Homeಕರೋನಾ ತಲ್ಲಣಪಶ್ಚಿಮ ಬಂಗಾಳ: ಕೊರೊನಾ ಸೋಂಕಿತರ ಅಂತ್ಯಕ್ರಿಯೆಯ ಸಿಬ್ಬಂದಿ ನೇಮಕಾತಿಯಲ್ಲೂ ಜಾತಿ ತಾರತಮ್ಯ

ಪಶ್ಚಿಮ ಬಂಗಾಳ: ಕೊರೊನಾ ಸೋಂಕಿತರ ಅಂತ್ಯಕ್ರಿಯೆಯ ಸಿಬ್ಬಂದಿ ನೇಮಕಾತಿಯಲ್ಲೂ ಜಾತಿ ತಾರತಮ್ಯ

ಜಾತಿ ತಾರತಮ್ಯದ ವಿರುದ್ಧ ದಲಿತ ಸಮುದಾಯ ಶತಮಾನಗಳಿಂದ ಹೋರಾಟ ನಡೆಸುತ್ತಿದೆ. ಆದರೆ ಸರ್ಕಾರಗಳು ಜಾತಿ ಆಧಾರಿತ ಕಾರ್ಮಿಕ ವಿಭಜನೆಯನ್ನು ಪುನರಾವರ್ತಿಸುತ್ತಿರುವುದು ಶೋಚನೀಯ.

- Advertisement -
- Advertisement -

ಪಶ್ಚಿಮ ಬಂಗಾಳದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸರಣಿ ಆದೇಶಗಳ ಮೂಲಕ ಡೊಂಬ ಸಮುದಾಯಕ್ಕೆ ಸೇರಿದ ಜನರನ್ನು ಮಾತ್ರ ಕೋವಿಡ್ ಸೋಂಕಿತರ ಅಂತ್ಯಕ್ರಿಯೆಗೆ ನೇಮಾಕಾತಿ ಮಾಡಿಕೊಳ್ಳುತ್ತಿದೆ. ಈ ಆದೇಶಗಳು ಮೇಲ್ನೋಟದಲ್ಲಿಯೇ ಜಾತಿ ಆಧಾರಿತ ಶೋಷಣೆಗೆ ಕಾರಣವಾಗಿರುವುದು ಕಂಡುಬರುತ್ತದೆ. ಜಾತಿ ಆಧಾರಿತ ವ್ಯವಸ್ಥೆಯನ್ನು ಎತ್ತಿಹಿಡಿಯುವ ಪಶ್ಚಿಮ ಬಂಗಾಳ ಸರ್ಕಾರದ ಈ ಆದೇಶಗಳು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿವೆ.

ಡಿಸೆಂಬರ್ 26, 2019 ರಿಂದ ಇತ್ತೀಚೆಗೆ ಎಂದರೆ ಮೇ 07, 2021 ರ ವರೆಗೆ ಅನೇಕ ಸುತ್ತೋಲೆಗಳ ಮೂಲಕ ಪಶ್ಚಿಮ ಬಂಗಾಳ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಅಂತ್ಯಕ್ರಿಯೆ ಮತ್ತು ದೇಹಗಳ ವಿಲೇವಾರಿಗೆ ಅನೇಕ ನೇಮಕಾತಿ ಆದೇಶಗಳನ್ನು ಹೊರಡಿಸಿದೆ. ಸರ್ಕಾರವು ಅಧಿಕೃತವಾಗಿ ಡೊಂಬ ಅಥವಾ ಡೊಮ್ ಸಮುದಾಯದ ವ್ಯಕ್ತಿಗಳನ್ನೇ ಈ ಕೆಲಸಕ್ಕೆ ನೇಮಿಸಿಕೊಳ್ಳಲು ಸೂಚಿಸಿದೆ.

