Homeಮುಖಪುಟಪಶ್ಚಿಮ ಬಂಗಾಳ ಉಪಚುನಾವಣೆ | ಆರ್‌ಜಿ ಕರ್ ಪ್ರತಿಭಟನೆ ಮೇಲೆ ಎಲ್ಲರ ಕಣ್ಣು

ಪಶ್ಚಿಮ ಬಂಗಾಳ ಉಪಚುನಾವಣೆ | ಆರ್‌ಜಿ ಕರ್ ಪ್ರತಿಭಟನೆ ಮೇಲೆ ಎಲ್ಲರ ಕಣ್ಣು

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ನವೆಂಬರ್ 13 ರಂದು ನಡೆಯಲಿರುವ ಉಪ ಚುನಾವಣೆಯ ಮೇಲೆ ದೇಶದ ಕಣ್ಣು ನೆಟ್ಟಿದೆ. ದೇಶದಾದ್ಯಂತ ಭಾರಿ ಸುದ್ದಿಯಾದ ಕೊಲ್ಕತ್ತಾದ ಆರ್‌ಜಿಕರ್ ಆಸ್ಪತ್ರೆಯಲ್ಲಿ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಂತರ ರಾಜ್ಯದಲ್ಲಿ ಭಾರಿ ಪ್ರತಿಭಟನೆ ನಡೆಯುತ್ತಿದ್ದು, ಹಾಗಾಗಿ ವಿಪಕ್ಷಗಳು ಈ ಚುನಾವಣೆಯಲ್ಲಿ ಲಾಭ ಪಡೆಯಲಿದೆ ಎಂದು ನಂಬಲಾಗಿದೆ. ಬಂಗಾಳ ಉಪಚುನಾವಣೆ

ಉಪ ಚುನಾವಣೆಯಲ್ಲಿ ಲಾಭ ಪಡೆಯಲು ಪ್ರಮುಖ ವಿಪಕ್ಷವಾದ ಬಿಜೆಪಿ ಸೇರಿದಂತೆ ಸಿಪಿಐ(ಎಂ) ಮತ್ತು ಕಾಂಗ್ರೆಸ್ ಕೂಡಾ ಲೆಕ್ಕಾಚಾರಗಳನ್ನು ಮಾಡುತ್ತಿವೆ. ಒಟ್ಟು ಆರು ಕ್ಷೇತ್ರಗಳಲ್ಲಿ 2021ರ ಚುನಾವಣೆ ವೇಳೆ ಬಿಜೆಪಿ 1 ಕ್ಷೇತ್ರವನ್ನು ಗೆದ್ದಿದ್ದರೆ, ಉಳಿದ ಐದು ಕ್ಷೇತ್ರಗಳಲ್ಲಿ ಆಡಳಿತರೂಢ ಟಿಎಂಸಿ ಗೆದ್ದುಕೊಂಡಿತ್ತು. ಎಲ್ಲಾ ಹಾಲಿ ಶಾಸಕರು ಈ ವರ್ಷದ ಲೋಕಸಭೆ ಚುನಾವಣೆಯಲ್ಲಿ ಸಂಸತ್ತಿಗೆ ಆಯ್ಕೆಯಾದ ಕಾರಣ ಕ್ಷೇತ್ರಗಳು ತೆರವುಗೊಂಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

