Homeಮುಖಪುಟದ್ವೇಷ ಬಿತ್ತುವವರಿಗೆ ಮತ ನೀಡಬೇಡಿ: ಪಶ್ಚಿಮ ಬಂಗಾಳದ ಸಿನಿಮಾ, ರಂಗಭೂಮಿ ಕಲಾವಿದರ ಹಾಡು ವೈರಲ್

ದ್ವೇಷ ಬಿತ್ತುವವರಿಗೆ ಮತ ನೀಡಬೇಡಿ: ಪಶ್ಚಿಮ ಬಂಗಾಳದ ಸಿನಿಮಾ, ರಂಗಭೂಮಿ ಕಲಾವಿದರ ಹಾಡು ವೈರಲ್

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ 3 ದಿನಗಳು ಬಾಕಿಯಿರುವಾಗ, ಬಂಗಾಳಿ ನಟರು ಮತ್ತು ರಂಗಭೂಮಿ ಕಲಾವಿದರು ಒಟ್ಟಾಗಿ ಸೇರಿ ರಚಿಸಿರುವ ವಿಡಿಯೋದಲ್ಲಿ, ಬಂಗಾಳ ಚುನಾವಣೆಯಲ್ಲಿ ದ್ವೇಷ ಹರಡುವವರಿಗೆ ಮತ ನೀಡಬೇಡಿ ಎಂದು ಮನವಿ ಮಾಡಿದ್ದಾರೆ. ಆ ಹಾಡು ವೈರಲ್ ಆಗಿದ್ದು ಫ್ಯಾಸಿಸ್ಟ್ ಶಕ್ತಿಗಳನ್ನು ನಿರ್ಮೂಲನೆ ಮಾಡುವ ಅಗತ್ಯತೆಯನ್ನು ಅರ್ಥಪೂರ್ಣ ಹಾಡಿನ ಮೂಲಕ ವ್ಯಕ್ತಪಡಿಸಿದ್ದಾರೆ ಎಂಬ ಮೆಚ್ಚುಗೆ ವ್ಯಕ್ತವಾಗಿದೆ.

ಬಿಜೆಪಿಯ ಹೆಸರನ್ನು ನೇರವಾಗಿ ಹೆಸರಿಸದ ಕಲಾವಿದರು ‘ನಿಜೇದಿರ್ ಮೋತೆ, ನಿಜೇದಿರ್ ಗಾನ್’ (ನಮ್ಮ ಅಭಿಪ್ರಾಯಗಳ ಬಗ್ಗೆ ನಮ್ಮ ಹಾಡು) ಎಂದು ದ್ವೇಷ ಬಿತ್ತುವ ಸಿದ್ಧಾಂತದ ವಿರುದ್ಧ ನಿಲುವನ್ನು ತೆಗೆದುಕೊಂಡಿದ್ದಾರೆ. ವೈರಲ್ ಹಾಡು ನೋಡಿ.

ಈ ವೀಡಿಯೊದಲ್ಲಿ ಪರಂಬ್ರತಾ ಚಟರ್ಜಿ, ಅನಿರ್ಬನ್ ಭಟ್ಟಾಚಾರ್ಯ, ಸಬಿಯಾಸಾಚಿ ಚಕ್ರವರ್ತಿ, ರುದ್ರಪ್ರಸಾದ್ ಸೇನ್‌ಗುಪ್ತಾ, ಅನುಪಮ್ ರಾಯ್, ರೂಪಂಕರ್ ಬಾಗ್ಚಿ, ರಿದ್ಧಿ ಸೇನ್ ಮತ್ತು ಸುಮನ್ ಮುಖೋಪಾಧ್ಯಾಯ ಸೇರಿದಂತೆ ಸಿನಿಮಾ, ನಾಟಕ ಮತ್ತು ಸಂಗೀತ ಕ್ಷೇತ್ರಗಳ ಕಲಾವಿದರು ಇದ್ದಾರೆ.

ಈ ಹಾಡು ಮಂಗಳವಾರ ರಾತ್ರಿ ಯೂಟ್ಯೂಬ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಬಿಡುಗಡೆಯಾಗಿದ್ದು, ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ವೀಕ್ಷಕರನ್ನು ಸೆಳೆದಿದೆ.