ಈ ಉದ್ಯೋಗಗಳು ರಾಜ್ಯದ ಇತರ ಜಿಲ್ಲೆಗಳು ಮತ್ತು ಕೊಲ್ಕತ್ತಾದ ಆಸ್ಪತ್ರೆಗಳ ಶವಾಗಾರದಿಂದ ಕೋವಿಡ್ ಸೋಂಕಿನಿಂದ ಮೃತಪಟ್ಟವರ ದೇಹಗಳ ವಿಲೇವಾರಿಯನ್ನೂ ಒಳಗೊಂಡಿರುತ್ತವೆ. ಈ ಕೆಲಸಗಳಿಗೆ ನೇಮಕಗೊಂಡ ಉದ್ಯೋಗಿಗಳಿಗೆ ತಿಂಗಳಿಗೆ ₹ 10,000 ದಷ್ಟು ಸಂಬಳವನ್ನು ನೀಡಲಾಗುತ್ತಿದೆ. ಕೆಲವು ಆದೇಶಗಳ ಮೂಲಕ ಡೊಮ್ ಸಮುದಾಯಕ್ಕೆ ಸೇರಿದ ವ್ಯಕ್ತಿಗಳ ಮರು ನೇಮಕಾತಿಯನ್ನು ಮಾಡಲಾಗಿದೆ. ಶವಾಗಾರದ ಪಕ್ಕದಲ್ಲಿ ಡೊಮ್ ಸಮುದಾಯದ ಉದ್ಯೋಗಿಗಳಿಗಾಗಿ ಪ್ರತ್ಯೇಕ ಕೋಣೆಗಳನ್ನು ನಿರ್ಮಿಸಲಾಗಿದ್ದು ಅದನ್ನು ಡೊಮ್ ರೂಮ್ ಎಂದು ಕರೆಯಲಾಗುತ್ತಿದೆ.

ಇದನ್ನೂ ಓದಿ: ಸುದ್ದಿಯೇನೇ ಮನೋಲ್ಲಾಸಿನಿ: ಭನವಾರಿ ದೇವಿ ಮತ್ತು ಅತ್ಯಾಚಾರದ ಕಾನೂನುಗಳು

ಡೊಮ್ ಸಮುದಾಯವು ಭಾರತದಲ್ಲೇ ಅತ್ಯಂತ ಹಿಂದುಳಿದ ಮತ್ತು ಅಸ್ಪ್ರಶ್ಯ ಜಾತಿಗಳಲ್ಲಿ ಒಂದು. ದಲಿತರಲ್ಲೇ ಅತ್ಯಂತ ಶೋಷಣೆಗೆ ಒಳಗಾಗುತ್ತಿರುವ ಈ ಸಮುದಾಯ ಅಪಾರ ತಾರತಮ್ಯ, ಸಾಮಾಜಿಕ ಕಿರುಕುಳ ಮತ್ತು ಬಹಿಷ್ಕಾರಕ್ಕೆ ಗುರಿಯಾಗುತ್ತಲೇ ಬರುತ್ತಿದೆ. ಜಾತಿ ವ್ಯವಸ್ಥೆಯು ಡೊಮ್ ಜಾತಿಗೆ ಸೇರಿದ ಜನರನ್ನು ಚರಂಡಿಗಳನ್ನು ತೊಳಯುವ, ಕಸಗುಡಿಸುವ, ಹೆಣಗಳನ್ನು ಸುಡುವ ಕೆಲಸಗಳಿಗೆ ಮಾತ್ರ ಸೀಮಿತಗೊಳಿಸಿದೆ. ಇವರ ಜೀವನವನ್ನು ಉತ್ತಮಗೊಳಿಸಲು ಡೊಮ್ ಜಾತಿಯನ್ನು ಭಾರತ ಸಂವಿಧಾನದಡಿಯಲ್ಲಿ ಬರುವ ಪರಿಶಿಷ್ಟ ಜಾತಿಗಳ ಗುಂಪಿಗೆ ಸೇರಿಸಲಾಗಿದ್ದರೂ ಸಮುದಾಯದ ಜನರಿಗೆ ತಾರತಮ್ಯ ಮತ್ತು ಅಸ್ಪ್ರಶ್ಯತೆಯ ನೆರಳುಗಳಿಂದ ಇಂದಿಗೂ ತಪ್ಪಿಸಿಕೊಳ್ಳಲು ಸಾಧ್ಯವಾಗಿಲ್ಲ. ಇದಕ್ಕೆ ಜೀವಂತ ನಿದರ್ಶನವೆಂಬಂತೆ ಪಶ್ಚಿಮ ಬಂಗಾಳದಲ್ಲಿ ನಿತ್ಯ ನೂರಾರು ಕೋವಿಡ್ ಸೋಂಕಿತರ ಹೆಣವನ್ನು ಸುಡುವ ಕಾರ್ಯದಲ್ಲಿ ಡೊಮ್ ಸಮುದಾಯದ ಜನರನ್ನು ಬಳಸಿಕೊಳ್ಳಲಾಗುತ್ತಿದೆ.