2021ರಲ್ಲಿ ಸಿತಾಯಿ (ಎಸ್‌ಸಿ-ಮೀಸಲು), ನೈಹತಿ, ಹರೋವಾ, ಮೇದಿನಿಪುರ್ ಮತ್ತು ತಲ್ದಂಗ್ರಾ ವಿಧಾನಸಭಾ ಕ್ಷೇತ್ರಗಳಲ್ಲಿ ಟಿಎಂಸಿಯ ಅಭ್ಯರ್ಥಿಗಳು ಗೆದ್ದಿದ್ದರೆ, ಬಿಜೆಪಿ ಮದರಿಹತ್ (ಎಸ್‌ಟಿ) ಕ್ಷೇತ್ರದಲ್ಲಿ ಜಯಗಳಿಸಿತ್ತು. ಟಿಎಂಸಿ ಗೆದ್ದಿರುವ ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿ 2ನೇ ಸ್ಥಾನದಲ್ಲಿದ್ದರೆ, ಬಿಜೆಪಿ ಗೆದ್ದ ಮದರಿಹತ್‌ ಕ್ಷೇತ್ರದಲ್ಲಿ ಟಿಎಂಸಿ ಎರಡನೇ ಸ್ಥಾನದಲ್ಲಿದೆ. ಬಂಗಾಳ ಉಪಚುನಾವಣೆ

“ಆರ್ ಜಿ ಕರ್ ಅತ್ಯಾಚಾರ ಮತ್ತು ಕೊಲೆಯ ನಂತರ ಇದು ಮೊದಲ ಚುನಾವಣೆ. ನೀವು ಸೇಡು ತೀರಿಸಿಕೊಳ್ಳಲು ಬಯಸುವುದಿಲ್ಲವೇ?” ಎಂದು ವಿರೋಧ ಪಕ್ಷದ ನಾಯಕ ಮತ್ತು ಬಿಜೆಪಿ ನಾಯಕ ಸುವೇಂದು ಅಧಿಕಾರಿ ಮತದಾರರಿಗೆ ಹೇಳುತ್ತಿದ್ದಾರೆ. ಆಸ್ಪತ್ರೆಯ ದಾಳಿಯ ಸಂತ್ರಸ್ತರಿಗೆ ನ್ಯಾಯವನ್ನು ಖಚಿತಪಡಿಸಿಕೊಳ್ಳಲು ಪಶ್ಚಿಮ ಬಂಗಾಳದಲ್ಲಿ ಸರ್ಕಾರ ಬದಲಾವಣೆಯೊಂದೇ ಮಾರ್ಗವಾಗಿದೆ ಎಂದು ಅವರು ಪ್ರತಿಪಾದಿಸುತ್ತಿದ್ದಾರೆ.

ಬಿಜೆಪಿಯು ಚುನಾವಣೆಗೆ ಯಾವುದೇ ಸಂಬಂಧವಿಲ್ಲದ ವಿಷಯಗಳನ್ನು ಎಳೆದು ತರುತ್ತಿದೆ ಎಂದು ಟಿಎಂಸಿ ನಾಯಕ ಕುನಾಲ್ ಘೋಷ್ ಆರೋಪಿಸಿದ್ದಾರೆ. “ಅಭಿವೃದ್ಧಿ ವಿಚಾರದ ಮೇಲೆ ವಿಧಾನಸಭೆ ಚುನಾವಣೆ ನಡೆಯಲಿದೆ. ಯಾರು ಅಭಿವೃದ್ಧಿಯನ್ನು ಖಾತ್ರಿಪಡಿಸುತ್ತಾರೆ ಎಂಬುದನ್ನು ಜನರು ನೋಡುತ್ತಾರೆ ಮತ್ತು ಅದಕ್ಕೆ ಅನುಗುಣವಾಗಿ ಮತ ಚಲಾಯಿಸುತ್ತಾರೆ” ಎಂದು ಘೋಷ್ ಹೇಳಿದ್ದಾರೆ.

