Homeಚಳವಳಿಕೊಲ್ಕತ್ತಾ: ದುರ್ಗಾ ಪೂಜೆ ಮಂಟಪಗಳಲ್ಲಿ ಹೊರಹೊಮ್ಮಿದ ರೈತ ಹೋರಾಟದ ಚಿತ್ರಗಳು

ಕೊಲ್ಕತ್ತಾ: ದುರ್ಗಾ ಪೂಜೆ ಮಂಟಪಗಳಲ್ಲಿ ಹೊರಹೊಮ್ಮಿದ ರೈತ ಹೋರಾಟದ ಚಿತ್ರಗಳು

- Advertisement -
- Advertisement -

ನವರಾತ್ರಿಗೆ ತಯಾರಾಗುತ್ತಿರುವ ಕೊಲ್ಕತ್ತಾದಲ್ಲಿ ದುರ್ಗಾ ಪೂಜೆ ಮಂಟಪಗಳನ್ನು ವಿಭಿನ್ನವಾಗಿ ಅಲಂಕರಿಸಲಾಗುತ್ತಿದೆ. ಉತ್ತರ ಕೊಲ್ಕತ್ತಾದ ಸ್ಥಳೀಯ ಕ್ಲಬ್‌ವೊಂದು, ಸುಮಾರು ಒಂದು ವರ್ಷದಿಂದ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರ ಹೋರಾಟವನ್ನು ಗೌರವಿಸುವ ಮೂಲಕ ದುರ್ಗಾ ಪೂಜೆಯನ್ನು ಆಚರಿಸುತ್ತಿದೆ.

ದುರ್ಗಾ ಪೂಜೆ ಪೆಂಡಾಲ್‌ನಲ್ಲಿ ರಚಿಸಿರುವ ಬೃಹತ್ ಕಲಾಕೃತಿಗಳು ರೈತರ ಸಂಕಷ್ಟವನ್ನು ಚಿತ್ರಿಸುತ್ತವೆ. ಇದರ ಜೊತೆಗೆ ಭಾನುವಾರ ನಡೆದ ಯುಪಿಯ ಲಖಿಂಪುರ್ ಖೇರಿಯಲ್ಲಿ ರೈತರ ಮೇಲೆ ನಡೆದ ಹತ್ಯಾಕಾಂಡವನ್ನು ತೀವ್ರವಾಗಿ ಟೀಕಿಸಿ ಚಿತ್ರಗಳನ್ನು ರಚಿಸಲಾಗಿದೆ.

ಡುಮ್‌ಡಮ್ ಉದ್ಯಾನವನದ ಭಾರತ ಚಕ್ರ ಪೆಂಡಾಲ್‌ನಲ್ಲಿ ಪ್ರವೇಶದ್ವಾರದಲ್ಲಿ ಟ್ರ್ಯಾಕ್ಟರ್‌ನ ಬೃಹತ್ ಪ್ರತಿರೂಪವನ್ನು ರಚಿಸಲಾಗಿದೆ. ಗೋಡೆ ಮೇಲೆ ಬಿಡಿಸಲಾಗಿರುವ ಭಿತ್ತಿ ಚಿತ್ರಗಳಲ್ಲಿ ಕಾರು ರೈತನ ಮೇಲೆ ಹರಿದು ಹೋಗುತ್ತಿರುವ ಚಿತ್ರವಿದೆ.

ಇದನ್ನೂ ಓದಿ: ಲಖಿಂಪುರ್ ರೈತರ ಹತ್ಯೆ ಪ್ರಕರಣ: ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

ದೊಡ್ಡ ಟ್ಯ್ರಾಕ್ಟರ್‌ ಮೇಲೆ ದೊಡ್ಡ ರೆಕ್ಕೆಗಳನ್ನು ರಚಿಸಲಾಗಿದ್ದು, ಈ ರೆಕ್ಕೆಗಳಲ್ಲಿ ಪ್ರತಿಭಟನೆ ವೇಳೆ ಹುತಾತ್ಮರಾದ ರೈತರ ಹೆಸರುಗಳನ್ನು ಬರೆಯಲಾಗಿದೆ ಎಂದು ಈ ಕಲಾಕೃತಿಗಳನ್ನು ರಚಿಸಿರುವ ಕಲಾವಿದ ಅನಿರ್ಬನ್ ದಾಸ್ ಹೇಳಿದ್ದಾರೆ.

