Homeಮುಖಪುಟದ್ವೇಷ ಬಿತ್ತುವವರಿಗೆ ಮತ ನೀಡಬೇಡಿ: ಪಶ್ಚಿಮ ಬಂಗಾಳದ ಸಿನಿಮಾ, ರಂಗಭೂಮಿ ಕಲಾವಿದರ ಹಾಡು ವೈರಲ್

ದ್ವೇಷ ಬಿತ್ತುವವರಿಗೆ ಮತ ನೀಡಬೇಡಿ: ಪಶ್ಚಿಮ ಬಂಗಾಳದ ಸಿನಿಮಾ, ರಂಗಭೂಮಿ ಕಲಾವಿದರ ಹಾಡು ವೈರಲ್

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ 3 ದಿನಗಳು ಬಾಕಿಯಿರುವಾಗ, ಬಂಗಾಳಿ ನಟರು ಮತ್ತು ರಂಗಭೂಮಿ ಕಲಾವಿದರು ಒಟ್ಟಾಗಿ ಸೇರಿ ರಚಿಸಿರುವ ವಿಡಿಯೋದಲ್ಲಿ, ಬಂಗಾಳ ಚುನಾವಣೆಯಲ್ಲಿ ದ್ವೇಷ ಹರಡುವವರಿಗೆ ಮತ ನೀಡಬೇಡಿ ಎಂದು ಮನವಿ ಮಾಡಿದ್ದಾರೆ. ಆ ಹಾಡು ವೈರಲ್ ಆಗಿದ್ದು ಫ್ಯಾಸಿಸ್ಟ್ ಶಕ್ತಿಗಳನ್ನು ನಿರ್ಮೂಲನೆ ಮಾಡುವ ಅಗತ್ಯತೆಯನ್ನು ಅರ್ಥಪೂರ್ಣ ಹಾಡಿನ ಮೂಲಕ ವ್ಯಕ್ತಪಡಿಸಿದ್ದಾರೆ ಎಂಬ ಮೆಚ್ಚುಗೆ ವ್ಯಕ್ತವಾಗಿದೆ.

ಬಿಜೆಪಿಯ ಹೆಸರನ್ನು ನೇರವಾಗಿ ಹೆಸರಿಸದ ಕಲಾವಿದರು ‘ನಿಜೇದಿರ್ ಮೋತೆ, ನಿಜೇದಿರ್ ಗಾನ್’ (ನಮ್ಮ ಅಭಿಪ್ರಾಯಗಳ ಬಗ್ಗೆ ನಮ್ಮ ಹಾಡು) ಎಂದು ದ್ವೇಷ ಬಿತ್ತುವ ಸಿದ್ಧಾಂತದ ವಿರುದ್ಧ ನಿಲುವನ್ನು ತೆಗೆದುಕೊಂಡಿದ್ದಾರೆ. ವೈರಲ್ ಹಾಡು ನೋಡಿ.

ಈ ವೀಡಿಯೊದಲ್ಲಿ ಪರಂಬ್ರತಾ ಚಟರ್ಜಿ, ಅನಿರ್ಬನ್ ಭಟ್ಟಾಚಾರ್ಯ, ಸಬಿಯಾಸಾಚಿ ಚಕ್ರವರ್ತಿ, ರುದ್ರಪ್ರಸಾದ್ ಸೇನ್‌ಗುಪ್ತಾ, ಅನುಪಮ್ ರಾಯ್, ರೂಪಂಕರ್ ಬಾಗ್ಚಿ, ರಿದ್ಧಿ ಸೇನ್ ಮತ್ತು ಸುಮನ್ ಮುಖೋಪಾಧ್ಯಾಯ ಸೇರಿದಂತೆ ಸಿನಿಮಾ, ನಾಟಕ ಮತ್ತು ಸಂಗೀತ ಕ್ಷೇತ್ರಗಳ ಕಲಾವಿದರು ಇದ್ದಾರೆ.

ಈ ಹಾಡು ಮಂಗಳವಾರ ರಾತ್ರಿ ಯೂಟ್ಯೂಬ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಬಿಡುಗಡೆಯಾಗಿದ್ದು, ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ವೀಕ್ಷಕರನ್ನು ಸೆಳೆದಿದೆ.

