Homeಮುಖಪುಟಪಶ್ಚಿಮ ಬಂಗಾಳ ಉಪಚುನಾವಣೆ | ಆರ್‌ಜಿ ಕರ್ ಪ್ರತಿಭಟನೆ ಮೇಲೆ ಎಲ್ಲರ ಕಣ್ಣು

ಪಶ್ಚಿಮ ಬಂಗಾಳ ಉಪಚುನಾವಣೆ | ಆರ್‌ಜಿ ಕರ್ ಪ್ರತಿಭಟನೆ ಮೇಲೆ ಎಲ್ಲರ ಕಣ್ಣು

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ನವೆಂಬರ್ 13 ರಂದು ನಡೆಯಲಿರುವ ಉಪ ಚುನಾವಣೆಯ ಮೇಲೆ ದೇಶದ ಕಣ್ಣು ನೆಟ್ಟಿದೆ. ದೇಶದಾದ್ಯಂತ ಭಾರಿ ಸುದ್ದಿಯಾದ ಕೊಲ್ಕತ್ತಾದ ಆರ್‌ಜಿಕರ್ ಆಸ್ಪತ್ರೆಯಲ್ಲಿ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಂತರ ರಾಜ್ಯದಲ್ಲಿ ಭಾರಿ ಪ್ರತಿಭಟನೆ ನಡೆಯುತ್ತಿದ್ದು, ಹಾಗಾಗಿ ವಿಪಕ್ಷಗಳು ಈ ಚುನಾವಣೆಯಲ್ಲಿ ಲಾಭ ಪಡೆಯಲಿದೆ ಎಂದು ನಂಬಲಾಗಿದೆ. ಬಂಗಾಳ ಉಪಚುನಾವಣೆ

ಉಪ ಚುನಾವಣೆಯಲ್ಲಿ ಲಾಭ ಪಡೆಯಲು ಪ್ರಮುಖ ವಿಪಕ್ಷವಾದ ಬಿಜೆಪಿ ಸೇರಿದಂತೆ ಸಿಪಿಐ(ಎಂ) ಮತ್ತು ಕಾಂಗ್ರೆಸ್ ಕೂಡಾ ಲೆಕ್ಕಾಚಾರಗಳನ್ನು ಮಾಡುತ್ತಿವೆ. ಒಟ್ಟು ಆರು ಕ್ಷೇತ್ರಗಳಲ್ಲಿ 2021ರ ಚುನಾವಣೆ ವೇಳೆ ಬಿಜೆಪಿ 1 ಕ್ಷೇತ್ರವನ್ನು ಗೆದ್ದಿದ್ದರೆ, ಉಳಿದ ಐದು ಕ್ಷೇತ್ರಗಳಲ್ಲಿ ಆಡಳಿತರೂಢ ಟಿಎಂಸಿ ಗೆದ್ದುಕೊಂಡಿತ್ತು. ಎಲ್ಲಾ ಹಾಲಿ ಶಾಸಕರು ಈ ವರ್ಷದ ಲೋಕಸಭೆ ಚುನಾವಣೆಯಲ್ಲಿ ಸಂಸತ್ತಿಗೆ ಆಯ್ಕೆಯಾದ ಕಾರಣ ಕ್ಷೇತ್ರಗಳು ತೆರವುಗೊಂಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

