Homeಮುಖಪುಟ’ಮಮತಾ ಬರ್ಮುಡಾ ಧರಿಸಲಿ’ ಎಂಬ ಬಿಜೆಪಿ ಮುಖ್ಯಸ್ಥ ದಿಲೀಪ್ ಘೋಷ್ ಹೇಳಿಕೆಗೆ ವ್ಯಾಪಕ ಟೀಕೆ

’ಮಮತಾ ಬರ್ಮುಡಾ ಧರಿಸಲಿ’ ಎಂಬ ಬಿಜೆಪಿ ಮುಖ್ಯಸ್ಥ ದಿಲೀಪ್ ಘೋಷ್ ಹೇಳಿಕೆಗೆ ವ್ಯಾಪಕ ಟೀಕೆ

ಈ ತಿಂಗಳ ಆರಂಭದಲ್ಲಿ ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿ ಗಾಯಗೊಂಡಿದ್ದರು. ಚುನಾವಣಾ ಆಯೋಗ ಇದನ್ನು ಅಪಘಾತ ಎಂದು ತಳ್ಳಿಹಾಕಿದರೆ, ಟಿಎಂಸಿ ಇದು ಕೊಲೆ ಯತ್ನ ಎಂದಿದೆ.

- Advertisement -
- Advertisement -

ಕಾಲಿಗೆ ಆಗಿರುವ ಗಾಯವನ್ನು ತೋರಿಸಿದ್ದಕ್ಕಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ವಿರುದ್ಧ, ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲೀಪ್ ಘೋಷ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಮ್ಮ ಕಾಲುಗಳನ್ನು ಪ್ರದರ್ಶಿಸಲು ಬಯಸಿದರೆ ಬರ್ಮುಡಾ ಧರಿಸಬೇಕು ಎಂದಿದ್ದು, ಅವರ ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ.

ತೃಣಮೂಲ ಕಾಂಗ್ರೆಸ್ ಸದಸ್ಯರಂತೂ ಜೆಪಿ ಮುಖ್ಯಸ್ಥ ದಿಲೀಪ್ ಘೋಷ್ ಅವರನ್ನು ವಿಕೃತ ಎಂದು ಕರೆದು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಮಂಗಳವಾರ ಪುರುಲಿಯಾದಲ್ಲಿ ನಡೆದ ಚುನಾವಣಾ ರ್‍ಯಾಲಿಯಲ್ಲಿ ರಾಜ್ಯ ಬಿಜೆಪಿ ಮುಖ್ಯಸ್ಥ ಘೋಷ್, “ಪ್ಲ್ಯಾಸ್ಟರ್ ಕತ್ತರಿಸಿ ನಂತರ ತೆಳುವಾದ ಬಟ್ಟೆಯ ಬ್ಯಾಂಡೇಜ್ ಹಾಕಲಾಯಿತು. ಈಗ ಅವರು ಎಲ್ಲರಿಗೂ ತನ್ನ ಕಾಲು ಪ್ರದರ್ಶಿಸುತ್ತಿದ್ದಾರೆ. ಒಂದು ಕಾಲು ಕಾಣವಂತೆ ಸೀರೆ ಧರಿಸುತ್ತಿದ್ದಾರೆ. ಯಾರೊಬ್ಬರೂ ಅಂತಹ ಸೀರೆಯನ್ನು ಧರಿಸುವುದನ್ನು ನಾನು ನೋಡಿಲ್ಲ. ನಿಮ್ಮ ಕಾಲುಗಳನ್ನು ಪ್ರದರ್ಶಿಸಲು ನೀವು ಬಯಸಿದರೆ, ಸೀರೆ ಏಕೆ..? ಒಂದು ಜೋಡಿ ಬರ್ಮುಡಾ ಧರಿಸಿ” ಎಂದಿದ್ದರು.

ಇದನ್ನೂ ಓದಿ: ಮೋದಿ, ಅಮಿತ್‌ ಶಾ ಸೇರಿದಂತೆ ಬಿಜೆಪಿ ನಾಯಕರನ್ನು ‘ದುರ್ಯೋಧನ, ದುಶ್ಯಾಶನ’ ಎಂದ ಮಮತಾ

ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ನ ನಾಯಕರು ಇದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಕ್ಷದ ಸಂಸದೆ ಮೊಹುವಾ ಮೊಯಿತ್ರಾ ತಮ್ಮ ಎಂದಿನ ಶೈಲಿಯಲ್ಲಿ ಖಾರವಾದ ಪ್ರತಿಕ್ರಿಯೆ ನೀಡಿದ್ದಾರೆ.

