Homeಮುಖಪುಟಪಶ್ಚಿಮ ಬಂಗಾಳ ಉಪಚುನಾವಣೆ | ಆರ್‌ಜಿ ಕರ್ ಪ್ರತಿಭಟನೆ ಮೇಲೆ ಎಲ್ಲರ ಕಣ್ಣು

ಪಶ್ಚಿಮ ಬಂಗಾಳ ಉಪಚುನಾವಣೆ | ಆರ್‌ಜಿ ಕರ್ ಪ್ರತಿಭಟನೆ ಮೇಲೆ ಎಲ್ಲರ ಕಣ್ಣು

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ನವೆಂಬರ್ 13 ರಂದು ನಡೆಯಲಿರುವ ಉಪ ಚುನಾವಣೆಯ ಮೇಲೆ ದೇಶದ ಕಣ್ಣು ನೆಟ್ಟಿದೆ. ದೇಶದಾದ್ಯಂತ ಭಾರಿ ಸುದ್ದಿಯಾದ ಕೊಲ್ಕತ್ತಾದ ಆರ್‌ಜಿಕರ್ ಆಸ್ಪತ್ರೆಯಲ್ಲಿ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಂತರ ರಾಜ್ಯದಲ್ಲಿ ಭಾರಿ ಪ್ರತಿಭಟನೆ ನಡೆಯುತ್ತಿದ್ದು, ಹಾಗಾಗಿ ವಿಪಕ್ಷಗಳು ಈ ಚುನಾವಣೆಯಲ್ಲಿ ಲಾಭ ಪಡೆಯಲಿದೆ ಎಂದು ನಂಬಲಾಗಿದೆ. ಬಂಗಾಳ ಉಪಚುನಾವಣೆ

ಉಪ ಚುನಾವಣೆಯಲ್ಲಿ ಲಾಭ ಪಡೆಯಲು ಪ್ರಮುಖ ವಿಪಕ್ಷವಾದ ಬಿಜೆಪಿ ಸೇರಿದಂತೆ ಸಿಪಿಐ(ಎಂ) ಮತ್ತು ಕಾಂಗ್ರೆಸ್ ಕೂಡಾ ಲೆಕ್ಕಾಚಾರಗಳನ್ನು ಮಾಡುತ್ತಿವೆ. ಒಟ್ಟು ಆರು ಕ್ಷೇತ್ರಗಳಲ್ಲಿ 2021ರ ಚುನಾವಣೆ ವೇಳೆ ಬಿಜೆಪಿ 1 ಕ್ಷೇತ್ರವನ್ನು ಗೆದ್ದಿದ್ದರೆ, ಉಳಿದ ಐದು ಕ್ಷೇತ್ರಗಳಲ್ಲಿ ಆಡಳಿತರೂಢ ಟಿಎಂಸಿ ಗೆದ್ದುಕೊಂಡಿತ್ತು. ಎಲ್ಲಾ ಹಾಲಿ ಶಾಸಕರು ಈ ವರ್ಷದ ಲೋಕಸಭೆ ಚುನಾವಣೆಯಲ್ಲಿ ಸಂಸತ್ತಿಗೆ ಆಯ್ಕೆಯಾದ ಕಾರಣ ಕ್ಷೇತ್ರಗಳು ತೆರವುಗೊಂಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

