Homeಚಳವಳಿಕೊಲ್ಕತ್ತಾ: ದುರ್ಗಾ ಪೂಜೆ ಮಂಟಪಗಳಲ್ಲಿ ಹೊರಹೊಮ್ಮಿದ ರೈತ ಹೋರಾಟದ ಚಿತ್ರಗಳು

ಕೊಲ್ಕತ್ತಾ: ದುರ್ಗಾ ಪೂಜೆ ಮಂಟಪಗಳಲ್ಲಿ ಹೊರಹೊಮ್ಮಿದ ರೈತ ಹೋರಾಟದ ಚಿತ್ರಗಳು

- Advertisement -
- Advertisement -

ನವರಾತ್ರಿಗೆ ತಯಾರಾಗುತ್ತಿರುವ ಕೊಲ್ಕತ್ತಾದಲ್ಲಿ ದುರ್ಗಾ ಪೂಜೆ ಮಂಟಪಗಳನ್ನು ವಿಭಿನ್ನವಾಗಿ ಅಲಂಕರಿಸಲಾಗುತ್ತಿದೆ. ಉತ್ತರ ಕೊಲ್ಕತ್ತಾದ ಸ್ಥಳೀಯ ಕ್ಲಬ್‌ವೊಂದು, ಸುಮಾರು ಒಂದು ವರ್ಷದಿಂದ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರ ಹೋರಾಟವನ್ನು ಗೌರವಿಸುವ ಮೂಲಕ ದುರ್ಗಾ ಪೂಜೆಯನ್ನು ಆಚರಿಸುತ್ತಿದೆ.

ದುರ್ಗಾ ಪೂಜೆ ಪೆಂಡಾಲ್‌ನಲ್ಲಿ ರಚಿಸಿರುವ ಬೃಹತ್ ಕಲಾಕೃತಿಗಳು ರೈತರ ಸಂಕಷ್ಟವನ್ನು ಚಿತ್ರಿಸುತ್ತವೆ. ಇದರ ಜೊತೆಗೆ ಭಾನುವಾರ ನಡೆದ ಯುಪಿಯ ಲಖಿಂಪುರ್ ಖೇರಿಯಲ್ಲಿ ರೈತರ ಮೇಲೆ ನಡೆದ ಹತ್ಯಾಕಾಂಡವನ್ನು ತೀವ್ರವಾಗಿ ಟೀಕಿಸಿ ಚಿತ್ರಗಳನ್ನು ರಚಿಸಲಾಗಿದೆ.

ಡುಮ್‌ಡಮ್ ಉದ್ಯಾನವನದ ಭಾರತ ಚಕ್ರ ಪೆಂಡಾಲ್‌ನಲ್ಲಿ ಪ್ರವೇಶದ್ವಾರದಲ್ಲಿ ಟ್ರ್ಯಾಕ್ಟರ್‌ನ ಬೃಹತ್ ಪ್ರತಿರೂಪವನ್ನು ರಚಿಸಲಾಗಿದೆ. ಗೋಡೆ ಮೇಲೆ ಬಿಡಿಸಲಾಗಿರುವ ಭಿತ್ತಿ ಚಿತ್ರಗಳಲ್ಲಿ ಕಾರು ರೈತನ ಮೇಲೆ ಹರಿದು ಹೋಗುತ್ತಿರುವ ಚಿತ್ರವಿದೆ.

ಇದನ್ನೂ ಓದಿ: ಲಖಿಂಪುರ್ ರೈತರ ಹತ್ಯೆ ಪ್ರಕರಣ: ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

ದೊಡ್ಡ ಟ್ಯ್ರಾಕ್ಟರ್‌ ಮೇಲೆ ದೊಡ್ಡ ರೆಕ್ಕೆಗಳನ್ನು ರಚಿಸಲಾಗಿದ್ದು, ಈ ರೆಕ್ಕೆಗಳಲ್ಲಿ ಪ್ರತಿಭಟನೆ ವೇಳೆ ಹುತಾತ್ಮರಾದ ರೈತರ ಹೆಸರುಗಳನ್ನು ಬರೆಯಲಾಗಿದೆ ಎಂದು ಈ ಕಲಾಕೃತಿಗಳನ್ನು ರಚಿಸಿರುವ ಕಲಾವಿದ ಅನಿರ್ಬನ್ ದಾಸ್ ಹೇಳಿದ್ದಾರೆ.