ಭಾರತ ಸಂವಿಧಾನವು ಅನುಚ್ಛೇದ 14 16, 17, 21 ರ ಮೂಲಕ ಶೋಷಿತ ಸಮುದಾಯಗಳನ್ನು ಜಾತಿ ವ್ಯವಸ್ಥೆಯ ಪಿಡುಗಿನಿಂದ ರಕ್ಷಿಸುತ್ತದೆ ಮತ್ತು ಸಮಾನಗೌರವ ಮತ್ತು ಸಮಾನ ಘನತೆಯ ಹಕ್ಕನ್ನು ಖಾತರಿಪಡಿಸುತ್ತದೆ. ಆದರೆ ಪಶ್ಚಿಮ ಬಂಗಾಳ ಸರ್ಕಾರ ಮಾತ್ರ ಸಂವಿಧಾನದ ಮೂಲ ಆಶಯ ಸಮಾನತೆಯನ್ನೇ ಗಾಳಿಗೆ ತೂರಿ ಡಾಮ್ ಜಾತಿಯನ್ನು ತಾರತಮ್ಯಕ್ಕೆ ಗುರಿಮಾಡುತ್ತಿದೆ. ಕೋವಿಡ್ ಸೋಂಕಿತ ದೇಹಗಳನ್ನು ವಿಲೇವಾರಿ ಮಾಡುವಂತಹ ಅತ್ಯಂತ ಅಪಾಯಕಾರಿ ಕೆಲಸಕ್ಕೆ ಯಾವುದೇ ಸುರಕ್ಷತೆಯ ಖಾತರಿಯಿಲ್ಲದೇ ಅತ್ಯಂತ ಕಡಿಮೆ ಸಂಬಳಕ್ಕೆ ಒಂದು ಸಮುದಾಯವನ್ನೇ ನಿರ್ದಿಷ್ಟವಾಗಿ ಆಯ್ಕೆ ಮಾಡಿಕೊಳ್ಳುತ್ತಿರುವುದು ಅತ್ಯಂತ ಅಮಾನವೀಯ.

ಸರ್ಕಾರದ ಆದೇಶಗಳು ಜಾತಿ ಆಧಾರಿತ ಉದ್ಯೋಗ ಪದ್ಧತಿಯನ್ನು ಪ್ರತಿಬಿಂಬಿಸುತ್ತಿವೆ. ಯಾವ ವ್ಯವಸ್ಥೆಯ ವಿರುದ್ಧ ದಲಿತರು ಹೋರಾಟವನ್ನು ಮಾಡುತ್ತ, ತಮ್ಮ ಜೀವನವನ್ನು ಬಲಿಕೊಡುತ್ತ ಬಂದಿದ್ದರೋ ಅದೇ ವ್ಯವಸ್ಥೆಗೆ ಸರ್ಕಾರ ಮತ್ತೆ ಅವರನ್ನು ದೂಡುತ್ತಿದೆ.

