Homeಮುಖಪುಟಪಶ್ಚಿಮ ಬಂಗಾಳ ಉಪಚುನಾವಣೆ | ಆರ್‌ಜಿ ಕರ್ ಪ್ರತಿಭಟನೆ ಮೇಲೆ ಎಲ್ಲರ ಕಣ್ಣು

ಪಶ್ಚಿಮ ಬಂಗಾಳ ಉಪಚುನಾವಣೆ | ಆರ್‌ಜಿ ಕರ್ ಪ್ರತಿಭಟನೆ ಮೇಲೆ ಎಲ್ಲರ ಕಣ್ಣು

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ನವೆಂಬರ್ 13 ರಂದು ನಡೆಯಲಿರುವ ಉಪ ಚುನಾವಣೆಯ ಮೇಲೆ ದೇಶದ ಕಣ್ಣು ನೆಟ್ಟಿದೆ. ದೇಶದಾದ್ಯಂತ ಭಾರಿ ಸುದ್ದಿಯಾದ ಕೊಲ್ಕತ್ತಾದ ಆರ್‌ಜಿಕರ್ ಆಸ್ಪತ್ರೆಯಲ್ಲಿ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಂತರ ರಾಜ್ಯದಲ್ಲಿ ಭಾರಿ ಪ್ರತಿಭಟನೆ ನಡೆಯುತ್ತಿದ್ದು, ಹಾಗಾಗಿ ವಿಪಕ್ಷಗಳು ಈ ಚುನಾವಣೆಯಲ್ಲಿ ಲಾಭ ಪಡೆಯಲಿದೆ ಎಂದು ನಂಬಲಾಗಿದೆ. ಬಂಗಾಳ ಉಪಚುನಾವಣೆ

ಉಪ ಚುನಾವಣೆಯಲ್ಲಿ ಲಾಭ ಪಡೆಯಲು ಪ್ರಮುಖ ವಿಪಕ್ಷವಾದ ಬಿಜೆಪಿ ಸೇರಿದಂತೆ ಸಿಪಿಐ(ಎಂ) ಮತ್ತು ಕಾಂಗ್ರೆಸ್ ಕೂಡಾ ಲೆಕ್ಕಾಚಾರಗಳನ್ನು ಮಾಡುತ್ತಿವೆ. ಒಟ್ಟು ಆರು ಕ್ಷೇತ್ರಗಳಲ್ಲಿ 2021ರ ಚುನಾವಣೆ ವೇಳೆ ಬಿಜೆಪಿ 1 ಕ್ಷೇತ್ರವನ್ನು ಗೆದ್ದಿದ್ದರೆ, ಉಳಿದ ಐದು ಕ್ಷೇತ್ರಗಳಲ್ಲಿ ಆಡಳಿತರೂಢ ಟಿಎಂಸಿ ಗೆದ್ದುಕೊಂಡಿತ್ತು. ಎಲ್ಲಾ ಹಾಲಿ ಶಾಸಕರು ಈ ವರ್ಷದ ಲೋಕಸಭೆ ಚುನಾವಣೆಯಲ್ಲಿ ಸಂಸತ್ತಿಗೆ ಆಯ್ಕೆಯಾದ ಕಾರಣ ಕ್ಷೇತ್ರಗಳು ತೆರವುಗೊಂಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

