Homeಚಳವಳಿಕೊಲ್ಕತ್ತಾ: ದುರ್ಗಾ ಪೂಜೆ ಮಂಟಪಗಳಲ್ಲಿ ಹೊರಹೊಮ್ಮಿದ ರೈತ ಹೋರಾಟದ ಚಿತ್ರಗಳು

ಕೊಲ್ಕತ್ತಾ: ದುರ್ಗಾ ಪೂಜೆ ಮಂಟಪಗಳಲ್ಲಿ ಹೊರಹೊಮ್ಮಿದ ರೈತ ಹೋರಾಟದ ಚಿತ್ರಗಳು

- Advertisement -
- Advertisement -

ನವರಾತ್ರಿಗೆ ತಯಾರಾಗುತ್ತಿರುವ ಕೊಲ್ಕತ್ತಾದಲ್ಲಿ ದುರ್ಗಾ ಪೂಜೆ ಮಂಟಪಗಳನ್ನು ವಿಭಿನ್ನವಾಗಿ ಅಲಂಕರಿಸಲಾಗುತ್ತಿದೆ. ಉತ್ತರ ಕೊಲ್ಕತ್ತಾದ ಸ್ಥಳೀಯ ಕ್ಲಬ್‌ವೊಂದು, ಸುಮಾರು ಒಂದು ವರ್ಷದಿಂದ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರ ಹೋರಾಟವನ್ನು ಗೌರವಿಸುವ ಮೂಲಕ ದುರ್ಗಾ ಪೂಜೆಯನ್ನು ಆಚರಿಸುತ್ತಿದೆ.

ದುರ್ಗಾ ಪೂಜೆ ಪೆಂಡಾಲ್‌ನಲ್ಲಿ ರಚಿಸಿರುವ ಬೃಹತ್ ಕಲಾಕೃತಿಗಳು ರೈತರ ಸಂಕಷ್ಟವನ್ನು ಚಿತ್ರಿಸುತ್ತವೆ. ಇದರ ಜೊತೆಗೆ ಭಾನುವಾರ ನಡೆದ ಯುಪಿಯ ಲಖಿಂಪುರ್ ಖೇರಿಯಲ್ಲಿ ರೈತರ ಮೇಲೆ ನಡೆದ ಹತ್ಯಾಕಾಂಡವನ್ನು ತೀವ್ರವಾಗಿ ಟೀಕಿಸಿ ಚಿತ್ರಗಳನ್ನು ರಚಿಸಲಾಗಿದೆ.

ಡುಮ್‌ಡಮ್ ಉದ್ಯಾನವನದ ಭಾರತ ಚಕ್ರ ಪೆಂಡಾಲ್‌ನಲ್ಲಿ ಪ್ರವೇಶದ್ವಾರದಲ್ಲಿ ಟ್ರ್ಯಾಕ್ಟರ್‌ನ ಬೃಹತ್ ಪ್ರತಿರೂಪವನ್ನು ರಚಿಸಲಾಗಿದೆ. ಗೋಡೆ ಮೇಲೆ ಬಿಡಿಸಲಾಗಿರುವ ಭಿತ್ತಿ ಚಿತ್ರಗಳಲ್ಲಿ ಕಾರು ರೈತನ ಮೇಲೆ ಹರಿದು ಹೋಗುತ್ತಿರುವ ಚಿತ್ರವಿದೆ.

ಇದನ್ನೂ ಓದಿ: ಲಖಿಂಪುರ್ ರೈತರ ಹತ್ಯೆ ಪ್ರಕರಣ: ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

ದೊಡ್ಡ ಟ್ಯ್ರಾಕ್ಟರ್‌ ಮೇಲೆ ದೊಡ್ಡ ರೆಕ್ಕೆಗಳನ್ನು ರಚಿಸಲಾಗಿದ್ದು, ಈ ರೆಕ್ಕೆಗಳಲ್ಲಿ ಪ್ರತಿಭಟನೆ ವೇಳೆ ಹುತಾತ್ಮರಾದ ರೈತರ ಹೆಸರುಗಳನ್ನು ಬರೆಯಲಾಗಿದೆ ಎಂದು ಈ ಕಲಾಕೃತಿಗಳನ್ನು ರಚಿಸಿರುವ ಕಲಾವಿದ ಅನಿರ್ಬನ್ ದಾಸ್ ಹೇಳಿದ್ದಾರೆ.