1936 ರಲ್ಲಿ ಡಾ. ಬಿ ಆರ್ ಅಂಬೇಡ್ಕರ್ ತಮ್ಮ ‘ಅನಿಹೇಲಿನೇಶನ್ ಆಫ್ ಕಾಸ್ಟ್’ ಕೃತಿಯಲ್ಲಿ ಬರೆಯುತ್ತಾರೆ.
“ಜಾತಿಪದ್ಧತಿಯೆಂಬುದು ಕೇವಲ ಶ್ರಮದ ವಿಭಜನೆಯಲ್ಲ. ಇದೊಂದು ಶ್ರಮಿಕರನ್ನೇ ವಿಭಜಿಸುವ ವ್ಯವಸ್ಥೆ. ಯಾವುದೇ ನಾಗರಿಕ ಸಮುದಾಯ ಒಂದು ವರ್ಗವನ್ನು ಸಂಪೂರ್ಣವಾಗಿ ತಳಕ್ಕೆ ತಳ್ಳುವ ಇಂತಹ ಅಸ್ವಾಭಿವಿಕ ವಿಭಜನೆಗಳನ್ನು ಹೊಂದಿರಬಾರದು”

ಇದನ್ನೂ ಓದಿ: ಗೌರಿ ಕಾರ್ನರ್; ಲಿವ್ ಅಂಡ್ ಬಿಕಮ್ ಸಿನಿಮ: ಪ್ರೀತಿಗಿರುವಷ್ಟು ಶಕ್ತಿ ಇನ್ಯಾವುದಕ್ಕಿದೆ?

ಕೋವಿಡ್ ಮೃತರ ದೇಹಗಳ ವಿಲೇವಾರಿಗೆ ಡಾಮ್ ಜಾತಿಯ ಜನರ ನಿರ್ದಿಷ್ಟ ನೇಮಕಾತಿ ಅಂಬೇಡ್ಕರ್ ಹೇಳಿದ ಈ ಜಾತಿ ಮನಸ್ಥಿತಿ ಮತ್ತು ಜಾತಿ ಪದ್ಧತಿಯನ್ನು ಜೀವಂತ ವಿಡುವ ಪ್ರಯತ್ನವನ್ನು ಎತ್ತಿ ತೋರಿಸುತ್ತದೆ. ಪಶ್ಚಿಮ ಬಂಗಾಳ ಸರ್ಕಾರವು ಡಾಮ್ ಸಮುದಾಯವನ್ನು ಹೆಣ ಸುಡುವ ಕೆಲಸಕ್ಕೆ ಸೀಮಿತವೆಂದು ನಡೆಸಿಕೊಳ್ಳುತ್ತಿದೆ. ಇನ್ನು ಸರಳವಾಗಿ ಹೇಳಬೇಕೆಂದರೆ ಹೆಣ ಸುಡುವುದು ಡಾಮ್ ಜಾತಿಯ ಅಧಿಕೃತ ಕೆಲಸ ಎಂದು ಹೇಳುವ ಮೂಲಕ ಜಾತಿ ಪದ್ಧತಿಯನ್ನು ಕಾನೂನು ಬದ್ಧಗೊಳಿಸುತ್ತಿದೆ.