ಇದನ್ನೂ ಓದಿ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಓವೈಸಿ ಬಿಜೆಪಿಗೆ ನೆರವಾಗಲಿದ್ದಾರೆ: ಸ್ಪೋಟಕ ಹೇಳಿಕೆ ನೀಡಿದ ಸಾಕ್ಷಿ ಮಹರಾಜ್

ರಾಷ್ಟ್ರೀಯ ನಾಗರಿಕರ ನೋಂದಣಿ ಮತ್ತು ಪೌರತ್ವ ತಿದ್ದುಪಡಿ ಕಾಯ್ದೆ (ಎನ್‌ಆರ್‌ಸಿ-ಸಿಎಎ) ವಿರುದ್ಧದ ಪ್ರತಿಭಟನೆಗಳು, ದೇಶದಲ್ಲಿ ನಿರುದ್ಯೋಗ ದರ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳಂತಹ ವಿಷಯಗಳನ್ನು ವೀಡಿಯೊದಲ್ಲಿ ಹೇಳಲಾಗಿದೆ. ಜೊತೆಗೆ ಈ ವಿಡಿಯೋದಲ್ಲಿ ಧರ್ಮದ ಹೆಸರಿನಲ್ಲಿ ನಡೆದಿರುವ, ನಡೆಯುತ್ತಿರುವ ರಕ್ತಪಾತ ಮತ್ತು ಹಿಂಸೆಯ ನಿದರ್ಶನಗಳನ್ನು ಖಂಡಿಸಲಾಗಿದೆ.

“ಪ್ರಜಾಪ್ರಭುತ್ವದ ನಿಯಮಗಳನ್ನು ಧಿಕ್ಕರಿಸುವ ವಿಭಜಕ ರಾಜಕೀಯಕ್ಕೆ ಅವಕಾಶ ನೀಡುವುದಿಲ್ಲ. ಯಾವುದೇ ರಾಜಕೀಯ ಪಕ್ಷವು ಸಾಧುವಲ್ಲ. ಆದರೆ ನಿರಂಕುಶಾಧಿಕಾರಿಗಳನ್ನು ತಡೆದು, ಇರುವುದರಲ್ಲಿ ಕಡಿಮೆ ಅಪಾಯಕಾರಿಯಾದ ಪಕ್ಷವನ್ನು ಆರಿಸಬೆಕಿದೆ” ಎಂದು ನಟ-ನಿರ್ದೇಶಕ ಪರಂಬ್ರತಾ ಚಟರ್ಜಿ ತಿಳಿಸಿದ್ದಾರೆ ಎಂದು ದಿ ವೈರ್ ವರದಿ ಮಾಡಿದೆ.

“ಹಾಡಿನ ಸಂದೇಶವು ಬಿಜೆಪಿ ವಿರೋಧಿಯಾದದ್ದು. ಆದರೆ, ಕಲಾವಿದರು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಪಕ್ಷದ ಬೆಂಬಲಿಗರಲ್ಲ. ಹಾಡಿನ ಸಂದೇಶವು ಸ್ಪಷ್ಟವಾಗಿದೆ. ನಾಗರಿಕ ಸಮಾಜವು ಯಾವುದೇ ಒಂದು ಪಕ್ಷದ ಪರವಾಗಿ ಕುರುಡಾಗಿ ಮಾತನಾಡದೇ ವಾಸ್ತವದ ಸ್ಥಿತಿಗತಿಗಳ ಕುರಿತು ಸಂವೇದನೀಯವಾಗಿರಬೇಕು” ಎಂದು ಚಟರ್ಜಿ ಸ್ಪಷ್ಟಪಡಿಸಿದರು.

