Homeಮುಖಪುಟದ್ವೇಷ ಬಿತ್ತುವವರಿಗೆ ಮತ ನೀಡಬೇಡಿ: ಪಶ್ಚಿಮ ಬಂಗಾಳದ ಸಿನಿಮಾ, ರಂಗಭೂಮಿ ಕಲಾವಿದರ ಹಾಡು ವೈರಲ್

ದ್ವೇಷ ಬಿತ್ತುವವರಿಗೆ ಮತ ನೀಡಬೇಡಿ: ಪಶ್ಚಿಮ ಬಂಗಾಳದ ಸಿನಿಮಾ, ರಂಗಭೂಮಿ ಕಲಾವಿದರ ಹಾಡು ವೈರಲ್

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ 3 ದಿನಗಳು ಬಾಕಿಯಿರುವಾಗ, ಬಂಗಾಳಿ ನಟರು ಮತ್ತು ರಂಗಭೂಮಿ ಕಲಾವಿದರು ಒಟ್ಟಾಗಿ ಸೇರಿ ರಚಿಸಿರುವ ವಿಡಿಯೋದಲ್ಲಿ, ಬಂಗಾಳ ಚುನಾವಣೆಯಲ್ಲಿ ದ್ವೇಷ ಹರಡುವವರಿಗೆ ಮತ ನೀಡಬೇಡಿ ಎಂದು ಮನವಿ ಮಾಡಿದ್ದಾರೆ. ಆ ಹಾಡು ವೈರಲ್ ಆಗಿದ್ದು ಫ್ಯಾಸಿಸ್ಟ್ ಶಕ್ತಿಗಳನ್ನು ನಿರ್ಮೂಲನೆ ಮಾಡುವ ಅಗತ್ಯತೆಯನ್ನು ಅರ್ಥಪೂರ್ಣ ಹಾಡಿನ ಮೂಲಕ ವ್ಯಕ್ತಪಡಿಸಿದ್ದಾರೆ ಎಂಬ ಮೆಚ್ಚುಗೆ ವ್ಯಕ್ತವಾಗಿದೆ.

ಬಿಜೆಪಿಯ ಹೆಸರನ್ನು ನೇರವಾಗಿ ಹೆಸರಿಸದ ಕಲಾವಿದರು ‘ನಿಜೇದಿರ್ ಮೋತೆ, ನಿಜೇದಿರ್ ಗಾನ್’ (ನಮ್ಮ ಅಭಿಪ್ರಾಯಗಳ ಬಗ್ಗೆ ನಮ್ಮ ಹಾಡು) ಎಂದು ದ್ವೇಷ ಬಿತ್ತುವ ಸಿದ್ಧಾಂತದ ವಿರುದ್ಧ ನಿಲುವನ್ನು ತೆಗೆದುಕೊಂಡಿದ್ದಾರೆ. ವೈರಲ್ ಹಾಡು ನೋಡಿ.

ಈ ವೀಡಿಯೊದಲ್ಲಿ ಪರಂಬ್ರತಾ ಚಟರ್ಜಿ, ಅನಿರ್ಬನ್ ಭಟ್ಟಾಚಾರ್ಯ, ಸಬಿಯಾಸಾಚಿ ಚಕ್ರವರ್ತಿ, ರುದ್ರಪ್ರಸಾದ್ ಸೇನ್‌ಗುಪ್ತಾ, ಅನುಪಮ್ ರಾಯ್, ರೂಪಂಕರ್ ಬಾಗ್ಚಿ, ರಿದ್ಧಿ ಸೇನ್ ಮತ್ತು ಸುಮನ್ ಮುಖೋಪಾಧ್ಯಾಯ ಸೇರಿದಂತೆ ಸಿನಿಮಾ, ನಾಟಕ ಮತ್ತು ಸಂಗೀತ ಕ್ಷೇತ್ರಗಳ ಕಲಾವಿದರು ಇದ್ದಾರೆ.

ಈ ಹಾಡು ಮಂಗಳವಾರ ರಾತ್ರಿ ಯೂಟ್ಯೂಬ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಬಿಡುಗಡೆಯಾಗಿದ್ದು, ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ವೀಕ್ಷಕರನ್ನು ಸೆಳೆದಿದೆ.