2021ರಲ್ಲಿ ಸಿತಾಯಿ (ಎಸ್‌ಸಿ-ಮೀಸಲು), ನೈಹತಿ, ಹರೋವಾ, ಮೇದಿನಿಪುರ್ ಮತ್ತು ತಲ್ದಂಗ್ರಾ ವಿಧಾನಸಭಾ ಕ್ಷೇತ್ರಗಳಲ್ಲಿ ಟಿಎಂಸಿಯ ಅಭ್ಯರ್ಥಿಗಳು ಗೆದ್ದಿದ್ದರೆ, ಬಿಜೆಪಿ ಮದರಿಹತ್ (ಎಸ್‌ಟಿ) ಕ್ಷೇತ್ರದಲ್ಲಿ ಜಯಗಳಿಸಿತ್ತು. ಟಿಎಂಸಿ ಗೆದ್ದಿರುವ ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿ 2ನೇ ಸ್ಥಾನದಲ್ಲಿದ್ದರೆ, ಬಿಜೆಪಿ ಗೆದ್ದ ಮದರಿಹತ್‌ ಕ್ಷೇತ್ರದಲ್ಲಿ ಟಿಎಂಸಿ ಎರಡನೇ ಸ್ಥಾನದಲ್ಲಿದೆ. ಬಂಗಾಳ ಉಪಚುನಾವಣೆ

“ಆರ್ ಜಿ ಕರ್ ಅತ್ಯಾಚಾರ ಮತ್ತು ಕೊಲೆಯ ನಂತರ ಇದು ಮೊದಲ ಚುನಾವಣೆ. ನೀವು ಸೇಡು ತೀರಿಸಿಕೊಳ್ಳಲು ಬಯಸುವುದಿಲ್ಲವೇ?” ಎಂದು ವಿರೋಧ ಪಕ್ಷದ ನಾಯಕ ಮತ್ತು ಬಿಜೆಪಿ ನಾಯಕ ಸುವೇಂದು ಅಧಿಕಾರಿ ಮತದಾರರಿಗೆ ಹೇಳುತ್ತಿದ್ದಾರೆ. ಆಸ್ಪತ್ರೆಯ ದಾಳಿಯ ಸಂತ್ರಸ್ತರಿಗೆ ನ್ಯಾಯವನ್ನು ಖಚಿತಪಡಿಸಿಕೊಳ್ಳಲು ಪಶ್ಚಿಮ ಬಂಗಾಳದಲ್ಲಿ ಸರ್ಕಾರ ಬದಲಾವಣೆಯೊಂದೇ ಮಾರ್ಗವಾಗಿದೆ ಎಂದು ಅವರು ಪ್ರತಿಪಾದಿಸುತ್ತಿದ್ದಾರೆ.

ಬಿಜೆಪಿಯು ಚುನಾವಣೆಗೆ ಯಾವುದೇ ಸಂಬಂಧವಿಲ್ಲದ ವಿಷಯಗಳನ್ನು ಎಳೆದು ತರುತ್ತಿದೆ ಎಂದು ಟಿಎಂಸಿ ನಾಯಕ ಕುನಾಲ್ ಘೋಷ್ ಆರೋಪಿಸಿದ್ದಾರೆ. “ಅಭಿವೃದ್ಧಿ ವಿಚಾರದ ಮೇಲೆ ವಿಧಾನಸಭೆ ಚುನಾವಣೆ ನಡೆಯಲಿದೆ. ಯಾರು ಅಭಿವೃದ್ಧಿಯನ್ನು ಖಾತ್ರಿಪಡಿಸುತ್ತಾರೆ ಎಂಬುದನ್ನು ಜನರು ನೋಡುತ್ತಾರೆ ಮತ್ತು ಅದಕ್ಕೆ ಅನುಗುಣವಾಗಿ ಮತ ಚಲಾಯಿಸುತ್ತಾರೆ” ಎಂದು ಘೋಷ್ ಹೇಳಿದ್ದಾರೆ.

