Homeಮುಖಪುಟದ್ವೇಷ ಬಿತ್ತುವವರಿಗೆ ಮತ ನೀಡಬೇಡಿ: ಪಶ್ಚಿಮ ಬಂಗಾಳದ ಸಿನಿಮಾ, ರಂಗಭೂಮಿ ಕಲಾವಿದರ ಹಾಡು ವೈರಲ್

ದ್ವೇಷ ಬಿತ್ತುವವರಿಗೆ ಮತ ನೀಡಬೇಡಿ: ಪಶ್ಚಿಮ ಬಂಗಾಳದ ಸಿನಿಮಾ, ರಂಗಭೂಮಿ ಕಲಾವಿದರ ಹಾಡು ವೈರಲ್

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ 3 ದಿನಗಳು ಬಾಕಿಯಿರುವಾಗ, ಬಂಗಾಳಿ ನಟರು ಮತ್ತು ರಂಗಭೂಮಿ ಕಲಾವಿದರು ಒಟ್ಟಾಗಿ ಸೇರಿ ರಚಿಸಿರುವ ವಿಡಿಯೋದಲ್ಲಿ, ಬಂಗಾಳ ಚುನಾವಣೆಯಲ್ಲಿ ದ್ವೇಷ ಹರಡುವವರಿಗೆ ಮತ ನೀಡಬೇಡಿ ಎಂದು ಮನವಿ ಮಾಡಿದ್ದಾರೆ. ಆ ಹಾಡು ವೈರಲ್ ಆಗಿದ್ದು ಫ್ಯಾಸಿಸ್ಟ್ ಶಕ್ತಿಗಳನ್ನು ನಿರ್ಮೂಲನೆ ಮಾಡುವ ಅಗತ್ಯತೆಯನ್ನು ಅರ್ಥಪೂರ್ಣ ಹಾಡಿನ ಮೂಲಕ ವ್ಯಕ್ತಪಡಿಸಿದ್ದಾರೆ ಎಂಬ ಮೆಚ್ಚುಗೆ ವ್ಯಕ್ತವಾಗಿದೆ.

ಬಿಜೆಪಿಯ ಹೆಸರನ್ನು ನೇರವಾಗಿ ಹೆಸರಿಸದ ಕಲಾವಿದರು ‘ನಿಜೇದಿರ್ ಮೋತೆ, ನಿಜೇದಿರ್ ಗಾನ್’ (ನಮ್ಮ ಅಭಿಪ್ರಾಯಗಳ ಬಗ್ಗೆ ನಮ್ಮ ಹಾಡು) ಎಂದು ದ್ವೇಷ ಬಿತ್ತುವ ಸಿದ್ಧಾಂತದ ವಿರುದ್ಧ ನಿಲುವನ್ನು ತೆಗೆದುಕೊಂಡಿದ್ದಾರೆ. ವೈರಲ್ ಹಾಡು ನೋಡಿ.

ಈ ವೀಡಿಯೊದಲ್ಲಿ ಪರಂಬ್ರತಾ ಚಟರ್ಜಿ, ಅನಿರ್ಬನ್ ಭಟ್ಟಾಚಾರ್ಯ, ಸಬಿಯಾಸಾಚಿ ಚಕ್ರವರ್ತಿ, ರುದ್ರಪ್ರಸಾದ್ ಸೇನ್‌ಗುಪ್ತಾ, ಅನುಪಮ್ ರಾಯ್, ರೂಪಂಕರ್ ಬಾಗ್ಚಿ, ರಿದ್ಧಿ ಸೇನ್ ಮತ್ತು ಸುಮನ್ ಮುಖೋಪಾಧ್ಯಾಯ ಸೇರಿದಂತೆ ಸಿನಿಮಾ, ನಾಟಕ ಮತ್ತು ಸಂಗೀತ ಕ್ಷೇತ್ರಗಳ ಕಲಾವಿದರು ಇದ್ದಾರೆ.

ಈ ಹಾಡು ಮಂಗಳವಾರ ರಾತ್ರಿ ಯೂಟ್ಯೂಬ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಬಿಡುಗಡೆಯಾಗಿದ್ದು, ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ವೀಕ್ಷಕರನ್ನು ಸೆಳೆದಿದೆ.