ಪೋಲಿಸರ ಹಲ್ಲೆಗಳಿಂದ ತಪ್ಪಿಸಿಕೊಳ್ಳುವಾಗ ಪ್ರತಿಭಟನಾಕಾರರು ತಮ್ಮ ಚಪ್ಪಲಿಗಳನ್ನು ಕಳೆದುಕೊಂಡು ಕಾಲ್ನಡಿಗೆಯಲ್ಲಿ ಆಂದೋಲನ ನಡಸುವುದನ್ನು ಸಂಕೇತಿಸಲು ನೂರಾರು ಚಪ್ಪಲಿಗಳನ್ನು ಇಳಿಬಿಡಲಾಗಿದೆ.  ಮುಖ್ಯ ಪೆಂಡಾಲ್‌ನ ಛಾವಣಿಯನ್ನು ಭತ್ತದಿಂದ ಅಲಂಕರಿಸಲಾಗಿದೆ. ದೆಹಲಿಯಲ್ಲಿರುವ ಮಾದರಿಯ ಬ್ಯಾರಿಕೇಡ್‌ಗಳನ್ನು ತಯಾರಿಸಿ ಇಲ್ಲಿ ಇರಿಸಲಾಗಿದೆ.

“ನಾವು ರೈತರು, ಭಯೋತ್ಪಾದಕರಲ್ಲ. ರೈತರು ಆಹಾರ ನೀಡುವ ಸೈನಿಕರು” ಎಂದು ಪೋಸ್ಟರ್‌ನಲ್ಲಿ, ಬರೆಯಲಾಗಿದೆ.

ಪೂಜಾ ಸಮಿತಿಯ ಕಾರ್ಯದರ್ಶಿ ಪ್ರತೀಕ್ ಚೌಧರಿ ಅವರು ರೈತರ ಮೇಲೆ ನಡೆಯುತ್ತಿರುವ ಶೋಷಣೆಯನ್ನು ಎತ್ತಿ ತೋರಿಸಲು ಬಯಸಿದ್ದೇವೆ ಎಂದಿದ್ದಾರೆ.

“1946-47ರಲ್ಲಿ ತೆಭಾಗ (Tebhaga movement)ಚಳುವಳಿಯ ದಿನಗಳಿಂದ ಹಿಡಿದು ಇತ್ತೀಚಿನ ಮೂರು ಕಾರ್ಪೊರೇಟ್ ಪರ ಕೃಷಿ ಮಸೂದೆಗಳ ವಿರುದ್ಧದ ಆಂದೋಲನದವರೆಗೆ, ನಮಗೆ ಆಹಾರವನ್ನು ಒದಗಿಸುವ ರೈತರ ಕಥೆಯನ್ನು ಹೇಳಲು ನಾವು ಪ್ರಯತ್ನಿಸಿದ್ದೇವೆ” ಎಂದು ಹೇಳಿದ್ದಾರೆ.

“ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಯಲ್ಲಿ ನಾಲ್ಕು ರೈತರ ಮೇಲೆ ಕಾರು ಹರಿಸಿ ಕೊಲೆ ಮಾಡಿರುವ ಘಟನೆ ನಮ್ಮ ಪೆಂಡಾಲ್ ಬಹುತೇಕ ಸಿದ್ಧವಾಗಿದ್ದಾಗ ಸಂಭವಿಸಿದೆ. ಆದರೂ, ನಾವು ಅದನ್ನು ಸೇರಿಸಿದ್ದೇವೆ” ಎಂದು ಚೌಧರಿ ಹೇಳಿದ್ದಾರೆ.


ಇದನ್ನೂ ಓದಿ: ರೈತರ ಮೇಲೆ ಹರಿದ ಕಾರನ್ನು ಅಜಯ್ ಮಿಶ್ರಾ ಪುತ್ರ ಆಶೀಶ್ ಚಲಾಯಿಸುತ್ತಿದ್ದರು: ಗಾಯಾಳು ರೈತ ಮುಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....