Homeಚಳವಳಿಕೊಲ್ಕತ್ತಾ: ದುರ್ಗಾ ಪೂಜೆ ಮಂಟಪಗಳಲ್ಲಿ ಹೊರಹೊಮ್ಮಿದ ರೈತ ಹೋರಾಟದ ಚಿತ್ರಗಳು

ಕೊಲ್ಕತ್ತಾ: ದುರ್ಗಾ ಪೂಜೆ ಮಂಟಪಗಳಲ್ಲಿ ಹೊರಹೊಮ್ಮಿದ ರೈತ ಹೋರಾಟದ ಚಿತ್ರಗಳು

- Advertisement -
- Advertisement -

ನವರಾತ್ರಿಗೆ ತಯಾರಾಗುತ್ತಿರುವ ಕೊಲ್ಕತ್ತಾದಲ್ಲಿ ದುರ್ಗಾ ಪೂಜೆ ಮಂಟಪಗಳನ್ನು ವಿಭಿನ್ನವಾಗಿ ಅಲಂಕರಿಸಲಾಗುತ್ತಿದೆ. ಉತ್ತರ ಕೊಲ್ಕತ್ತಾದ ಸ್ಥಳೀಯ ಕ್ಲಬ್‌ವೊಂದು, ಸುಮಾರು ಒಂದು ವರ್ಷದಿಂದ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರ ಹೋರಾಟವನ್ನು ಗೌರವಿಸುವ ಮೂಲಕ ದುರ್ಗಾ ಪೂಜೆಯನ್ನು ಆಚರಿಸುತ್ತಿದೆ.

ದುರ್ಗಾ ಪೂಜೆ ಪೆಂಡಾಲ್‌ನಲ್ಲಿ ರಚಿಸಿರುವ ಬೃಹತ್ ಕಲಾಕೃತಿಗಳು ರೈತರ ಸಂಕಷ್ಟವನ್ನು ಚಿತ್ರಿಸುತ್ತವೆ. ಇದರ ಜೊತೆಗೆ ಭಾನುವಾರ ನಡೆದ ಯುಪಿಯ ಲಖಿಂಪುರ್ ಖೇರಿಯಲ್ಲಿ ರೈತರ ಮೇಲೆ ನಡೆದ ಹತ್ಯಾಕಾಂಡವನ್ನು ತೀವ್ರವಾಗಿ ಟೀಕಿಸಿ ಚಿತ್ರಗಳನ್ನು ರಚಿಸಲಾಗಿದೆ.

ಡುಮ್‌ಡಮ್ ಉದ್ಯಾನವನದ ಭಾರತ ಚಕ್ರ ಪೆಂಡಾಲ್‌ನಲ್ಲಿ ಪ್ರವೇಶದ್ವಾರದಲ್ಲಿ ಟ್ರ್ಯಾಕ್ಟರ್‌ನ ಬೃಹತ್ ಪ್ರತಿರೂಪವನ್ನು ರಚಿಸಲಾಗಿದೆ. ಗೋಡೆ ಮೇಲೆ ಬಿಡಿಸಲಾಗಿರುವ ಭಿತ್ತಿ ಚಿತ್ರಗಳಲ್ಲಿ ಕಾರು ರೈತನ ಮೇಲೆ ಹರಿದು ಹೋಗುತ್ತಿರುವ ಚಿತ್ರವಿದೆ.

ಇದನ್ನೂ ಓದಿ: ಲಖಿಂಪುರ್ ರೈತರ ಹತ್ಯೆ ಪ್ರಕರಣ: ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

ದೊಡ್ಡ ಟ್ಯ್ರಾಕ್ಟರ್‌ ಮೇಲೆ ದೊಡ್ಡ ರೆಕ್ಕೆಗಳನ್ನು ರಚಿಸಲಾಗಿದ್ದು, ಈ ರೆಕ್ಕೆಗಳಲ್ಲಿ ಪ್ರತಿಭಟನೆ ವೇಳೆ ಹುತಾತ್ಮರಾದ ರೈತರ ಹೆಸರುಗಳನ್ನು ಬರೆಯಲಾಗಿದೆ ಎಂದು ಈ ಕಲಾಕೃತಿಗಳನ್ನು ರಚಿಸಿರುವ ಕಲಾವಿದ ಅನಿರ್ಬನ್ ದಾಸ್ ಹೇಳಿದ್ದಾರೆ.