“ಬಿಜೆಪಿ ಅತ್ಯಾಚಾರ ಪ್ರಕರಣವನ್ನು ಮುನ್ನಲೆಗೆ ತಂದರೆ ಟಿಎಂಸಿ ಉತ್ತರ ಪ್ರದೇಶದ ಉನ್ನಾವ್ ಮತ್ತು ಹತ್ರಾಸ್ ಹಾಗೂ ಮಧ್ಯಪ್ರದೇಶ, ಗುಜರಾತ್‌ನಲ್ಲಿ ನಡೆದ ಇತರ ಲೈಂಗಿಕ ದೌರ್ಜನ್ಯದ ಘಟನೆಗಳನ್ನು ಸಹ ಪ್ರತಿಯಾಗಿ ಎತ್ತಬಹುದಲ್ಲವೆ, ಇವೆಲ್ಲವೂ ಬಿಜೆಪಿ ಆಡಳಿತವಿರುವ ರಾಜ್ಯಗಳು. ವಾಸ್ತವವೆಂದರೆ ಬಿಜೆಪಿಗೆ ತಾವು ಗೆಲ್ಲುವುದಿಲ್ಲ ಎಂದು ತಿಳಿದಿದೆ. ಹಾಗಾಗಿ ಆರ್ ಜಿ ಕರ್ ಬಗ್ಗೆ ಕೂಗಾಡುತ್ತಿದ್ದಾರೆ” ಎಂದು ಘೋಷ್ ಹೇಳಿದ್ದಾರೆ.

ಉಪ ಚುನಾವಣೆ ನಡೆಯುತ್ತಿರುವ ಆರು ಕ್ಷೇತ್ರಗಳಲ್ಲಿ ಐದು ಕ್ಷೇತ್ರಗಳನ್ನು 2021 ಟಿಎಂಸಿ ಗೆದ್ದಿದ್ದು ಮಾತ್ರವಲ್ಲದೆ, ಈ ವರ್ಷ ನಡೆದ ಲೋಕಸಭಾ ಚುನಾವಣೆಯಲ್ಲಿ ಕೂಡಾ ಹೆಚ್ಚಿನ ಕ್ಷೇತಗಳಲ್ಲಿ ಪ್ರಾಬಲ್ಯ ಮೆರೆದಿತ್ತು. ಅದಾಗ್ಯೂ, ಮದರಿಹತ್ ಮತ್ತು ಮೇದಿನಿಪುರದ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಮಾತ್ರ ಬಿಜೆಪಿ ಕ್ರಮವಾಗಿ 9,000 ಮತ್ತು 11,000 ಮತಗಳಿಂದ ಮುಂದಿದೆ.

ಹಾಗಾಗಿ ಒಂದು ತಿಂಗಳ ಕಾಲ ನಡೆದ ಆರ್‌ಜಿ ಕಾರ್‌ ಪ್ರತಿಭಟನೆಯ ಕಾರಣಕ್ಕೆ ಮೇದಿನಿಪುರ ಮತ್ತು ಮದರಿಹತ್‌ನಲ್ಲಿ ಪಕ್ಷವೂ ಗೆಲ್ಲಬಹುದು ಎಂದು ಬಿಜೆಪಿ ಬಿಜೆಪಿ ಆಶಿಸುತ್ತಿದೆ. ಆದರೆ ಈ ಲೆಕ್ಕಾಚಾರವನ್ನು ಟಿಎಂಸಿ ನಿರಾಕರಿಸಿದೆ. ನಮ್ಮ ಮತ ಬ್ಯಾಂಕ್ ಹಾಗೆ ಉಳಿದಿದೆ ಎಂದ ಹೇಳುವ ಪಕ್ಷವೂ, ಉಪ ಚುನಾವಣೆಗಳಲ್ಲಿ ಯಾವತ್ತೂ ಆಡಳಿತರೂಢ ಪಕ್ಷಕ್ಕೆ ಹೆಚ್ಚಿನ ಲಾಭವಾಗಿದೆ ಎಂದು ಪ್ರತಿಪಾದಿಸಿದೆ.