2021ರಲ್ಲಿ ಸಿತಾಯಿ (ಎಸ್‌ಸಿ-ಮೀಸಲು), ನೈಹತಿ, ಹರೋವಾ, ಮೇದಿನಿಪುರ್ ಮತ್ತು ತಲ್ದಂಗ್ರಾ ವಿಧಾನಸಭಾ ಕ್ಷೇತ್ರಗಳಲ್ಲಿ ಟಿಎಂಸಿಯ ಅಭ್ಯರ್ಥಿಗಳು ಗೆದ್ದಿದ್ದರೆ, ಬಿಜೆಪಿ ಮದರಿಹತ್ (ಎಸ್‌ಟಿ) ಕ್ಷೇತ್ರದಲ್ಲಿ ಜಯಗಳಿಸಿತ್ತು. ಟಿಎಂಸಿ ಗೆದ್ದಿರುವ ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿ 2ನೇ ಸ್ಥಾನದಲ್ಲಿದ್ದರೆ, ಬಿಜೆಪಿ ಗೆದ್ದ ಮದರಿಹತ್‌ ಕ್ಷೇತ್ರದಲ್ಲಿ ಟಿಎಂಸಿ ಎರಡನೇ ಸ್ಥಾನದಲ್ಲಿದೆ. ಬಂಗಾಳ ಉಪಚುನಾವಣೆ

“ಆರ್ ಜಿ ಕರ್ ಅತ್ಯಾಚಾರ ಮತ್ತು ಕೊಲೆಯ ನಂತರ ಇದು ಮೊದಲ ಚುನಾವಣೆ. ನೀವು ಸೇಡು ತೀರಿಸಿಕೊಳ್ಳಲು ಬಯಸುವುದಿಲ್ಲವೇ?” ಎಂದು ವಿರೋಧ ಪಕ್ಷದ ನಾಯಕ ಮತ್ತು ಬಿಜೆಪಿ ನಾಯಕ ಸುವೇಂದು ಅಧಿಕಾರಿ ಮತದಾರರಿಗೆ ಹೇಳುತ್ತಿದ್ದಾರೆ. ಆಸ್ಪತ್ರೆಯ ದಾಳಿಯ ಸಂತ್ರಸ್ತರಿಗೆ ನ್ಯಾಯವನ್ನು ಖಚಿತಪಡಿಸಿಕೊಳ್ಳಲು ಪಶ್ಚಿಮ ಬಂಗಾಳದಲ್ಲಿ ಸರ್ಕಾರ ಬದಲಾವಣೆಯೊಂದೇ ಮಾರ್ಗವಾಗಿದೆ ಎಂದು ಅವರು ಪ್ರತಿಪಾದಿಸುತ್ತಿದ್ದಾರೆ.

ಬಿಜೆಪಿಯು ಚುನಾವಣೆಗೆ ಯಾವುದೇ ಸಂಬಂಧವಿಲ್ಲದ ವಿಷಯಗಳನ್ನು ಎಳೆದು ತರುತ್ತಿದೆ ಎಂದು ಟಿಎಂಸಿ ನಾಯಕ ಕುನಾಲ್ ಘೋಷ್ ಆರೋಪಿಸಿದ್ದಾರೆ. “ಅಭಿವೃದ್ಧಿ ವಿಚಾರದ ಮೇಲೆ ವಿಧಾನಸಭೆ ಚುನಾವಣೆ ನಡೆಯಲಿದೆ. ಯಾರು ಅಭಿವೃದ್ಧಿಯನ್ನು ಖಾತ್ರಿಪಡಿಸುತ್ತಾರೆ ಎಂಬುದನ್ನು ಜನರು ನೋಡುತ್ತಾರೆ ಮತ್ತು ಅದಕ್ಕೆ ಅನುಗುಣವಾಗಿ ಮತ ಚಲಾಯಿಸುತ್ತಾರೆ” ಎಂದು ಘೋಷ್ ಹೇಳಿದ್ದಾರೆ.

