ.

ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯಿಂದ ತೃಣಮೂಲ ಕಾಂಗ್ರೆಸ್‌ಗೆ ಸೇರ್ಪಡೆಯಾಗುವವರ ಸಂಖ್ಯೆ ಹೆಚ್ಚಾಗುತ್ತಿದೆ. ಈಗಾಗಲೇ ನಾಲ್ಕು ಮಂದಿ ಹಾಲಿ ಶಾಸಕರು ಟಿಎಂಸಿಗೆ ವಾಪಸ್ ಆಗಿದ್ದಾರೆ. 2 ದಿನಗಳ ಹಿಂದೆ ಬಿಜೆಪಿ ಸಂಸದ ಬಾಬೂಲ್ ಸುಪ್ರಿಯೋ ಟಿಎಂಸಿಗೆ ಸೇರ್ಪಡೆಯಾಗಿದ್ದಾರೆ. ಈ ವರ್ಷದ ಆರಂಭದಲ್ಲಿ ನಡೆದ ಬಂಗಾಳ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ 200 ಸ್ಥಾನಗಳನ್ನು ಗುರಿಯಾಗಿಸಿಕೊಂಡಿತ್ತು. ಆದರೆ ಕೇವಲ 77 ಸ್ಥಾನಗಳನ್ನು ಪಡೆದಿತ್ತು. ತೃಣಮೂಲ ಕಾಂಗ್ರೆಸ್ ಭರ್ಜರಿ ಗೆಲುವು ಪಡೆದಿತ್ತು.

ಇದನ್ನೂ ಓದಿ: ಪಶ್ಚಿಮ ಬಂಗಾಳ: ಟಿಎಂಸಿ ಸೇರಿದ ಬಿಜೆಪಿ ಶಾಸಕ ತನ್ಮಯ್ ಘೋಷ್

ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್) ಪ್ರಮುಖರಾಗಿರುವ, ಸಸ್ಯಶಾಸ್ತ್ರದ ಪ್ರಾಧ್ಯಾಪಕರಾದ ಡಾ. ಸುಕಾಂತ ಮಜೂಂದಾರ್, “ದಿಲೀಪ್ ಘೋಷ್ ಅವರು ಬಂಗಾಳದಲ್ಲಿ ಬಿಜೆಪಿಯನ್ನು ಪ್ರಬಲ ವಿರೋಧ ಪಕ್ಷವಾಗಿ ಉನ್ನತ ಸ್ಥಾನಕ್ಕೆ ಕೊಂಡೊಯ್ದಿದ್ದಾರೆ. ಅದರ ಬೆಳವಣಿಗೆಗೆ ಅವರು ಗಮನಾರ್ಹ ಕೊಡುಗೆ ನೀಡಿದ್ದಾರೆ. ಆ ಹಂತದಿಂದ ಪಕ್ಷವನ್ನು ಮುನ್ನಡೆಸಲು ನಾನು ಆಶಿಸುತ್ತೇನೆ” ಎಂದಿದ್ದಾರೆ.

ಬಂಗಾಳದ ನೂತನ ಅಧ್ಯಕ್ಷ ಡಾ. ಮಜೂಂದಾರ್ ಅವರನ್ನು ಅಭಿನಂದಿಸಿರುವ ದಿಲೀಪ್ ಘೋಷ್, “ಜೆಪಿ ನಡ್ಡಾ ಅವರು ಕರೆ ಮಾಡಿ ನನ್ನನ್ನು ರಾಷ್ಟ್ರ ರಾಜಕಾರಣಕ್ಕೆ ಕರೆದಿದ್ದಾರೆ. ಇದು ನನ್ನ ಕೆಲಸ ಮತ್ತು ನಾನು ಪಕ್ಷಕ್ಕೆ ನೀಡಿರುವ ಕೊಡುಗೆಯನ್ನು ಗುರುತಿಸುತ್ತದೆ ಎಂದು ಭಾವಿಸುತ್ತೇನೆ. ಸಮಾಜ ಮತ್ತು ಪಕ್ಷದ ಹೊಸ ಬೇಡಿಕೆಗಳನ್ನು ಪೂರೈಸಲು ಬಂಗಾಳದಲ್ಲಿ ಬಿಜೆಪಿ ನಾಯಕತ್ವಕ್ಕೆ ಪರಿವರ್ತನೆಯ ಅಗತ್ಯವಿದೆ ಎಂದು ನಾನು ಹೇಳಿದ್ದೆ” ಎಂದಿದ್ದಾರೆ.

ಆದರೆ, ಬಂಗಾಳ ಬಿಜೆಪಿಯಲ್ಲಿನ ಆಂತರಿಕ ಸಂಘರ್ಷದಿಂದ ಅಧ್ಯಕ್ಷ ಸ್ಥಾನವನ್ನು ಬದಲಿಸಲಾಗಿದೆ ಎಂದು ಹೇಳಲಾಗುತ್ತಿದೆ. ಶನಿವಾರ ಟಿಎಂಸಿ ಸೇರಿದ ಬಾಬುಲ್ ಸುಪ್ರಿಯೋ ಬಹಿಂಗವಾಗಿಯೇ ದಿಲೀಪ್ ಘೋಷ್ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಬಿಜೆಪಿ ಚುನಾವಣೆಯಲ್ಲಿ ಸೋಲಲು ದಿಲೀಪ್ ಘೋಷ್ ಕಾರಣ ಎಂದಿದ್ದರು.

ತೃಣಮೂಲ ಕಾಂಗ್ರೆಸ್‌ ಮತ್ತು ಮಮತಾ ಬ್ಯಾನರ್ಜಿಯವರ ಕಟು ಟೀಕಾಕಾರರಲ್ಲಿ ಬಾಬುಲ್ ಸುಪ್ರಿಯೋ ಒಬ್ಬರಾಗಿದ್ದರು. ಸಚಿವ ಸ್ಥಾನ ಕಳೆದುಕೊಂಡ ಬಳಿಕ ರಾಜಕೀಯ ತ್ಯಜಿಸುವುದಾಗಿ ಹೇಳಿದ್ದ ಅವರು, ಯಾವುದೇ ರಾಜಕೀಯ ಪಕ್ಷಕ್ಕೆ ಸೇರುವುದಿಲ್ಲ ಎಂದಿದ್ದರು. ಈಗ ಟಿಎಂಸಿಗೆ ಸೇರ್ಪಡೆಯಾಗಿದ್ದಾರೆ.


ಇದನ್ನೂ ಓದಿ: ರಾಜಕೀಯವನ್ನೇ ತೊರೆಯುವುದಾಗಿ ಹೇಳಿದ್ದ ಬಿಜೆಪಿ ಸಂಸದ ಬಾಬುಲ್ ಟಿಎಂಸಿ ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...