Homeಚಳವಳಿರೈತ ಹೋರಾಟಕ್ಕೆ ಬೆಂಬಲ ಸೂಚಿಸಿದ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ರೈತ ಹೋರಾಟಕ್ಕೆ ಬೆಂಬಲ ಸೂಚಿಸಿದ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

- Advertisement -
- Advertisement -

ವಿವಾದಿತ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ಆಂದೋಲನಕ್ಕೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬೆಂಬಲ ನೀಡಿದ್ದಾರೆ. ಭಾರತೀಯ ಕಿಸಾನ್ ಯೂನಿಯನ್ ಮುಖಂಡರಾದ ರಾಕೇಶ್ ಟಿಕಾಯತ್ ಮತ್ತು ಯುಧ್ವೀರ್ ಸಿಂಗ್ ನೇತೃತ್ವದಲ್ಲಿ ರೈತ ಮುಖಂಡರೊಂದಿಗೆ ಸಭೆ ನಡೆಸಿ ಭರವಸೆ ನೀಡಿದ್ದಾರೆ.

ಬುಧವಾರ ರೈತ ಮುಖಂಡರೊಂದಿಗೆ ನಡೆದ ಸಭೆಯಲ್ಲಿ, ನೀತಿ ವಿಷಯಗಳ ಬಗ್ಗೆ ರಾಜ್ಯಗಳು ಸಂವಾದ ನಡೆಸುವ ವೇದಿಕೆ ಇರಬೇಕು ಎಂದು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

ರೈತ ಮುಖಂಡರ ಸಭೆಯ ನಂತರ ಸುದ್ಧಿಗಾರರೊಂದಿಗೆ ಮಾತನಾಡಿದ ಮಮತಾ ಬ್ಯಾನರ್ಜಿ “ರೈತರ ಆಂದೋಲನಕ್ಕೆ ನನ್ನ ಬೆಂಬಲವಿದೆ” ಎಂದು ಘೋಷಿಸಿದ್ದಾರೆ. “ಭಾರತವು ಕೊರೊನಾ ವಿರುದ್ಧ ಹೋರಾಡಲು, ರೈತರಿಗೆ ಮತ್ತು ಉದ್ಯಮಗಳಿಗೆ ಸಹಾಯ ಮಾಡುವ ನೀತಿಗಳಿಗಾಗಿ ಹಸಿವಿನಿಂದ ಕಾಯುತ್ತಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ ತೀವ್ರಗೊಳಿಸಲು ನಿರ್ಧಾರ: ಮಮತಾ ಬ್ಯಾನರ್ಜಿ ಭೇಟಿಯಾಗಲಿರುವ ರಾಕೇಶ್‌ ಟಿಕಾಯತ್‌

ರೈತರೊಂದಿಗೆ ಮಾತನಾಡಲು ಏಕೆ ಸರ್ಕಾರಕ್ಕೆ ತುಂಬಾ ಕಷ್ಟವಾಗುತ್ತಿದೆ? ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಶ್ನಿಸಿದ್ದಾರೆ. ಸಂಸತ್ತು ಅಂಗೀಕರಿಸಿದ ಮೂರು ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಕಳೆದ 6 ತಿಂಗಳಿನಿಂದ ದೆಹಲಿಯ ಗಡಿಯಲ್ಲಿ ಪ್ರತಿಭಟನೆ ಮಾಡುತ್ತಿರುವ ರೈತರೊಂದಿಗೆ ಕೇಂದ್ರ ಸರ್ಕಾರ ಸಂವಹನ ನಡೆಸಲು ಹಿಂದೆ ಸರಿಯುತ್ತಿರುವ ಬಗ್ಗೆ ಉಲ್ಲೇಖಿಸಿದ್ದಾರೆ.

ಈ ವಿವಾದಿತ ಕೃಷಿ ಕಾನೂನುಗಳು ಸಣ್ಣ ರೈತರಿಗೆ ರಕ್ಷಣೆ ನೀಡದೆ ಕೃಷಿಯನ್ನು ವ್ಯಾಪಾರೀಕರಿಸುತ್ತವೆ. ಇದರಿಂದ ರೈತರು ದೊಡ್ಡ ದೊಡ್ಡ ವ್ಯಾಪಾರಿಗಳು ಮತ್ತು ಕೈಗಾರಿಕೆಗಳ ಶೋಷಣೆಗೆ ಒಳಗಾಗುತ್ತಾರೆ ಎಂದು ರೈತ ಪ್ರತಿಭಟನಾಕಾರರು ಅಭಿಪ್ರಾಯಪಟ್ಟಿದ್ದಾರೆ.

“ಬಿಜೆಪಿ ನಿಯಮಗಳು ಆರೋಗ್ಯ ರಕ್ಷಣೆಯಿಂದ ಹಿಡಿದು ರೈತರವರೆಗೆ, ಎಲ್ಲ ಉದ್ಯಮಗಳಿಗೆ, ಎಲ್ಲ ಕ್ಷೇತ್ರಗಳಿಗೆ ಹಾನಿಕಾರಕವಾಗಿದೆ. ಇದರಿಂದ ಭಾರತವು ಬಳಲುತ್ತಿದೆ. ನಾವು ನೈಸರ್ಗಿಕ ಮತ್ತು ರಾಜಕೀಯ ವಿಪತ್ತು ಎರಡನ್ನು ಎದುರಿಸುತ್ತಿದ್ದೇವೆ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

“ರೈತರ ಚಳುವಳಿ ಕೇವಲ ಪಂಜಾಬ್, ಹರಿಯಾಣ ಅಥವಾ ಉತ್ತರ ಪ್ರದೇಶಗಳಿಗೆ ಮಾತ್ರ ಸೀಮಿತವಲ್ಲ, ಅದು ಇಡೀ ದೇಶಕ್ಕೆ ಸಂಬಂಧಿಸಿದೆ. ನೀತಿ ರೂಪಿಸುವ ವಿಷಯಗಳ ಬಗ್ಗೆ ಚರ್ಚಿಸಲು ಮತ್ತು ಅನ್ಯಾಯದ ವಿರುದ್ಧ ಒಟ್ಟಾಗಿ ನಿಲ್ಲಲು ರಾಜ್ಯಗಳು ಒಗ್ಗೂಡುವುದು ಅಗತ್ಯವಾಗಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೂ ಮುನ್ನ ರೈತ ಮುಖಂಡ ರಾಕೇಶ್ ಟಿಕಾಯತ್ ಮತ್ತು ಯುಧ್ವೀರ್ ಸಿಂಗ್ ನೇತೃತ್ವದಲ್ಲಿ ಭಾರತೀಯ ಕಿಸಾನ್ ಯೂನಿಯನ್ ‘ಬಿಜೆಪಿಗೆ ಮತ ನೀಡಬೇಡಿ’ ಎಂಬ ಅಭಿಯಾನವನ್ನು ನಡೆಸಿತ್ತು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...