ಇದನ್ನೂ ಓದಿ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಓವೈಸಿ ಬಿಜೆಪಿಗೆ ನೆರವಾಗಲಿದ್ದಾರೆ: ಸ್ಪೋಟಕ ಹೇಳಿಕೆ ನೀಡಿದ ಸಾಕ್ಷಿ ಮಹರಾಜ್

ರಾಷ್ಟ್ರೀಯ ನಾಗರಿಕರ ನೋಂದಣಿ ಮತ್ತು ಪೌರತ್ವ ತಿದ್ದುಪಡಿ ಕಾಯ್ದೆ (ಎನ್‌ಆರ್‌ಸಿ-ಸಿಎಎ) ವಿರುದ್ಧದ ಪ್ರತಿಭಟನೆಗಳು, ದೇಶದಲ್ಲಿ ನಿರುದ್ಯೋಗ ದರ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳಂತಹ ವಿಷಯಗಳನ್ನು ವೀಡಿಯೊದಲ್ಲಿ ಹೇಳಲಾಗಿದೆ. ಜೊತೆಗೆ ಈ ವಿಡಿಯೋದಲ್ಲಿ ಧರ್ಮದ ಹೆಸರಿನಲ್ಲಿ ನಡೆದಿರುವ, ನಡೆಯುತ್ತಿರುವ ರಕ್ತಪಾತ ಮತ್ತು ಹಿಂಸೆಯ ನಿದರ್ಶನಗಳನ್ನು ಖಂಡಿಸಲಾಗಿದೆ.

“ಪ್ರಜಾಪ್ರಭುತ್ವದ ನಿಯಮಗಳನ್ನು ಧಿಕ್ಕರಿಸುವ ವಿಭಜಕ ರಾಜಕೀಯಕ್ಕೆ ಅವಕಾಶ ನೀಡುವುದಿಲ್ಲ. ಯಾವುದೇ ರಾಜಕೀಯ ಪಕ್ಷವು ಸಾಧುವಲ್ಲ. ಆದರೆ ನಿರಂಕುಶಾಧಿಕಾರಿಗಳನ್ನು ತಡೆದು, ಇರುವುದರಲ್ಲಿ ಕಡಿಮೆ ಅಪಾಯಕಾರಿಯಾದ ಪಕ್ಷವನ್ನು ಆರಿಸಬೆಕಿದೆ” ಎಂದು ನಟ-ನಿರ್ದೇಶಕ ಪರಂಬ್ರತಾ ಚಟರ್ಜಿ ತಿಳಿಸಿದ್ದಾರೆ ಎಂದು ದಿ ವೈರ್ ವರದಿ ಮಾಡಿದೆ.

“ಹಾಡಿನ ಸಂದೇಶವು ಬಿಜೆಪಿ ವಿರೋಧಿಯಾದದ್ದು. ಆದರೆ, ಕಲಾವಿದರು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಪಕ್ಷದ ಬೆಂಬಲಿಗರಲ್ಲ. ಹಾಡಿನ ಸಂದೇಶವು ಸ್ಪಷ್ಟವಾಗಿದೆ. ನಾಗರಿಕ ಸಮಾಜವು ಯಾವುದೇ ಒಂದು ಪಕ್ಷದ ಪರವಾಗಿ ಕುರುಡಾಗಿ ಮಾತನಾಡದೇ ವಾಸ್ತವದ ಸ್ಥಿತಿಗತಿಗಳ ಕುರಿತು ಸಂವೇದನೀಯವಾಗಿರಬೇಕು” ಎಂದು ಚಟರ್ಜಿ ಸ್ಪಷ್ಟಪಡಿಸಿದರು.

