Homeಮುಖಪುಟಪಶ್ಚಿಮ ಬಂಗಾಳ ಉಪಚುನಾವಣೆ | ಆರ್‌ಜಿ ಕರ್ ಪ್ರತಿಭಟನೆ ಮೇಲೆ ಎಲ್ಲರ ಕಣ್ಣು

ಪಶ್ಚಿಮ ಬಂಗಾಳ ಉಪಚುನಾವಣೆ | ಆರ್‌ಜಿ ಕರ್ ಪ್ರತಿಭಟನೆ ಮೇಲೆ ಎಲ್ಲರ ಕಣ್ಣು

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ನವೆಂಬರ್ 13 ರಂದು ನಡೆಯಲಿರುವ ಉಪ ಚುನಾವಣೆಯ ಮೇಲೆ ದೇಶದ ಕಣ್ಣು ನೆಟ್ಟಿದೆ. ದೇಶದಾದ್ಯಂತ ಭಾರಿ ಸುದ್ದಿಯಾದ ಕೊಲ್ಕತ್ತಾದ ಆರ್‌ಜಿಕರ್ ಆಸ್ಪತ್ರೆಯಲ್ಲಿ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಂತರ ರಾಜ್ಯದಲ್ಲಿ ಭಾರಿ ಪ್ರತಿಭಟನೆ ನಡೆಯುತ್ತಿದ್ದು, ಹಾಗಾಗಿ ವಿಪಕ್ಷಗಳು ಈ ಚುನಾವಣೆಯಲ್ಲಿ ಲಾಭ ಪಡೆಯಲಿದೆ ಎಂದು ನಂಬಲಾಗಿದೆ. ಬಂಗಾಳ ಉಪಚುನಾವಣೆ

ಉಪ ಚುನಾವಣೆಯಲ್ಲಿ ಲಾಭ ಪಡೆಯಲು ಪ್ರಮುಖ ವಿಪಕ್ಷವಾದ ಬಿಜೆಪಿ ಸೇರಿದಂತೆ ಸಿಪಿಐ(ಎಂ) ಮತ್ತು ಕಾಂಗ್ರೆಸ್ ಕೂಡಾ ಲೆಕ್ಕಾಚಾರಗಳನ್ನು ಮಾಡುತ್ತಿವೆ. ಒಟ್ಟು ಆರು ಕ್ಷೇತ್ರಗಳಲ್ಲಿ 2021ರ ಚುನಾವಣೆ ವೇಳೆ ಬಿಜೆಪಿ 1 ಕ್ಷೇತ್ರವನ್ನು ಗೆದ್ದಿದ್ದರೆ, ಉಳಿದ ಐದು ಕ್ಷೇತ್ರಗಳಲ್ಲಿ ಆಡಳಿತರೂಢ ಟಿಎಂಸಿ ಗೆದ್ದುಕೊಂಡಿತ್ತು. ಎಲ್ಲಾ ಹಾಲಿ ಶಾಸಕರು ಈ ವರ್ಷದ ಲೋಕಸಭೆ ಚುನಾವಣೆಯಲ್ಲಿ ಸಂಸತ್ತಿಗೆ ಆಯ್ಕೆಯಾದ ಕಾರಣ ಕ್ಷೇತ್ರಗಳು ತೆರವುಗೊಂಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