2021ರಲ್ಲಿ ಸಿತಾಯಿ (ಎಸ್‌ಸಿ-ಮೀಸಲು), ನೈಹತಿ, ಹರೋವಾ, ಮೇದಿನಿಪುರ್ ಮತ್ತು ತಲ್ದಂಗ್ರಾ ವಿಧಾನಸಭಾ ಕ್ಷೇತ್ರಗಳಲ್ಲಿ ಟಿಎಂಸಿಯ ಅಭ್ಯರ್ಥಿಗಳು ಗೆದ್ದಿದ್ದರೆ, ಬಿಜೆಪಿ ಮದರಿಹತ್ (ಎಸ್‌ಟಿ) ಕ್ಷೇತ್ರದಲ್ಲಿ ಜಯಗಳಿಸಿತ್ತು. ಟಿಎಂಸಿ ಗೆದ್ದಿರುವ ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿ 2ನೇ ಸ್ಥಾನದಲ್ಲಿದ್ದರೆ, ಬಿಜೆಪಿ ಗೆದ್ದ ಮದರಿಹತ್‌ ಕ್ಷೇತ್ರದಲ್ಲಿ ಟಿಎಂಸಿ ಎರಡನೇ ಸ್ಥಾನದಲ್ಲಿದೆ. ಬಂಗಾಳ ಉಪಚುನಾವಣೆ

“ಆರ್ ಜಿ ಕರ್ ಅತ್ಯಾಚಾರ ಮತ್ತು ಕೊಲೆಯ ನಂತರ ಇದು ಮೊದಲ ಚುನಾವಣೆ. ನೀವು ಸೇಡು ತೀರಿಸಿಕೊಳ್ಳಲು ಬಯಸುವುದಿಲ್ಲವೇ?” ಎಂದು ವಿರೋಧ ಪಕ್ಷದ ನಾಯಕ ಮತ್ತು ಬಿಜೆಪಿ ನಾಯಕ ಸುವೇಂದು ಅಧಿಕಾರಿ ಮತದಾರರಿಗೆ ಹೇಳುತ್ತಿದ್ದಾರೆ. ಆಸ್ಪತ್ರೆಯ ದಾಳಿಯ ಸಂತ್ರಸ್ತರಿಗೆ ನ್ಯಾಯವನ್ನು ಖಚಿತಪಡಿಸಿಕೊಳ್ಳಲು ಪಶ್ಚಿಮ ಬಂಗಾಳದಲ್ಲಿ ಸರ್ಕಾರ ಬದಲಾವಣೆಯೊಂದೇ ಮಾರ್ಗವಾಗಿದೆ ಎಂದು ಅವರು ಪ್ರತಿಪಾದಿಸುತ್ತಿದ್ದಾರೆ.

ಬಿಜೆಪಿಯು ಚುನಾವಣೆಗೆ ಯಾವುದೇ ಸಂಬಂಧವಿಲ್ಲದ ವಿಷಯಗಳನ್ನು ಎಳೆದು ತರುತ್ತಿದೆ ಎಂದು ಟಿಎಂಸಿ ನಾಯಕ ಕುನಾಲ್ ಘೋಷ್ ಆರೋಪಿಸಿದ್ದಾರೆ. “ಅಭಿವೃದ್ಧಿ ವಿಚಾರದ ಮೇಲೆ ವಿಧಾನಸಭೆ ಚುನಾವಣೆ ನಡೆಯಲಿದೆ. ಯಾರು ಅಭಿವೃದ್ಧಿಯನ್ನು ಖಾತ್ರಿಪಡಿಸುತ್ತಾರೆ ಎಂಬುದನ್ನು ಜನರು ನೋಡುತ್ತಾರೆ ಮತ್ತು ಅದಕ್ಕೆ ಅನುಗುಣವಾಗಿ ಮತ ಚಲಾಯಿಸುತ್ತಾರೆ” ಎಂದು ಘೋಷ್ ಹೇಳಿದ್ದಾರೆ.