ಪೋಲಿಸರ ಹಲ್ಲೆಗಳಿಂದ ತಪ್ಪಿಸಿಕೊಳ್ಳುವಾಗ ಪ್ರತಿಭಟನಾಕಾರರು ತಮ್ಮ ಚಪ್ಪಲಿಗಳನ್ನು ಕಳೆದುಕೊಂಡು ಕಾಲ್ನಡಿಗೆಯಲ್ಲಿ ಆಂದೋಲನ ನಡಸುವುದನ್ನು ಸಂಕೇತಿಸಲು ನೂರಾರು ಚಪ್ಪಲಿಗಳನ್ನು ಇಳಿಬಿಡಲಾಗಿದೆ.  ಮುಖ್ಯ ಪೆಂಡಾಲ್‌ನ ಛಾವಣಿಯನ್ನು ಭತ್ತದಿಂದ ಅಲಂಕರಿಸಲಾಗಿದೆ. ದೆಹಲಿಯಲ್ಲಿರುವ ಮಾದರಿಯ ಬ್ಯಾರಿಕೇಡ್‌ಗಳನ್ನು ತಯಾರಿಸಿ ಇಲ್ಲಿ ಇರಿಸಲಾಗಿದೆ.

“ನಾವು ರೈತರು, ಭಯೋತ್ಪಾದಕರಲ್ಲ. ರೈತರು ಆಹಾರ ನೀಡುವ ಸೈನಿಕರು” ಎಂದು ಪೋಸ್ಟರ್‌ನಲ್ಲಿ, ಬರೆಯಲಾಗಿದೆ.

ಪೂಜಾ ಸಮಿತಿಯ ಕಾರ್ಯದರ್ಶಿ ಪ್ರತೀಕ್ ಚೌಧರಿ ಅವರು ರೈತರ ಮೇಲೆ ನಡೆಯುತ್ತಿರುವ ಶೋಷಣೆಯನ್ನು ಎತ್ತಿ ತೋರಿಸಲು ಬಯಸಿದ್ದೇವೆ ಎಂದಿದ್ದಾರೆ.

“1946-47ರಲ್ಲಿ ತೆಭಾಗ (Tebhaga movement)ಚಳುವಳಿಯ ದಿನಗಳಿಂದ ಹಿಡಿದು ಇತ್ತೀಚಿನ ಮೂರು ಕಾರ್ಪೊರೇಟ್ ಪರ ಕೃಷಿ ಮಸೂದೆಗಳ ವಿರುದ್ಧದ ಆಂದೋಲನದವರೆಗೆ, ನಮಗೆ ಆಹಾರವನ್ನು ಒದಗಿಸುವ ರೈತರ ಕಥೆಯನ್ನು ಹೇಳಲು ನಾವು ಪ್ರಯತ್ನಿಸಿದ್ದೇವೆ” ಎಂದು ಹೇಳಿದ್ದಾರೆ.

“ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಯಲ್ಲಿ ನಾಲ್ಕು ರೈತರ ಮೇಲೆ ಕಾರು ಹರಿಸಿ ಕೊಲೆ ಮಾಡಿರುವ ಘಟನೆ ನಮ್ಮ ಪೆಂಡಾಲ್ ಬಹುತೇಕ ಸಿದ್ಧವಾಗಿದ್ದಾಗ ಸಂಭವಿಸಿದೆ. ಆದರೂ, ನಾವು ಅದನ್ನು ಸೇರಿಸಿದ್ದೇವೆ” ಎಂದು ಚೌಧರಿ ಹೇಳಿದ್ದಾರೆ.


ಇದನ್ನೂ ಓದಿ: ರೈತರ ಮೇಲೆ ಹರಿದ ಕಾರನ್ನು ಅಜಯ್ ಮಿಶ್ರಾ ಪುತ್ರ ಆಶೀಶ್ ಚಲಾಯಿಸುತ್ತಿದ್ದರು: ಗಾಯಾಳು ರೈತ ಮುಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...