Homeಮುಖಪುಟ’ಮಮತಾ ಬರ್ಮುಡಾ ಧರಿಸಲಿ’ ಎಂಬ ಬಿಜೆಪಿ ಮುಖ್ಯಸ್ಥ ದಿಲೀಪ್ ಘೋಷ್ ಹೇಳಿಕೆಗೆ ವ್ಯಾಪಕ ಟೀಕೆ

’ಮಮತಾ ಬರ್ಮುಡಾ ಧರಿಸಲಿ’ ಎಂಬ ಬಿಜೆಪಿ ಮುಖ್ಯಸ್ಥ ದಿಲೀಪ್ ಘೋಷ್ ಹೇಳಿಕೆಗೆ ವ್ಯಾಪಕ ಟೀಕೆ

ಈ ತಿಂಗಳ ಆರಂಭದಲ್ಲಿ ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿ ಗಾಯಗೊಂಡಿದ್ದರು. ಚುನಾವಣಾ ಆಯೋಗ ಇದನ್ನು ಅಪಘಾತ ಎಂದು ತಳ್ಳಿಹಾಕಿದರೆ, ಟಿಎಂಸಿ ಇದು ಕೊಲೆ ಯತ್ನ ಎಂದಿದೆ.

- Advertisement -
- Advertisement -

ಕಾಲಿಗೆ ಆಗಿರುವ ಗಾಯವನ್ನು ತೋರಿಸಿದ್ದಕ್ಕಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ವಿರುದ್ಧ, ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲೀಪ್ ಘೋಷ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಮ್ಮ ಕಾಲುಗಳನ್ನು ಪ್ರದರ್ಶಿಸಲು ಬಯಸಿದರೆ ಬರ್ಮುಡಾ ಧರಿಸಬೇಕು ಎಂದಿದ್ದು, ಅವರ ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ.

ತೃಣಮೂಲ ಕಾಂಗ್ರೆಸ್ ಸದಸ್ಯರಂತೂ ಜೆಪಿ ಮುಖ್ಯಸ್ಥ ದಿಲೀಪ್ ಘೋಷ್ ಅವರನ್ನು ವಿಕೃತ ಎಂದು ಕರೆದು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಮಂಗಳವಾರ ಪುರುಲಿಯಾದಲ್ಲಿ ನಡೆದ ಚುನಾವಣಾ ರ್‍ಯಾಲಿಯಲ್ಲಿ ರಾಜ್ಯ ಬಿಜೆಪಿ ಮುಖ್ಯಸ್ಥ ಘೋಷ್, “ಪ್ಲ್ಯಾಸ್ಟರ್ ಕತ್ತರಿಸಿ ನಂತರ ತೆಳುವಾದ ಬಟ್ಟೆಯ ಬ್ಯಾಂಡೇಜ್ ಹಾಕಲಾಯಿತು. ಈಗ ಅವರು ಎಲ್ಲರಿಗೂ ತನ್ನ ಕಾಲು ಪ್ರದರ್ಶಿಸುತ್ತಿದ್ದಾರೆ. ಒಂದು ಕಾಲು ಕಾಣವಂತೆ ಸೀರೆ ಧರಿಸುತ್ತಿದ್ದಾರೆ. ಯಾರೊಬ್ಬರೂ ಅಂತಹ ಸೀರೆಯನ್ನು ಧರಿಸುವುದನ್ನು ನಾನು ನೋಡಿಲ್ಲ. ನಿಮ್ಮ ಕಾಲುಗಳನ್ನು ಪ್ರದರ್ಶಿಸಲು ನೀವು ಬಯಸಿದರೆ, ಸೀರೆ ಏಕೆ..? ಒಂದು ಜೋಡಿ ಬರ್ಮುಡಾ ಧರಿಸಿ” ಎಂದಿದ್ದರು.

ಇದನ್ನೂ ಓದಿ: ಮೋದಿ, ಅಮಿತ್‌ ಶಾ ಸೇರಿದಂತೆ ಬಿಜೆಪಿ ನಾಯಕರನ್ನು ‘ದುರ್ಯೋಧನ, ದುಶ್ಯಾಶನ’ ಎಂದ ಮಮತಾ

ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ನ ನಾಯಕರು ಇದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಕ್ಷದ ಸಂಸದೆ ಮೊಹುವಾ ಮೊಯಿತ್ರಾ ತಮ್ಮ ಎಂದಿನ ಶೈಲಿಯಲ್ಲಿ ಖಾರವಾದ ಪ್ರತಿಕ್ರಿಯೆ ನೀಡಿದ್ದಾರೆ.