“ಬಿಜೆಪಿ ಅತ್ಯಾಚಾರ ಪ್ರಕರಣವನ್ನು ಮುನ್ನಲೆಗೆ ತಂದರೆ ಟಿಎಂಸಿ ಉತ್ತರ ಪ್ರದೇಶದ ಉನ್ನಾವ್ ಮತ್ತು ಹತ್ರಾಸ್ ಹಾಗೂ ಮಧ್ಯಪ್ರದೇಶ, ಗುಜರಾತ್‌ನಲ್ಲಿ ನಡೆದ ಇತರ ಲೈಂಗಿಕ ದೌರ್ಜನ್ಯದ ಘಟನೆಗಳನ್ನು ಸಹ ಪ್ರತಿಯಾಗಿ ಎತ್ತಬಹುದಲ್ಲವೆ, ಇವೆಲ್ಲವೂ ಬಿಜೆಪಿ ಆಡಳಿತವಿರುವ ರಾಜ್ಯಗಳು. ವಾಸ್ತವವೆಂದರೆ ಬಿಜೆಪಿಗೆ ತಾವು ಗೆಲ್ಲುವುದಿಲ್ಲ ಎಂದು ತಿಳಿದಿದೆ. ಹಾಗಾಗಿ ಆರ್ ಜಿ ಕರ್ ಬಗ್ಗೆ ಕೂಗಾಡುತ್ತಿದ್ದಾರೆ” ಎಂದು ಘೋಷ್ ಹೇಳಿದ್ದಾರೆ.

ಉಪ ಚುನಾವಣೆ ನಡೆಯುತ್ತಿರುವ ಆರು ಕ್ಷೇತ್ರಗಳಲ್ಲಿ ಐದು ಕ್ಷೇತ್ರಗಳನ್ನು 2021 ಟಿಎಂಸಿ ಗೆದ್ದಿದ್ದು ಮಾತ್ರವಲ್ಲದೆ, ಈ ವರ್ಷ ನಡೆದ ಲೋಕಸಭಾ ಚುನಾವಣೆಯಲ್ಲಿ ಕೂಡಾ ಹೆಚ್ಚಿನ ಕ್ಷೇತಗಳಲ್ಲಿ ಪ್ರಾಬಲ್ಯ ಮೆರೆದಿತ್ತು. ಅದಾಗ್ಯೂ, ಮದರಿಹತ್ ಮತ್ತು ಮೇದಿನಿಪುರದ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಮಾತ್ರ ಬಿಜೆಪಿ ಕ್ರಮವಾಗಿ 9,000 ಮತ್ತು 11,000 ಮತಗಳಿಂದ ಮುಂದಿದೆ.

ಹಾಗಾಗಿ ಒಂದು ತಿಂಗಳ ಕಾಲ ನಡೆದ ಆರ್‌ಜಿ ಕಾರ್‌ ಪ್ರತಿಭಟನೆಯ ಕಾರಣಕ್ಕೆ ಮೇದಿನಿಪುರ ಮತ್ತು ಮದರಿಹತ್‌ನಲ್ಲಿ ಪಕ್ಷವೂ ಗೆಲ್ಲಬಹುದು ಎಂದು ಬಿಜೆಪಿ ಬಿಜೆಪಿ ಆಶಿಸುತ್ತಿದೆ. ಆದರೆ ಈ ಲೆಕ್ಕಾಚಾರವನ್ನು ಟಿಎಂಸಿ ನಿರಾಕರಿಸಿದೆ. ನಮ್ಮ ಮತ ಬ್ಯಾಂಕ್ ಹಾಗೆ ಉಳಿದಿದೆ ಎಂದ ಹೇಳುವ ಪಕ್ಷವೂ, ಉಪ ಚುನಾವಣೆಗಳಲ್ಲಿ ಯಾವತ್ತೂ ಆಡಳಿತರೂಢ ಪಕ್ಷಕ್ಕೆ ಹೆಚ್ಚಿನ ಲಾಭವಾಗಿದೆ ಎಂದು ಪ್ರತಿಪಾದಿಸಿದೆ.