ನವತೇಜ್ ಸಿಂಗ್ ಜೋಹರ್ vs ಭಾರತ ಸರ್ಕಾರ ಪ್ರಕರಣದಲ್ಲಿ 2018 ರಲ್ಲಿ ಭಾರತ ಸರ್ವೋಚ್ಛ ನ್ಯಾಯಾಲಯವು ಸಾಮಾಜಿಕ ಕಳಂಕದ ಆಧಾರದಲ್ಲಿ ಕಡ್ಡಾಯವಾಗಿ ಸಮುದಾಯವನ್ನು ಸಮಾಜದಿಂದ ದೂರಮಾಡುವುದು, ನಿರ್ದಿಷ್ಟ ವೃತ್ತಿಗೆ ಸೀಮಿತ ಗೊಳಿಸುವುದು ಸಂವಿಧಾನದ ಮೂಲಭೂತ ಸಿದ್ಧಾಂತವಾದ ಸ್ವಾತಂತ್ರ್ಯಕ್ಕೆ ವಿರುದ್ಧವಾದ ಪ್ರಕ್ರಿಯೆ ಎಂದು ಹೇಳಿದೆ. ಈ ಪ್ರಕರಣದಲ್ಲಿ ಸರ್ವೋಚ್ಛ ನ್ಯಾಯಾಲಯವು ಶೋಷಿತ ಸಮುದಾಯಗಳನ್ನು ಯಾವುದೇ ಜಾತೀಯ ಪೂರ್ವಾಗ್ರಹಗಳಿಲ್ಲದೇ ಸಾಮಾನ್ಯ ಮನುಷ್ಯರನ್ನಾಗಿ ನೋಡಬೇಕು. ಸಮಾನ ಗೌರವ ನೀಡಬೇಕು ಎಂದು ಆದೇಶ ವಿತ್ತಿದೆ.‌ಆದರೆ ಪಶ್ಚಿಮ ಬಂಗಾಳ ಸರ್ಕಾರವು ಜಾತಿ ಪದ್ಧತಿಯನ್ನು ಮರುಸ್ಥಾಪಿಸುತ್ತ ಶೋಷಿತ ಡಾಮ್ ಸಮುದಾಯಕ್ಕೆ ಘನತೆಯ ಬದುಕಿನ ಮೂಲಭೂತ ಹಕ್ಕನ್ನೇ
ನಿರಾಕರಿಸುತ್ತಿದೆ. ಆ ಮೂಲಕ ಘನತೆಯೊಂದಿಗೆ ಅಂತರ್ಗತವಾದ ಅನುಚ್ಛೇಧ 21 ರ ಮೂಲಕ ಭಾರತ ಸಂವಿಧಾನ ಖಾತರಿಪಡಿಸಿದ ಬದುಕುವ ಹಕ್ಕನ್ನು ನಿರಾಕರಿಸಲು ಹೊರಟಿದೆ.

ಭಾರತ ಸಂವಿಧಾನವು ಕಠಿಣ ಶಬ್ಧಗಳಲ್ಲಿ ಪವಿತ್ರ ಮತ್ತು ಮಲೀನ ಜಾತಿಗಳೆಂಬ ವ್ಯವಸ್ಥೆಯನ್ನು ದೇಶದಲ್ಲಿ‌ ನಿರ್ಬಂಧಿಸಿದೆ. ಶಬರಿ ಮಲೆ ಪ್ರಕರಣದಲ್ಲಿ ಜಸ್ಟಿಸ್ ಡಿ ವೈ ಚಂದ್ರಚೂಡ್ ಅವರು ‘ಪವಿತ್ರ’ ಮತ್ತು ‘ಮಲೀನ’ ಎಂಬ ಸಾಮಾಜಿಕ ಪೂರ್ವಾಗ್ರಹದಿಂದ ಕೂಡಿದ ವರ್ಗೀಕರಣಕ್ಕೆ ಸಂವಿಧಾನ ವ್ಯವಸ್ಥೆಯಲ್ಲಿ ಯಾವುದೇ ಸ್ಥಳವಿಲ್ಲವೆಂದು ಪುನರುಚ್ಛರಿಸುತ್ತಾರೆ. ಇದಕ್ಕೆ ವಿರುದ್ಧವಾಗಿ ಸರ್ಕಾರಗಳು ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ಸರ್ಕಾರಗಳು ನಡೆಸುತ್ತಿರುವ ಶವಾಗಾರದ ಸಿಬ್ಬಂದಿ, ಅಂತ್ಯಕ್ರಿಯೆಯ ಸಿಬ್ಬಂದಿಗಳ ನೇಮಾಕಾತಿಯೂ ಸಂಪೂರ್ಣ ಜಾತಿ ಆಧಾರಿತವಾಗಿದೆ, ಹೆಣ ಸುಡುವ ಕೆಲಸವನ್ನು ಅತ್ಯಂತ ಹೀನಾಯ ಎಂದು ಪರಿಗಣಿಸಿ ಅಸ್ಪ್ರಶ್ಯ ಎಂದು ಗುರುತಿಸುವ ಸಮುದಾಯದವರನ್ನೇ ಆ ಕೆಲಸಕ್ಕೆ ನೇಮಿಸಲಾಗುತ್ತಿದೆ ಎಂಬುದನ್ನು ವೈಸ್ ಮೀಡಿಯಾ ವೆಬ್ ಸೈಟ್ ದಾಖಲೆಯ ಮೂಲಕ ತೋರಿಸಿದೆ.