‘ನಾನು ಬೇರೆಲ್ಲಿಯೂ ಹೋಗುವುದಿಲ್ಲ, ಈ ದೇಶದಲ್ಲಿಯೇ ಇರುತ್ತೇನೆ’ ಎಂಬ ಅರ್ಥವನ್ನು ಹೊಂದಿರುವ ‘ಅಮಿ ಅನ್ಯೋ ಕೊಥಾವೊ ಜಬೊನಾ, ಅಮಿ ಇ ದೇಶೆ ಟೀ ಥಕ್ಬೋ’ ಎಂಬ ಹಾಡಿನ ಪಲ್ಲವಿಯನ್ನು ನಟ ಅನಿರ್ಬನ್ ಚಟರ್ಜಿ ಬರೆದಿದ್ದಾರೆ. ಈ ವಿಡಿಯೋವನ್ನು ಯುವ ನಟರಾದ ರಿದ್ಧಿ ಸೇನ್ ಮತ್ತು ರ್‌ವಿಟೋಬ್ರೋಟೊ ಮುಖರ್ಜಿ ನಿರ್ದೇಶಿಸಿದ್ದಾರೆ.

ಇದನ್ನೂ ಓದಿ: ‘ಸೀರೆ ಧರಿಸಿ ಕಾಲು ಪ್ರದರ್ಶಿಸುವುದು ಬಂಗಾಳಿ ಸಂಸ್ಕೃತಿಯಲ್ಲ’- ‘ಬರ್ಮುಡಾ’ ಹೇಳಿಕೆ ಸಮರ್ಥಿಸಿದ ಬಿಜೆಪಿ ಅಧ್ಯಕ್ಷ

“ಪಶ್ಚಿಮ ಬಂಗಾಳದ ಹಲವಾರು ನಟರು ಮತ್ತು ಸಂಗೀತಗಾರರನ್ನು ಒಟ್ಟುಗೂಡಿಸಿದ ಈ ಹಾಡನ್ನು 2019 ರ ಅಂತ್ಯದಿಂದ ಸಿಎಎ ವಿರುದ್ಧ ದೇಶಾದ್ಯಂತ ಪ್ರತಿಭಟನೆಯ ಸಂದರ್ಭದಿಂದ ನಿರ್ಮಿಸಲಾಗುತ್ತಿದೆ. ಹಾಗಾಗಿ ಜನರಿಗೆ ಅಂತರ್ಗತ ಅಪಾಯದ ಬಗ್ಗೆ ಅರಿವು ಮೂಡಿಸಲು ಮತ್ತು ಈ ಹಾಡನ್ನು ಬಿಡುಗಡೆ ಮಾಡಲು ಇದಕ್ಕಿಂತಲೂ ಸೂಕ್ತ ಸಮಯ ಮತ್ತೊಮ್ಮೆ ಒದಗಿ ಬರುವುದಿಲ್ಲ ಎಂದು ನಾವು ಭಾವಿಸಿದ್ದೇವೆ” ಎಂದು ರಿದ್ಧಿ ಸೇನ್ ಹೇಳಿದ್ದಾರೆ.

ಈ ವೀಡಿಯೊವನ್ನು ಐಕಾನಿಕ್ ಕಾಲೇಜ್ ಸ್ಟ್ರೀಟ್ ಮತ್ತು ಟ್ಯಾಂಗ್ರಾದ ಚೈನೀಸ್ ಕಾಳಿ ಬ್ಯಾರಿ ಸೇರಿದಂತೆ ಕೋಲ್ಕತ್ತಾದ ವಿವಿಧ ಭಾಗಗಳಲ್ಲಿ ಚಿತ್ರೀಕರಿಸಲಾಗಿದೆ. ಇದರಲ್ಲಿ ರವೀಂದ್ರನಾಥ ಟ್ಯಾಗೋರ್ ಅವರ ಪುಸ್ತಕ ಮತ್ತು ಡಾ ಬಿ ಆರ್ ಅಂಬೇಡ್ಕರ್ ಬರೆದಿರುವ ಸಂವಿಧಾನದ ಪುಸ್ತಕಗಳನ್ನು ತೋರಿಸಲಾಗಿದೆ.


ಇದನ್ನೂ ಓದಿ: ಎನ್‌ಸಿಪಿ ನಾಯಕ ಶರದ್ ಪವಾರ್‌‌ ಬಂಗಾಳದಲ್ಲಿ ತೃಣಮೂಲ ಪರ ಪ್ರಚಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...