“ಬಿಜೆಪಿ ಪಶ್ಚಿಮ ಬಂಗಾಳ ಅಧ್ಯಕ್ಷರು ಸಾರ್ವಜನಿಕ ಸಭೆಯಲ್ಲಿ ಮಮತಾ ದೀ ಸೀರೆ ಏಕೆ ಧರಿಸುತ್ತಾರೆ ಎಂದು ಕೇಳುತ್ತಾರೆ, ಆಕೆ ತನ್ನ ಕಾಲು ಉತ್ತಮವಾಗಿ ಪ್ರದರ್ಶಿಸಲು ’ಬರ್ಮುಡಾ’ ಶಾರ್ಟ್ಸ್ ಧರಿಸಬೇಕು ಎನ್ನುತ್ತಾರೆ. ಈ ವಿಕೃತ ಅನೈತಿಕ ಕೋತಿಗಳು ಬಂಗಾಳವನ್ನು ಗೆಲ್ಲುತ್ತೇವೆ ಎಂದು ಭಾವಿಸುತ್ತರಾ?” ಎಂದು ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ನನ್ನನ್ನು ಕೊಲ್ಲಲು ಬಿಜೆಪಿ ಪಿತೂರಿ ನಡೆಸುತ್ತಿದೆಯೇ? – ಮಮತಾ ಬ್ಯಾನರ್ಜಿ ವಾಗ್ದಾಳಿ

’ಬಂಗಾಳ ಬಿಜೆಪಿ ರಾಜ್ಯ ಅಧ್ಯಕ್ಷರ ಕೆಲಸವನ್ನು ಕೇವಲ ವಿಷ ಉಗುಳುವಿಕೆಗೆ ಇಳಿಸಲಾಗಿದೆ ಎಂದು  ಕಂಡು ಬರುತ್ತಿದೆ. ಬಂಗಾಳದ ಸಿಎಂ ವಿರುದ್ಧ ತೀವ್ರವಾದ ದಾಳಿಯಿಂದ ಹಿಡಿದು ಕಾರ್ಯಕರ್ತರ ಮೇಲಿನ ಮೇಲಿನ ಹಿಂಸಾಚಾರದವರೆಗೆ ಅವರು ಎಲ್ಲಾ ಮಿತಿಗಳನ್ನು ದಾಟಿದ್ದಾರೆ ಎಂದು ಕಾಕೋಲಿ ಘೋಷ್ ದಸ್ತಿದಾರ್ ಟ್ವೀಟ್ ಮಾಡಿದ್ದಾರೆ.

ಈ ತಿಂಗಳ ಆರಂಭದಲ್ಲಿ ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿ ಗಾಯಗೊಂಡಿದ್ದರು. ಚುನಾವಣಾ ಆಯೋಗ ಇದನ್ನು ಅಪಘಾತ ಎಂದು ತಳ್ಳಿಹಾಕಿದರೆ, ಟಿಎಂಸಿ ಪಕ್ಷವು ಮುಖ್ಯಮಂತ್ರಿಯವರನ್ನು ಕೊಲ್ಲಲು ನಡೆದ ಯತ್ನ ಇದಾಗಿದೆ ಎಂದು ಹೇಳಿದೆ.

ನಂತರದಲ್ಲಿ ಮಮತಾ ಬ್ಯಾನರ್ಜಿ ಚುನಾವಣಾ ಪ್ರಚಾರದಲ್ಲಿ ಗಾಲಿಕುರ್ಚಿಯಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರತಿ ರ್‍ಯಾಲಿಯಲ್ಲಿ, ಅವರು ತಮ್ಮ ಗಾಯಗಳ ಬಗ್ಗೆ ಮಾತನಾಡುತ್ತಾರೆ. ಜೊತೆಗೆ ಗಾಯಗಳು ನೋವಿನಿಂದ ಕೂಡಿದ್ದರೂ, ಅವು ತನ್ನನ್ನು ತಡೆಯುವುದಿಲ್ಲ ಎಂದು ಹೇಳುತ್ತಿದ್ದಾರೆ.

ಸಾರ್ವಜನಿಕ ಸಹಾನುಭೂತಿ ಪಡೆಯಲು ಮುಖ್ಯಮಂತ್ರಿ ಗಾಯವನ್ನು ತೋರಿಸುತ್ತಿದ್ದಾರೆ ಎಂದು ಬಿಜೆಪಿ ಅವರನ್ನು ವ್ಯಂಗ್ಯ ಮಾಡಿತ್ತು. ಈಗ ಬರ್ಮುಡಾ ಹೇಳಿಕೆ ಬಂಗಾಳದಲ್ಲಿ ಮತ್ತೆ ಹೊಸ ವಿವಾದ ಎಬ್ಬಿಸಿದೆ.


ಇದನ್ನೂ ಓದಿ: ಬಂಗಾಳ ಚುನಾವಣೆಗೆ ಬಿಜೆಪಿ ಫೈನಲ್ ಲಿಸ್ಟ್ ಬಿಡುಗಡೆ: ಮಿಥುನ್ ಚಕ್ರವರ್ತಿಗೆ ಟಿಕೆಟ್ ಇಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...