Homeಮುಖಪುಟಪಶ್ಚಿಮ ಬಂಗಾಳ: ಹಿಂಸಾಚಾರದಲ್ಲಿ ಎಂಟು ಮಂದಿ ಸಾವು; ರಾಜಕೀಯ ಕೆಸರೆರಚಾಟ

ಪಶ್ಚಿಮ ಬಂಗಾಳ: ಹಿಂಸಾಚಾರದಲ್ಲಿ ಎಂಟು ಮಂದಿ ಸಾವು; ರಾಜಕೀಯ ಕೆಸರೆರಚಾಟ

- Advertisement -
- Advertisement -

ಹೊಸದಿಲ್ಲಿ: ಪಶ್ಚಿಮ ಬಂಗಾಳದ ಬಿರ್‌ಭೂಮ್‌ನಲ್ಲಿ ನಡೆದ ರಾಜಕೀಯ ಹಿಂಸಾಚಾರದಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದಾರೆ ಎಂದಿರುವ ಕೇಂದ್ರ ಸರಕಾರ ರಾಜ್ಯ ಸರ್ಕಾರದಿಂದ ವರದಿ ಕೇಳಿದೆ. ಕಳೆದ ವರ್ಷ ಮಮತಾ ಬ್ಯಾನರ್ಜಿ ಅವರ ದಿಗ್ವಿಜಯ ಸಾಧಿಸಿದ ನಂತರ ನಡೆದ ಅತಿದೊಡ್ಡ ಹಿಂಸಾಚಾರ ಎಂದಿರುವ ಬಿಜೆಪಿ, ತನಿಖೆ ಮಾಡಲು ಸತ್ಯಶೋಧನಾ ತಂಡವನ್ನು ಕಳುಹಿಸುತ್ತಿದೆ.

ಮಂಗಳವಾರ ಮುಂಜಾನೆ ರಾಮ್‌ಪುರಹತ್ ಪಟ್ಟಣದ ಹೊರವಲಯದಲ್ಲಿರುವ ಬೊಗ್ಟುಯಿ ಗ್ರಾಮದಲ್ಲಿ ಗುಂಪೊಂದು ಬಾಂಬ್‌ಗಳನ್ನು ಎಸೆದಿದೆ. ಇದರಲ್ಲಿ 10 ಮನೆ ಆಹುತಿಯಾಗಿವೆ. ತೃಣಮೂಲ ಕಾಂಗ್ರೆಸ್ ಪಂಚಾಯತ್ ನಾಯಕ ಭಾದು ಶೇಖ್ ಅವರ ಹತ್ಯೆಯ ಪ್ರತೀಕಾರಕ್ಕಾಗಿ ಈ ಕೃತ್ಯ ಎಸಗಲಾಗಿದೆ ಎಂದು ಆರೋಪಿಸಲಾಗಿದ್ದು, ಭಾದು ಶೇಖ್‌ ಅವರ ಶವ ಸೋಮವಾರ ಪತ್ತೆಯಾಗಿದೆ.

ಮನೆಯೊಂದರಲ್ಲಿ ಸುಟ್ಟು ಕರಕಲಾದ ಏಳು ಜನರ ಶವಗಳಲ್ಲಿ ಇಬ್ಬರು ಮಕ್ಕಳೂ ಪತ್ತೆಯಾಗಿದ್ದಾರೆ. ಎಂಟನೇ ವ್ಯಕ್ತಿ ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಸಾವನ್ನಪ್ಪಿದ್ದಾರೆ. ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಹನ್ನೊಂದು ಜನರನ್ನು ಬಂಧಿಸಲಾಗಿದೆ ಎಂದು ರಾಜ್ಯ ಪೊಲೀಸರು ತಿಳಿಸಿದ್ದಾರೆ.

ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ಬಂಗಾಳದ ಉನ್ನತ ಪೋಲೀಸ್ ಮನೋಜ್ ಮಾಳವಿಯಾ ಅವರು, “ಮನೆಗಳಿಗೆ ಹೇಗೆ ಬೆಂಕಿ ಹೊತ್ತಿಕೊಂಡಿತು, ನೆರೆಯ ಬರ್ಶಾಲ್ ಗ್ರಾಮದ ಪಂಚಾಯತ್ ಉಪ ಮುಖ್ಯಸ್ಥರ ಸಾವಿನಿಂದಾಗಿ ಘಟನೆ ಸಂಬಂಧಿಸಿದೆಯೇ ಎಂದು ನಾವು ತನಿಖೆ ನಡೆಸುತ್ತಿದ್ದೇವೆ” ಎಂದು ಪೊಲೀಸರು ಹೇಳಿದ್ದಾರೆ.

ರಾಜ್ಯ ಸಚಿವ ಫಿರ್ಹಾದ್ ಹಕೀಮ್ ನೇತೃತ್ವದ ಇಬ್ಬರು ಸದಸ್ಯರ ತೃಣಮೂಲ ಕಾಂಗ್ರೆಸ್ ನಿಯೋಗವು ಸಮಸ್ಯೆಯನ್ನು ಪರಿಶೀಲಿಸಲು ರಾಮ್‌ಪುರಹಟ್‌ಗೆ ತೆರಳುತ್ತಿದೆ. ಸ್ಥಳೀಯ ಇಬ್ಬರು ಪೊಲೀಸ್‌ ಅಧಿಕಾರಿಗಳನ್ನು (ಉಪವಿಭಾಗದ ಪೊಲೀಸ್ ಅಧಿಕಾರಿ ಮತ್ತು ರಾಮ್‌ಪುರಹಟ್‌ನ ಸರ್ಕಲ್ ಇನ್‌ಸ್ಪೆಕ್ಟರ್) ಹೊರಗಿಡಲಾಗಿದೆ.