“ಬಿಜೆಪಿ ಅತ್ಯಾಚಾರ ಪ್ರಕರಣವನ್ನು ಮುನ್ನಲೆಗೆ ತಂದರೆ ಟಿಎಂಸಿ ಉತ್ತರ ಪ್ರದೇಶದ ಉನ್ನಾವ್ ಮತ್ತು ಹತ್ರಾಸ್ ಹಾಗೂ ಮಧ್ಯಪ್ರದೇಶ, ಗುಜರಾತ್‌ನಲ್ಲಿ ನಡೆದ ಇತರ ಲೈಂಗಿಕ ದೌರ್ಜನ್ಯದ ಘಟನೆಗಳನ್ನು ಸಹ ಪ್ರತಿಯಾಗಿ ಎತ್ತಬಹುದಲ್ಲವೆ, ಇವೆಲ್ಲವೂ ಬಿಜೆಪಿ ಆಡಳಿತವಿರುವ ರಾಜ್ಯಗಳು. ವಾಸ್ತವವೆಂದರೆ ಬಿಜೆಪಿಗೆ ತಾವು ಗೆಲ್ಲುವುದಿಲ್ಲ ಎಂದು ತಿಳಿದಿದೆ. ಹಾಗಾಗಿ ಆರ್ ಜಿ ಕರ್ ಬಗ್ಗೆ ಕೂಗಾಡುತ್ತಿದ್ದಾರೆ” ಎಂದು ಘೋಷ್ ಹೇಳಿದ್ದಾರೆ.

ಉಪ ಚುನಾವಣೆ ನಡೆಯುತ್ತಿರುವ ಆರು ಕ್ಷೇತ್ರಗಳಲ್ಲಿ ಐದು ಕ್ಷೇತ್ರಗಳನ್ನು 2021 ಟಿಎಂಸಿ ಗೆದ್ದಿದ್ದು ಮಾತ್ರವಲ್ಲದೆ, ಈ ವರ್ಷ ನಡೆದ ಲೋಕಸಭಾ ಚುನಾವಣೆಯಲ್ಲಿ ಕೂಡಾ ಹೆಚ್ಚಿನ ಕ್ಷೇತಗಳಲ್ಲಿ ಪ್ರಾಬಲ್ಯ ಮೆರೆದಿತ್ತು. ಅದಾಗ್ಯೂ, ಮದರಿಹತ್ ಮತ್ತು ಮೇದಿನಿಪುರದ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಮಾತ್ರ ಬಿಜೆಪಿ ಕ್ರಮವಾಗಿ 9,000 ಮತ್ತು 11,000 ಮತಗಳಿಂದ ಮುಂದಿದೆ.

ಹಾಗಾಗಿ ಒಂದು ತಿಂಗಳ ಕಾಲ ನಡೆದ ಆರ್‌ಜಿ ಕಾರ್‌ ಪ್ರತಿಭಟನೆಯ ಕಾರಣಕ್ಕೆ ಮೇದಿನಿಪುರ ಮತ್ತು ಮದರಿಹತ್‌ನಲ್ಲಿ ಪಕ್ಷವೂ ಗೆಲ್ಲಬಹುದು ಎಂದು ಬಿಜೆಪಿ ಬಿಜೆಪಿ ಆಶಿಸುತ್ತಿದೆ. ಆದರೆ ಈ ಲೆಕ್ಕಾಚಾರವನ್ನು ಟಿಎಂಸಿ ನಿರಾಕರಿಸಿದೆ. ನಮ್ಮ ಮತ ಬ್ಯಾಂಕ್ ಹಾಗೆ ಉಳಿದಿದೆ ಎಂದ ಹೇಳುವ ಪಕ್ಷವೂ, ಉಪ ಚುನಾವಣೆಗಳಲ್ಲಿ ಯಾವತ್ತೂ ಆಡಳಿತರೂಢ ಪಕ್ಷಕ್ಕೆ ಹೆಚ್ಚಿನ ಲಾಭವಾಗಿದೆ ಎಂದು ಪ್ರತಿಪಾದಿಸಿದೆ.