ಇದನ್ನೂ ಓದಿ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಓವೈಸಿ ಬಿಜೆಪಿಗೆ ನೆರವಾಗಲಿದ್ದಾರೆ: ಸ್ಪೋಟಕ ಹೇಳಿಕೆ ನೀಡಿದ ಸಾಕ್ಷಿ ಮಹರಾಜ್

ರಾಷ್ಟ್ರೀಯ ನಾಗರಿಕರ ನೋಂದಣಿ ಮತ್ತು ಪೌರತ್ವ ತಿದ್ದುಪಡಿ ಕಾಯ್ದೆ (ಎನ್‌ಆರ್‌ಸಿ-ಸಿಎಎ) ವಿರುದ್ಧದ ಪ್ರತಿಭಟನೆಗಳು, ದೇಶದಲ್ಲಿ ನಿರುದ್ಯೋಗ ದರ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳಂತಹ ವಿಷಯಗಳನ್ನು ವೀಡಿಯೊದಲ್ಲಿ ಹೇಳಲಾಗಿದೆ. ಜೊತೆಗೆ ಈ ವಿಡಿಯೋದಲ್ಲಿ ಧರ್ಮದ ಹೆಸರಿನಲ್ಲಿ ನಡೆದಿರುವ, ನಡೆಯುತ್ತಿರುವ ರಕ್ತಪಾತ ಮತ್ತು ಹಿಂಸೆಯ ನಿದರ್ಶನಗಳನ್ನು ಖಂಡಿಸಲಾಗಿದೆ.

“ಪ್ರಜಾಪ್ರಭುತ್ವದ ನಿಯಮಗಳನ್ನು ಧಿಕ್ಕರಿಸುವ ವಿಭಜಕ ರಾಜಕೀಯಕ್ಕೆ ಅವಕಾಶ ನೀಡುವುದಿಲ್ಲ. ಯಾವುದೇ ರಾಜಕೀಯ ಪಕ್ಷವು ಸಾಧುವಲ್ಲ. ಆದರೆ ನಿರಂಕುಶಾಧಿಕಾರಿಗಳನ್ನು ತಡೆದು, ಇರುವುದರಲ್ಲಿ ಕಡಿಮೆ ಅಪಾಯಕಾರಿಯಾದ ಪಕ್ಷವನ್ನು ಆರಿಸಬೆಕಿದೆ” ಎಂದು ನಟ-ನಿರ್ದೇಶಕ ಪರಂಬ್ರತಾ ಚಟರ್ಜಿ ತಿಳಿಸಿದ್ದಾರೆ ಎಂದು ದಿ ವೈರ್ ವರದಿ ಮಾಡಿದೆ.

“ಹಾಡಿನ ಸಂದೇಶವು ಬಿಜೆಪಿ ವಿರೋಧಿಯಾದದ್ದು. ಆದರೆ, ಕಲಾವಿದರು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಪಕ್ಷದ ಬೆಂಬಲಿಗರಲ್ಲ. ಹಾಡಿನ ಸಂದೇಶವು ಸ್ಪಷ್ಟವಾಗಿದೆ. ನಾಗರಿಕ ಸಮಾಜವು ಯಾವುದೇ ಒಂದು ಪಕ್ಷದ ಪರವಾಗಿ ಕುರುಡಾಗಿ ಮಾತನಾಡದೇ ವಾಸ್ತವದ ಸ್ಥಿತಿಗತಿಗಳ ಕುರಿತು ಸಂವೇದನೀಯವಾಗಿರಬೇಕು” ಎಂದು ಚಟರ್ಜಿ ಸ್ಪಷ್ಟಪಡಿಸಿದರು.