ಇದನ್ನೂ ಓದಿ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಓವೈಸಿ ಬಿಜೆಪಿಗೆ ನೆರವಾಗಲಿದ್ದಾರೆ: ಸ್ಪೋಟಕ ಹೇಳಿಕೆ ನೀಡಿದ ಸಾಕ್ಷಿ ಮಹರಾಜ್

ರಾಷ್ಟ್ರೀಯ ನಾಗರಿಕರ ನೋಂದಣಿ ಮತ್ತು ಪೌರತ್ವ ತಿದ್ದುಪಡಿ ಕಾಯ್ದೆ (ಎನ್‌ಆರ್‌ಸಿ-ಸಿಎಎ) ವಿರುದ್ಧದ ಪ್ರತಿಭಟನೆಗಳು, ದೇಶದಲ್ಲಿ ನಿರುದ್ಯೋಗ ದರ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳಂತಹ ವಿಷಯಗಳನ್ನು ವೀಡಿಯೊದಲ್ಲಿ ಹೇಳಲಾಗಿದೆ. ಜೊತೆಗೆ ಈ ವಿಡಿಯೋದಲ್ಲಿ ಧರ್ಮದ ಹೆಸರಿನಲ್ಲಿ ನಡೆದಿರುವ, ನಡೆಯುತ್ತಿರುವ ರಕ್ತಪಾತ ಮತ್ತು ಹಿಂಸೆಯ ನಿದರ್ಶನಗಳನ್ನು ಖಂಡಿಸಲಾಗಿದೆ.

“ಪ್ರಜಾಪ್ರಭುತ್ವದ ನಿಯಮಗಳನ್ನು ಧಿಕ್ಕರಿಸುವ ವಿಭಜಕ ರಾಜಕೀಯಕ್ಕೆ ಅವಕಾಶ ನೀಡುವುದಿಲ್ಲ. ಯಾವುದೇ ರಾಜಕೀಯ ಪಕ್ಷವು ಸಾಧುವಲ್ಲ. ಆದರೆ ನಿರಂಕುಶಾಧಿಕಾರಿಗಳನ್ನು ತಡೆದು, ಇರುವುದರಲ್ಲಿ ಕಡಿಮೆ ಅಪಾಯಕಾರಿಯಾದ ಪಕ್ಷವನ್ನು ಆರಿಸಬೆಕಿದೆ” ಎಂದು ನಟ-ನಿರ್ದೇಶಕ ಪರಂಬ್ರತಾ ಚಟರ್ಜಿ ತಿಳಿಸಿದ್ದಾರೆ ಎಂದು ದಿ ವೈರ್ ವರದಿ ಮಾಡಿದೆ.

“ಹಾಡಿನ ಸಂದೇಶವು ಬಿಜೆಪಿ ವಿರೋಧಿಯಾದದ್ದು. ಆದರೆ, ಕಲಾವಿದರು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಪಕ್ಷದ ಬೆಂಬಲಿಗರಲ್ಲ. ಹಾಡಿನ ಸಂದೇಶವು ಸ್ಪಷ್ಟವಾಗಿದೆ. ನಾಗರಿಕ ಸಮಾಜವು ಯಾವುದೇ ಒಂದು ಪಕ್ಷದ ಪರವಾಗಿ ಕುರುಡಾಗಿ ಮಾತನಾಡದೇ ವಾಸ್ತವದ ಸ್ಥಿತಿಗತಿಗಳ ಕುರಿತು ಸಂವೇದನೀಯವಾಗಿರಬೇಕು” ಎಂದು ಚಟರ್ಜಿ ಸ್ಪಷ್ಟಪಡಿಸಿದರು.