ಭ್ರಷ್ಟಾಚಾರದ ಆರೋಪಗಳ ವಿರುದ್ಧ ಹೋರಾಡುತ್ತಿರುವ ಟಿಎಂಸಿಯು ಉಪಚುನಾವಣೆಗೆ ಜನಪ್ರಿಯ ಶುದ್ಧಹಸ್ತ ಎಂದು ತೋರುವ ಸ್ಥಳೀಯ ಮುಖಗಳನ್ನು ಕಣಕ್ಕಿಳಿಸಿದೆ. ಬಿಜೆಪಿ ಕೂಡಾ ಸ್ಥಳೀಯ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದು, ಅದರಲ್ಲೂ ಇಬ್ಬರು ಅಭ್ಯರ್ಥಿಗಳು ಎಡಪಕ್ಷಗಳಿಂದ ಬಿಜೆಪಿಗೆ ಸೇರಿದವರಾಗಿದ್ದಾರೆ.

ಎರಡು ಪಕ್ಷಗಳು ಭಾರಿ ಪ್ರಚಾರ ಮಾಡುತ್ತಿದ್ದು, ಸಚಿವರಾದ ಸುಜಿತ್ ಬೋಸ್, ಫಿರ್ಹಾದ್ ಹಕೀಮ್ ಮತ್ತು ಚಂದ್ರಿಮಾ ಭಟ್ಟಾಚಾರ್ಯರಂತಹ ಟಿಎಂಸಿ ನಾಯಕತ್ವವು ಪ್ರಚಾರವನ್ನು ಮುನ್ನಡೆಸುತ್ತಿದ್ದಾರೆ. ಅವರು ಟಿಎಂಸಿ ಸರ್ಕಾರದ ಜನಪ್ರಿಯ ಕಲ್ಯಾಣ ಯೋಜನೆಗಳಾದ ಲಕ್ಷ್ಮೀರ್ ಭಂಡಾರ್, ಕನ್ಯಾಶ್ರೀ, ಯುವಶ್ರೀ ಇತ್ಯಾದಿಗಳನ್ನು ಮುಂದಿಟ್ಟು ಪ್ರಚಾರ ಮಾಡುತ್ತಿದ್ದಾರೆ.

ಬಿಜೆಪಿ ಕಡೆಯಿಂದ, ಪ್ರಮುಖವಾಗಿ ಸುವೆಂಧು ಅಧಿಕಾರಿಯೆ ಮತ್ತೊಮ್ಮೆ ಪ್ರಚಾರದ ಪ್ರಮುಖ ಮುಖವಾಗಿದ್ದು, ಅವರು ರಾಜ್ಯಾಧ್ಯಕ್ಷ ಸುಕಾಂತ ಮಜುಂದಾರ್ ಅವರೊಂದಿಗೆ ಪ್ರಚಾರ ಕೈಗೊಳ್ಳುತ್ತಿದ್ದಾರೆ. ಟಿಎಂಸಿ ಸರ್ಕಾರದ ಅಡಿಯಲ್ಲಿ ಹೆಚ್ಚುತ್ತಿರುವ ಭ್ರಷ್ಟಾಚಾರ ಮತ್ತು ಹದಗೆಟ್ಟ ಕಾನೂನು ಮತ್ತು ಸುವ್ಯವಸ್ಥೆ ಅವರ ಪ್ರಮುಖ ಚುನಾವಣಾ ವಿಷಯವಾಗಿದೆ.

ಮತ್ತೊಂದೆಡೆ, ಎಡಪಕ್ಷಗಳು ಮತ್ತು ಕಾಂಗ್ರೆಸ್ ತಮ್ಮ ಮೈತ್ರಿಯನ್ನು ಒಟ್ಟಿಗೆ ಹಿಡಿದಿಟ್ಟುಕೊಳ್ಳುವುದರಲ್ಲಿ ವಿಫಲವಾಗಿರುವುದು ಸೇರಿದಂತೆ ಉಪಚುನಾವಣೆಗೆ ನೀರಸವಾಗಿ ಸಿದ್ಧವಾಗಿದೆ. ಉಪ ಚುನಾವಣೆ ನಡೆಯಲಿರುವ ಐದು ಕ್ಷೇತ್ರಗಳಲ್ಲಿ ಎಡರಂಗದ ಅಭ್ಯರ್ಥಿಗಳಿದ್ದರೆ, ಆರನೇ ಕ್ಷೇತ್ರದಲ್ಲಿ ತಮ್ಮ ಮಿತ್ರಪಕ್ಷವಾದ ಇಂಡಿಯನ್ ಸೆಕ್ಯುಲರ್ ಫ್ರಂಟ್ ಅಭ್ಯರ್ಥಿಯನ್ನು ಬೆಂಬಲಿಸುತ್ತಿದೆ. ಈ ಎಲ್ಲ ಆರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪ್ರತ್ಯೇಕವಾಗಿ ಸ್ಪರ್ಧಿಸುತ್ತಿದೆ.