ಭ್ರಷ್ಟಾಚಾರದ ಆರೋಪಗಳ ವಿರುದ್ಧ ಹೋರಾಡುತ್ತಿರುವ ಟಿಎಂಸಿಯು ಉಪಚುನಾವಣೆಗೆ ಜನಪ್ರಿಯ ಶುದ್ಧಹಸ್ತ ಎಂದು ತೋರುವ ಸ್ಥಳೀಯ ಮುಖಗಳನ್ನು ಕಣಕ್ಕಿಳಿಸಿದೆ. ಬಿಜೆಪಿ ಕೂಡಾ ಸ್ಥಳೀಯ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದು, ಅದರಲ್ಲೂ ಇಬ್ಬರು ಅಭ್ಯರ್ಥಿಗಳು ಎಡಪಕ್ಷಗಳಿಂದ ಬಿಜೆಪಿಗೆ ಸೇರಿದವರಾಗಿದ್ದಾರೆ.

ಎರಡು ಪಕ್ಷಗಳು ಭಾರಿ ಪ್ರಚಾರ ಮಾಡುತ್ತಿದ್ದು, ಸಚಿವರಾದ ಸುಜಿತ್ ಬೋಸ್, ಫಿರ್ಹಾದ್ ಹಕೀಮ್ ಮತ್ತು ಚಂದ್ರಿಮಾ ಭಟ್ಟಾಚಾರ್ಯರಂತಹ ಟಿಎಂಸಿ ನಾಯಕತ್ವವು ಪ್ರಚಾರವನ್ನು ಮುನ್ನಡೆಸುತ್ತಿದ್ದಾರೆ. ಅವರು ಟಿಎಂಸಿ ಸರ್ಕಾರದ ಜನಪ್ರಿಯ ಕಲ್ಯಾಣ ಯೋಜನೆಗಳಾದ ಲಕ್ಷ್ಮೀರ್ ಭಂಡಾರ್, ಕನ್ಯಾಶ್ರೀ, ಯುವಶ್ರೀ ಇತ್ಯಾದಿಗಳನ್ನು ಮುಂದಿಟ್ಟು ಪ್ರಚಾರ ಮಾಡುತ್ತಿದ್ದಾರೆ.

ಬಿಜೆಪಿ ಕಡೆಯಿಂದ, ಪ್ರಮುಖವಾಗಿ ಸುವೆಂಧು ಅಧಿಕಾರಿಯೆ ಮತ್ತೊಮ್ಮೆ ಪ್ರಚಾರದ ಪ್ರಮುಖ ಮುಖವಾಗಿದ್ದು, ಅವರು ರಾಜ್ಯಾಧ್ಯಕ್ಷ ಸುಕಾಂತ ಮಜುಂದಾರ್ ಅವರೊಂದಿಗೆ ಪ್ರಚಾರ ಕೈಗೊಳ್ಳುತ್ತಿದ್ದಾರೆ. ಟಿಎಂಸಿ ಸರ್ಕಾರದ ಅಡಿಯಲ್ಲಿ ಹೆಚ್ಚುತ್ತಿರುವ ಭ್ರಷ್ಟಾಚಾರ ಮತ್ತು ಹದಗೆಟ್ಟ ಕಾನೂನು ಮತ್ತು ಸುವ್ಯವಸ್ಥೆ ಅವರ ಪ್ರಮುಖ ಚುನಾವಣಾ ವಿಷಯವಾಗಿದೆ.

ಮತ್ತೊಂದೆಡೆ, ಎಡಪಕ್ಷಗಳು ಮತ್ತು ಕಾಂಗ್ರೆಸ್ ತಮ್ಮ ಮೈತ್ರಿಯನ್ನು ಒಟ್ಟಿಗೆ ಹಿಡಿದಿಟ್ಟುಕೊಳ್ಳುವುದರಲ್ಲಿ ವಿಫಲವಾಗಿರುವುದು ಸೇರಿದಂತೆ ಉಪಚುನಾವಣೆಗೆ ನೀರಸವಾಗಿ ಸಿದ್ಧವಾಗಿದೆ. ಉಪ ಚುನಾವಣೆ ನಡೆಯಲಿರುವ ಐದು ಕ್ಷೇತ್ರಗಳಲ್ಲಿ ಎಡರಂಗದ ಅಭ್ಯರ್ಥಿಗಳಿದ್ದರೆ, ಆರನೇ ಕ್ಷೇತ್ರದಲ್ಲಿ ತಮ್ಮ ಮಿತ್ರಪಕ್ಷವಾದ ಇಂಡಿಯನ್ ಸೆಕ್ಯುಲರ್ ಫ್ರಂಟ್ ಅಭ್ಯರ್ಥಿಯನ್ನು ಬೆಂಬಲಿಸುತ್ತಿದೆ. ಈ ಎಲ್ಲ ಆರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪ್ರತ್ಯೇಕವಾಗಿ ಸ್ಪರ್ಧಿಸುತ್ತಿದೆ.