‘ನಾನು ಬೇರೆಲ್ಲಿಯೂ ಹೋಗುವುದಿಲ್ಲ, ಈ ದೇಶದಲ್ಲಿಯೇ ಇರುತ್ತೇನೆ’ ಎಂಬ ಅರ್ಥವನ್ನು ಹೊಂದಿರುವ ‘ಅಮಿ ಅನ್ಯೋ ಕೊಥಾವೊ ಜಬೊನಾ, ಅಮಿ ಇ ದೇಶೆ ಟೀ ಥಕ್ಬೋ’ ಎಂಬ ಹಾಡಿನ ಪಲ್ಲವಿಯನ್ನು ನಟ ಅನಿರ್ಬನ್ ಚಟರ್ಜಿ ಬರೆದಿದ್ದಾರೆ. ಈ ವಿಡಿಯೋವನ್ನು ಯುವ ನಟರಾದ ರಿದ್ಧಿ ಸೇನ್ ಮತ್ತು ರ್‌ವಿಟೋಬ್ರೋಟೊ ಮುಖರ್ಜಿ ನಿರ್ದೇಶಿಸಿದ್ದಾರೆ.

ಇದನ್ನೂ ಓದಿ: ‘ಸೀರೆ ಧರಿಸಿ ಕಾಲು ಪ್ರದರ್ಶಿಸುವುದು ಬಂಗಾಳಿ ಸಂಸ್ಕೃತಿಯಲ್ಲ’- ‘ಬರ್ಮುಡಾ’ ಹೇಳಿಕೆ ಸಮರ್ಥಿಸಿದ ಬಿಜೆಪಿ ಅಧ್ಯಕ್ಷ

“ಪಶ್ಚಿಮ ಬಂಗಾಳದ ಹಲವಾರು ನಟರು ಮತ್ತು ಸಂಗೀತಗಾರರನ್ನು ಒಟ್ಟುಗೂಡಿಸಿದ ಈ ಹಾಡನ್ನು 2019 ರ ಅಂತ್ಯದಿಂದ ಸಿಎಎ ವಿರುದ್ಧ ದೇಶಾದ್ಯಂತ ಪ್ರತಿಭಟನೆಯ ಸಂದರ್ಭದಿಂದ ನಿರ್ಮಿಸಲಾಗುತ್ತಿದೆ. ಹಾಗಾಗಿ ಜನರಿಗೆ ಅಂತರ್ಗತ ಅಪಾಯದ ಬಗ್ಗೆ ಅರಿವು ಮೂಡಿಸಲು ಮತ್ತು ಈ ಹಾಡನ್ನು ಬಿಡುಗಡೆ ಮಾಡಲು ಇದಕ್ಕಿಂತಲೂ ಸೂಕ್ತ ಸಮಯ ಮತ್ತೊಮ್ಮೆ ಒದಗಿ ಬರುವುದಿಲ್ಲ ಎಂದು ನಾವು ಭಾವಿಸಿದ್ದೇವೆ” ಎಂದು ರಿದ್ಧಿ ಸೇನ್ ಹೇಳಿದ್ದಾರೆ.

ಈ ವೀಡಿಯೊವನ್ನು ಐಕಾನಿಕ್ ಕಾಲೇಜ್ ಸ್ಟ್ರೀಟ್ ಮತ್ತು ಟ್ಯಾಂಗ್ರಾದ ಚೈನೀಸ್ ಕಾಳಿ ಬ್ಯಾರಿ ಸೇರಿದಂತೆ ಕೋಲ್ಕತ್ತಾದ ವಿವಿಧ ಭಾಗಗಳಲ್ಲಿ ಚಿತ್ರೀಕರಿಸಲಾಗಿದೆ. ಇದರಲ್ಲಿ ರವೀಂದ್ರನಾಥ ಟ್ಯಾಗೋರ್ ಅವರ ಪುಸ್ತಕ ಮತ್ತು ಡಾ ಬಿ ಆರ್ ಅಂಬೇಡ್ಕರ್ ಬರೆದಿರುವ ಸಂವಿಧಾನದ ಪುಸ್ತಕಗಳನ್ನು ತೋರಿಸಲಾಗಿದೆ.


ಇದನ್ನೂ ಓದಿ: ಎನ್‌ಸಿಪಿ ನಾಯಕ ಶರದ್ ಪವಾರ್‌‌ ಬಂಗಾಳದಲ್ಲಿ ತೃಣಮೂಲ ಪರ ಪ್ರಚಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....