2021ರ ವಿಧಾನಸಭಾ ಚುನಾವಣೆಯಲ್ಲಿ ಎಡಪಕ್ಷಗಳು ಮತ್ತು ಕಾಂಗ್ರೆಸ್ ಒಟ್ಟಿಗೆ ಸ್ಪರ್ಧಿಸಿದ್ದರೂ ಒಂದೇ ಒಂದು ಅಸೆಂಬ್ಲಿ ಸ್ಥಾನವನ್ನು ಗೆಲ್ಲಲು ವಿಫಲವಾಗಿತ್ತು. ಈ ಮೈತ್ರಿಯ ಅಭ್ಯರ್ಥಿಗಳು ಸೀತಾಯ್‌ನಲ್ಲಿ 1.66%, ನೈಹಾಟಿಯಲ್ಲಿ 10.11%, ಮೆದಿನಿಪುರದಲ್ಲಿ 5.43%, ತಲ್ದಂಗ್ರಾದಲ್ಲಿ 11.41% ಮತ್ತು ಮದಾರಿಹತ್‌ನಲ್ಲಿ 4.24% ಮತಗಳನ್ನು ಪಡೆದಿದ್ದರು.

ತಮ್ಮ ಅಭ್ಯರ್ಥಿಗಳು ಬಿಜೆಪಿ ಅಥವಾ ಟಿಎಂಸಿ ಅಭ್ಯರ್ಥಿಗಳಂತೆ ಗೋಚರಿಸದಿರಬಹುದು. ಆದರೆ ಪಕ್ಷವೂ ಮನೆ-ಮನೆ ಪ್ರಚಾರದ ಮೇಲೆ ಕೇಂದ್ರೀಕರಿಸುತ್ತಿದೆ ಎಂದು ಎಡಪಕ್ಷಗಳ ನಾಯಕರು ಹೇಳಿದ್ದಾರೆ. ಹಿರಿಯ ಸಿಪಿಐ(ಎಂ) ನಾಯಕರೊಬ್ಬರು ಮಾತನಾಡಿ, “ನಾವು ಗೆಲ್ಲುವುದಿಲ್ಲ ಎಂದು ನಮಗೆ ತಿಳಿದಿದೆ. ಆದರೆ ಆರ್ ಜಿ ಕಾರ್ ಚಳುವಳಿಯ ನಂತರ ನಮ್ಮ ಮತಗಳ ಶೇಕಡಾವಾರು ಏರಿಕೆಯಾಗಿದೆಯೇ ಎಂದು ನಾವು ನೋಡಬೇಕಾಗಿದೆ.” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಮಾಲೆಗಾಂವ್ ಸ್ಫೋಟ ಪ್ರಕರಣ | ಶಂಕಿತ ಭಯೋತ್ಪಾದಕಿ ಪ್ರಜ್ಞಾ ಠಾಕೂರ್‌ ವಿರುದ್ಧ ವಾರೆಂಟ್

ಮಾಲೆಗಾಂವ್ ಸ್ಫೋಟ ಪ್ರಕರಣ | ಶಂಕಿತ ಭಯೋತ್ಪಾದಕಿ ಪ್ರಜ್ಞಾ ಠಾಕೂರ್‌ ವಿರುದ್ಧ ವಾರೆಂಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...