“ಬಿಜೆಪಿ ಅತ್ಯಾಚಾರ ಪ್ರಕರಣವನ್ನು ಮುನ್ನಲೆಗೆ ತಂದರೆ ಟಿಎಂಸಿ ಉತ್ತರ ಪ್ರದೇಶದ ಉನ್ನಾವ್ ಮತ್ತು ಹತ್ರಾಸ್ ಹಾಗೂ ಮಧ್ಯಪ್ರದೇಶ, ಗುಜರಾತ್‌ನಲ್ಲಿ ನಡೆದ ಇತರ ಲೈಂಗಿಕ ದೌರ್ಜನ್ಯದ ಘಟನೆಗಳನ್ನು ಸಹ ಪ್ರತಿಯಾಗಿ ಎತ್ತಬಹುದಲ್ಲವೆ, ಇವೆಲ್ಲವೂ ಬಿಜೆಪಿ ಆಡಳಿತವಿರುವ ರಾಜ್ಯಗಳು. ವಾಸ್ತವವೆಂದರೆ ಬಿಜೆಪಿಗೆ ತಾವು ಗೆಲ್ಲುವುದಿಲ್ಲ ಎಂದು ತಿಳಿದಿದೆ. ಹಾಗಾಗಿ ಆರ್ ಜಿ ಕರ್ ಬಗ್ಗೆ ಕೂಗಾಡುತ್ತಿದ್ದಾರೆ” ಎಂದು ಘೋಷ್ ಹೇಳಿದ್ದಾರೆ.

ಉಪ ಚುನಾವಣೆ ನಡೆಯುತ್ತಿರುವ ಆರು ಕ್ಷೇತ್ರಗಳಲ್ಲಿ ಐದು ಕ್ಷೇತ್ರಗಳನ್ನು 2021 ಟಿಎಂಸಿ ಗೆದ್ದಿದ್ದು ಮಾತ್ರವಲ್ಲದೆ, ಈ ವರ್ಷ ನಡೆದ ಲೋಕಸಭಾ ಚುನಾವಣೆಯಲ್ಲಿ ಕೂಡಾ ಹೆಚ್ಚಿನ ಕ್ಷೇತಗಳಲ್ಲಿ ಪ್ರಾಬಲ್ಯ ಮೆರೆದಿತ್ತು. ಅದಾಗ್ಯೂ, ಮದರಿಹತ್ ಮತ್ತು ಮೇದಿನಿಪುರದ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಮಾತ್ರ ಬಿಜೆಪಿ ಕ್ರಮವಾಗಿ 9,000 ಮತ್ತು 11,000 ಮತಗಳಿಂದ ಮುಂದಿದೆ.

ಹಾಗಾಗಿ ಒಂದು ತಿಂಗಳ ಕಾಲ ನಡೆದ ಆರ್‌ಜಿ ಕಾರ್‌ ಪ್ರತಿಭಟನೆಯ ಕಾರಣಕ್ಕೆ ಮೇದಿನಿಪುರ ಮತ್ತು ಮದರಿಹತ್‌ನಲ್ಲಿ ಪಕ್ಷವೂ ಗೆಲ್ಲಬಹುದು ಎಂದು ಬಿಜೆಪಿ ಬಿಜೆಪಿ ಆಶಿಸುತ್ತಿದೆ. ಆದರೆ ಈ ಲೆಕ್ಕಾಚಾರವನ್ನು ಟಿಎಂಸಿ ನಿರಾಕರಿಸಿದೆ. ನಮ್ಮ ಮತ ಬ್ಯಾಂಕ್ ಹಾಗೆ ಉಳಿದಿದೆ ಎಂದ ಹೇಳುವ ಪಕ್ಷವೂ, ಉಪ ಚುನಾವಣೆಗಳಲ್ಲಿ ಯಾವತ್ತೂ ಆಡಳಿತರೂಢ ಪಕ್ಷಕ್ಕೆ ಹೆಚ್ಚಿನ ಲಾಭವಾಗಿದೆ ಎಂದು ಪ್ರತಿಪಾದಿಸಿದೆ.