2021ರಲ್ಲಿ ಸಿತಾಯಿ (ಎಸ್‌ಸಿ-ಮೀಸಲು), ನೈಹತಿ, ಹರೋವಾ, ಮೇದಿನಿಪುರ್ ಮತ್ತು ತಲ್ದಂಗ್ರಾ ವಿಧಾನಸಭಾ ಕ್ಷೇತ್ರಗಳಲ್ಲಿ ಟಿಎಂಸಿಯ ಅಭ್ಯರ್ಥಿಗಳು ಗೆದ್ದಿದ್ದರೆ, ಬಿಜೆಪಿ ಮದರಿಹತ್ (ಎಸ್‌ಟಿ) ಕ್ಷೇತ್ರದಲ್ಲಿ ಜಯಗಳಿಸಿತ್ತು. ಟಿಎಂಸಿ ಗೆದ್ದಿರುವ ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿ 2ನೇ ಸ್ಥಾನದಲ್ಲಿದ್ದರೆ, ಬಿಜೆಪಿ ಗೆದ್ದ ಮದರಿಹತ್‌ ಕ್ಷೇತ್ರದಲ್ಲಿ ಟಿಎಂಸಿ ಎರಡನೇ ಸ್ಥಾನದಲ್ಲಿದೆ. ಬಂಗಾಳ ಉಪಚುನಾವಣೆ

“ಆರ್ ಜಿ ಕರ್ ಅತ್ಯಾಚಾರ ಮತ್ತು ಕೊಲೆಯ ನಂತರ ಇದು ಮೊದಲ ಚುನಾವಣೆ. ನೀವು ಸೇಡು ತೀರಿಸಿಕೊಳ್ಳಲು ಬಯಸುವುದಿಲ್ಲವೇ?” ಎಂದು ವಿರೋಧ ಪಕ್ಷದ ನಾಯಕ ಮತ್ತು ಬಿಜೆಪಿ ನಾಯಕ ಸುವೇಂದು ಅಧಿಕಾರಿ ಮತದಾರರಿಗೆ ಹೇಳುತ್ತಿದ್ದಾರೆ. ಆಸ್ಪತ್ರೆಯ ದಾಳಿಯ ಸಂತ್ರಸ್ತರಿಗೆ ನ್ಯಾಯವನ್ನು ಖಚಿತಪಡಿಸಿಕೊಳ್ಳಲು ಪಶ್ಚಿಮ ಬಂಗಾಳದಲ್ಲಿ ಸರ್ಕಾರ ಬದಲಾವಣೆಯೊಂದೇ ಮಾರ್ಗವಾಗಿದೆ ಎಂದು ಅವರು ಪ್ರತಿಪಾದಿಸುತ್ತಿದ್ದಾರೆ.

ಬಿಜೆಪಿಯು ಚುನಾವಣೆಗೆ ಯಾವುದೇ ಸಂಬಂಧವಿಲ್ಲದ ವಿಷಯಗಳನ್ನು ಎಳೆದು ತರುತ್ತಿದೆ ಎಂದು ಟಿಎಂಸಿ ನಾಯಕ ಕುನಾಲ್ ಘೋಷ್ ಆರೋಪಿಸಿದ್ದಾರೆ. “ಅಭಿವೃದ್ಧಿ ವಿಚಾರದ ಮೇಲೆ ವಿಧಾನಸಭೆ ಚುನಾವಣೆ ನಡೆಯಲಿದೆ. ಯಾರು ಅಭಿವೃದ್ಧಿಯನ್ನು ಖಾತ್ರಿಪಡಿಸುತ್ತಾರೆ ಎಂಬುದನ್ನು ಜನರು ನೋಡುತ್ತಾರೆ ಮತ್ತು ಅದಕ್ಕೆ ಅನುಗುಣವಾಗಿ ಮತ ಚಲಾಯಿಸುತ್ತಾರೆ” ಎಂದು ಘೋಷ್ ಹೇಳಿದ್ದಾರೆ.

