Homeಮುಖಪುಟಪಶ್ಚಿಮ ಬಂಗಾಳ: ʼಬಿಜೆಪಿಗೆ ಮತ ನೀಡಬೇಡಿʼ ಅಭಿಯಾನ ಆರಂಭ

ಪಶ್ಚಿಮ ಬಂಗಾಳ: ʼಬಿಜೆಪಿಗೆ ಮತ ನೀಡಬೇಡಿʼ ಅಭಿಯಾನ ಆರಂಭ

"ಈ ಅಭಿಯಾನ ಕೇವಲ ಚುನಾವಣೆಗೆ ಸೀಮಿತವಾಗದೇ, ದೇಶದಲ್ಲಿ ನಡೆಯುತ್ತಿರವ ಇಡೀ ಫ್ಯಾಸಿಸ್ಟ್ ಧೋರಣೆಯ‌ ವಿರುದ್ಧ ಕಾರ್ಯನಿರ್ವಹಿಸುತ್ತದೆ"

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯ ಪ್ರಯುಕ್ತ ವಿವಿಧ ಚಳುವಳಿಗಳ ಕಾರ್ಯಕರ್ತರು ಮತ್ತು ಜಾತ್ಯಾತೀತ ಪ್ರಗತಿಪರರು ಒಂದುಗೂಡಿ ವೇದಿಕೆಯೊಂದನ್ನು ಸಿದ್ದಪಡಿಸಿಕೊಂಡು, ರಾಜ್ಯದಲ್ಲಿ “ಬಿಜೆಪಿಗೆ ಮತ ನೀಡಬೇಡಿ” ಎನ್ನುವ ಫ್ಯಾಸಿಸ್ಟ್‌ ವಿರೋಧಿ ಅಭಿಯಾನವನ್ನು ಆರಂಭಿಸಿದ್ದಾರೆ.

ಕೊಲ್ಕೊತ್ತಾದಲ್ಲಿ ನಡೆದ ಪತ್ರಿಕಾ ಗೋಷ್ಟಿಯಲ್ಲಿ ಬಿಜೆಪಿ-ಆರ್‌ಎಸ್‌ಎಸ್‌ನ ಅಜೆಂಡಾವನ್ನು ಬಹಿರಂಗಪಡಿಸುವುದರೊಂದಿಗೆ, “ಜನರು ಸ್ವಹಿತಾಸಕ್ತಿಯಿಂದ ಪರಿಣಾಮಕಾರಿ ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ. ಮತ್ತು ಈ ಚುನಾವಣೆಯಲ್ಲಿ ಬಿಜೆಪಿಯನ್ನು ತಿರಸ್ಕರಿಸುತ್ತಾರೆ. ಈ ಅಭಿಯಾನ ಕೇವಲ ಚುನಾವಣೆಗೆ ಮಾತ್ರ ಸೀಮಿತವಾಗದೇ, ದೇಶದಲ್ಲಿ ನಡೆಯುತ್ತಿರುವ ಇಡೀ ಫ್ಯಾಸಿಸ್ಟ್ ಧೋರಣೆಯ‌ ವಿರುದ್ಧ ಕಾರ್ಯನಿರ್ವಹಿಸುತ್ತದೆ” ಎಂದು ವೇದಿಕೆಯ ಮುಖಂಡರು ಹೇಳಿದರು ಎಂದು ಗೌರಿ ಲಂಕೇಶ್‌ ನ್ಯೂಸ್ ವೆಬ್‌ ಪೋರ್ಟಲ್‌ ವರದಿ ಮಾಡಿದೆ.