‘ನಾನು ಬೇರೆಲ್ಲಿಯೂ ಹೋಗುವುದಿಲ್ಲ, ಈ ದೇಶದಲ್ಲಿಯೇ ಇರುತ್ತೇನೆ’ ಎಂಬ ಅರ್ಥವನ್ನು ಹೊಂದಿರುವ ‘ಅಮಿ ಅನ್ಯೋ ಕೊಥಾವೊ ಜಬೊನಾ, ಅಮಿ ಇ ದೇಶೆ ಟೀ ಥಕ್ಬೋ’ ಎಂಬ ಹಾಡಿನ ಪಲ್ಲವಿಯನ್ನು ನಟ ಅನಿರ್ಬನ್ ಚಟರ್ಜಿ ಬರೆದಿದ್ದಾರೆ. ಈ ವಿಡಿಯೋವನ್ನು ಯುವ ನಟರಾದ ರಿದ್ಧಿ ಸೇನ್ ಮತ್ತು ರ್‌ವಿಟೋಬ್ರೋಟೊ ಮುಖರ್ಜಿ ನಿರ್ದೇಶಿಸಿದ್ದಾರೆ.

ಇದನ್ನೂ ಓದಿ: ‘ಸೀರೆ ಧರಿಸಿ ಕಾಲು ಪ್ರದರ್ಶಿಸುವುದು ಬಂಗಾಳಿ ಸಂಸ್ಕೃತಿಯಲ್ಲ’- ‘ಬರ್ಮುಡಾ’ ಹೇಳಿಕೆ ಸಮರ್ಥಿಸಿದ ಬಿಜೆಪಿ ಅಧ್ಯಕ್ಷ

“ಪಶ್ಚಿಮ ಬಂಗಾಳದ ಹಲವಾರು ನಟರು ಮತ್ತು ಸಂಗೀತಗಾರರನ್ನು ಒಟ್ಟುಗೂಡಿಸಿದ ಈ ಹಾಡನ್ನು 2019 ರ ಅಂತ್ಯದಿಂದ ಸಿಎಎ ವಿರುದ್ಧ ದೇಶಾದ್ಯಂತ ಪ್ರತಿಭಟನೆಯ ಸಂದರ್ಭದಿಂದ ನಿರ್ಮಿಸಲಾಗುತ್ತಿದೆ. ಹಾಗಾಗಿ ಜನರಿಗೆ ಅಂತರ್ಗತ ಅಪಾಯದ ಬಗ್ಗೆ ಅರಿವು ಮೂಡಿಸಲು ಮತ್ತು ಈ ಹಾಡನ್ನು ಬಿಡುಗಡೆ ಮಾಡಲು ಇದಕ್ಕಿಂತಲೂ ಸೂಕ್ತ ಸಮಯ ಮತ್ತೊಮ್ಮೆ ಒದಗಿ ಬರುವುದಿಲ್ಲ ಎಂದು ನಾವು ಭಾವಿಸಿದ್ದೇವೆ” ಎಂದು ರಿದ್ಧಿ ಸೇನ್ ಹೇಳಿದ್ದಾರೆ.

ಈ ವೀಡಿಯೊವನ್ನು ಐಕಾನಿಕ್ ಕಾಲೇಜ್ ಸ್ಟ್ರೀಟ್ ಮತ್ತು ಟ್ಯಾಂಗ್ರಾದ ಚೈನೀಸ್ ಕಾಳಿ ಬ್ಯಾರಿ ಸೇರಿದಂತೆ ಕೋಲ್ಕತ್ತಾದ ವಿವಿಧ ಭಾಗಗಳಲ್ಲಿ ಚಿತ್ರೀಕರಿಸಲಾಗಿದೆ. ಇದರಲ್ಲಿ ರವೀಂದ್ರನಾಥ ಟ್ಯಾಗೋರ್ ಅವರ ಪುಸ್ತಕ ಮತ್ತು ಡಾ ಬಿ ಆರ್ ಅಂಬೇಡ್ಕರ್ ಬರೆದಿರುವ ಸಂವಿಧಾನದ ಪುಸ್ತಕಗಳನ್ನು ತೋರಿಸಲಾಗಿದೆ.


ಇದನ್ನೂ ಓದಿ: ಎನ್‌ಸಿಪಿ ನಾಯಕ ಶರದ್ ಪವಾರ್‌‌ ಬಂಗಾಳದಲ್ಲಿ ತೃಣಮೂಲ ಪರ ಪ್ರಚಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...