Homeಮುಖಪುಟಪಶ್ಚಿಮ ಬಂಗಾಳ: ಹಿಂಸಾಚಾರದಲ್ಲಿ ಎಂಟು ಮಂದಿ ಸಾವು; ರಾಜಕೀಯ ಕೆಸರೆರಚಾಟ

ಪಶ್ಚಿಮ ಬಂಗಾಳ: ಹಿಂಸಾಚಾರದಲ್ಲಿ ಎಂಟು ಮಂದಿ ಸಾವು; ರಾಜಕೀಯ ಕೆಸರೆರಚಾಟ

- Advertisement -
- Advertisement -

ಹೊಸದಿಲ್ಲಿ: ಪಶ್ಚಿಮ ಬಂಗಾಳದ ಬಿರ್‌ಭೂಮ್‌ನಲ್ಲಿ ನಡೆದ ರಾಜಕೀಯ ಹಿಂಸಾಚಾರದಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದಾರೆ ಎಂದಿರುವ ಕೇಂದ್ರ ಸರಕಾರ ರಾಜ್ಯ ಸರ್ಕಾರದಿಂದ ವರದಿ ಕೇಳಿದೆ. ಕಳೆದ ವರ್ಷ ಮಮತಾ ಬ್ಯಾನರ್ಜಿ ಅವರ ದಿಗ್ವಿಜಯ ಸಾಧಿಸಿದ ನಂತರ ನಡೆದ ಅತಿದೊಡ್ಡ ಹಿಂಸಾಚಾರ ಎಂದಿರುವ ಬಿಜೆಪಿ, ತನಿಖೆ ಮಾಡಲು ಸತ್ಯಶೋಧನಾ ತಂಡವನ್ನು ಕಳುಹಿಸುತ್ತಿದೆ.

ಮಂಗಳವಾರ ಮುಂಜಾನೆ ರಾಮ್‌ಪುರಹತ್ ಪಟ್ಟಣದ ಹೊರವಲಯದಲ್ಲಿರುವ ಬೊಗ್ಟುಯಿ ಗ್ರಾಮದಲ್ಲಿ ಗುಂಪೊಂದು ಬಾಂಬ್‌ಗಳನ್ನು ಎಸೆದಿದೆ. ಇದರಲ್ಲಿ 10 ಮನೆ ಆಹುತಿಯಾಗಿವೆ. ತೃಣಮೂಲ ಕಾಂಗ್ರೆಸ್ ಪಂಚಾಯತ್ ನಾಯಕ ಭಾದು ಶೇಖ್ ಅವರ ಹತ್ಯೆಯ ಪ್ರತೀಕಾರಕ್ಕಾಗಿ ಈ ಕೃತ್ಯ ಎಸಗಲಾಗಿದೆ ಎಂದು ಆರೋಪಿಸಲಾಗಿದ್ದು, ಭಾದು ಶೇಖ್‌ ಅವರ ಶವ ಸೋಮವಾರ ಪತ್ತೆಯಾಗಿದೆ.

ಮನೆಯೊಂದರಲ್ಲಿ ಸುಟ್ಟು ಕರಕಲಾದ ಏಳು ಜನರ ಶವಗಳಲ್ಲಿ ಇಬ್ಬರು ಮಕ್ಕಳೂ ಪತ್ತೆಯಾಗಿದ್ದಾರೆ. ಎಂಟನೇ ವ್ಯಕ್ತಿ ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಸಾವನ್ನಪ್ಪಿದ್ದಾರೆ. ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಹನ್ನೊಂದು ಜನರನ್ನು ಬಂಧಿಸಲಾಗಿದೆ ಎಂದು ರಾಜ್ಯ ಪೊಲೀಸರು ತಿಳಿಸಿದ್ದಾರೆ.

ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ಬಂಗಾಳದ ಉನ್ನತ ಪೋಲೀಸ್ ಮನೋಜ್ ಮಾಳವಿಯಾ ಅವರು, “ಮನೆಗಳಿಗೆ ಹೇಗೆ ಬೆಂಕಿ ಹೊತ್ತಿಕೊಂಡಿತು, ನೆರೆಯ ಬರ್ಶಾಲ್ ಗ್ರಾಮದ ಪಂಚಾಯತ್ ಉಪ ಮುಖ್ಯಸ್ಥರ ಸಾವಿನಿಂದಾಗಿ ಘಟನೆ ಸಂಬಂಧಿಸಿದೆಯೇ ಎಂದು ನಾವು ತನಿಖೆ ನಡೆಸುತ್ತಿದ್ದೇವೆ” ಎಂದು ಪೊಲೀಸರು ಹೇಳಿದ್ದಾರೆ.

ರಾಜ್ಯ ಸಚಿವ ಫಿರ್ಹಾದ್ ಹಕೀಮ್ ನೇತೃತ್ವದ ಇಬ್ಬರು ಸದಸ್ಯರ ತೃಣಮೂಲ ಕಾಂಗ್ರೆಸ್ ನಿಯೋಗವು ಸಮಸ್ಯೆಯನ್ನು ಪರಿಶೀಲಿಸಲು ರಾಮ್‌ಪುರಹಟ್‌ಗೆ ತೆರಳುತ್ತಿದೆ. ಸ್ಥಳೀಯ ಇಬ್ಬರು ಪೊಲೀಸ್‌ ಅಧಿಕಾರಿಗಳನ್ನು (ಉಪವಿಭಾಗದ ಪೊಲೀಸ್ ಅಧಿಕಾರಿ ಮತ್ತು ರಾಮ್‌ಪುರಹಟ್‌ನ ಸರ್ಕಲ್ ಇನ್‌ಸ್ಪೆಕ್ಟರ್) ಹೊರಗಿಡಲಾಗಿದೆ.