“ನರೇಂದ್ರ ಮೋದಿ-ಅಮಿತ್ ಶಾ ಆಡಳಿತದ ಕೋಮುವಾದಿ ಅಜೆಂಡಾವಾದ ಪೌರತ್ವ ಕಾಯ್ದೆಗಳಾದ ಸಿಎಎ-ಎನ್‌ಆರ್‌ಸಿ-ಎನ್‌ಪಿಆರ್‌ ವಿರುದ್ಧ ಲಾಕ್‌ಡೌನ್‌ ಪೂರ್ವದಲ್ಲಿ ನಡೆದ ಆಂದೋಲನದಂತೆ ವಿಧಾನಸಭಾ ಚುನಾವಣೆಯಲ್ಲೂ ಫ್ಯಾಸಿಸ್ಟ್‌ ವಿರೋಧಿ ಆಂದೋಲನ ನಡೆಸಬೇಕು. ಇದು ತಡವಾಗಬಾರದು. ಬಿಜೆಪಿಯು ಈಗಾಗಲೇ ಪಶ್ಚಿಮ ಬಂಗಾಳದಲ್ಲಿ ಕೋಮು ಧೃವೀಕರಣದ ಆಧಾರದ ಮೇಲೆ ಮತವಿಭಜನೆಗೆ ಮುಂದಾಗಿದೆ” ಎಂದು ಹೇಳಿದರು.

ಇದನ್ನೂ ಓದಿ: ‘ನೀವು ಕಾಯ್ದೆ ವಾಪ್ಸಿ ಮಾಡಿದರೆ ಮಾತ್ರ ನಾವು ಘರ್ ವಾಪ್ಸಿ ಮಾಡುತ್ತೇವೆ’: ರೈತರ ಖಡಕ್…

ಇಂದಿನ (ಜ.9) ಪತ್ರಿಕಾಗೋಷ್ಠಿಗೆ ಮುಂಚಿತವಾಗಿ, ಜನವರಿ 4 ರಂದು, ಕೋಲ್ಕತಾ ಮತ್ತು ಪಶ್ಚಿಮ ಬಂಗಾಳದ ವಿವಿಧ ಜಿಲ್ಲೆಗಳ ಕಾರ್ಯಕರ್ತರು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲು ಮಧ್ಯ ಕೋಲ್ಕತ್ತಾದ ʼಭಾರತ್ ಸಭಾʼ ಸಭಾಂಗಣದಲ್ಲಿ ಸಾರ್ವಜನಿಕ ಸಮಾವೇಶವನ್ನು ನಡೆಸಿದ್ದರು. ಅಲ್ಲಿ ಈ ವೇದಿಕೆ ರಚನೆಯ ಕುರಿತು ವಿಷಯ ಪ್ರಸ್ತಾಪಿಸಿದ್ದರು.

ತಮ್ಮ ಈ ಅಭಿಯಾನವನ್ನು ರಾಜ್ಯದ ಉದ್ದಗಲಕ್ಕೂ ಹರಡುವ ಸಲುವಾಗಿ, ʼನೋ ವೋಟ್ ಟು ಬಿಜೆಪಿʼ ಎನ್ನುವ ಘೋಷಣೆಯೊಂದಿಗೆ ಫ್ಯಾಸಿಸ್ಟ್ ವಿರೋಧಿ ಜಾಲಗಳನ್ನು ನಿರ್ಮಿಸಲು ಯೋಜಿಸಲಾಗಿದೆ. ಇದರ ಭಾಗವಾಗಿ ಮಾರ್ಚ್ 10 ರಂದು ಕೋಲ್ಕತ್ತಾದಲ್ಲಿ ಬೃಹತ್ ರ್ಯಾಲಿ ನಡೆಯಲಿದೆ. ‌

ಜನವರಿ 13 ರಂದು ರೈತರಿಗೆ ಬೆಂಬಲ ಸೂಚಿಸಿ ಮತ್ತೊಂದು ಧರಣಿಯನ್ನು ವೇದಿಕೆಯ ವತಿಯಿಂದ ಹಮ್ಮಿಕೊಳ್ಳಲಾಗಿದೆ.


ಇದನ್ನೂ ಓದಿ: ನಮ್ಮೆಲ್ಲರ ಶತ್ರು ಒಬ್ಬನೇ ಎಂದರಿತು ಹೋರಾಡೋಣ: ಸುರೀಂದರ್‌ ಸಿಂಘ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...