Homeಮುಖಪುಟಪಶ್ಚಿಮ ಬಂಗಾಳ ನೇಮಕಾತಿ ವಿವಾದ | ವಜಾಗೊಂಡ ಶಿಕ್ಷಕರಿಗೆ ಉದ್ಯೋಗದಲ್ಲಿ ಉಳಿಯಲು ಸುಪ್ರೀಂಕೋರ್ಟ್ ಅನುಮತಿ

ಪಶ್ಚಿಮ ಬಂಗಾಳ ನೇಮಕಾತಿ ವಿವಾದ | ವಜಾಗೊಂಡ ಶಿಕ್ಷಕರಿಗೆ ಉದ್ಯೋಗದಲ್ಲಿ ಉಳಿಯಲು ಸುಪ್ರೀಂಕೋರ್ಟ್ ಅನುಮತಿ

- Advertisement -
- Advertisement -

ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹಗರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಸಿಬಿಐ ತನಿಖೆಯಿಂದ ಕಳಂಕಿತರಲ್ಲ ಎಂದು ಕಂಡುಬಂದ ಬೋಧನಾ ಸಿಬ್ಬಂದಿಗೆ ಮಧ್ಯಂತರ ಪರಿಹಾರ ನೀಡಿ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದೆ. ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಪೀಠವು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರೊಂದಿಗೆ, ರಾಜ್ಯದ ಶಿಕ್ಷಣ ವ್ಯವಸ್ಥೆಗೆ ಉಂಟಾದ ಅಡ್ಡಿ ಮತ್ತು ಹೊಸ ನೇಮಕಾತಿಗೆ ಬೇಕಾದ ಸಮಯವನ್ನು ಒಪ್ಪಿಕೊಂಡು, ಈ ಶಿಕ್ಷಕರ ಸೇವೆಯನ್ನು ವಿಸ್ತರಿಸಲು ಒಪ್ಪಿಕೊಂಡಿದೆ. ಪಶ್ಚಿಮ ಬಂಗಾಳ ನೇಮಕಾತಿ ವಿವಾದ

ಆದಾಗ್ಯೂ, ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿನ ‘ಸಿ’ ಮತ್ತು ‘ಡಿ’ ದರ್ಜೆಯ ನೌಕರರಿಗೆ ಅದೇ ವಿಸ್ತರಣೆಯನ್ನು ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಅವರಲ್ಲಿ ಹಲವರು ಏಪ್ರಿಲ್ 2024 ರಲ್ಲಿ ಕಲ್ಕತ್ತಾ ಹೈಕೋರ್ಟ್ ತೀರ್ಪಿನಿಂದ ರದ್ದುಗೊಂಡ 25,753 ನೇಮಕಾತಿಗಳ ಪಟ್ಟಿಯಲ್ಲಿದ್ದಾರೆ.

ಮರುಸ್ಥಾಪನೆಗೆ ಒತ್ತಾಯಿಸಿ ಸಂತ್ರಸ್ತ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಯ ನಿರಂತರ ಪ್ರತಿಭಟನೆಗಳ ನಡುವೆ ಈ ಆದೇಶ ಬಂದಿದೆ. ಶಾಲಾ ಸೇವಾ ಆಯೋಗ (ಎಸ್‌ಎಸ್‌ಸಿ)ವು ವಂಚನೆ ಮತ್ತು ಕಾನೂನುಬದ್ಧ ಅಭ್ಯರ್ಥಿಗಳ ನಡುವೆ ವ್ಯತ್ಯಾಸ ಕಂಡುಹಿಡಿಯಲು ವಿಫಲವಾಗಿದೆ ಎಂದು ಆರೋಪಿಸಿ ಸಾಮೂಹಿಕ ವಜಾಗೊಳಿಸುವಿಕೆಯ ವಿರುದ್ಧ ಈ ವಾರ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನಾಕಾರರು ಜಮಾಯಿಸಿದ್ದರು.

ತಾವು ಅರ್ಹತೆಯ ಮೇಲೆ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿದ್ದು, ವ್ಯವಸ್ಥಿತ ಭ್ರಷ್ಟಾಚಾರದ ಕಾರಣಕ್ಕಾಗಿ ತಮಗೆ ಅನ್ಯಾಯವಾಗಿ ದಂಡ ವಿಧಿಸಲಾಗುತ್ತಿದೆ ಎಂದು ಆರೋಪಿಸಿ ‘ಜೋಗ್ಯೋ ಶಿಕ್ಕೋಕ್ ಶಿಕ್ಖಿಕಾ ಅಧಿಕಾರ್ ಮಂಚ್’ ವೇದಿಕೆಯಡಿ ಪ್ರತಿಭಟನಾಕಾರರು ಹೋರಾಟ ನಡೆಸುತ್ತಿದ್ದಾರೆ. ಅವರಲ್ಲಿ ಹಲವರು ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿಯವರಿಗೆ ಮಧ್ಯಪ್ರವೇಶಿಸುವಂತೆ ಮನವಿ ಮಾಡಿದ್ದಾರೆ. ಸಿಬಿಐ ತನಿಖೆ ನಡೆಸಿದರೆ ತಮ್ಮಲ್ಲಿ ಯಾರು ನಿಜವಾಗಿಯೂ ಮರು ನೇಮಕಾತಿಗೆ ಅರ್ಹರು ಎಂಬುದನ್ನು ಕಂಡುಕೊಳ್ಳಬಹುದು ಎಂದು ಹೇಳಿದ್ದಾರೆ.