ಆದರೆ ಡಾಮ್ ಸಮುದಾಯಕ್ಕೆ ಸೇರಿದ ಜನರಿಗೆ ಪಿಪಿಇ ಕಿಟ್, ಮಾಸ್ಕ್, ಗ್ಲೌಸ್ ಮುಂತಾದ ಯಾವುದೇ ಸುರಕ್ಷತೆಯನ್ನು ನೀಡದೇ, ಕನಿಷ್ಠ ವೇತನಕ್ಕೆ ಕೋವಿಡ್ ಮೃತದೇಹಗಳ ವಿಲೇವಾರಿಗೆ ನೇಮಿಸಿಕೊಳ್ಳಲಾಗಿದೆ. ವಿಚಿತ್ರವೆಂದರೆ 1989 ರ ಪರಿಶಿಷ್ಟ ಜಾತಿ ವರ್ಗಗಳ ರಕ್ಷಣೆಯ ಕಾಯ್ದೆಯು ಯಾವುದೇ ಪರಿಶಿಷ್ಟ ಜಾತಿ ವರ್ಗಗಳ ಜನರನ್ನು ಮನುಷ್ಯ, ಪ್ರಾಣಿಗಳ ದೇಹಗಳನ್ನು ಹೊರುವ ವಿಲೇವಾರಿ ಮಾಡುವ ಅಥವಾ ಸ್ಮಶಾಣದ ಗುಂಡಿಗಳನ್ನು ತೋಡುವಂತೆ ಒತ್ತಾಯಿಸುವುದು ಕಾನೂನು ಬಾಹಿರವೆಂದು ಹೇಳುತ್ತದೆ.

ಇದನ್ನೂ ಓದಿ: ಪುಸ್ತಕ ವಿಮರ್ಶೆ; ನಡೆ-ನುಡಿಗಳಲ್ಲಿ ಪ್ರಖರ ಬದ್ಧತೆ ತೋರಿದ ಹೋರಾಟಗಾರನ ಸಾಂಸ್ಕೃತಿಕ ಕಥನ