ಭ್ರಷ್ಟಾಚಾರದ ಆರೋಪಗಳ ವಿರುದ್ಧ ಹೋರಾಡುತ್ತಿರುವ ಟಿಎಂಸಿಯು ಉಪಚುನಾವಣೆಗೆ ಜನಪ್ರಿಯ ಶುದ್ಧಹಸ್ತ ಎಂದು ತೋರುವ ಸ್ಥಳೀಯ ಮುಖಗಳನ್ನು ಕಣಕ್ಕಿಳಿಸಿದೆ. ಬಿಜೆಪಿ ಕೂಡಾ ಸ್ಥಳೀಯ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದು, ಅದರಲ್ಲೂ ಇಬ್ಬರು ಅಭ್ಯರ್ಥಿಗಳು ಎಡಪಕ್ಷಗಳಿಂದ ಬಿಜೆಪಿಗೆ ಸೇರಿದವರಾಗಿದ್ದಾರೆ.

ಎರಡು ಪಕ್ಷಗಳು ಭಾರಿ ಪ್ರಚಾರ ಮಾಡುತ್ತಿದ್ದು, ಸಚಿವರಾದ ಸುಜಿತ್ ಬೋಸ್, ಫಿರ್ಹಾದ್ ಹಕೀಮ್ ಮತ್ತು ಚಂದ್ರಿಮಾ ಭಟ್ಟಾಚಾರ್ಯರಂತಹ ಟಿಎಂಸಿ ನಾಯಕತ್ವವು ಪ್ರಚಾರವನ್ನು ಮುನ್ನಡೆಸುತ್ತಿದ್ದಾರೆ. ಅವರು ಟಿಎಂಸಿ ಸರ್ಕಾರದ ಜನಪ್ರಿಯ ಕಲ್ಯಾಣ ಯೋಜನೆಗಳಾದ ಲಕ್ಷ್ಮೀರ್ ಭಂಡಾರ್, ಕನ್ಯಾಶ್ರೀ, ಯುವಶ್ರೀ ಇತ್ಯಾದಿಗಳನ್ನು ಮುಂದಿಟ್ಟು ಪ್ರಚಾರ ಮಾಡುತ್ತಿದ್ದಾರೆ.

ಬಿಜೆಪಿ ಕಡೆಯಿಂದ, ಪ್ರಮುಖವಾಗಿ ಸುವೆಂಧು ಅಧಿಕಾರಿಯೆ ಮತ್ತೊಮ್ಮೆ ಪ್ರಚಾರದ ಪ್ರಮುಖ ಮುಖವಾಗಿದ್ದು, ಅವರು ರಾಜ್ಯಾಧ್ಯಕ್ಷ ಸುಕಾಂತ ಮಜುಂದಾರ್ ಅವರೊಂದಿಗೆ ಪ್ರಚಾರ ಕೈಗೊಳ್ಳುತ್ತಿದ್ದಾರೆ. ಟಿಎಂಸಿ ಸರ್ಕಾರದ ಅಡಿಯಲ್ಲಿ ಹೆಚ್ಚುತ್ತಿರುವ ಭ್ರಷ್ಟಾಚಾರ ಮತ್ತು ಹದಗೆಟ್ಟ ಕಾನೂನು ಮತ್ತು ಸುವ್ಯವಸ್ಥೆ ಅವರ ಪ್ರಮುಖ ಚುನಾವಣಾ ವಿಷಯವಾಗಿದೆ.

ಮತ್ತೊಂದೆಡೆ, ಎಡಪಕ್ಷಗಳು ಮತ್ತು ಕಾಂಗ್ರೆಸ್ ತಮ್ಮ ಮೈತ್ರಿಯನ್ನು ಒಟ್ಟಿಗೆ ಹಿಡಿದಿಟ್ಟುಕೊಳ್ಳುವುದರಲ್ಲಿ ವಿಫಲವಾಗಿರುವುದು ಸೇರಿದಂತೆ ಉಪಚುನಾವಣೆಗೆ ನೀರಸವಾಗಿ ಸಿದ್ಧವಾಗಿದೆ. ಉಪ ಚುನಾವಣೆ ನಡೆಯಲಿರುವ ಐದು ಕ್ಷೇತ್ರಗಳಲ್ಲಿ ಎಡರಂಗದ ಅಭ್ಯರ್ಥಿಗಳಿದ್ದರೆ, ಆರನೇ ಕ್ಷೇತ್ರದಲ್ಲಿ ತಮ್ಮ ಮಿತ್ರಪಕ್ಷವಾದ ಇಂಡಿಯನ್ ಸೆಕ್ಯುಲರ್ ಫ್ರಂಟ್ ಅಭ್ಯರ್ಥಿಯನ್ನು ಬೆಂಬಲಿಸುತ್ತಿದೆ. ಈ ಎಲ್ಲ ಆರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪ್ರತ್ಯೇಕವಾಗಿ ಸ್ಪರ್ಧಿಸುತ್ತಿದೆ.