“ಬಿಜೆಪಿ ಪಶ್ಚಿಮ ಬಂಗಾಳ ಅಧ್ಯಕ್ಷರು ಸಾರ್ವಜನಿಕ ಸಭೆಯಲ್ಲಿ ಮಮತಾ ದೀ ಸೀರೆ ಏಕೆ ಧರಿಸುತ್ತಾರೆ ಎಂದು ಕೇಳುತ್ತಾರೆ, ಆಕೆ ತನ್ನ ಕಾಲು ಉತ್ತಮವಾಗಿ ಪ್ರದರ್ಶಿಸಲು ’ಬರ್ಮುಡಾ’ ಶಾರ್ಟ್ಸ್ ಧರಿಸಬೇಕು ಎನ್ನುತ್ತಾರೆ. ಈ ವಿಕೃತ ಅನೈತಿಕ ಕೋತಿಗಳು ಬಂಗಾಳವನ್ನು ಗೆಲ್ಲುತ್ತೇವೆ ಎಂದು ಭಾವಿಸುತ್ತರಾ?” ಎಂದು ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ನನ್ನನ್ನು ಕೊಲ್ಲಲು ಬಿಜೆಪಿ ಪಿತೂರಿ ನಡೆಸುತ್ತಿದೆಯೇ? – ಮಮತಾ ಬ್ಯಾನರ್ಜಿ ವಾಗ್ದಾಳಿ

’ಬಂಗಾಳ ಬಿಜೆಪಿ ರಾಜ್ಯ ಅಧ್ಯಕ್ಷರ ಕೆಲಸವನ್ನು ಕೇವಲ ವಿಷ ಉಗುಳುವಿಕೆಗೆ ಇಳಿಸಲಾಗಿದೆ ಎಂದು  ಕಂಡು ಬರುತ್ತಿದೆ. ಬಂಗಾಳದ ಸಿಎಂ ವಿರುದ್ಧ ತೀವ್ರವಾದ ದಾಳಿಯಿಂದ ಹಿಡಿದು ಕಾರ್ಯಕರ್ತರ ಮೇಲಿನ ಮೇಲಿನ ಹಿಂಸಾಚಾರದವರೆಗೆ ಅವರು ಎಲ್ಲಾ ಮಿತಿಗಳನ್ನು ದಾಟಿದ್ದಾರೆ ಎಂದು ಕಾಕೋಲಿ ಘೋಷ್ ದಸ್ತಿದಾರ್ ಟ್ವೀಟ್ ಮಾಡಿದ್ದಾರೆ.

ಈ ತಿಂಗಳ ಆರಂಭದಲ್ಲಿ ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿ ಗಾಯಗೊಂಡಿದ್ದರು. ಚುನಾವಣಾ ಆಯೋಗ ಇದನ್ನು ಅಪಘಾತ ಎಂದು ತಳ್ಳಿಹಾಕಿದರೆ, ಟಿಎಂಸಿ ಪಕ್ಷವು ಮುಖ್ಯಮಂತ್ರಿಯವರನ್ನು ಕೊಲ್ಲಲು ನಡೆದ ಯತ್ನ ಇದಾಗಿದೆ ಎಂದು ಹೇಳಿದೆ.

ನಂತರದಲ್ಲಿ ಮಮತಾ ಬ್ಯಾನರ್ಜಿ ಚುನಾವಣಾ ಪ್ರಚಾರದಲ್ಲಿ ಗಾಲಿಕುರ್ಚಿಯಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರತಿ ರ್‍ಯಾಲಿಯಲ್ಲಿ, ಅವರು ತಮ್ಮ ಗಾಯಗಳ ಬಗ್ಗೆ ಮಾತನಾಡುತ್ತಾರೆ. ಜೊತೆಗೆ ಗಾಯಗಳು ನೋವಿನಿಂದ ಕೂಡಿದ್ದರೂ, ಅವು ತನ್ನನ್ನು ತಡೆಯುವುದಿಲ್ಲ ಎಂದು ಹೇಳುತ್ತಿದ್ದಾರೆ.

ಸಾರ್ವಜನಿಕ ಸಹಾನುಭೂತಿ ಪಡೆಯಲು ಮುಖ್ಯಮಂತ್ರಿ ಗಾಯವನ್ನು ತೋರಿಸುತ್ತಿದ್ದಾರೆ ಎಂದು ಬಿಜೆಪಿ ಅವರನ್ನು ವ್ಯಂಗ್ಯ ಮಾಡಿತ್ತು. ಈಗ ಬರ್ಮುಡಾ ಹೇಳಿಕೆ ಬಂಗಾಳದಲ್ಲಿ ಮತ್ತೆ ಹೊಸ ವಿವಾದ ಎಬ್ಬಿಸಿದೆ.


ಇದನ್ನೂ ಓದಿ: ಬಂಗಾಳ ಚುನಾವಣೆಗೆ ಬಿಜೆಪಿ ಫೈನಲ್ ಲಿಸ್ಟ್ ಬಿಡುಗಡೆ: ಮಿಥುನ್ ಚಕ್ರವರ್ತಿಗೆ ಟಿಕೆಟ್ ಇಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...