ಇದರ ಹೊರತಾಗಿ ಪಶ್ಚಿಮ ಬಂಗಾಳದ ಆಸ್ಪತ್ರೆಗಳಲ್ಲಿ ಡಾಮ್ ಜಾತಿಯ ಉದ್ಯೋಗಿಗಳಿಗಾಗಿ ಶವಾಗಾರಕ್ಕೆ ಹೊಂದಿಕೊಂಡಂತೆ ಪ್ರತ್ಯೇಕ ಡಾಮ್ ರೂಮ್‌ಗಳ ವ್ಯವಸ್ಥೆಯನ್ನು ಮಾಡಿರುವುದು ಅಸ್ಪ್ರಶ್ಯತೆ ಆಚರಣೆಯ ಇನ್ನೊಂದು ಕರಾಳ ಮುಖದ ಅನಾವರಣವಷ್ಟೆ. ಶವಾಗಾರಗಳಿಗೆ ನೇಮಕವಾಗುವ ಈ ಸಿಬ್ಬಂದಿಗಳಿಗೆ ಕೋವಿಡ್ ಸೋಂಕಿನಿಂದ ರಕ್ಷಿಸುವ ಯಾವ ಕ್ರಮವನ್ನು ಕೈಗೊಳ್ಳದಿರುವುದು ಸರ್ಕಾರದ ನಿರ್ಲಕ್ಷತೆಗೆ ಹಿಡಿದ ಕನ್ನಡಿ. ಸಂವಿಧಾನವು ಅನುಚ್ಛೇದ 17 ರ ಮೂಲಕ ಎಲ್ಲರೀತಿಯ ಅಸ್ಪ್ರಶ್ಯತೆಯ ಆಚರಣೆಗಳನ್ನು ನಿರ್ಬಂದಿಸಿದೆ. ಆ ರೀತಿಯ ಆಚರಣೆಗಳು ದೇಶದ ಯಾವುದೇ ಮೂಲೆಯಲ್ಲಿ ಕಂಡುಬಂದರೂ ಕಾರಣವಾದವರನ್ನು ಕಠಿಣವಾಗಿ ಶಿಕ್ಷಿಸಬೇಕೆಂದು ಹೇಳಿದೆ. ಆದರೆ ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವುದು ಸರ್ಕಾರವೇ ಅನುಮೋದಿಸಿದ ಅಸ್ಪಶ್ಯತೆಯ ಆಚರಣೆ‌. ಹಾಗಾದರೆ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಸಂವಿಧಾನವಕ್ಕೂ ಮೀರಿದ ಅಧಿಕಾರವಿದೆಯೇ ? ಇಲ್ಲ ಯಾವ ಸರ್ಕಾರಗಳೂ ಸಂವಿಧಾನಕ್ಕಿಂತ ಮೇಲಲ್ಲ.

2014 ರ ಸಫಾಯಿ ಕರ್ಮಚಾರಿ ಆಂದೋಲನ vs ಭಾರತ ಸರ್ಕಾರ ಪ್ರಕರಣದಲ್ಲಿ ಭಾರತ ಸರ್ವೋಚ್ಛ ನ್ಯಾಯಾಲಯವು ಸ್ವಚ್ಛತಾ ಕಾರ್ಮಿಕರು, ಜಾಡಮಾಲಿಗಳ ಜೀವದ ಸುರಕ್ಷತೆ, ಪುನರ್ವಸತಿಯ ಕುರಿತು ಸರ್ಕಾರಗಳು ಒತ್ತು ನೀಡಬೇಕೆಂದು ಆದೇಶಿಸಿದೆ. ಇದಕ್ಕು ಮುಂದುವರೆದು ಶೇ. 95 ರಷ್ಟು ಸ್ವಚ್ಛತಾ ಕರ್ಮಿಗಳು, ಕಸ ಗುಡಿಸುವವರು, ಚರಂಡಿ, ಮ್ಯಾನ್ ಹೋಲ್ ಗಳಲ್ಲಿ ಕೆಲಸಮಾಡುವವರು ದಲಿತ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಸಾಂಪ್ರದಾಯಿಕ ಉದ್ಯೋಗದ ಹೆಸರಿನಲ್ಲಿ ದಲಿತರನ್ನು ಇಂತಹ ಕೆಲಸಗಳಿಗೆ ವ್ಯವಸ್ಥಿತವಾಗಿ ಒತ್ತಾಯಿಸಲಾಗುತ್ತಿದೆ ಎಂದು ಸರ್ವೋಚ್ಚ ನ್ಯಾಯಾಲಯವು ಅಭಿಪ್ರಾಯಪಟ್ಟಿದೆ. ಮ್ಯಾನುವೆಲ್ ಸ್ಕೆವೆಂಜರ್‌ಗಳನ್ನು ಇತರ ಜಾತಿಗಳು ಅಸ್ಪ್ರಶ್ಯತೆಯಿಂದ ನಡೆಸಿಕೊಳ್ಳುತ್ತಿದ್ದಾರೆ. ಆ ಮೂಲಕ ಅವರನ್ನು ಗಂಭೀರವಾದ ಸಾಮಾಜಿಕ ಆರ್ಥಿಕ ಸಂಕಟಗಳಿಗೆ ವ್ಯವಸ್ಥಿತವಾಗಿ ದೂಡಲಾಗುತ್ತಿದೆ ಎಂದು ಸುಪ್ರಿಂ ಕೋರ್ಟ್ ಇದೇ ಸಂದರ್ಭದಲ್ಲಿ ಹೇಳಿದೆ.