ಭ್ರಷ್ಟಾಚಾರದ ಆರೋಪಗಳ ವಿರುದ್ಧ ಹೋರಾಡುತ್ತಿರುವ ಟಿಎಂಸಿಯು ಉಪಚುನಾವಣೆಗೆ ಜನಪ್ರಿಯ ಶುದ್ಧಹಸ್ತ ಎಂದು ತೋರುವ ಸ್ಥಳೀಯ ಮುಖಗಳನ್ನು ಕಣಕ್ಕಿಳಿಸಿದೆ. ಬಿಜೆಪಿ ಕೂಡಾ ಸ್ಥಳೀಯ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದು, ಅದರಲ್ಲೂ ಇಬ್ಬರು ಅಭ್ಯರ್ಥಿಗಳು ಎಡಪಕ್ಷಗಳಿಂದ ಬಿಜೆಪಿಗೆ ಸೇರಿದವರಾಗಿದ್ದಾರೆ.

ಎರಡು ಪಕ್ಷಗಳು ಭಾರಿ ಪ್ರಚಾರ ಮಾಡುತ್ತಿದ್ದು, ಸಚಿವರಾದ ಸುಜಿತ್ ಬೋಸ್, ಫಿರ್ಹಾದ್ ಹಕೀಮ್ ಮತ್ತು ಚಂದ್ರಿಮಾ ಭಟ್ಟಾಚಾರ್ಯರಂತಹ ಟಿಎಂಸಿ ನಾಯಕತ್ವವು ಪ್ರಚಾರವನ್ನು ಮುನ್ನಡೆಸುತ್ತಿದ್ದಾರೆ. ಅವರು ಟಿಎಂಸಿ ಸರ್ಕಾರದ ಜನಪ್ರಿಯ ಕಲ್ಯಾಣ ಯೋಜನೆಗಳಾದ ಲಕ್ಷ್ಮೀರ್ ಭಂಡಾರ್, ಕನ್ಯಾಶ್ರೀ, ಯುವಶ್ರೀ ಇತ್ಯಾದಿಗಳನ್ನು ಮುಂದಿಟ್ಟು ಪ್ರಚಾರ ಮಾಡುತ್ತಿದ್ದಾರೆ.

ಬಿಜೆಪಿ ಕಡೆಯಿಂದ, ಪ್ರಮುಖವಾಗಿ ಸುವೆಂಧು ಅಧಿಕಾರಿಯೆ ಮತ್ತೊಮ್ಮೆ ಪ್ರಚಾರದ ಪ್ರಮುಖ ಮುಖವಾಗಿದ್ದು, ಅವರು ರಾಜ್ಯಾಧ್ಯಕ್ಷ ಸುಕಾಂತ ಮಜುಂದಾರ್ ಅವರೊಂದಿಗೆ ಪ್ರಚಾರ ಕೈಗೊಳ್ಳುತ್ತಿದ್ದಾರೆ. ಟಿಎಂಸಿ ಸರ್ಕಾರದ ಅಡಿಯಲ್ಲಿ ಹೆಚ್ಚುತ್ತಿರುವ ಭ್ರಷ್ಟಾಚಾರ ಮತ್ತು ಹದಗೆಟ್ಟ ಕಾನೂನು ಮತ್ತು ಸುವ್ಯವಸ್ಥೆ ಅವರ ಪ್ರಮುಖ ಚುನಾವಣಾ ವಿಷಯವಾಗಿದೆ.

ಮತ್ತೊಂದೆಡೆ, ಎಡಪಕ್ಷಗಳು ಮತ್ತು ಕಾಂಗ್ರೆಸ್ ತಮ್ಮ ಮೈತ್ರಿಯನ್ನು ಒಟ್ಟಿಗೆ ಹಿಡಿದಿಟ್ಟುಕೊಳ್ಳುವುದರಲ್ಲಿ ವಿಫಲವಾಗಿರುವುದು ಸೇರಿದಂತೆ ಉಪಚುನಾವಣೆಗೆ ನೀರಸವಾಗಿ ಸಿದ್ಧವಾಗಿದೆ. ಉಪ ಚುನಾವಣೆ ನಡೆಯಲಿರುವ ಐದು ಕ್ಷೇತ್ರಗಳಲ್ಲಿ ಎಡರಂಗದ ಅಭ್ಯರ್ಥಿಗಳಿದ್ದರೆ, ಆರನೇ ಕ್ಷೇತ್ರದಲ್ಲಿ ತಮ್ಮ ಮಿತ್ರಪಕ್ಷವಾದ ಇಂಡಿಯನ್ ಸೆಕ್ಯುಲರ್ ಫ್ರಂಟ್ ಅಭ್ಯರ್ಥಿಯನ್ನು ಬೆಂಬಲಿಸುತ್ತಿದೆ. ಈ ಎಲ್ಲ ಆರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪ್ರತ್ಯೇಕವಾಗಿ ಸ್ಪರ್ಧಿಸುತ್ತಿದೆ.

