Homeಮುಖಪುಟಪಶ್ಚಿಮ ಬಂಗಾಳ: ಹಿಂಸಾಚಾರದಲ್ಲಿ ಎಂಟು ಮಂದಿ ಸಾವು; ರಾಜಕೀಯ ಕೆಸರೆರಚಾಟ

ಪಶ್ಚಿಮ ಬಂಗಾಳ: ಹಿಂಸಾಚಾರದಲ್ಲಿ ಎಂಟು ಮಂದಿ ಸಾವು; ರಾಜಕೀಯ ಕೆಸರೆರಚಾಟ

- Advertisement -
- Advertisement -

ಹೊಸದಿಲ್ಲಿ: ಪಶ್ಚಿಮ ಬಂಗಾಳದ ಬಿರ್‌ಭೂಮ್‌ನಲ್ಲಿ ನಡೆದ ರಾಜಕೀಯ ಹಿಂಸಾಚಾರದಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದಾರೆ ಎಂದಿರುವ ಕೇಂದ್ರ ಸರಕಾರ ರಾಜ್ಯ ಸರ್ಕಾರದಿಂದ ವರದಿ ಕೇಳಿದೆ. ಕಳೆದ ವರ್ಷ ಮಮತಾ ಬ್ಯಾನರ್ಜಿ ಅವರ ದಿಗ್ವಿಜಯ ಸಾಧಿಸಿದ ನಂತರ ನಡೆದ ಅತಿದೊಡ್ಡ ಹಿಂಸಾಚಾರ ಎಂದಿರುವ ಬಿಜೆಪಿ, ತನಿಖೆ ಮಾಡಲು ಸತ್ಯಶೋಧನಾ ತಂಡವನ್ನು ಕಳುಹಿಸುತ್ತಿದೆ.

ಮಂಗಳವಾರ ಮುಂಜಾನೆ ರಾಮ್‌ಪುರಹತ್ ಪಟ್ಟಣದ ಹೊರವಲಯದಲ್ಲಿರುವ ಬೊಗ್ಟುಯಿ ಗ್ರಾಮದಲ್ಲಿ ಗುಂಪೊಂದು ಬಾಂಬ್‌ಗಳನ್ನು ಎಸೆದಿದೆ. ಇದರಲ್ಲಿ 10 ಮನೆ ಆಹುತಿಯಾಗಿವೆ. ತೃಣಮೂಲ ಕಾಂಗ್ರೆಸ್ ಪಂಚಾಯತ್ ನಾಯಕ ಭಾದು ಶೇಖ್ ಅವರ ಹತ್ಯೆಯ ಪ್ರತೀಕಾರಕ್ಕಾಗಿ ಈ ಕೃತ್ಯ ಎಸಗಲಾಗಿದೆ ಎಂದು ಆರೋಪಿಸಲಾಗಿದ್ದು, ಭಾದು ಶೇಖ್‌ ಅವರ ಶವ ಸೋಮವಾರ ಪತ್ತೆಯಾಗಿದೆ.

ಮನೆಯೊಂದರಲ್ಲಿ ಸುಟ್ಟು ಕರಕಲಾದ ಏಳು ಜನರ ಶವಗಳಲ್ಲಿ ಇಬ್ಬರು ಮಕ್ಕಳೂ ಪತ್ತೆಯಾಗಿದ್ದಾರೆ. ಎಂಟನೇ ವ್ಯಕ್ತಿ ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಸಾವನ್ನಪ್ಪಿದ್ದಾರೆ. ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಹನ್ನೊಂದು ಜನರನ್ನು ಬಂಧಿಸಲಾಗಿದೆ ಎಂದು ರಾಜ್ಯ ಪೊಲೀಸರು ತಿಳಿಸಿದ್ದಾರೆ.

ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ಬಂಗಾಳದ ಉನ್ನತ ಪೋಲೀಸ್ ಮನೋಜ್ ಮಾಳವಿಯಾ ಅವರು, “ಮನೆಗಳಿಗೆ ಹೇಗೆ ಬೆಂಕಿ ಹೊತ್ತಿಕೊಂಡಿತು, ನೆರೆಯ ಬರ್ಶಾಲ್ ಗ್ರಾಮದ ಪಂಚಾಯತ್ ಉಪ ಮುಖ್ಯಸ್ಥರ ಸಾವಿನಿಂದಾಗಿ ಘಟನೆ ಸಂಬಂಧಿಸಿದೆಯೇ ಎಂದು ನಾವು ತನಿಖೆ ನಡೆಸುತ್ತಿದ್ದೇವೆ” ಎಂದು ಪೊಲೀಸರು ಹೇಳಿದ್ದಾರೆ.

ರಾಜ್ಯ ಸಚಿವ ಫಿರ್ಹಾದ್ ಹಕೀಮ್ ನೇತೃತ್ವದ ಇಬ್ಬರು ಸದಸ್ಯರ ತೃಣಮೂಲ ಕಾಂಗ್ರೆಸ್ ನಿಯೋಗವು ಸಮಸ್ಯೆಯನ್ನು ಪರಿಶೀಲಿಸಲು ರಾಮ್‌ಪುರಹಟ್‌ಗೆ ತೆರಳುತ್ತಿದೆ. ಸ್ಥಳೀಯ ಇಬ್ಬರು ಪೊಲೀಸ್‌ ಅಧಿಕಾರಿಗಳನ್ನು (ಉಪವಿಭಾಗದ ಪೊಲೀಸ್ ಅಧಿಕಾರಿ ಮತ್ತು ರಾಮ್‌ಪುರಹಟ್‌ನ ಸರ್ಕಲ್ ಇನ್‌ಸ್ಪೆಕ್ಟರ್) ಹೊರಗಿಡಲಾಗಿದೆ.