2021ರ ವಿಧಾನಸಭಾ ಚುನಾವಣೆಯಲ್ಲಿ ಎಡಪಕ್ಷಗಳು ಮತ್ತು ಕಾಂಗ್ರೆಸ್ ಒಟ್ಟಿಗೆ ಸ್ಪರ್ಧಿಸಿದ್ದರೂ ಒಂದೇ ಒಂದು ಅಸೆಂಬ್ಲಿ ಸ್ಥಾನವನ್ನು ಗೆಲ್ಲಲು ವಿಫಲವಾಗಿತ್ತು. ಈ ಮೈತ್ರಿಯ ಅಭ್ಯರ್ಥಿಗಳು ಸೀತಾಯ್‌ನಲ್ಲಿ 1.66%, ನೈಹಾಟಿಯಲ್ಲಿ 10.11%, ಮೆದಿನಿಪುರದಲ್ಲಿ 5.43%, ತಲ್ದಂಗ್ರಾದಲ್ಲಿ 11.41% ಮತ್ತು ಮದಾರಿಹತ್‌ನಲ್ಲಿ 4.24% ಮತಗಳನ್ನು ಪಡೆದಿದ್ದರು.

ತಮ್ಮ ಅಭ್ಯರ್ಥಿಗಳು ಬಿಜೆಪಿ ಅಥವಾ ಟಿಎಂಸಿ ಅಭ್ಯರ್ಥಿಗಳಂತೆ ಗೋಚರಿಸದಿರಬಹುದು. ಆದರೆ ಪಕ್ಷವೂ ಮನೆ-ಮನೆ ಪ್ರಚಾರದ ಮೇಲೆ ಕೇಂದ್ರೀಕರಿಸುತ್ತಿದೆ ಎಂದು ಎಡಪಕ್ಷಗಳ ನಾಯಕರು ಹೇಳಿದ್ದಾರೆ. ಹಿರಿಯ ಸಿಪಿಐ(ಎಂ) ನಾಯಕರೊಬ್ಬರು ಮಾತನಾಡಿ, “ನಾವು ಗೆಲ್ಲುವುದಿಲ್ಲ ಎಂದು ನಮಗೆ ತಿಳಿದಿದೆ. ಆದರೆ ಆರ್ ಜಿ ಕಾರ್ ಚಳುವಳಿಯ ನಂತರ ನಮ್ಮ ಮತಗಳ ಶೇಕಡಾವಾರು ಏರಿಕೆಯಾಗಿದೆಯೇ ಎಂದು ನಾವು ನೋಡಬೇಕಾಗಿದೆ.” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಮಾಲೆಗಾಂವ್ ಸ್ಫೋಟ ಪ್ರಕರಣ | ಶಂಕಿತ ಭಯೋತ್ಪಾದಕಿ ಪ್ರಜ್ಞಾ ಠಾಕೂರ್‌ ವಿರುದ್ಧ ವಾರೆಂಟ್

ಮಾಲೆಗಾಂವ್ ಸ್ಫೋಟ ಪ್ರಕರಣ | ಶಂಕಿತ ಭಯೋತ್ಪಾದಕಿ ಪ್ರಜ್ಞಾ ಠಾಕೂರ್‌ ವಿರುದ್ಧ ವಾರೆಂಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...