2021ರ ವಿಧಾನಸಭಾ ಚುನಾವಣೆಯಲ್ಲಿ ಎಡಪಕ್ಷಗಳು ಮತ್ತು ಕಾಂಗ್ರೆಸ್ ಒಟ್ಟಿಗೆ ಸ್ಪರ್ಧಿಸಿದ್ದರೂ ಒಂದೇ ಒಂದು ಅಸೆಂಬ್ಲಿ ಸ್ಥಾನವನ್ನು ಗೆಲ್ಲಲು ವಿಫಲವಾಗಿತ್ತು. ಈ ಮೈತ್ರಿಯ ಅಭ್ಯರ್ಥಿಗಳು ಸೀತಾಯ್‌ನಲ್ಲಿ 1.66%, ನೈಹಾಟಿಯಲ್ಲಿ 10.11%, ಮೆದಿನಿಪುರದಲ್ಲಿ 5.43%, ತಲ್ದಂಗ್ರಾದಲ್ಲಿ 11.41% ಮತ್ತು ಮದಾರಿಹತ್‌ನಲ್ಲಿ 4.24% ಮತಗಳನ್ನು ಪಡೆದಿದ್ದರು.

ತಮ್ಮ ಅಭ್ಯರ್ಥಿಗಳು ಬಿಜೆಪಿ ಅಥವಾ ಟಿಎಂಸಿ ಅಭ್ಯರ್ಥಿಗಳಂತೆ ಗೋಚರಿಸದಿರಬಹುದು. ಆದರೆ ಪಕ್ಷವೂ ಮನೆ-ಮನೆ ಪ್ರಚಾರದ ಮೇಲೆ ಕೇಂದ್ರೀಕರಿಸುತ್ತಿದೆ ಎಂದು ಎಡಪಕ್ಷಗಳ ನಾಯಕರು ಹೇಳಿದ್ದಾರೆ. ಹಿರಿಯ ಸಿಪಿಐ(ಎಂ) ನಾಯಕರೊಬ್ಬರು ಮಾತನಾಡಿ, “ನಾವು ಗೆಲ್ಲುವುದಿಲ್ಲ ಎಂದು ನಮಗೆ ತಿಳಿದಿದೆ. ಆದರೆ ಆರ್ ಜಿ ಕಾರ್ ಚಳುವಳಿಯ ನಂತರ ನಮ್ಮ ಮತಗಳ ಶೇಕಡಾವಾರು ಏರಿಕೆಯಾಗಿದೆಯೇ ಎಂದು ನಾವು ನೋಡಬೇಕಾಗಿದೆ.” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಮಾಲೆಗಾಂವ್ ಸ್ಫೋಟ ಪ್ರಕರಣ | ಶಂಕಿತ ಭಯೋತ್ಪಾದಕಿ ಪ್ರಜ್ಞಾ ಠಾಕೂರ್‌ ವಿರುದ್ಧ ವಾರೆಂಟ್

ಮಾಲೆಗಾಂವ್ ಸ್ಫೋಟ ಪ್ರಕರಣ | ಶಂಕಿತ ಭಯೋತ್ಪಾದಕಿ ಪ್ರಜ್ಞಾ ಠಾಕೂರ್‌ ವಿರುದ್ಧ ವಾರೆಂಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...