ಉದ್ಯೋಗ ನಷ್ಟ, ಸಾಮಾಜಿಕ ಕಳಂಕ ಮತ್ತು ಆರ್ಥಿಕ ಒತ್ತಡ ಸೇರಿದಂತೆ ಕೆಲವರು ವೈಯಕ್ತಿಕ ಕಷ್ಟಗಳನ್ನು ಹಂಚಿಕೊಂಡಿದ್ದಾರೆ. ಪರೀಕ್ಷೆಯಲ್ಲಿ ಅರ್ಹತೆಯ ಆಧಾರದ ಮೇಲೆ ಉತ್ತೀರ್ಣರಾಗಿದ್ದರೂ ಹಲವರನ್ನು ಅವರ ಮನೆಗಳಿಂದ ದೂರಕ್ಕೆ ನಿಯೋಜಿಸಲಾಗಿದೆ, ಆದರೆ ವಂಚನೆಗೊಳಗಾದ ಅಭ್ಯರ್ಥಿಗಳಿಗೆ ಅನುಕೂಲಕರವಾದ ನೇಮಕಾತಿಗಳನ್ನು ನೀಡಲಾಗಿದೆ ಎಂದು ಆರೋಪಿಸಿದ್ದಾರೆ.

ಮೇ 31 ರಂದು ಅಥವಾ ಅದಕ್ಕೂ ಮೊದಲು ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಮತ್ತು ಈ ವರ್ಷ ಡಿಸೆಂಬರ್ 31 ರೊಳಗೆ ಅದನ್ನು ಮುಕ್ತಾಯಗೊಳಿಸಲು ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್‌ ಗುರುವಾರ ನಿರ್ದೇಶನ ನೀಡಿದೆ. ಮೇ 31 ರಂದು ಅಥವಾ ಅದಕ್ಕೂ ಮೊದಲು ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸುವ ಬಗ್ಗೆ ತಿಳಿಸುವ ಅನುಸರಣಾ ಅಫಿಡವಿಟ್ ಸಲ್ಲಿಸಲು ನ್ಯಾಯಾಲಯವು ರಾಜ್ಯ ಸರ್ಕಾರ ಮತ್ತು ಅದರ WBSSC (ಪಶ್ಚಿಮ ಬಂಗಾಳ ಶಾಲಾ ಸೇವಾ ಆಯೋಗ) ಗೆ ಕೇಳಿದೆ.

ಏಪ್ರಿಲ್ 3 ರಂದು, ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರ ಮತ್ತು ಅನುದಾನಿತ ಶಾಲೆಗಳಲ್ಲಿ 25,753 ಶಿಕ್ಷಕರು ಮತ್ತು ಸಿಬ್ಬಂದಿಗಳ ನೇಮಕಾತಿಯನ್ನು ಅಮಾನ್ಯಗೊಳಿಸಿತ್ತು. ಇಡೀ ಆಯ್ಕೆ ಪ್ರಕ್ರಿಯೆಯನ್ನು “ದುರ್ಬಲ ಮತ್ತು ಕಳಂಕಿತ” ಎಂದು ಈ ವೇಳೆ ಅದು ಕರೆದಿತ್ತು. 2024 ರ ಏಪ್ರಿಲ್ 22 ರಂದು ಕಲ್ಕತ್ತಾ ಹೈಕೋರ್ಟ್ ನೀಡಿದ ನೇಮಕಾತಿಗಳನ್ನು ರದ್ದುಗೊಳಿಸಿದ ತೀರ್ಪನ್ನು ಅದು ಎತ್ತಿಹಿಡಿದಿತ್ತು ಮತ್ತು ಕಳಂಕಿತ ಅಭ್ಯರ್ಥಿಗಳು ತಮ್ಮ “ಸಂಬಳ/ಪಾವತಿಗಳನ್ನು” ಮರುಪಾವತಿಸಬೇಕು ಎಂದು ಹೇಳಿತ್ತು. ಪಶ್ಚಿಮ ಬಂಗಾಳ ನೇಮಕಾತಿ ವಿವಾದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  1ನೇ ತರಗತಿ ಪ್ರವೇಶಕ್ಕೆ ವಯಸ್ಸಿನ ಮಿತಿ 5.5 ವರ್ಷಕ್ಕೆ ಇಳಿಸಿದ ರಾಜ್ಯ ಸರ್ಕಾರ

1ನೇ ತರಗತಿ ಪ್ರವೇಶಕ್ಕೆ ವಯಸ್ಸಿನ ಮಿತಿ 5.5 ವರ್ಷಕ್ಕೆ ಇಳಿಸಿದ ರಾಜ್ಯ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...