ಅದೇ ರೀತಿಯಲ್ಲಿ ಪಶ್ಚಿಮ ಬಂಗಾಳದಲ್ಲಿ ದಲಿತ ಸಮುದಾಯಕ್ಕೆ ಸೇರಿದ ಡಾಮ್ ಸಮುದಾಯವನ್ನು ಕೋವಿಡ್ ಮೃತದೇಹಗಳ ವಿಲೇವಾರಿಗೆ ನೇಮಿಸಿಕೊಳ್ಳುವ ಮೂಲಕ ಗಂಭೀರ ಸಾಮಾಜಿಕ ಆರ್ಥಿಕ ಸಂಕಟಗಳಿಗೆ ಸರ್ಕಾರ ತಳ್ಳಲು ಮುಂದಾಗಿದೆ. ದೇಶವು ತನ್ನ ಯಾವುದೇ ತಳ ಸಮುದಾಯದ ಜನರಿಗೆ ಘನತೆಯ ಬದುಕು ಮತ್ತು ಜೀವದ ಸುರಕ್ಷತೆಯನ್ನು ನಿರಾಕರಿಸಲು ಸಾಧ್ಯವಿಲ್ಲ. ಮೃತದೇಹಗಳ ವಿಲೇವಾರಿಯಂತಹ ಅಪಾಯದ ಕೆಲಸದಲ್ಲಿ ತೊಡಗಿರುವ ಡೊಮ್ ಸಮುದಾಯ ಅಥವಾ ಯಾವುದೇ ಜಾತಿಗೆ ಸೇರಿದ ಫ್ರಂಟ್ ಲೈನ್ ವಾರಿಯರ್ ಗಳ ಜೀವದ ಸುರಕ್ಷತೆ ಮತ್ತು ಜೀವನ ಭದ್ರತೆಗೆ ಸರ್ಕಾರ ಮೊದಲ ಆದ್ಯತೆಯನ್ನು ನೀಡಬೇಕಿದೆ. ಪಶ್ಚಿಮ ಬಂಗಾಳ ಆಡಳಿತ ಕೋವಿಡ್ ಸಾಂಕ್ರಾಮಿಕದಂತಹ ದುರಿತ ಕಾಲದಲ್ಲೂ ಸರ್ಕಾರಕ್ಕೆ ನೆರವಾಗುತ್ತಿರುವ ಡೊಮ್ ಸಮುದಾಯಕ್ಕೆ ಸೇರಿದ ಫ್ರಂಟ್ ಲೈನ್ ವಾರಿಯರ್ ಗಳನ್ನು ತಿರಸ್ಕಾರ ಮತ್ತು ತಾರತಮ್ಯದಿಂದ ನೋಡವುದನ್ನು ಬಿಟ್ಟು ಅವರಿಗೆ ಘನತೆ ಮತ್ತು ಸುರಕ್ಷತೆಯನ್ನು ನೀಡಲು ಮುಂದಾಗಬೇಕಿದೆ.

ಮೂಲ: ದಿ ವೈರ್‌‌; ಅನುರಾಗ್ ಭಾಸ್ಕರ್, ಸುಭಾಜಿತ್ ನಾಸ್ಕರ್
ಕನ್ನಡಕ್ಕೆ : ರಾಜೇಶ್ ಹೆಬ್ಬಾರ್

ಇದನ್ನೂ ಓದಿ: ದ್ವೇಷ-ಅಸೂಯೆ ಮತ್ತು ಹಿಂಸೆಗಳನ್ನು ಮುಂದಿನ ಪೀಳಿಗೆಗೆ ಬಳುವಳಿಯಾಗಿ ನೀಡದಿರೋಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...