2021ರ ವಿಧಾನಸಭಾ ಚುನಾವಣೆಯಲ್ಲಿ ಎಡಪಕ್ಷಗಳು ಮತ್ತು ಕಾಂಗ್ರೆಸ್ ಒಟ್ಟಿಗೆ ಸ್ಪರ್ಧಿಸಿದ್ದರೂ ಒಂದೇ ಒಂದು ಅಸೆಂಬ್ಲಿ ಸ್ಥಾನವನ್ನು ಗೆಲ್ಲಲು ವಿಫಲವಾಗಿತ್ತು. ಈ ಮೈತ್ರಿಯ ಅಭ್ಯರ್ಥಿಗಳು ಸೀತಾಯ್‌ನಲ್ಲಿ 1.66%, ನೈಹಾಟಿಯಲ್ಲಿ 10.11%, ಮೆದಿನಿಪುರದಲ್ಲಿ 5.43%, ತಲ್ದಂಗ್ರಾದಲ್ಲಿ 11.41% ಮತ್ತು ಮದಾರಿಹತ್‌ನಲ್ಲಿ 4.24% ಮತಗಳನ್ನು ಪಡೆದಿದ್ದರು.

ತಮ್ಮ ಅಭ್ಯರ್ಥಿಗಳು ಬಿಜೆಪಿ ಅಥವಾ ಟಿಎಂಸಿ ಅಭ್ಯರ್ಥಿಗಳಂತೆ ಗೋಚರಿಸದಿರಬಹುದು. ಆದರೆ ಪಕ್ಷವೂ ಮನೆ-ಮನೆ ಪ್ರಚಾರದ ಮೇಲೆ ಕೇಂದ್ರೀಕರಿಸುತ್ತಿದೆ ಎಂದು ಎಡಪಕ್ಷಗಳ ನಾಯಕರು ಹೇಳಿದ್ದಾರೆ. ಹಿರಿಯ ಸಿಪಿಐ(ಎಂ) ನಾಯಕರೊಬ್ಬರು ಮಾತನಾಡಿ, “ನಾವು ಗೆಲ್ಲುವುದಿಲ್ಲ ಎಂದು ನಮಗೆ ತಿಳಿದಿದೆ. ಆದರೆ ಆರ್ ಜಿ ಕಾರ್ ಚಳುವಳಿಯ ನಂತರ ನಮ್ಮ ಮತಗಳ ಶೇಕಡಾವಾರು ಏರಿಕೆಯಾಗಿದೆಯೇ ಎಂದು ನಾವು ನೋಡಬೇಕಾಗಿದೆ.” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಮಾಲೆಗಾಂವ್ ಸ್ಫೋಟ ಪ್ರಕರಣ | ಶಂಕಿತ ಭಯೋತ್ಪಾದಕಿ ಪ್ರಜ್ಞಾ ಠಾಕೂರ್‌ ವಿರುದ್ಧ ವಾರೆಂಟ್

ಮಾಲೆಗಾಂವ್ ಸ್ಫೋಟ ಪ್ರಕರಣ | ಶಂಕಿತ ಭಯೋತ್ಪಾದಕಿ ಪ್ರಜ್ಞಾ ಠಾಕೂರ್‌ ವಿರುದ್ಧ ವಾರೆಂಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...