“ಬಿಜೆಪಿ ಅತ್ಯಾಚಾರ ಪ್ರಕರಣವನ್ನು ಮುನ್ನಲೆಗೆ ತಂದರೆ ಟಿಎಂಸಿ ಉತ್ತರ ಪ್ರದೇಶದ ಉನ್ನಾವ್ ಮತ್ತು ಹತ್ರಾಸ್ ಹಾಗೂ ಮಧ್ಯಪ್ರದೇಶ, ಗುಜರಾತ್‌ನಲ್ಲಿ ನಡೆದ ಇತರ ಲೈಂಗಿಕ ದೌರ್ಜನ್ಯದ ಘಟನೆಗಳನ್ನು ಸಹ ಪ್ರತಿಯಾಗಿ ಎತ್ತಬಹುದಲ್ಲವೆ, ಇವೆಲ್ಲವೂ ಬಿಜೆಪಿ ಆಡಳಿತವಿರುವ ರಾಜ್ಯಗಳು. ವಾಸ್ತವವೆಂದರೆ ಬಿಜೆಪಿಗೆ ತಾವು ಗೆಲ್ಲುವುದಿಲ್ಲ ಎಂದು ತಿಳಿದಿದೆ. ಹಾಗಾಗಿ ಆರ್ ಜಿ ಕರ್ ಬಗ್ಗೆ ಕೂಗಾಡುತ್ತಿದ್ದಾರೆ” ಎಂದು ಘೋಷ್ ಹೇಳಿದ್ದಾರೆ.

ಉಪ ಚುನಾವಣೆ ನಡೆಯುತ್ತಿರುವ ಆರು ಕ್ಷೇತ್ರಗಳಲ್ಲಿ ಐದು ಕ್ಷೇತ್ರಗಳನ್ನು 2021 ಟಿಎಂಸಿ ಗೆದ್ದಿದ್ದು ಮಾತ್ರವಲ್ಲದೆ, ಈ ವರ್ಷ ನಡೆದ ಲೋಕಸಭಾ ಚುನಾವಣೆಯಲ್ಲಿ ಕೂಡಾ ಹೆಚ್ಚಿನ ಕ್ಷೇತಗಳಲ್ಲಿ ಪ್ರಾಬಲ್ಯ ಮೆರೆದಿತ್ತು. ಅದಾಗ್ಯೂ, ಮದರಿಹತ್ ಮತ್ತು ಮೇದಿನಿಪುರದ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಮಾತ್ರ ಬಿಜೆಪಿ ಕ್ರಮವಾಗಿ 9,000 ಮತ್ತು 11,000 ಮತಗಳಿಂದ ಮುಂದಿದೆ.

ಹಾಗಾಗಿ ಒಂದು ತಿಂಗಳ ಕಾಲ ನಡೆದ ಆರ್‌ಜಿ ಕಾರ್‌ ಪ್ರತಿಭಟನೆಯ ಕಾರಣಕ್ಕೆ ಮೇದಿನಿಪುರ ಮತ್ತು ಮದರಿಹತ್‌ನಲ್ಲಿ ಪಕ್ಷವೂ ಗೆಲ್ಲಬಹುದು ಎಂದು ಬಿಜೆಪಿ ಬಿಜೆಪಿ ಆಶಿಸುತ್ತಿದೆ. ಆದರೆ ಈ ಲೆಕ್ಕಾಚಾರವನ್ನು ಟಿಎಂಸಿ ನಿರಾಕರಿಸಿದೆ. ನಮ್ಮ ಮತ ಬ್ಯಾಂಕ್ ಹಾಗೆ ಉಳಿದಿದೆ ಎಂದ ಹೇಳುವ ಪಕ್ಷವೂ, ಉಪ ಚುನಾವಣೆಗಳಲ್ಲಿ ಯಾವತ್ತೂ ಆಡಳಿತರೂಢ ಪಕ್ಷಕ್ಕೆ ಹೆಚ್ಚಿನ ಲಾಭವಾಗಿದೆ ಎಂದು ಪ್ರತಿಪಾದಿಸಿದೆ.