ಪೋಲಿಸರ ಹಲ್ಲೆಗಳಿಂದ ತಪ್ಪಿಸಿಕೊಳ್ಳುವಾಗ ಪ್ರತಿಭಟನಾಕಾರರು ತಮ್ಮ ಚಪ್ಪಲಿಗಳನ್ನು ಕಳೆದುಕೊಂಡು ಕಾಲ್ನಡಿಗೆಯಲ್ಲಿ ಆಂದೋಲನ ನಡಸುವುದನ್ನು ಸಂಕೇತಿಸಲು ನೂರಾರು ಚಪ್ಪಲಿಗಳನ್ನು ಇಳಿಬಿಡಲಾಗಿದೆ.  ಮುಖ್ಯ ಪೆಂಡಾಲ್‌ನ ಛಾವಣಿಯನ್ನು ಭತ್ತದಿಂದ ಅಲಂಕರಿಸಲಾಗಿದೆ. ದೆಹಲಿಯಲ್ಲಿರುವ ಮಾದರಿಯ ಬ್ಯಾರಿಕೇಡ್‌ಗಳನ್ನು ತಯಾರಿಸಿ ಇಲ್ಲಿ ಇರಿಸಲಾಗಿದೆ.

“ನಾವು ರೈತರು, ಭಯೋತ್ಪಾದಕರಲ್ಲ. ರೈತರು ಆಹಾರ ನೀಡುವ ಸೈನಿಕರು” ಎಂದು ಪೋಸ್ಟರ್‌ನಲ್ಲಿ, ಬರೆಯಲಾಗಿದೆ.

ಪೂಜಾ ಸಮಿತಿಯ ಕಾರ್ಯದರ್ಶಿ ಪ್ರತೀಕ್ ಚೌಧರಿ ಅವರು ರೈತರ ಮೇಲೆ ನಡೆಯುತ್ತಿರುವ ಶೋಷಣೆಯನ್ನು ಎತ್ತಿ ತೋರಿಸಲು ಬಯಸಿದ್ದೇವೆ ಎಂದಿದ್ದಾರೆ.

“1946-47ರಲ್ಲಿ ತೆಭಾಗ (Tebhaga movement)ಚಳುವಳಿಯ ದಿನಗಳಿಂದ ಹಿಡಿದು ಇತ್ತೀಚಿನ ಮೂರು ಕಾರ್ಪೊರೇಟ್ ಪರ ಕೃಷಿ ಮಸೂದೆಗಳ ವಿರುದ್ಧದ ಆಂದೋಲನದವರೆಗೆ, ನಮಗೆ ಆಹಾರವನ್ನು ಒದಗಿಸುವ ರೈತರ ಕಥೆಯನ್ನು ಹೇಳಲು ನಾವು ಪ್ರಯತ್ನಿಸಿದ್ದೇವೆ” ಎಂದು ಹೇಳಿದ್ದಾರೆ.

“ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಯಲ್ಲಿ ನಾಲ್ಕು ರೈತರ ಮೇಲೆ ಕಾರು ಹರಿಸಿ ಕೊಲೆ ಮಾಡಿರುವ ಘಟನೆ ನಮ್ಮ ಪೆಂಡಾಲ್ ಬಹುತೇಕ ಸಿದ್ಧವಾಗಿದ್ದಾಗ ಸಂಭವಿಸಿದೆ. ಆದರೂ, ನಾವು ಅದನ್ನು ಸೇರಿಸಿದ್ದೇವೆ” ಎಂದು ಚೌಧರಿ ಹೇಳಿದ್ದಾರೆ.


ಇದನ್ನೂ ಓದಿ: ರೈತರ ಮೇಲೆ ಹರಿದ ಕಾರನ್ನು ಅಜಯ್ ಮಿಶ್ರಾ ಪುತ್ರ ಆಶೀಶ್ ಚಲಾಯಿಸುತ್ತಿದ್ದರು: ಗಾಯಾಳು ರೈತ ಮುಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...