ಬಂಗಾಳದ ಬಿಜೆಪಿ ತಂಡ ಮಂಗಳವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಅವರ ಮಧ್ಯಸ್ಥಿಕೆ ಕೋರಿದೆ. ನಿಯೋಗದ ನೇತೃತ್ವ ವಹಿಸಿದ್ದ ಪಕ್ಷದ ರಾಜ್ಯ ಮುಖ್ಯಸ್ಥ ಸುಕಾಂತ ಮಜುಂದಾರ್ ಅವರು ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಅವರು ರಚಿಸಿರುವ ಸತ್ಯಶೋಧನಾ ತಂಡದ ಭಾಗವಾಗಲಿದ್ದಾರೆ. ತಂಡದಲ್ಲಿ ನಾಲ್ವರು ಮಾಜಿ ಪೊಲೀಸ್ ಅಧಿಕಾರಿಗಳು ಸೇರಿದ್ದಾರೆ.

ಹಿಂಸಾಚಾರದಲ್ಲಿ ತಾನು ಭಾಗಿಯಾಗಿಲ್ಲ ಎಂದು ತೃಣಮೂಲ ಕಾಂಗ್ರೆಸ್ ಹೇಳಿದೆ. ಪಕ್ಷದ ವಕ್ತಾರ ಕುನಾಲ್ ಘೋಷ್, “ಆಕಸ್ಮಿಕ ಬೆಂಕಿಯಿಂದ ಸಂಭವಿಸಿದ ಸಾವುಗಳನ್ನು ನಾವು ಖಂಡಿಸುತ್ತೇವೆ. ನಿನ್ನೆ ರಾತ್ರಿ ನಮ್ಮ ಪಕ್ಷದ ಮುಖಂಡನನ್ನು ಕೊಲ್ಲಲಾಯಿತು” ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಮತ್ತು ರಾಜ್ಯಪಾಲ ಜಗದೀಪ್ ಧನಕರ್ ನಡುವೆ ಹಲವು ವರ್ಷಗಳಿಂದ ಭಿನ್ನಾಭಿಪ್ರಾಯವಿತ್ತು. ಧನಖರ್ ಅವರು ಈ ಘಟನೆಯನ್ನು ಖಂಡಿಸಿದ್ದು, “ಭಯಾನಕ ಹಿಂಸಾಚಾರ ಇದಾಗಿದೆ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಹದಗೆಟ್ಟಿದೆ” ಎಂದು ಟೀಕಿಸಿದ್ದಾರೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪತ್ರದ ಮೂಲಕ ತಿರುಗೇಟು ನೀಡಿದ್ದಾರೆ. ನಿಷ್ಪಕ್ಷಪಾತ ತನಿಖೆಗೆ ದಾರಿ ಮಾಡಿಕೊಡುವ ಬದಲು ಈ ಹೇಳಿಕೆ ನೀಡಿರುವುದು ಅಕ್ಷೇಪಣೀಯ. ಇಂತಹ ಬೇಜವಾಬ್ದಾರಿ ಹೇಳಿಕೆಗಳಿಗೆ ಕಡಿವಾಣ ಹಾಕಬೇಕು ಎಂದು ರಾಜ್ಯಪಾಲರಲ್ಲಿ ಕೋರಿದ್ದಾರೆ.

ಈ ವಿಷಯವು ರಾಜ್ಯ ವಿಧಾನಸಭೆಯಲ್ಲಿಯೂ ಸದ್ದು ಮಾಡಿದೆ. ಬಿಜೆಪಿ ನಾಯಕರು ಮುಖ್ಯಮಂತ್ರಿಯವರ ಹೇಳಿಕೆಗೆ ಸದನದಲ್ಲಿ ಒತ್ತಾಯಿಸಿದ್ದಾರೆ. ಇಪ್ಪತ್ತೆರಡು ಬಿಜೆಪಿ ಶಾಸಕರು ಸಭಾತ್ಯಾಗ ಮಾಡಿದರು. ಪಕ್ಷದ ನಾಯಕ ಸುವೇಂದು ಅಧಿಕಾರಿ ಸರಣಿ ಟ್ವೀಟ್‌ ಮಾಡಿ, ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಬೇಕು ಎಂದು ಒತ್ತಾಯಿಸಿದ್ದಾರೆ.

ಲೋಕಸಭೆಯಲ್ಲಿ ಕಾಂಗ್ರೆಸ್‌ನ ನಾಯಕ ಅಧೀರ್ ರಂಜನ್ ಚೌಧರಿ ಅವರು ಸದನದಲ್ಲಿ ವಿಷಯ ಪ್ರಸ್ತಾಪಿಸಿ, ಪಶ್ಚಿಮ ಬಂಗಾಳದಲ್ಲಿ ಮಹಿಳೆಯರು ಮತ್ತು ಮಕ್ಕಳನ್ನು ಜೀವಂತ ಸುಡುವ ಇಂತಹ ಭಯಾನಕ ಘಟನೆಗಳು ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿರಿ: ಸಂಸತ್ ಸ್ಥಾನಕ್ಕೆ ರಾಜೀನಾಮೆ ನೀಡಿದ ಅಖಿಲೇಶ್ ಯಾದವ್: ವಿಪಕ್ಷ ನಾಯಕನಾಗಲಿರುವ ಉದ್ದೇಶವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...