ಭ್ರಷ್ಟಾಚಾರದ ಆರೋಪಗಳ ವಿರುದ್ಧ ಹೋರಾಡುತ್ತಿರುವ ಟಿಎಂಸಿಯು ಉಪಚುನಾವಣೆಗೆ ಜನಪ್ರಿಯ ಶುದ್ಧಹಸ್ತ ಎಂದು ತೋರುವ ಸ್ಥಳೀಯ ಮುಖಗಳನ್ನು ಕಣಕ್ಕಿಳಿಸಿದೆ. ಬಿಜೆಪಿ ಕೂಡಾ ಸ್ಥಳೀಯ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದು, ಅದರಲ್ಲೂ ಇಬ್ಬರು ಅಭ್ಯರ್ಥಿಗಳು ಎಡಪಕ್ಷಗಳಿಂದ ಬಿಜೆಪಿಗೆ ಸೇರಿದವರಾಗಿದ್ದಾರೆ.

ಎರಡು ಪಕ್ಷಗಳು ಭಾರಿ ಪ್ರಚಾರ ಮಾಡುತ್ತಿದ್ದು, ಸಚಿವರಾದ ಸುಜಿತ್ ಬೋಸ್, ಫಿರ್ಹಾದ್ ಹಕೀಮ್ ಮತ್ತು ಚಂದ್ರಿಮಾ ಭಟ್ಟಾಚಾರ್ಯರಂತಹ ಟಿಎಂಸಿ ನಾಯಕತ್ವವು ಪ್ರಚಾರವನ್ನು ಮುನ್ನಡೆಸುತ್ತಿದ್ದಾರೆ. ಅವರು ಟಿಎಂಸಿ ಸರ್ಕಾರದ ಜನಪ್ರಿಯ ಕಲ್ಯಾಣ ಯೋಜನೆಗಳಾದ ಲಕ್ಷ್ಮೀರ್ ಭಂಡಾರ್, ಕನ್ಯಾಶ್ರೀ, ಯುವಶ್ರೀ ಇತ್ಯಾದಿಗಳನ್ನು ಮುಂದಿಟ್ಟು ಪ್ರಚಾರ ಮಾಡುತ್ತಿದ್ದಾರೆ.

ಬಿಜೆಪಿ ಕಡೆಯಿಂದ, ಪ್ರಮುಖವಾಗಿ ಸುವೆಂಧು ಅಧಿಕಾರಿಯೆ ಮತ್ತೊಮ್ಮೆ ಪ್ರಚಾರದ ಪ್ರಮುಖ ಮುಖವಾಗಿದ್ದು, ಅವರು ರಾಜ್ಯಾಧ್ಯಕ್ಷ ಸುಕಾಂತ ಮಜುಂದಾರ್ ಅವರೊಂದಿಗೆ ಪ್ರಚಾರ ಕೈಗೊಳ್ಳುತ್ತಿದ್ದಾರೆ. ಟಿಎಂಸಿ ಸರ್ಕಾರದ ಅಡಿಯಲ್ಲಿ ಹೆಚ್ಚುತ್ತಿರುವ ಭ್ರಷ್ಟಾಚಾರ ಮತ್ತು ಹದಗೆಟ್ಟ ಕಾನೂನು ಮತ್ತು ಸುವ್ಯವಸ್ಥೆ ಅವರ ಪ್ರಮುಖ ಚುನಾವಣಾ ವಿಷಯವಾಗಿದೆ.

ಮತ್ತೊಂದೆಡೆ, ಎಡಪಕ್ಷಗಳು ಮತ್ತು ಕಾಂಗ್ರೆಸ್ ತಮ್ಮ ಮೈತ್ರಿಯನ್ನು ಒಟ್ಟಿಗೆ ಹಿಡಿದಿಟ್ಟುಕೊಳ್ಳುವುದರಲ್ಲಿ ವಿಫಲವಾಗಿರುವುದು ಸೇರಿದಂತೆ ಉಪಚುನಾವಣೆಗೆ ನೀರಸವಾಗಿ ಸಿದ್ಧವಾಗಿದೆ. ಉಪ ಚುನಾವಣೆ ನಡೆಯಲಿರುವ ಐದು ಕ್ಷೇತ್ರಗಳಲ್ಲಿ ಎಡರಂಗದ ಅಭ್ಯರ್ಥಿಗಳಿದ್ದರೆ, ಆರನೇ ಕ್ಷೇತ್ರದಲ್ಲಿ ತಮ್ಮ ಮಿತ್ರಪಕ್ಷವಾದ ಇಂಡಿಯನ್ ಸೆಕ್ಯುಲರ್ ಫ್ರಂಟ್ ಅಭ್ಯರ್ಥಿಯನ್ನು ಬೆಂಬಲಿಸುತ್ತಿದೆ. ಈ ಎಲ್ಲ ಆರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪ್ರತ್ಯೇಕವಾಗಿ ಸ್ಪರ್ಧಿಸುತ್ತಿದೆ.