ಬಂಗಾಳದ ಬಿಜೆಪಿ ತಂಡ ಮಂಗಳವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಅವರ ಮಧ್ಯಸ್ಥಿಕೆ ಕೋರಿದೆ. ನಿಯೋಗದ ನೇತೃತ್ವ ವಹಿಸಿದ್ದ ಪಕ್ಷದ ರಾಜ್ಯ ಮುಖ್ಯಸ್ಥ ಸುಕಾಂತ ಮಜುಂದಾರ್ ಅವರು ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಅವರು ರಚಿಸಿರುವ ಸತ್ಯಶೋಧನಾ ತಂಡದ ಭಾಗವಾಗಲಿದ್ದಾರೆ. ತಂಡದಲ್ಲಿ ನಾಲ್ವರು ಮಾಜಿ ಪೊಲೀಸ್ ಅಧಿಕಾರಿಗಳು ಸೇರಿದ್ದಾರೆ.

ಹಿಂಸಾಚಾರದಲ್ಲಿ ತಾನು ಭಾಗಿಯಾಗಿಲ್ಲ ಎಂದು ತೃಣಮೂಲ ಕಾಂಗ್ರೆಸ್ ಹೇಳಿದೆ. ಪಕ್ಷದ ವಕ್ತಾರ ಕುನಾಲ್ ಘೋಷ್, “ಆಕಸ್ಮಿಕ ಬೆಂಕಿಯಿಂದ ಸಂಭವಿಸಿದ ಸಾವುಗಳನ್ನು ನಾವು ಖಂಡಿಸುತ್ತೇವೆ. ನಿನ್ನೆ ರಾತ್ರಿ ನಮ್ಮ ಪಕ್ಷದ ಮುಖಂಡನನ್ನು ಕೊಲ್ಲಲಾಯಿತು” ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಮತ್ತು ರಾಜ್ಯಪಾಲ ಜಗದೀಪ್ ಧನಕರ್ ನಡುವೆ ಹಲವು ವರ್ಷಗಳಿಂದ ಭಿನ್ನಾಭಿಪ್ರಾಯವಿತ್ತು. ಧನಖರ್ ಅವರು ಈ ಘಟನೆಯನ್ನು ಖಂಡಿಸಿದ್ದು, “ಭಯಾನಕ ಹಿಂಸಾಚಾರ ಇದಾಗಿದೆ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಹದಗೆಟ್ಟಿದೆ” ಎಂದು ಟೀಕಿಸಿದ್ದಾರೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪತ್ರದ ಮೂಲಕ ತಿರುಗೇಟು ನೀಡಿದ್ದಾರೆ. ನಿಷ್ಪಕ್ಷಪಾತ ತನಿಖೆಗೆ ದಾರಿ ಮಾಡಿಕೊಡುವ ಬದಲು ಈ ಹೇಳಿಕೆ ನೀಡಿರುವುದು ಅಕ್ಷೇಪಣೀಯ. ಇಂತಹ ಬೇಜವಾಬ್ದಾರಿ ಹೇಳಿಕೆಗಳಿಗೆ ಕಡಿವಾಣ ಹಾಕಬೇಕು ಎಂದು ರಾಜ್ಯಪಾಲರಲ್ಲಿ ಕೋರಿದ್ದಾರೆ.

ಈ ವಿಷಯವು ರಾಜ್ಯ ವಿಧಾನಸಭೆಯಲ್ಲಿಯೂ ಸದ್ದು ಮಾಡಿದೆ. ಬಿಜೆಪಿ ನಾಯಕರು ಮುಖ್ಯಮಂತ್ರಿಯವರ ಹೇಳಿಕೆಗೆ ಸದನದಲ್ಲಿ ಒತ್ತಾಯಿಸಿದ್ದಾರೆ. ಇಪ್ಪತ್ತೆರಡು ಬಿಜೆಪಿ ಶಾಸಕರು ಸಭಾತ್ಯಾಗ ಮಾಡಿದರು. ಪಕ್ಷದ ನಾಯಕ ಸುವೇಂದು ಅಧಿಕಾರಿ ಸರಣಿ ಟ್ವೀಟ್‌ ಮಾಡಿ, ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಬೇಕು ಎಂದು ಒತ್ತಾಯಿಸಿದ್ದಾರೆ.

ಲೋಕಸಭೆಯಲ್ಲಿ ಕಾಂಗ್ರೆಸ್‌ನ ನಾಯಕ ಅಧೀರ್ ರಂಜನ್ ಚೌಧರಿ ಅವರು ಸದನದಲ್ಲಿ ವಿಷಯ ಪ್ರಸ್ತಾಪಿಸಿ, ಪಶ್ಚಿಮ ಬಂಗಾಳದಲ್ಲಿ ಮಹಿಳೆಯರು ಮತ್ತು ಮಕ್ಕಳನ್ನು ಜೀವಂತ ಸುಡುವ ಇಂತಹ ಭಯಾನಕ ಘಟನೆಗಳು ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿರಿ: ಸಂಸತ್ ಸ್ಥಾನಕ್ಕೆ ರಾಜೀನಾಮೆ ನೀಡಿದ ಅಖಿಲೇಶ್ ಯಾದವ್: ವಿಪಕ್ಷ ನಾಯಕನಾಗಲಿರುವ ಉದ್ದೇಶವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...