‘ನಾನು ಬೇರೆಲ್ಲಿಯೂ ಹೋಗುವುದಿಲ್ಲ, ಈ ದೇಶದಲ್ಲಿಯೇ ಇರುತ್ತೇನೆ’ ಎಂಬ ಅರ್ಥವನ್ನು ಹೊಂದಿರುವ ‘ಅಮಿ ಅನ್ಯೋ ಕೊಥಾವೊ ಜಬೊನಾ, ಅಮಿ ಇ ದೇಶೆ ಟೀ ಥಕ್ಬೋ’ ಎಂಬ ಹಾಡಿನ ಪಲ್ಲವಿಯನ್ನು ನಟ ಅನಿರ್ಬನ್ ಚಟರ್ಜಿ ಬರೆದಿದ್ದಾರೆ. ಈ ವಿಡಿಯೋವನ್ನು ಯುವ ನಟರಾದ ರಿದ್ಧಿ ಸೇನ್ ಮತ್ತು ರ್‌ವಿಟೋಬ್ರೋಟೊ ಮುಖರ್ಜಿ ನಿರ್ದೇಶಿಸಿದ್ದಾರೆ.

ಇದನ್ನೂ ಓದಿ: ‘ಸೀರೆ ಧರಿಸಿ ಕಾಲು ಪ್ರದರ್ಶಿಸುವುದು ಬಂಗಾಳಿ ಸಂಸ್ಕೃತಿಯಲ್ಲ’- ‘ಬರ್ಮುಡಾ’ ಹೇಳಿಕೆ ಸಮರ್ಥಿಸಿದ ಬಿಜೆಪಿ ಅಧ್ಯಕ್ಷ

“ಪಶ್ಚಿಮ ಬಂಗಾಳದ ಹಲವಾರು ನಟರು ಮತ್ತು ಸಂಗೀತಗಾರರನ್ನು ಒಟ್ಟುಗೂಡಿಸಿದ ಈ ಹಾಡನ್ನು 2019 ರ ಅಂತ್ಯದಿಂದ ಸಿಎಎ ವಿರುದ್ಧ ದೇಶಾದ್ಯಂತ ಪ್ರತಿಭಟನೆಯ ಸಂದರ್ಭದಿಂದ ನಿರ್ಮಿಸಲಾಗುತ್ತಿದೆ. ಹಾಗಾಗಿ ಜನರಿಗೆ ಅಂತರ್ಗತ ಅಪಾಯದ ಬಗ್ಗೆ ಅರಿವು ಮೂಡಿಸಲು ಮತ್ತು ಈ ಹಾಡನ್ನು ಬಿಡುಗಡೆ ಮಾಡಲು ಇದಕ್ಕಿಂತಲೂ ಸೂಕ್ತ ಸಮಯ ಮತ್ತೊಮ್ಮೆ ಒದಗಿ ಬರುವುದಿಲ್ಲ ಎಂದು ನಾವು ಭಾವಿಸಿದ್ದೇವೆ” ಎಂದು ರಿದ್ಧಿ ಸೇನ್ ಹೇಳಿದ್ದಾರೆ.

ಈ ವೀಡಿಯೊವನ್ನು ಐಕಾನಿಕ್ ಕಾಲೇಜ್ ಸ್ಟ್ರೀಟ್ ಮತ್ತು ಟ್ಯಾಂಗ್ರಾದ ಚೈನೀಸ್ ಕಾಳಿ ಬ್ಯಾರಿ ಸೇರಿದಂತೆ ಕೋಲ್ಕತ್ತಾದ ವಿವಿಧ ಭಾಗಗಳಲ್ಲಿ ಚಿತ್ರೀಕರಿಸಲಾಗಿದೆ. ಇದರಲ್ಲಿ ರವೀಂದ್ರನಾಥ ಟ್ಯಾಗೋರ್ ಅವರ ಪುಸ್ತಕ ಮತ್ತು ಡಾ ಬಿ ಆರ್ ಅಂಬೇಡ್ಕರ್ ಬರೆದಿರುವ ಸಂವಿಧಾನದ ಪುಸ್ತಕಗಳನ್ನು ತೋರಿಸಲಾಗಿದೆ.


ಇದನ್ನೂ ಓದಿ: ಎನ್‌ಸಿಪಿ ನಾಯಕ ಶರದ್ ಪವಾರ್‌‌ ಬಂಗಾಳದಲ್ಲಿ ತೃಣಮೂಲ ಪರ ಪ್ರಚಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...