2021ರ ವಿಧಾನಸಭಾ ಚುನಾವಣೆಯಲ್ಲಿ ಎಡಪಕ್ಷಗಳು ಮತ್ತು ಕಾಂಗ್ರೆಸ್ ಒಟ್ಟಿಗೆ ಸ್ಪರ್ಧಿಸಿದ್ದರೂ ಒಂದೇ ಒಂದು ಅಸೆಂಬ್ಲಿ ಸ್ಥಾನವನ್ನು ಗೆಲ್ಲಲು ವಿಫಲವಾಗಿತ್ತು. ಈ ಮೈತ್ರಿಯ ಅಭ್ಯರ್ಥಿಗಳು ಸೀತಾಯ್‌ನಲ್ಲಿ 1.66%, ನೈಹಾಟಿಯಲ್ಲಿ 10.11%, ಮೆದಿನಿಪುರದಲ್ಲಿ 5.43%, ತಲ್ದಂಗ್ರಾದಲ್ಲಿ 11.41% ಮತ್ತು ಮದಾರಿಹತ್‌ನಲ್ಲಿ 4.24% ಮತಗಳನ್ನು ಪಡೆದಿದ್ದರು.

ತಮ್ಮ ಅಭ್ಯರ್ಥಿಗಳು ಬಿಜೆಪಿ ಅಥವಾ ಟಿಎಂಸಿ ಅಭ್ಯರ್ಥಿಗಳಂತೆ ಗೋಚರಿಸದಿರಬಹುದು. ಆದರೆ ಪಕ್ಷವೂ ಮನೆ-ಮನೆ ಪ್ರಚಾರದ ಮೇಲೆ ಕೇಂದ್ರೀಕರಿಸುತ್ತಿದೆ ಎಂದು ಎಡಪಕ್ಷಗಳ ನಾಯಕರು ಹೇಳಿದ್ದಾರೆ. ಹಿರಿಯ ಸಿಪಿಐ(ಎಂ) ನಾಯಕರೊಬ್ಬರು ಮಾತನಾಡಿ, “ನಾವು ಗೆಲ್ಲುವುದಿಲ್ಲ ಎಂದು ನಮಗೆ ತಿಳಿದಿದೆ. ಆದರೆ ಆರ್ ಜಿ ಕಾರ್ ಚಳುವಳಿಯ ನಂತರ ನಮ್ಮ ಮತಗಳ ಶೇಕಡಾವಾರು ಏರಿಕೆಯಾಗಿದೆಯೇ ಎಂದು ನಾವು ನೋಡಬೇಕಾಗಿದೆ.” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಮಾಲೆಗಾಂವ್ ಸ್ಫೋಟ ಪ್ರಕರಣ | ಶಂಕಿತ ಭಯೋತ್ಪಾದಕಿ ಪ್ರಜ್ಞಾ ಠಾಕೂರ್‌ ವಿರುದ್ಧ ವಾರೆಂಟ್

ಮಾಲೆಗಾಂವ್ ಸ್ಫೋಟ ಪ್ರಕರಣ | ಶಂಕಿತ ಭಯೋತ್ಪಾದಕಿ ಪ್ರಜ್ಞಾ ಠಾಕೂರ್‌ ವಿರುದ್ಧ ವಾರೆಂಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...