ಪೋಲಿಸರ ಹಲ್ಲೆಗಳಿಂದ ತಪ್ಪಿಸಿಕೊಳ್ಳುವಾಗ ಪ್ರತಿಭಟನಾಕಾರರು ತಮ್ಮ ಚಪ್ಪಲಿಗಳನ್ನು ಕಳೆದುಕೊಂಡು ಕಾಲ್ನಡಿಗೆಯಲ್ಲಿ ಆಂದೋಲನ ನಡಸುವುದನ್ನು ಸಂಕೇತಿಸಲು ನೂರಾರು ಚಪ್ಪಲಿಗಳನ್ನು ಇಳಿಬಿಡಲಾಗಿದೆ.  ಮುಖ್ಯ ಪೆಂಡಾಲ್‌ನ ಛಾವಣಿಯನ್ನು ಭತ್ತದಿಂದ ಅಲಂಕರಿಸಲಾಗಿದೆ. ದೆಹಲಿಯಲ್ಲಿರುವ ಮಾದರಿಯ ಬ್ಯಾರಿಕೇಡ್‌ಗಳನ್ನು ತಯಾರಿಸಿ ಇಲ್ಲಿ ಇರಿಸಲಾಗಿದೆ.

“ನಾವು ರೈತರು, ಭಯೋತ್ಪಾದಕರಲ್ಲ. ರೈತರು ಆಹಾರ ನೀಡುವ ಸೈನಿಕರು” ಎಂದು ಪೋಸ್ಟರ್‌ನಲ್ಲಿ, ಬರೆಯಲಾಗಿದೆ.

ಪೂಜಾ ಸಮಿತಿಯ ಕಾರ್ಯದರ್ಶಿ ಪ್ರತೀಕ್ ಚೌಧರಿ ಅವರು ರೈತರ ಮೇಲೆ ನಡೆಯುತ್ತಿರುವ ಶೋಷಣೆಯನ್ನು ಎತ್ತಿ ತೋರಿಸಲು ಬಯಸಿದ್ದೇವೆ ಎಂದಿದ್ದಾರೆ.

“1946-47ರಲ್ಲಿ ತೆಭಾಗ (Tebhaga movement)ಚಳುವಳಿಯ ದಿನಗಳಿಂದ ಹಿಡಿದು ಇತ್ತೀಚಿನ ಮೂರು ಕಾರ್ಪೊರೇಟ್ ಪರ ಕೃಷಿ ಮಸೂದೆಗಳ ವಿರುದ್ಧದ ಆಂದೋಲನದವರೆಗೆ, ನಮಗೆ ಆಹಾರವನ್ನು ಒದಗಿಸುವ ರೈತರ ಕಥೆಯನ್ನು ಹೇಳಲು ನಾವು ಪ್ರಯತ್ನಿಸಿದ್ದೇವೆ” ಎಂದು ಹೇಳಿದ್ದಾರೆ.

“ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಯಲ್ಲಿ ನಾಲ್ಕು ರೈತರ ಮೇಲೆ ಕಾರು ಹರಿಸಿ ಕೊಲೆ ಮಾಡಿರುವ ಘಟನೆ ನಮ್ಮ ಪೆಂಡಾಲ್ ಬಹುತೇಕ ಸಿದ್ಧವಾಗಿದ್ದಾಗ ಸಂಭವಿಸಿದೆ. ಆದರೂ, ನಾವು ಅದನ್ನು ಸೇರಿಸಿದ್ದೇವೆ” ಎಂದು ಚೌಧರಿ ಹೇಳಿದ್ದಾರೆ.


ಇದನ್ನೂ ಓದಿ: ರೈತರ ಮೇಲೆ ಹರಿದ ಕಾರನ್ನು ಅಜಯ್ ಮಿಶ್ರಾ ಪುತ್ರ ಆಶೀಶ್ ಚಲಾಯಿಸುತ್ತಿದ್ದರು: ಗಾಯಾಳು ರೈತ ಮುಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...