ಬಂಗಾಳದ ಬಿಜೆಪಿ ತಂಡ ಮಂಗಳವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಅವರ ಮಧ್ಯಸ್ಥಿಕೆ ಕೋರಿದೆ. ನಿಯೋಗದ ನೇತೃತ್ವ ವಹಿಸಿದ್ದ ಪಕ್ಷದ ರಾಜ್ಯ ಮುಖ್ಯಸ್ಥ ಸುಕಾಂತ ಮಜುಂದಾರ್ ಅವರು ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಅವರು ರಚಿಸಿರುವ ಸತ್ಯಶೋಧನಾ ತಂಡದ ಭಾಗವಾಗಲಿದ್ದಾರೆ. ತಂಡದಲ್ಲಿ ನಾಲ್ವರು ಮಾಜಿ ಪೊಲೀಸ್ ಅಧಿಕಾರಿಗಳು ಸೇರಿದ್ದಾರೆ.

ಹಿಂಸಾಚಾರದಲ್ಲಿ ತಾನು ಭಾಗಿಯಾಗಿಲ್ಲ ಎಂದು ತೃಣಮೂಲ ಕಾಂಗ್ರೆಸ್ ಹೇಳಿದೆ. ಪಕ್ಷದ ವಕ್ತಾರ ಕುನಾಲ್ ಘೋಷ್, “ಆಕಸ್ಮಿಕ ಬೆಂಕಿಯಿಂದ ಸಂಭವಿಸಿದ ಸಾವುಗಳನ್ನು ನಾವು ಖಂಡಿಸುತ್ತೇವೆ. ನಿನ್ನೆ ರಾತ್ರಿ ನಮ್ಮ ಪಕ್ಷದ ಮುಖಂಡನನ್ನು ಕೊಲ್ಲಲಾಯಿತು” ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಮತ್ತು ರಾಜ್ಯಪಾಲ ಜಗದೀಪ್ ಧನಕರ್ ನಡುವೆ ಹಲವು ವರ್ಷಗಳಿಂದ ಭಿನ್ನಾಭಿಪ್ರಾಯವಿತ್ತು. ಧನಖರ್ ಅವರು ಈ ಘಟನೆಯನ್ನು ಖಂಡಿಸಿದ್ದು, “ಭಯಾನಕ ಹಿಂಸಾಚಾರ ಇದಾಗಿದೆ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಹದಗೆಟ್ಟಿದೆ” ಎಂದು ಟೀಕಿಸಿದ್ದಾರೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪತ್ರದ ಮೂಲಕ ತಿರುಗೇಟು ನೀಡಿದ್ದಾರೆ. ನಿಷ್ಪಕ್ಷಪಾತ ತನಿಖೆಗೆ ದಾರಿ ಮಾಡಿಕೊಡುವ ಬದಲು ಈ ಹೇಳಿಕೆ ನೀಡಿರುವುದು ಅಕ್ಷೇಪಣೀಯ. ಇಂತಹ ಬೇಜವಾಬ್ದಾರಿ ಹೇಳಿಕೆಗಳಿಗೆ ಕಡಿವಾಣ ಹಾಕಬೇಕು ಎಂದು ರಾಜ್ಯಪಾಲರಲ್ಲಿ ಕೋರಿದ್ದಾರೆ.

ಈ ವಿಷಯವು ರಾಜ್ಯ ವಿಧಾನಸಭೆಯಲ್ಲಿಯೂ ಸದ್ದು ಮಾಡಿದೆ. ಬಿಜೆಪಿ ನಾಯಕರು ಮುಖ್ಯಮಂತ್ರಿಯವರ ಹೇಳಿಕೆಗೆ ಸದನದಲ್ಲಿ ಒತ್ತಾಯಿಸಿದ್ದಾರೆ. ಇಪ್ಪತ್ತೆರಡು ಬಿಜೆಪಿ ಶಾಸಕರು ಸಭಾತ್ಯಾಗ ಮಾಡಿದರು. ಪಕ್ಷದ ನಾಯಕ ಸುವೇಂದು ಅಧಿಕಾರಿ ಸರಣಿ ಟ್ವೀಟ್‌ ಮಾಡಿ, ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಬೇಕು ಎಂದು ಒತ್ತಾಯಿಸಿದ್ದಾರೆ.

ಲೋಕಸಭೆಯಲ್ಲಿ ಕಾಂಗ್ರೆಸ್‌ನ ನಾಯಕ ಅಧೀರ್ ರಂಜನ್ ಚೌಧರಿ ಅವರು ಸದನದಲ್ಲಿ ವಿಷಯ ಪ್ರಸ್ತಾಪಿಸಿ, ಪಶ್ಚಿಮ ಬಂಗಾಳದಲ್ಲಿ ಮಹಿಳೆಯರು ಮತ್ತು ಮಕ್ಕಳನ್ನು ಜೀವಂತ ಸುಡುವ ಇಂತಹ ಭಯಾನಕ ಘಟನೆಗಳು ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿರಿ: ಸಂಸತ್ ಸ್ಥಾನಕ್ಕೆ ರಾಜೀನಾಮೆ ನೀಡಿದ ಅಖಿಲೇಶ್ ಯಾದವ್: ವಿಪಕ್ಷ ನಾಯಕನಾಗಲಿರುವ ಉದ್ದೇಶವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...